Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 24:42 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 “ಹೀಗಿರಲಾಗಿ ನಿಮ್ಮ ಕರ್ತನು ಬರುವ ದಿನವು ನಿಮಗೆ ಗೊತ್ತಿಲ್ಲದಿರುವುದರಿಂದ ಎಚ್ಚರವಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ನಿಮ್ಮ ಪ್ರಭು ಯಾವ ದಿನ ಬರುತ್ತಾನೆಂದು ನಿಮಗೆ ತಿಳಿಯದು, ಆದ್ದರಿಂದ ಎಚ್ಚರವಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಹೀಗಿರಲಾಗಿ ನಿಮ್ಮ ಕರ್ತನು ಬರುವ ದಿನವು ನಿಮಗೆ ಗೊತ್ತಿಲ್ಲವಾದದರಿಂದ ಎಚ್ಚರವಾಗಿರ್ರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 “ಆದ್ದರಿಂದ ಯಾವಾಗಲೂ ಸಿದ್ಧವಾಗಿರಿ. ನಿಮ್ಮ ಪ್ರಭು ಬರುವ ದಿನ ನಿಮಗೆ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 “ನಿಮ್ಮ ಕರ್ತನು ಯಾವ ಗಳಿಗೆಯಲ್ಲಿ ಬರುತ್ತಾನೋ ನಿಮಗೇ ಗೊತ್ತಿಲ್ಲವಾದ್ದರಿಂದ ಎಚ್ಚರವಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

42 ತಸೆಮನುನ್ ತುಮಿ ಉಶಾರ್‍ಕಿನ್ ರ್‍ಹಾವಾ; ಖಲ್ಯಾ ದಿಸಿ ತುಮ್ಚೊ ಧನಿ ಯೆತಾ ಮನ್ತಲೆ ತುಮ್ಕಾ ಗೊತ್ತ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 24:42
17 ತಿಳಿವುಗಳ ಹೋಲಿಕೆ  

ಆದರೆ ಅಂದು ಬರುವುದಕ್ಕಿರುವ ಇವೆಲ್ಲವುಗಳಿಂದ ತಪ್ಪಿಸಿಕೊಳ್ಳುವುದಕ್ಕೂ, ಮನುಷ್ಯಕುಮಾರನ ಮುಂದೆ ನಿಂತುಕೊಳ್ಳುವುದಕ್ಕೂ, ನೀವು ಪೂರ್ಣ ಶಕ್ತರಾಗುವಂತೆ, ಎಲ್ಲಾ ಕಾಲದಲ್ಲಿಯೂ ದೇವರಿಗೆ ವಿಜ್ಞಾಪನೆಮಾಡಿಕೊಳ್ಳುತ್ತಾ ಎಚ್ಚರವಾಗಿರಿ” ಅಂದನು.


ಆದಕಾರಣ ನಾವು ಇತರರಂತೆ ನಿದ್ರೆಮಾಡದೆ ಎಚ್ಚರವಾಗಿರೋಣ, ಸ್ವಸ್ಥಚಿತ್ತರಾಗಿರೋಣ.


ಏಕೆಂದರೆ ಆ ದಿನವಾದರೂ ಗಳಿಗೆಯಾದರೂ ನಿಮಗೆ ತಿಳಿಯದು, ಆದಕಾರಣ ಎಚ್ಚರವಾಗಿರಿ.


“ಇಗೋ ಕಳ್ಳನು ಬರುವಂತೆ ಬರುತ್ತೇನೆ. ತಾನು ಬೆತ್ತಲೆಯಾಗಿ ತಿರುಗಾಡಿ ಜನರಿಂದ ಅವಮಾನಕ್ಕೆ ಗುರಿಯಾಗದಂತೆ ಎಚ್ಚರವಾಗಿದ್ದು ತನ್ನ ವಸ್ತ್ರಗಳನ್ನು ಜಾಗರೂಕತೆಯಿಂದ ಕಾಪಾಡಿಕೊಳ್ಳುವವನು ಧನ್ಯನು.”


ಎಚ್ಚರವಾಗಿರಿ, ಕ್ರಿಸ್ತ ನಂಬಿಕೆಯಲ್ಲಿ ದೃಢವಾಗಿ ನಿಲ್ಲಿರಿ. ಧೈರ್ಯವಂತರಾಗಿರಿ, ಬಲಗೊಳ್ಳಿರಿ.


“ಇದಲ್ಲದೆ ಆ ದಿನವನ್ನು ಕುರಿತು ಆ ಗಳಿಗೆಯನ್ನು ಕುರಿತು, ನನ್ನ ತಂದೆಗೆ ಮಾತ್ರ ತಿಳಿದಿದೆಯೇ ಹೊರತು ಮತ್ತಾರಿಗೂ ತಿಳಿಯದು; ಪರಲೋಕದಲ್ಲಿರುವ ದೂತರಿಗೂ ಕೂಡ ತಿಳಿಯದು, ಮಗನಿಗೂ ತಿಳಿಯದು,


ಈಗಿನ ಕಾಲವು ನಿದ್ದೆಯಿಂದ ಎಚ್ಚರವಾಗಿರತಕ್ಕ ಕಾಲವೆಂದು ಅರಿತು ಇದನ್ನೆಲ್ಲಾ ಮಾಡಿರಿ. ನಾವು ಕ್ರಿಸ್ತನನ್ನು ಮೊದಲು ನಂಬಿದ ಕಾಲದಲ್ಲಿ ಇದ್ದುದಕ್ಕಿಂತ ಈಗ ನಮ್ಮ ವಿಮೋಚನೆಯ ಕಾಲವು ಹತ್ತಿರವಾಗಿದೆ.


ಆದಕಾರಣ ನೀವು ಸಹ ಸಿದ್ಧವಾಗಿರಿ; ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ.


ಸ್ವಸ್ಥಚಿತ್ತರಾಗಿರಿ ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಘರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗಾಡುತ್ತಿದ್ದಾನೆ.


ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ. ಆದ್ದರಿಂದ ನೀವು ಜಿತೇಂದ್ರಿಯರಾಗಿಯೂ ಯಾವಾಗಲೂ ಪ್ರಾರ್ಥನೆಗೆ ಸಿದ್ಧವಾಗಿರುವಂತೆ ಸ್ವಸ್ಥಚಿತ್ತರಾಗಿಯೂ ಇರಿ.


ಕಳ್ಳನು ಬರುವ ಗಳಿಗೆ ಮನೆಯ ಯಜಮಾನನಿಗೆ ತಿಳಿದಿದ್ದರೆ ಅವನು ತನ್ನ ಮನೆಗೆ ಕನ್ನಾ ಹಾಕಗೊಡಿಸದೇ ಕಾಯುತ್ತಿದ್ದನೆಂದು ತಿಳಿದುಕೊಳ್ಳಿರಿ.


ಅವರು ಕೊಂಡುಕೊಳ್ಳುವುದಕ್ಕೆ ಹೊರಟುಹೋದಾಗ ಮದಲಿಂಗನು ಬಂದನು. ಸಿದ್ಧವಾಗಿದ್ದವರು ಅವನ ಸಂಗಡ ಮದುವೆಯ ಮನೆಯೊಳಗೆ ಹೋದರು, ಬಾಗಿಲನ್ನು ಮುಚ್ಚಲಾಯಿತು.


“ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ. ಅತಿ ಭೋಜನದ ಮದದಿಂದಲೂ, ಅಮಲಿನಿಂದಲೂ, ಪ್ರಾಪಂಚಿಕವಾದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗಿರಲಾಗಿ ಆ ದಿನವು ನಿಮ್ಮ ಮೇಲೆ ಉರುಲಿನಂತೆ ಫಕ್ಕನೆ ಬಂದೀತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು