Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 24:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆತನು ತನ್ನ ದೂತರನ್ನು ತುತ್ತೂರಿಯ ಮಹಾ ಶಬ್ದದೊಂದಿಗೆ ಕಳುಹಿಸುವನು. ಅವರು ಆತನು ಆರಿಸಿಕೊಂಡವರನ್ನು ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ನಾಲ್ಕು ದಿಕ್ಕುಗಳಿಂದ ಒಟ್ಟುಗೂಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ತುತೂರಿಯ ಘೋಷಣೆಯೊಂದಿಗೆ ಆತನು ತನ್ನ ದೂತರನ್ನು ನಾಲ್ಕು ದಿಕ್ಕುಗಳಿಗೂ ಕಳುಹಿಸುವನು. ಅವರು ಹೋಗಿ ಆತನಿಂದ ಆಯ್ಕೆಯಾದ ಜನರನ್ನು ವಿಶ್ವದ ಅಷ್ಟದಿಕ್ಕುಗಳಿಂದ ಒಟ್ಟುಗೂಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಮತ್ತು ಆತನು ತುತೂರಿಯ ಮಹಾ ಶಬ್ದದಿಂದ ತನ್ನ ದೂತರನ್ನು ಕಳುಹಿಸುವನು. ಅವರು ಆತನು ಆದುಕೊಂಡವರನ್ನು ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ನಾಲ್ಕೂ ದಿಕ್ಕುಗಳಿಂದ ಒಟ್ಟುಗೂಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಮಹಾಶಬ್ದದ ತುತ್ತೂರಿಯ ಘೋಷಣೆಯೊಡನೆ ಮನುಷ್ಯಕುಮಾರನು ತನ್ನ ದೂತರನ್ನು ಭೂಮಿಯ ಎಲ್ಲಾ ಕಡೆಗೆ ಕಳುಹಿಸುವನು. ಆತನು ಆರಿಸಿಕೊಂಡವರನ್ನು ದೇವದೂತರು ಭೂಲೋಕದ ಎಲ್ಲಾ ಕಡೆಗಳಿಂದಲೂ ಒಟ್ಟುಗೂಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಆತನು ತನ್ನ ದೂತರನ್ನು ತುತೂರಿಯ ಮಹಾಶಬ್ದದೊಂದಿಗೆ ಕಳುಹಿಸುವನು. ಆಗ ಅವರು ಆತನಿಂದ ಆಯ್ಕೆಯಾದವರನ್ನು ನಾಲ್ಕು ದಿಕ್ಕುಗಳಿಂದಲೂ ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ಒಟ್ಟುಗೂಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ಮೊಟ್ಯಾ ಪಂವ್ಯಾಚ್ಯಾ ವಾಜ್ಪಾಚ್ಯಾ ವಾಂಗ್ಡಾಚ್ ತೊ ಅಪ್ನಾಚ್ಯಾ ದುತಾಕ್ನಿ ಧಾಡುನ್ ದಿತಾ, ಅನಿ ತೆನಿ ಜಗಾಚ್ಯಾ ಚಾರಿ ದಿಕ್ಕಾಕ್ನಿ ಪತರ್ ಜಾವ್ನ್ ಮಾನ್ಸಾಚ್ಯಾ ಲೆಕಾನ್ ಎಚುನ್ ಕಾಡಲ್ಲ್ಯಾಕ್ನಿ ಗೊಳಾ ಕರ್‍ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 24:31
44 ತಿಳಿವುಗಳ ಹೋಲಿಕೆ  

ಯಾಕೆಂದರೆ ಕರ್ತನು ತಾನೇ ಆಜ್ಞಾಘೋಷದೊಡನೆಯೂ, ಪ್ರಧಾನದೂತನ ಶಬ್ದದೊಡನೆಯೂ, ದೇವರ ತುತ್ತೂರಿ ಧ್ವನಿಯೊಡನೆಯೂ ಆಕಾಶದಿಂದ ಇಳಿದುಬರುವನು. ಆಗ ಕ್ರಿಸ್ತನಲ್ಲಿ ಸತ್ತವರು ಮೊದಲು ಎದ್ದು ಬರುವರು.


ಮತ್ತು ಆತನು ತನ್ನ ದೂತರನ್ನು ಕಳುಹಿಸಿ ಭೂಮಿಯ ಕಟ್ಟಕಡೆಯಿಂದ ಆಕಾಶದ ಕಟ್ಟಕಡೆಯವರೆಗೆ ತಾನು ಆರಿಸಿಕೊಂಡವರನ್ನು ನಾಲ್ಕುದಿಕ್ಕುಗಳಿಂದ ಒಟ್ಟುಗೂಡಿಸುವನು.”


ಆ ದಿನದಲ್ಲಿ ದೊಡ್ಡ ಕೊಂಬನ್ನೂದಲು ಅಶ್ಶೂರ ದೇಶದಲ್ಲಿ ಹಾಳಾದವರೂ, ಐಗುಪ್ತದಲ್ಲಿ ದೇಶಭ್ರಷ್ಟರಾದವರೂ ಬಂದು ಪರಿಶುದ್ಧ ಪರ್ವತವಾದ ಯೆರೂಸಲೇಮಿನಲ್ಲಿ ಯೆಹೋವನನ್ನು ಆರಾಧಿಸುವರು.


ಕಡೆ ತುತ್ತೂರಿಯ ಧ್ವನಿಯು ಮೊಳಗುವಲ್ಲಿ, ಕ್ಷಣಮಾತ್ರದಲ್ಲಿ, ರೆಪ್ಪೆಬಡಿಯುವಷ್ಟರೊಳಗಾಗಿ ನಾವೆಲ್ಲರೂ ಮಾರ್ಪಡುವೆವು. ಹೌದು, ತುತ್ತೂರಿಯು ಮೊಳಗಿ ಸತ್ತವರು ನಿರ್ಲಯರಾಗಿ ಎಬ್ಬಿಸಲ್ಪಡುವರು, ನಾವು ರೂಪಾಂತರ ಹೊಂದುವೆವು.


ಅವನು ಜನಾಂಗಗಳಲ್ಲಿ ಧ್ವಜವನ್ನೆತ್ತಿ, ಇಸ್ರಾಯೇಲರಲ್ಲಿ ಸೆರೆಗೆ ಒಯ್ಯಲ್ಪಟ್ಟವರನ್ನೂ, ಯೆಹೂದದಿಂದ ಚದರಿದವರನ್ನೂ ಭೂಮಿಯ ನಾಲ್ಕು ಕಡೆಗಳಿಂದಲೂ ಕೂಡಿಸುವನು.


ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿಸುವನು. ಅವರು ಆತನ ರಾಜ್ಯದೊಳಗಿಂದ ಪಾಪಕ್ಕೆ ಕಾರಣವಾದವರೆಲ್ಲರನ್ನೂ ಅಧರ್ಮಿಗಳನ್ನೂ ಕೂಡಿಸಿ ಬೆಂಕಿ ಕೊಂಡದಲ್ಲಿ ಹಾಕುವರು.


ಸಹೋದರರೇ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಆಗಮನದ ವಿಷಯವಾಗಿಯೂ ಮತ್ತು ನಾವು ಆತನ ಎದುರಿನಲ್ಲಿ ಕೂಡಿಕೊಳ್ಳುವುದರ ವಿಷಯವಾಗಿಯೂ ನಿಮ್ಮನ್ನು ವಿನಂತಿಸುವುದೇನಂದರೆ,


ಕಾಲವು ಪರಿಪೂರ್ಣವಾದಾಗ, ಆತನು ಭೂಪರಲೋಕಗಳಲ್ಲಿರುವ ಸಮಸ್ತವನ್ನು ಕ್ರಿಸ್ತನಲ್ಲಿ ಒಂದುಗೂಡಿಸುವುದೇ ಆ ಸಂಕಲ್ಪವಾಗಿತ್ತು.


ಆ ಜನತೆಗಾಗಿ ಮಾತ್ರವಲ್ಲದೆ ಚದರಿರುವ ದೇವರ ಮಕ್ಕಳನ್ನು ಸಹ ಒಟ್ಟುಗೂಡಿಸುವುದಕ್ಕಾಗಿಯೂ ಸಾಯುವುದಕ್ಕಿದ್ದನು, ಎಂಬುದಾಗಿ ಪ್ರವಾದಿಸಿದನು


“ಇದಲ್ಲದೆ ಮನುಷ್ಯಕುಮಾರನು ತನ್ನ ಮಹಿಮೆಯಿಂದ ಸಮಸ್ತ ದೇವದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದಲ್ಲಿ ಕುಳಿತುಕೊಳ್ಳುವನು;


ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ತಿರುಗಿಕೊಳ್ಳಿರಿ, ರಕ್ಷಣೆಯನ್ನು ಹೊಂದಿಕೊಳ್ಳಿರಿ. ಏಕೆಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.


‘ಅವರನ್ನು ಒಪ್ಪಿಸಿಬಿಡು’ ಎಂದು ಉತ್ತರದಿಕ್ಕಿಗೂ ‘ತಡೆಯಬೇಡ’ ಎಂದು ದಕ್ಷಿಣಕ್ಕೂ ಹೇಳಿ, ದೂರದಲ್ಲಿರುವ ನನ್ನ ಕುಮಾರರನ್ನೂ, ದಿಗಂತಗಳಲ್ಲಿರುವ ನನ್ನ ಕುಮಾರಿಯರನ್ನೂ,


ಭೂಮಂಡಲದವರೆಲ್ಲರೂ ಎಚ್ಚರಗೊಂಡು ಯೆಹೋವನ ಕಡೆಗೆ ತಿರುಗಿಕೊಳ್ಳುವರು; ಯೆಹೋವನೇ, ಎಲ್ಲಾ ಜನಾಂಗಗಳವರು ನಿನಗೆ ಅಡ್ಡಬೀಳುವರು.


ಎಲೈ, ಎಲೈ ಉತ್ತರದೇಶದಿಂದ ಓಡಿ ಬನ್ನಿರಿ; ಇದು ಯೆಹೋವನ ನುಡಿ; ಚತುರ್ದಿಕ್ಕಿನ ಗಾಳಿಗಳಂತೆ ನಿಮ್ಮನ್ನು ಚದುರಿಸಿದ್ದೆನಲ್ಲಾ; ಇದು ಯೆಹೋವನ ನುಡಿ.


ಕಣ್ಣೆತ್ತಿ ಸುತ್ತಲು ನೋಡು, ನಿನ್ನ ಮಕ್ಕಳೆಲ್ಲರೂ ಗುಂಪುಕೂಡಿ ನಿನ್ನ ಬಳಿಗೆ ಸೇರಿಬರುತ್ತಾರೆ; ಗಂಡುಮಕ್ಕಳು ದೂರದಿಂದ ಸಮೀಪಿಸುತ್ತಾರೆ, ಹೆಣ್ಣುಮಕ್ಕಳು ಕಂಕುಳಿನಲ್ಲಿ ಕುಳಿತು ಬರುತ್ತಾರೆ.


ಕಣ್ಣೆತ್ತಿ ಸುತ್ತಲು ನೋಡು! ಇವರೆಲ್ಲರೂ ಕೂಡಿಕೊಂಡು ನಿನ್ನ ಬಳಿಗೆ ಬರುತ್ತಿದ್ದಾರೆ. ಯೆಹೋವನು ಹೀಗೆನ್ನುತ್ತಾನೆ, “ನನ್ನ ಜೀವದಾಣೆ, ನೀನು ಇವರನ್ನೆಲ್ಲಾ ಆಭರಣವನ್ನಾಗಿ ಧರಿಸಿಕೊಳ್ಳುವಿ, ವಧುವು ಒಡ್ಯಾಣವನ್ನು ಕಟ್ಟಿಕೊಳ್ಳುವ ಹಾಗೆ ನೀನು ಇವರನ್ನು ನಿನ್ನ ಎದೆಗೆ ಒರಗಿ ಕಟ್ಟಿಕೊಳ್ಳುವಿ.


ಯೆಹೋವನು ತಾನು ನ್ಯಾಯ ತೀರಿಸುವ ಆಯುಧಗಳೊಡನೆ ದೂರ ದೇಶದಿಂದ ಅಂದರೆ, ಆಕಾಶ ಮಂಡಲದ ಕಟ್ಟಕಡೆಯಿಂದ ಭೂಮಿಯನ್ನೆಲ್ಲಾ ಹಾಳುಮಾಡುವುದಕ್ಕಾಗಿ ಬರುತ್ತಾನೆ.


ಇದಾದ ನಂತರ ನಾಲ್ಕು ಮಂದಿ ದೇವದೂತರು ಭೂಮಿಯ ನಾಲ್ಕು ದಿಕ್ಕುಗಳಲ್ಲಿ ನಿಂತುಕೊಂಡು ಭೂಮಿಯ ಮೇಲಾಗಲಿ ಸಮುದ್ರದ ಮೇಲಾಗಲಿ ಅಥವಾ ಯಾವ ಮರದ ಮೇಲಾಗಲಿ ಗಾಳಿ ಬೀಸದಂತೆ ಭೂಮಿಯ ಚತುರ್ದಿಕ್ಕುಗಳ ಗಾಳಿಗಳನ್ನು ತಡೆಹಿಡಿದಿರುವುದನ್ನು ಕಂಡೆನು.


ಯೆಹೋವನು ಸ್ವಜನರಿಗಾಗಿ ಅವರ ಮೇಲೆ ಕಾಣಿಸಿಕೊಳ್ಳುವನು; ಆತನ ಬಾಣವು ಸಿಡಿಲಿನಂತೆ ಹಾರುವುದು; ಕರ್ತನಾದ ಯೆಹೋವನು ತುತ್ತೂರಿಯನ್ನು ಊದಿ ದಕ್ಷಿಣ ಪ್ರಾಂತ್ಯದ ಬಿರುಗಾಳಿಗಳೊಡನೆ ನುಗ್ಗುವನು.


ನಿಮ್ಮಲ್ಲಿ ಯಾರಾದರೂ ಭೂಲೋಕದ ಕಟ್ಟಕಡೆಯವರೆಗೆ ಒಯ್ಯಲ್ಪಟ್ಟರೂ, ಅಲ್ಲಿಂದಲೂ ನಿಮ್ಮ ದೇವರಾದ ಯೆಹೋವನು ಅವರನ್ನೂ ಕರೆದುಕೊಂಡು ಬರುವನು.


ಆಗ ದೇವರ ಸನ್ನಿಧಿಯಲ್ಲಿ ನಿಂತಿರುವ ಏಳು ದೇವದೂತರನ್ನು ಕಂಡೆನು. ಅವರಿಗೆ ಏಳು ತುತ್ತೂರಿಗಳು ಕೊಡಲ್ಪಟ್ಟವು.


ಆದರೂ “ಅವರಿಗೆ ಕೇಳಿಸಲಿಲ್ಲವೇನೋ?” ಎಂದು ಹೇಳುತ್ತೇನೆ. ಹೌದು ನಿಶ್ಚಯವಾಗಿ ಕೇಳಿಸಿಕೊಂಡಿದ್ದರು. “ಸಾರುವವರ ಧ್ವನಿಯು ಭೂಮಿಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿದವು.”


ಯೇಸು ಅವರ ಹತ್ತಿರಕ್ಕೆ ಬಂದು, “ಪರಲೋಕದಲ್ಲಿಯೂ, ಭೂಲೋಕದಲ್ಲಿಯೂ ಇರುವ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ.


ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಒಬ್ಬ ನರಪ್ರಾಣಿಯಾದರೂ ಉಳಿಯನು; ಆದರೆ ತಾನು ಆರಿಸಿಕೊಂಡವರಿಗೋಸ್ಕರ ಆ ದಿನಗಳನ್ನು ಕಡಿಮೆಮಾಡುವನು.


ನೀವು ಯೆಹೋವನ ಗುಡ್ಡಗಳ ನಡುವಣ ಆ ಕಣಿವೆಯೊಳಗೆ ಓಡಿಹೋಗುವಿರಿ; ಏಕೆಂದರೆ ಆ ಕಣಿವೆಯು ಆಚೆಲಿನವರೆಗೂ ಮುಟ್ಟಿರುವುದು; ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಭೂಕಂಪದ ಕಡೆಯಿಂದ ನೀವು ಓಡಿಹೋದಂತೆಯೇ ಓಡಿಹೋಗುವಿರಿ; ಆಗ ಪರಿಶುದ್ಧ ದೇವರಾದ ಯೆಹೋವನು ಸಮಸ್ತ ದೇವದೂತರ ಸಮೇತ ಬರುವನು.


ದಾನಿಯೇಲನು ಆ ಪ್ರಸ್ತಾಪವನ್ನೆತ್ತಿ ಇಂತೆಂದನು, “ನಾನು ರಾತ್ರಿ ಕಂಡ ಕನಸಿನಲ್ಲಿ ಆಹಾ, ಚತುರ್ದಿಕ್ಕಿನ ಗಾಳಿಗಳೂ ಮಹಾಸಾಗರದ ಮೇಲೆ ರಭಸವಾಗಿ ಬೀಸಿ ಬಡಿಯುತ್ತಿದ್ದವು.


ಸಮುದ್ರಪ್ರಯಾಣಿಕರೇ, ಸಕಲಜಲಚರಗಳೇ, ದ್ವೀಪಾಂತರಗಳೇ, ದ್ವೀಪಾಂತರವಾಸಿಗಳೇ, ಯೆಹೋವನ ಘನತೆಗಾಗಿ ನೂತನ ಗೀತೆಯನ್ನು ಹಾಡಿ ದಿಗಂತಗಳಲ್ಲಿಯೂ ಆತನನ್ನು ಕೀರ್ತಿಸಿರಿ.


ಅಮಾವಾಸ್ಯೆಯಲ್ಲಿಯೂ, ನಮ್ಮ ಉತ್ಸವದಿನವಾಗಿರುವ ಹುಣ್ಣಿಮೆಯಲ್ಲಿಯೂ ಕೊಂಬನ್ನು ಊದಿರಿ.


ಆತನು ನಮ್ಮನ್ನು ಆಶೀರ್ವದಿಸುವವನಾಗಿದ್ದಾನೆ. ಭೂಮಂಡಲದವರೆಲ್ಲರೂ ಆತನಲ್ಲಿ ಭಯಭಕ್ತಿಯುಳ್ಳವರಾಗಿರುವರು.


ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ, “ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನ ಕ್ರಿಸ್ತನಿಗೂ ಬಂದಿದೆ, ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು” ಎಂಬ ಮಹಾಘೋಷಣೆಯಾಯಿತು.


ಅದಲ್ಲದೆ ಜನರು ಪಾಪಕ್ಷಮಾಪಣೆಗೋಸ್ಕರ ಪಶ್ಚಾತ್ತಾಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಈ ಸುವಾರ್ತೆಯು ಯೆರೂಸಲೇಮ್ ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡಬೇಕು’ ಎಂದು ಬರೆದದೆ.


ನಾನು ಎಫ್ರಾಯೀಮಿನ ರಥಬಲವನ್ನೂ, ಯೆರೂಸಲೇಮಿನ ಅಶ್ವಬಲವನ್ನೂ ನಿಶ್ಶೇಷಮಾಡುವೆನು; ಯುದ್ಧದ ಬಿಲ್ಲು ಇಲ್ಲವಾಗುವುದು; ಆತನು ಕೊಡುವ ಅಪ್ಪಣೆಯು ಜನಾಂಗಗಳಿಗೆ ಸಮಾಧಾನಕರವಾಗಿರುವುದು; ಆತನ ಆಳ್ವಿಕೆಯು ಸಮುದ್ರದಿಂದ ಸಮುದ್ರದವರೆಗೂ ಯೂಫ್ರೆಟಿಸ್ ನದಿಯಿಂದ ಭೂಮಿಯ ಕಟ್ಟಕಡೆಯವರೆಗೂ ಹರಡಿಕೊಂಡಿರುವುದು.


ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಗೂಢಾರ್ಥವನ್ನು ವಿವರಿಸುತ್ತೇನೆ. ಆ ಏಳು ನಕ್ಷತ್ರಗಳು ಅಂದರೆ ಏಳು ಸಭೆಗಳ ದೂತರು, ಆ ಏಳು ದೀಪಸ್ತಂಭಗಳು ಅಂದರೆ ಆ ಏಳು ಸಭೆಗಳು.”


ಮೂರನೆಯ ದಿನದಲ್ಲಿ ಸೂರ್ಯೋದಯವಾಗಲು ಆ ಬೆಟ್ಟದ ಮೇಲೆ ಗುಡುಗು, ಮಿಂಚೂ, ಕಾರ್ಮುಗಿಲೂ, ತುತ್ತೂರಿಯ ಮಹಾಧ್ವನಿಯೂ ಉಂಟಾಗಲು ಪಾಳೆಯಲ್ಲಿದ್ದ ಜನರೆಲ್ಲರೂ ನಡುಗಿದರು.


ದೇವರು, ಮನುಷ್ಯರನ್ನು ಸೃಷ್ಟಿಸಿ ಭೂಮಿಯ ಮೇಲೆ ಇರಿಸಿದ ದಿನ ಮೊದಲುಗೊಂಡು ಇಂದಿನವರೆಗೂ ಒಂದು ದಿಕ್ಕಿನಿಂದ ಮತ್ತೊಂದು ದಿಕ್ಕಿನವರೆಗೂ ಇಂತಹ ಅದ್ಭುತ ಕಾರ್ಯವು ನಡೆದದ್ದುಂಟೋ, ಇಲ್ಲವೆ ಇಂತಹ ಸುದ್ದಿ ಕೇಳಿದ್ದುಂಟೋ ಎಂದು ವಿಚಾರಿಸಿಕೊಳ್ಳಿರಿ.


ಆ ದೇವದೂತನು ನನಗೆ, “ಇವು ಆಕಾಶದ ನಾಲ್ಕು ಗಾಳಿಗಳು; ಭೂಲೋಕದ ಒಡೆಯನ ಸನ್ನಿಧಾನದಲ್ಲಿ ನಿಂತಿದ್ದು ಅಲ್ಲಿಂದ ಹೊರಟು ಬರುತ್ತಾ ಇವೆ” ಎಂದು ಉತ್ತರಕೊಟ್ಟನು.


ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಸಹ ಮೋಸಗೊಳಿಸುವುದಕ್ಕೋಸ್ಕರ ಮಹಾ ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.


“ಅಂಜೂರ ಮರದ ದೃಷ್ಟಾಂತದಿಂದ ಬುದ್ಧಿಕಲಿಯಿರಿ. ಅದರ ಕೊಂಬೆ ಇನ್ನು ಎಳೆಯದಾಗಿದ್ದು ಎಲೆ ಬಿಡುವಾಗ ಬೇಸಿಗೆಯು ಹತ್ತಿರವಾಯಿತೆಂದು ತಿಳಿದುಕೊಳ್ಳುತ್ತೀರಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು