Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 23:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅಂಗಡಿ ಬೀದಿಗಳಲ್ಲಿ ನಮಸ್ಕಾರಗಳು, ಜನರಿಂದ ‘ಗುರುಗಳೆನ್ನಿಸಿಕೊಳ್ಳುವುದು,’ ಇವುಗಳೇ ಅವರಿಗೆ ಇಷ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅದು ಮಾತ್ರವಲ್ಲ, ‘ಗುರುವೇ’ ಎಂದು ಕರೆಸಿಕೊಳ್ಳಲು ಇಚ್ಛಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಜನರಿಂದ ಬೋಧಕರನ್ನಿಸಿಕೊಳ್ಳುವದು, ಇವುಗಳೇ ಅವರಿಗೆ ಇಷ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಮಾರುಕಟ್ಟೆಗಳಲ್ಲಿ ಜನರು ತಮಗೆ ಮರ್ಯಾದೆ ತೋರಿಸಬೇಕೆಂದು ಆಶಿಸುತ್ತಾರೆ; ಜನರಿಂದ ಉಪದೇಶಕರೆನಿಸಿಕೊಳ್ಳಲು ಇಷ್ಟಪಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಮಾರುಕಟ್ಟೆ ಬೀದಿಗಳಲ್ಲಿ ವಂದನೆಗಳನ್ನೂ ಮತ್ತು ಜನರಿಂದ, ‘ಬೋಧಕರೇ,’ ಎಂದು ಕರೆಯಿಸಿಕೊಳ್ಳಲು ಅವರು ಇಚ್ಛಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಬಾಜಾರಾತ್ನಿ ಲೊಕಾನಿಕ್ನಾ ನಮಸ್ಕಾರ್ ಕರುನ್ ಘೆತಲೆ ಅನಿ ಗುರು ಮನುನ್ ಬಲ್ವುನ್ ಘೆತಲಿ ತೆಂಕಾ ಲೈ ಕುಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 23:7
19 ತಿಳಿವುಗಳ ಹೋಲಿಕೆ  

ಯೇಸು ಹಿಂತಿರುಗಿ ತನ್ನನ್ನು ಹಿಂಬಾಲಿಸುತ್ತಿದ್ದ ಅವರನ್ನು ನೋಡಿ, “ನಿಮಗೆ ಏನು ಬೇಕು?” ಎಂದು ಕೇಳಲು ಅವರು, “ರಬ್ಬಿಯೇ, (ಅಂದರೆ ಗುರುವೇ) ನೀನು ವಾಸಿಸುವುದು ಎಲ್ಲಿ?” ಎಂದು ಕೇಳಿದರು.


ಅದಕ್ಕೆ ನತಾನಯೇಲನು, “ಗುರುವೇ, ನೀನು ದೇವಕುಮಾರನು! ನೀನೇ ಇಸ್ರಾಯೇಲಿನ ಅರಸನು” ಎಂದನು.


ಯೇಸು ಆಕೆಗೆ, “ಮರಿಯಳೇ,” ಎಂದು ಹೇಳಲು, ಆಕೆಯು ಅವನ ಕಡೆಗೆ ತಿರುಗಿ ಇಬ್ರಿಯ ಭಾಷೆಯಲ್ಲಿ ಆತನಿಗೆ, “ರಬ್ಬೂನಿ” ಎಂದಳು. ಹಾಗೆಂದರೆ ಗುರುವೇ ಎಂದರ್ಥ.


ಮತ್ತು ಸಮುದ್ರದ ಆಚೆಕಡೆಯಲ್ಲಿ ಆತನನ್ನು ಕಂಡು “ಗುರುವೇ, ಯಾವಾಗ ಇಲ್ಲಿಗೆ ಬಂದಿ?” ಎಂದು ಕೇಳಿದರು.


ಆಗ ಅವರು ಯೋಹಾನನ ಬಳಿಗೆ ಬಂದು ಅವನಿಗೆ “ಗುರುವೇ, ಯೊರ್ದನ್ ನದಿಯ ಆಚೆ ನಿನ್ನ ಬಳಿಯಲ್ಲಿದ್ದ ಒಬ್ಬನ ವಿಷಯದಲ್ಲಿ ನೀನು ಸಾಕ್ಷಿ ಕೊಟ್ಟೆಯಲ್ಲಾ, ಇಗೋ, ಆತನು ದೀಕ್ಷಾಸ್ನಾನ ಕೊಡುತ್ತಿದ್ದಾನೆ, ಆತನ ಬಳಿಗೆ ಎಲ್ಲರೂ ಹೋಗುತ್ತಿದ್ದಾರೆ.” ಎಂದು ಹೇಳಲು


ಅವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ, “ಗುರುವೇ, ನೀನು ದೇವರ ಬಳಿಯಿಂದ ಬಂದ ಬೋಧಕನೆಂದು ನಾವು ಬಲ್ಲೆವು. ನೀನು ಮಾಡುವಂಥ ಈ ಸೂಚಕ ಕಾರ್ಯಗಳನ್ನು ದೇವರ ಸಹಾಯವಿಲ್ಲದೆ ಮಾಡುವುದು ಯಾರಿಂದಲೂ ಆಗದು” ಎಂದು ಹೇಳಿದನು.


ಯೇಸು ಅವನನ್ನು, “ನಾನು ನಿನಗೆ ಏನು ಮಾಡಬೇಕೆಂದು ಕೋರುತ್ತೀ” ಎಂದು ಕೇಳಲು ಆ ಕುರುಡನು, “ಗುರುವೇ, ನನಗೆ ಕಣ್ಣಿನ ದೃಷ್ಟಿ ಬರುವಂತೆ ಮಾಡಬೇಕು” ಅಂದನು.


ಆಗ ಪೇತ್ರನು ಯೇಸುವಿಗೆ, “ಗುರುವೇ, ನಾವು ಇಲ್ಲೇ ಇರುವುದು ಒಳ್ಳೆಯದು; ಮೂರು ಗುಡಾರಗಳನ್ನು ಕಟ್ಟುವೆವು; ನಿನಗೊಂದು, ಮೋಶೆಗೊಂದು, ಎಲೀಯನಿಗೊಂದು” ಎಂದು ಹೇಳಿದನು.


ಆದರೆ ನೀವು ‘ಬೋಧಕರೆನ್ನಿಸಿಕೊಳ್ಳಬೇಡಿರಿ;’ ಏಕೆಂದರೆ ಕ್ರಿಸ್ತನೊಬ್ಬನೇ ನಿಮಗಿರುವ ಬೋಧಕನು ಮತ್ತು ನೀವೆಲ್ಲರೂ ಸಹೋದರರು.


ಆದರೆ ಈ ಸಂತತಿಯನ್ನು ಯಾರಿಗೆ ಹೋಲಿಸಲಿ? ಪೇಟೆಗಳಲ್ಲಿ ಕುಳಿತುಕೊಂಡು ತಮ್ಮ ಗೆಳೆಯರಿಗೆ,


ಆಗ ಆತನನ್ನು ಹಿಡಿದುಕೊಡಬೇಕೆಂದಿದ್ದ ಯೂದನು, “ಗುರುವೇ, ನಾನೋ?” ಎಂದು ಕೇಳಲು ಯೇಸು ಅವನಿಗೆ, “ನೀನೇ ಹಾಗೆ ಹೇಳಿದ್ದೀ” ಎಂದು ಹೇಳಿದನು.


ಕೂಡಲೇ ಅವನು ಯೇಸುವಿನ ಬಳಿಗೆ ಬಂದು, “ಗುರುವೇ ನಮಸ್ಕಾರ” ಎಂದು ಹೇಳಿ ಆತನಿಗೆ ಮುದ್ದಿಟ್ಟನು.


ಆಗ ಪೇತ್ರನು ಹಿಂದಿನ ದಿನದ ಸಂಗತಿಯನ್ನು ನೆನಪಿಸಿಕೊಂಡು ಆತನಿಗೆ, “ಗುರುವೇ, ಇಗೋ, ನೀನು ಶಾಪ ಕೊಟ್ಟ ಅಂಜೂರದ ಮರವು ಒಣಗಿಹೋಗಿದೆ” ಎಂದು ಹೇಳಿದ್ದಕ್ಕೆ


ಆತನು ಉಪದೇಶಮಾಡಿ ಹೇಳಿದ್ದೇನಂದರೆ, “ಶಾಸ್ತ್ರಿಗಳ ವಿಷಯದಲ್ಲಿ ಎಚ್ಚರಿಕೆಯಾಗಿರಿ. ನಿಲುವಂಗಿಯನ್ನು ಧರಿಸಿಕೊಂಡು ತಿರುಗಾಡುತ್ತಾ,


ಅದರಂತೆಯೇ ಯೂದನು ಅಲ್ಲಿಗೆ ಬಂದಕೂಡಲೇ ಅವನು ಯೇಸುವಿನ ಬಳಿಗೆ ಹೋಗಿ, “ಗುರುವೇ” ಎಂದು ಹೇಳಿ ಆತನಿಗೆ ಮುದ್ದಿಟ್ಟನು.


“ಅಯ್ಯೋ ಫರಿಸಾಯರೇ, ಸಭಾಮಂದಿರಗಳಲ್ಲಿ ಉನ್ನತ ಸ್ಥಾನಗಳನ್ನೂ ಅಂಗಡಿ ಬೀದಿಗಳಲ್ಲಿ ವಂದನೆಗಳನ್ನೂ ನೀವು ಬಯಸುತ್ತೀರಿ.


ಅಷ್ಟರೊಳಗೆ ಶಿಷ್ಯರು “ಗುರುವೇ, ಊಟಮಾಡು” ಎಂದು ಆತನನ್ನು ಕೇಳಿಕೊಂಡರು.


ಆತನ ಶಿಷ್ಯರು, “ಗುರುವೇ, ಇವನು ಕುರುಡನಾಗಿ ಹುಟ್ಟಿರುವುದಕ್ಕೆ ಯಾರು ಪಾಪಮಾಡಿದರು? ಇವನೋ ಅಥವಾ ಇವನ ತಂದೆತಾಯಿಗಳೋ?” ಎಂದು ಆತನನ್ನು ಕೇಳಿದರು.


ಆತನ ಶಿಷ್ಯರು ಆತನಿಗೆ, “ಗುರುವೇ, ಆಗಲೇ ಯೆಹೂದ್ಯರು ನಿನ್ನ ಮೇಲೆ ಕಲ್ಲೆಸೆಯಬೇಕೆಂದು ಹುಡುಕುತ್ತಿದ್ದಾರೆ, ಪುನಃ ನೀನು ಅಲ್ಲಿಗೆ ಹೋಗಬೇಕೆಂದಿರುವಿಯಾ?” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು