Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 24:36 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 “ಇದಲ್ಲದೆ ಆ ದಿನವನ್ನು ಕುರಿತು ಆ ಗಳಿಗೆಯನ್ನು ಕುರಿತು, ನನ್ನ ತಂದೆಗೆ ಮಾತ್ರ ತಿಳಿದಿದೆಯೇ ಹೊರತು ಮತ್ತಾರಿಗೂ ತಿಳಿಯದು; ಪರಲೋಕದಲ್ಲಿರುವ ದೂತರಿಗೂ ಕೂಡ ತಿಳಿಯದು, ಮಗನಿಗೂ ತಿಳಿಯದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 “ಆ ದಿನವಾಗಲಿ, ಆ ಗಳಿಗೆಯಾಗಲಿ ಯಾವಾಗ ಬರುವುದೆಂದು ದೇವರೇ ಹೊರತು ಮತ್ತಾರೂ ಅರಿಯರು. ಸ್ವರ್ಗದ ದೂತರೇ ಆಗಲಿ, ಪುತ್ರನೇ ಆಗಲಿ ಅದನ್ನು ಅರಿಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಇದಲ್ಲದೆ ಆ ದಿನದ ವಿಷಯವೂ ಆ ಗಳಿಗೆಯ ವಿಷಯವೂ ನನ್ನ ತಂದೆಯೊಬ್ಬನಿಗೆ ತಿಳಿಯುವದೇ ಹೊರತು ಮತ್ತಾರಿಗೂ ತಿಳಿಯದು; ಪರಲೋಕದಲ್ಲಿರುವ ದೂತರಿಗೂ ತಿಳಿಯದು, ಮಗನಿಗೂ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 “ಆ ದಿನವು ಇಲ್ಲವೆ ಆ ಸಮಯವು ಯಾವಾಗ ಬರುತ್ತದೆ ಎಂಬುದು ಯಾರಿಗೂ ತಿಳಿಯದು. ಮಗನಿಗೂ ಮತ್ತು ಪರಲೋಕದಲ್ಲಿರುವ ದೇವದೂತರಿಗೂ ಆ ದಿನವು ಅಥವಾ ಆ ಸಮಯವು ಯಾವಾಗ ಬರುತ್ತದೆ ಎಂಬುದು ತಿಳಿಯದು. ತಂದೆಗೆ ಮಾತ್ರ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 “ಆ ದಿನದ ಮತ್ತು ಆ ಗಳಿಗೆಯ ವಿಷಯವಾಗಿ ತಂದೆಗೆ ಹೊರತು ಯಾವ ಮನುಷ್ಯನಿಗಾಗಲಿ, ಪರಲೋಕದಲ್ಲಿರುವ ದೂತರಿಗಾಗಲಿ, ಮನುಷ್ಯಪುತ್ರನಾದ ನನಗೂ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ಖರೆ ತೊ ದಿಸ್ ಅನಿ ತೊ ಎಳ್ ಕನ್ನಾ ಯೆತಾ ಮನುನ್ ದೆವಾ ಬಾಬಾಕ್ ಎಕ್ಲ್ಯಾಕ್ ಸೊಡುನ್, ಅನಿ ಕೊನಾಕ್‍ಬಿ, ಸರ್ಗಾ ವೈಲ್ಯಾ ದುತಾಕ್ನಿ ಹೊಂವ್ದಿ, ದೆವಾಚ್ಯಾ ಲೆಕಾಕ್ ಸೈತ್ ಗೊತ್ತ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 24:36
10 ತಿಳಿವುಗಳ ಹೋಲಿಕೆ  

“ಇದಲ್ಲದೆ ಆ ದಿನದ ಮತ್ತು ಆ ಗಳಿಗೆಯ ವಿಷಯವಾಗಿ ನನ್ನ ತಂದೆಗೆ ಹೊರತು ಮತ್ತಾರಿಗೂ ತಿಳಿಯದು, ಪರಲೋಕದಲ್ಲಿರುವ ದೂತರಿಗಾಗಲಿ, ಮಗನಿಗಾಗಲಿ ತಿಳಿಯದು.


ಆತನು ಅವರಿಗೆ, “ತಂದೆಯು ತನ್ನ ಅಧಿಕಾರದಲ್ಲಿಟ್ಟುಕೊಂಡಿರುವ ಕಾಲಗಳನ್ನೂ, ಸಮಯಗಳನ್ನೂ ತಿಳಿದುಕೊಳ್ಳುವುದು ನಿಮ್ಮ ಕಾರ್ಯವಲ್ಲ.


ಆದಕಾರಣ ನೀವು ಸಹ ಸಿದ್ಧವಾಗಿರಿ; ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ.


ಆದರೂ ಕರ್ತನ ದಿನವು ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶ ಮಂಡಲವು ಮಹಾಘೋಷದಿಂದ ಇಲ್ಲದೆ ಹೋಗುವವು. ಮೂಲಧಾತುಗಳು ಉರಿದು ಲಯವಾಗಿ ಹೋಗುವವು. ಭೂಮಿಯೂ ಅದರಲ್ಲಿರುವ ಕೆಲಸಗಳೂ ಸುಟ್ಟು ಹೋಗುವವು.


ರಾತ್ರಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವುದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ.


“ಇಗೋ ಕಳ್ಳನು ಬರುವಂತೆ ಬರುತ್ತೇನೆ. ತಾನು ಬೆತ್ತಲೆಯಾಗಿ ತಿರುಗಾಡಿ ಜನರಿಂದ ಅವಮಾನಕ್ಕೆ ಗುರಿಯಾಗದಂತೆ ಎಚ್ಚರವಾಗಿದ್ದು ತನ್ನ ವಸ್ತ್ರಗಳನ್ನು ಜಾಗರೂಕತೆಯಿಂದ ಕಾಪಾಡಿಕೊಳ್ಳುವವನು ಧನ್ಯನು.”


“ಹೀಗಿರಲಾಗಿ ನಿಮ್ಮ ಕರ್ತನು ಬರುವ ದಿನವು ನಿಮಗೆ ಗೊತ್ತಿಲ್ಲದಿರುವುದರಿಂದ ಎಚ್ಚರವಾಗಿರಿ.


ಏಕೆಂದರೆ ಆ ದಿನವಾದರೂ ಗಳಿಗೆಯಾದರೂ ನಿಮಗೆ ತಿಳಿಯದು, ಆದಕಾರಣ ಎಚ್ಚರವಾಗಿರಿ.


ಆದುದರಿಂದ ನೀನು ಹೊಂದಿಕೊಂಡಿದ್ದ ಉಪದೇಶವನ್ನೂ ಅದನ್ನು ಕೇಳಿದ ರೀತಿಯನ್ನೂ ನೆನಪಿಗೆ ತಂದು ಅದನ್ನು ಕಾಪಾಡಿಕೊಂಡು ಮಾನಸಾಂತರ ಹೊಂದಿ ದೇವರ ಕಡೆಗೆ ತಿರಿಗಿಕೋ. ನೀನು ಎಚ್ಚರಗೊಳ್ಳದಿದ್ದರೆ ಕಳ್ಳನು ಬರುವಂತೆ ಬರುವೆನು. ನಾನು ಯಾವ ಗಳಿಗೆಯಲ್ಲಿ ನಿನ್ನಲ್ಲಿಗೆ ಬರುವೆನೆಂಬುದು ನಿನಗೆ ತಿಳಿಯುವುದೇ ಇಲ್ಲ.


ಅದು ಯೆಹೋವನಿಗೆ ತಿಳಿದಿರುವುದು, ಅದು ಹಗಲೂ ಅಲ್ಲ, ಇರುಳೂ ಅಲ್ಲ, ಆದರೆ ಸಂಜೆಯ ವೇಳೆಯಲ್ಲಿ ಬೆಳಕಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು