Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 24:48 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ಆದರೆ ಆ ದುಷ್ಟ ಆಳು, ‘ನನ್ನ ಯಜಮಾನನು ಬರುವುದಕ್ಕೆ ತಡ ಮಾಡುತ್ತಾನೆ’ ಎಂದು ತನ್ನ ಮನಸ್ಸಿನಲ್ಲಿ ಅಂದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

48 ಆದರೆ ಆ ಮೇಸ್ತ್ರಿ ದುಷ್ಟನಾಗಿದ್ದು ‘ನನ್ನ ಯಜಮಾನ ತಡಮಾಡುವನು’ ಎಂದು ನೆನಸಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

48 ಆದರೆ ಆ ಕೆಟ್ಟ ಆಳು - ನನ್ನ ಯಜಮಾನನು ತಡಮಾಡುತ್ತಾನೆ ಅಂತ ತನ್ನ ಮನಸ್ಸಿನಲ್ಲಿ ಅಂದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

48 “ಆದರೆ ಸೇವಕನು ದುಷ್ಟನಾಗಿದ್ದರೆ ಮತ್ತು ತನ್ನ ಯಜಮಾನನು ಬೇಗನೆ ಹಿಂತಿರುಗಿ ಬರುವುದಿಲ್ಲ ಎಂದು ನೆನಸಿಕೊಂಡಿದ್ದರೆ ಅವನಿಗೆ ಏನು ಸಂಭವಿಸುತ್ತದೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

48 ಆದರೆ ದುಷ್ಟ ಸೇವಕನು ತನ್ನ ಹೃದಯದಲ್ಲಿ, ‘ನನ್ನ ಯಜಮಾನನು ಬರುವದಕ್ಕೆ ತಡಮಾಡುತ್ತಾನೆ,’ ಎಂದು ಹೇಳಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

48 ಖರೆ ತೊ ಎಕ್ ವಿಶ್ವಾಸ್‍ ನಸಲ್ಲೊ ಸೆವಕ್ ಹೊವ್ನ್ ತೊ ಅಪ್ನಾಕುಚ್ ಮಾಲಿಕ್ ಯೆವ್ಕ್ ಅಜುನ್ ಲೈ ಎಳ್ ಹಾಯ್ ಮನುನ್ ಘೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 24:48
18 ತಿಳಿವುಗಳ ಹೋಲಿಕೆ  

ಆಗ ಅವನ ಒಡೆಯನು ಅವನನ್ನು ಕರಸಿ, ‘ಓ, ದುಷ್ಟ ಸೇವಕನೇ, ನೀನು ನನ್ನನ್ನು ಬೇಡಿಕೊಂಡದ್ದರಿಂದ ನಿನ್ನ ಸಾಲವನ್ನೆಲ್ಲಾ ನಾನು ಮನ್ನಿಸಿಬಿಟ್ಟೆನಲ್ಲವೇ?


ಆದರೆ ಆ ಆಳು, ನನ್ನ ಯಜಮಾನನು ಬರುವುದಕ್ಕೆ ತಡವಾಗುತ್ತದೆಯೆಂದು ತನ್ನ ಮನಸ್ಸಿನಲ್ಲಿ ಅಂದುಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆಯುವುದಕ್ಕೂ ತೊಂದರೆಕೊಡುವುದಕ್ಕೂ ಮತ್ತು ಅಮಲೇರುವಷ್ಟು ತಿಂದು ಕುಡಿಯುವುದಕ್ಕೂ ತೊಡಗಿದರೆ,


ಏಕೆಂದರೆ ನೀಚನು ನೀಚವಾಗಿ ಮಾತನಾಡುವನು. ಅವನ ಹೃದಯವು ಕೇಡನ್ನು ಕಲ್ಪಿಸಿ, ನಡೆಯದೆ ಇರುವುದನ್ನು ನಡಿಸಿ ಯೆಹೋವನಿಗೆ ವಿರುದ್ಧವಾಗಿ ಅಸತ್ಯವನ್ನಾಡಿ, ಹಸಿದವನ ಆಶೆಯನ್ನು ಬರಿದುಮಾಡಿ, ಬಾಯಾರಿದವನ ಪಾನವನ್ನು ತಪ್ಪಿಸುವುದು.


ಆಗ ಪೇತ್ರನು; “ಅನನೀಯನೇ, ನೀನು ಆ ಹೊಲದ ಕ್ರಯದಲ್ಲಿ ಒಂದು ಭಾಗವನ್ನು ಬಚ್ಚಿಟ್ಟುಕೊಂಡು ಪವಿತ್ರಾತ್ಮನನ್ನು ವಂಚಿಸುವಂತೆ ಸೈತಾನನು ನಿನ್ನ ಹೃದಯದಲ್ಲಿ ಏಕೆ ತುಂಬಿಸಿಕೊಂಡಿ?


ಅವರು ಭೋಜನಕ್ಕೆ ಕುಳಿತುಕೊಂಡಿದ್ದರು, ಅಷ್ಟರೊಳಗೆ ಸೈತಾನನು ಸೀಮೋನನ ಮಗನಾದ ಇಸ್ಕರಿಯೋತ ಯೂದನ ಹೃದಯದಲ್ಲಿ ಯೇಸುವನ್ನು ಹಿಡಿದುಕೊಡಬೇಕೆಂಬ ಆಲೋಚನೆಯನ್ನು ಹುಟ್ಟಿಸಿದನು.


ಒಳಗಿನಿಂದ ಅಂದರೆ ಮನುಷ್ಯರ ಹೃದಯದೊಳಗಿನಿಂದ ಬರುವ ದುರಾಲೋಚನೆಗಳು, ಹಾದರ, ಕಳ್ಳತನ, ಕೊಲೆ,


ನಿಮ್ಮ ದೇವರಾದ ಯೆಹೋವನು ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿದ ನಂತರ ನೀವು ನಿಮ್ಮ ಮನಸ್ಸಿನಲ್ಲಿ, “ಯೆಹೋವನು ನಮ್ಮನ್ನು ಈ ದೇಶಕ್ಕೆ ಕರೆತಂದು ಅದನ್ನು ನಮಗೆ ಸ್ವಾಧೀನಪಡಿಸಿದ್ದಕ್ಕೆ ಕಾರಣ ನಮ್ಮ ಸದಾಚಾರವೇ” ಅಂದುಕೊಳ್ಳಬಾರದು. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೇ ಯೆಹೋವನು ನಿಮ್ಮ ಎದುರಿನಿಂದ ಅವರನ್ನು ಹೊರಡಿಸುತ್ತಾನೆ.


ಆದುದರಿಂದ ಈ ನಿನ್ನ ಕೆಟ್ಟತನವನ್ನು ಬಿಟ್ಟು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಕೋ ಕರ್ತನು ನಿನ್ನ ಮನಸ್ಸಿನ ಆಲೋಚನೆಯನ್ನು ಕ್ಷಮಿಸುವನೋ ಏನೋ ಆತನನ್ನು ಬೇಡಿಕೋ.


ಅದಕ್ಕೆ ಅವನು, ‘ನೀನು ಕೆಟ್ಟ ಆಳು, ನಿನ್ನ ಮಾತಿನ ಮೇಲೆಯೇ ನಿನಗೆ ತೀರ್ಪುಮಾಡುತ್ತೇನೆ. ನಾನು ಇಡದೆಯಿರುವುದನ್ನು ಎತ್ತಿಕೊಂಡು ಹೋಗುವವನು, ಬಿತ್ತದೆಯಿರುವುದನ್ನು ಕೊಯ್ಯುವ ಉಗ್ರವಾದ ಮನುಷ್ಯನು ಎಂದು ತಿಳಿದಿರುವೆಯಾ?


ಆಗ ಅವನ ಯಜಮಾನನು ಅವನಿಗೆ, ‘ಮೈಗಳ್ಳನಾದ ದುಷ್ಟ ಸೇವಕನೇ; ನೀನು ನನ್ನನ್ನು ಬಿತ್ತದಿರುವಲ್ಲಿ ಕೊಯ್ಯುವವನು ತೂರದಿರುವಲ್ಲಿ ರಾಶಿಮಾಡಿಕೊಳ್ಳುವವನು ಎಂದು ತಿಳಿದಿದ್ದೇಯಾ?


“ನರಪುತ್ರನೇ, ಇಗೋ, ಇಸ್ರಾಯೇಲ್ ವಂಶದವರು, ‘ಇವನಿಗಾದ ದಿವ್ಯದರ್ಶನವು ಮುಂದೆ ಬಹುದೂರ ಕಾಲಕ್ಕೆ ಸಂಬಂಧಪಟ್ಟದ್ದು; ಬಹಳ ದಿನಗಳ ಮೇಲೆ ಆಗತಕ್ಕದ್ದನ್ನು ಮುಂತಿಳಿಸುತ್ತಾನೆ’ ಎಂದು ಹೇಳುತ್ತಾರೆ.


“ನರಪುತ್ರನೇ, ಕ್ಲುಪ್ತಕಾಲವು ದೂರ ಹೋಗುತ್ತಲಿದೆ; ದಿವ್ಯದರ್ಶನಗಳೆಲ್ಲಾ ನಿರರ್ಥಕ ಎಂಬುದಾಗಿ ಇಸ್ರಾಯೇಲ್ ದೇಶದವರು ಆಡಿಕೊಳ್ಳುವ ಈ ಗಾದೆ ಮಾತು ಎಂಥದ್ದು?”


ಅಪರಾಧಕ್ಕೆ ವಿಧಿಸಿದ ದಂಡನೆಯು ಕೂಡಲೇ ನಡೆಯದಿರುವ ಕಾರಣ ಅಪರಾಧ ಮಾಡಬೇಕೆಂಬ ಯೋಚನೆಯು ಮನುಷ್ಯರ ಹೃದಯದಲ್ಲಿ ತುಂಬಿ ತುಳುಕುವುದು.


ಆಗ ಎಲೀಷನು ಗೇಹಜಿಗೆ, “ಒಬ್ಬನು ರಥದಿಂದ ಇಳಿದು ಬಂದು, ನಿನ್ನನ್ನು ಎದುರುಗೊಂಡದ್ದು ನನ್ನ ಜ್ಞಾನದೃಷ್ಟಿಗೆ ಕಾಣಲಿಲ್ಲವೆಂದು ತಿಳಿದಿರುವೆಯಾ? ದ್ರವ್ಯ, ಬಟ್ಟೆಗಳು, ಎಣ್ಣೇ ಮರದ ತೋಪುಗಳು, ದ್ರಾಕ್ಷಿತೋಟಗಳು, ಕುರಿದನಗಳು, ದಾಸದಾಸಿಯರು, ಜನರೂ ಇವುಗಳನ್ನು ಸಂಪಾದಿಸುವುದಕ್ಕೆ ಇದು ಸಮಯವೋ?


ನೀವು “ಬಿಡುಗಡೆಯುಂಟಾಗುವ ಏಳನೆಯ ವರ್ಷವು ಸಮೀಪವಾಯಿತು” ಎಂಬ ನೀಚವಾದ ಆಲೋಚನೆಯನ್ನು ಮಾಡಿ, ಆ ಬಡ ಸಹೋದರನಿಗೆ ಏನೂ ಕೊಡದೆ ಇರಬಾರದು, ಎಚ್ಚರಿಕೆ! ಹಾಗೆ ಧಿಕ್ಕರಿಸಿದರೆ ಅವನು ಒಂದು ವೇಳೆ ನಿಮ್ಮ ವಿಷಯದಲ್ಲಿ ಯೆಹೋವನಿಗೆ ಮೊರೆಯಿಟ್ಟಾನು, ನೀವು ದೋಷಿಗಳಾಗಿ ಕಂಡುಬರುವಿರಿ.


ಅಂಥವನನ್ನು ಅವನು ತನ್ನ ಎಲ್ಲಾ ಆಸ್ತಿಯ ಮೇಲ್ವಿಚಾರಕನನ್ನಾಗಿ ನೇಮಿಸುವನು ಎಂದು ನಿಮಗೆ ನಿಜವಾಗಿ ಹೇಳುತ್ತೇನೆ.


ತನ್ನ ಜೊತೆ ಆಳುಗಳನ್ನು ಹೊಡೆಯುವುದಕ್ಕೂ, ಕುಡುಕರ ಸಂಗಡ ತಿನ್ನುವುದಕ್ಕೂ, ಕುಡಿಯುವುದಕ್ಕೂ ಪ್ರಾರಂಭಿಸಿದಾದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು