Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 24:49 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 ತನ್ನ ಜೊತೆ ಆಳುಗಳನ್ನು ಹೊಡೆಯುವುದಕ್ಕೂ, ಕುಡುಕರ ಸಂಗಡ ತಿನ್ನುವುದಕ್ಕೂ, ಕುಡಿಯುವುದಕ್ಕೂ ಪ್ರಾರಂಭಿಸಿದಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

49 ತನ್ನ ಜೊತೆಯ ಸೇವಕರನ್ನು ಹೊಡೆಯತೊಡಗಿದರೆ, ಕುಡುಕರ ಸಂಗಡ ತಿಂದುಕುಡಿಯಲಾರಂಭಿಸಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

49 ತನ್ನ ಜೊತೆ ಆಳುಗಳನ್ನು ಹೊಡೆಯುವದಕ್ಕೆ ತೊಡಗಿ ಕುಡಿಕರ ಸಂಗಡ ತಿನ್ನುತ್ತಾ ಕುಡಿಯುತ್ತಾ ಇರುವದಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

49 ಆ ಸೇವಕನು ಇತರ ಸೇವಕರನ್ನು ಹೊಡೆಯುತ್ತಾ ತನ್ನಂಥ ಜನರೊಂದಿಗೆ ಸೇರಿಕೊಂಡು ತಿನ್ನುತ್ತಾ ಕುಡಿಯುತ್ತಾ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

49 ತನ್ನ ಜೊತೆಯ ಸೇವಕರನ್ನು ಹೊಡೆಯುತ್ತಾ, ಕುಡುಕರ ಸಂಗಡ ತಿನ್ನುವುದಕ್ಕೂ, ಕುಡಿಯುವುದಕ್ಕೂ ಪ್ರಾರಂಭಿಸುವುದಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

49 ಅನಿ ತೊ ಅಪ್ನಾಚ್ಯಾ ವಾಂಗುಡ್ಚ್ಯಾ ಅಳಾಕ್ನಿ ಮಾರುಕ್ ಲಾಗ್ತಾ, ಅನಿ ಫಿದೊಡ್ಯಾಂಚ್ಯಾ ವಾಂಗ್ಡಾ ಖಾತಲೆ-ಫಿತಲೆ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 24:49
23 ತಿಳಿವುಗಳ ಹೋಲಿಕೆ  

ಆ ಸ್ತ್ರೀಯು ನೀತಿವಂತರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿನೀಡಿ ಹತರಾದವರ ರಕ್ತವನ್ನು ಕುಡಿದು ಮತ್ತಳಾಗಿರುವುದನ್ನು ಕಂಡೆನು. ನಾನು ಅವಳನ್ನು ನೋಡಿ ಅತ್ಯಾಶ್ಚರ್ಯಪಟ್ಟೆನು.


ಅವರು ನೀತಿವಂತರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದ್ದರಿಂದ, ನೀನು ಅವರಿಗೆ ರಕ್ತವನ್ನೇ ಕುಡಿಯುವುದಕ್ಕೆ ಕೊಟ್ಟಿದ್ದೀ ಅದಕ್ಕೆ ಅವರು ಪಾತ್ರರು.” ಎಂದು ಹೇಳುವುದನ್ನು ಕೇಳಿದೆನು.


“ಕುರಿವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳುಪ್ರವಾದಿಗಳ ವಿಷಯದಲ್ಲಿ ಎಚ್ಚರವಾಗಿರಿ; ನಿಜವಾಗಿಯೂ ಅವರು ಕಿತ್ತುತಿನ್ನುವ ತೋಳಗಳೇ.


ನನ್ನ ಜನರನ್ನು ಸನ್ಮಾರ್ಗದಿಂದ ತಪ್ಪಿಸುವವರೂ, ತಿನ್ನುವುದಕ್ಕೆ ಕೊಡುವಂಥವರಿಗೆ, “ಸಮಾಧಾನವಿರುವುದು” ಎಂದು ಪ್ರಕಟಿಸುವರು ಮತ್ತು ತಮ್ಮ ಬಾಯಿಗೆ ರುಚಿಯಾದ ತಿಂಡಿಯನ್ನು ಕೊಡದವನ ಮೇಲೆ ಯುದ್ಧವನ್ನು ನಿರ್ಧರಿಸುವ ಪ್ರವಾದಿಗಳ ವಿಷಯವಾಗಿ ಯೆಹೋವನು ಇಂತೆನ್ನುತ್ತಾನೆ,


ಇದಲ್ಲದೆ ದೇವಜನರ ಮೇಲೆ ಯುದ್ಧ ಮಾಡಿ ಅವರನ್ನು ಜಯಿಸುವುದಕ್ಕೆ ಅದಕ್ಕೆ ಅಧಿಕಾರ ಕೊಡಲ್ಪಟ್ಟಿತು ಮತ್ತು ಸಕಲ ಕುಲ, ಜನ, ಭಾಷೆ, ಜನಾಂಗಗಳ ಮೇಲೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು.


ಇವರು ಸಮುದ್ರದೊಳಗಿರುವ ಗುಪ್ತವಾದ ಬಂಡೆಗಳಂತಿದ್ದು, ನಿಮ್ಮ ಸ್ನೇಹಭೋಜನಗಳಲ್ಲಿ ಸೇರಿ ತಿಂದು ಕುಡಿಯುತ್ತಾರೆ. ನಿರ್ಭಯವಾಗಿ ಸ್ವಂತ ಹೊಟ್ಟೆಯನ್ನೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಬಡಿಸಿಕೊಂಡು ಹೋಗುವ ನೀರಿಲ್ಲದ ಮೋಡಗಳೂ, ಫಲಗಳನ್ನು ಬಿಡದ, ಸಂಪೂರ್ಣವಾಗಿ ಸತ್ತ, ಬೇರು ಸಹಿತ ಕಿತ್ತು ಬಿದ್ದ ಶರತ್ಕಾಲದ ಮರಗಳು.


ನಿಮ್ಮ ವಶಕ್ಕೆ ಒಪ್ಪಿಸಿಕೊಟ್ಟಿರುವವರ ಮೇಲೆ ದೊರೆತನಮಾಡುವವರಂತೆ ನಡೆಯದೆ ಮಂದೆಗೆ ಮಾದರಿಯಾಗಿಯೇ ನಡೆದುಕೊಳ್ಳಿರಿ.


ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆಪಡಿಸುವ ಕೆಲಸಗಳಲ್ಲಿಯೇ ಅವರಿಗೆ ಘನತೆ, ಅವರು ಪ್ರಪಂಚದ ಕಾರ್ಯಗಳ ಕುರಿತು ಚಿಂತಿಸುವವರು.


ಒಬ್ಬನು ನಿಮ್ಮನ್ನು ತನಗೆ ವಶಮಾಡಿಕೊಂಡರೂ, ಒಬ್ಬನು ನಿಮ್ಮನ್ನು ನುಂಗಿಬಿಟ್ಟರೂ, ಒಬ್ಬನು ನಿಮ್ಮನ್ನು ಮರಳುಗೊಳಿಸಿ ಹಿಡಿದರೂ, ಒಬ್ಬನು ತನ್ನನ್ನು ಹೆಚ್ಚಿಸಿಕೊಂಡರೂ, ಒಬ್ಬನು ನಿಮ್ಮ ಮುಖದ ಮೇಲೆ ಹೊಡೆದರೂ ಸಹಿಸಿಕೊಳ್ಳುತ್ತೀರಲ್ಲಾ.


ಅಂಥವರು ನಮ್ಮ ಕರ್ತನಾದ ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿಗಳಿಂದಲೂ ಮತ್ತು ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.


ನೀವು ಕೊಬ್ಬಿನ ಮಾಂಸವನ್ನು ತಿನ್ನುತ್ತೀರಿ, ಉಣ್ಣೆಯ ಬಟ್ಟೆಯನ್ನು ಹಾಕುತ್ತೀರಿ, ಕೊಬ್ಬಿದ ಕುರಿಗಳನ್ನು ಕೊಲ್ಲುತ್ತೀರಿ; ಆದರೆ ಕುರಿಗಳನ್ನು ಮೇಯಿಸುವುದಿಲ್ಲ.


ಯೆಹೋವನ ಮಾತಿಗೆ ಭಯಪಡುವವರೇ, ಆತನ ಮಾತನ್ನು ಕೇಳಿರಿ! ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿದ ನಿಮ್ಮ ಸಂಬಂಧಿಗಳು, “ಯೆಹೋವನು ಮಹಿಮೆಪಡಲಿ, ನಿಮಗಾಗುವ ಉತ್ಸಾಹವನ್ನು ನೋಡೋಣ” ಎಂದು ಹೇಳಿದ್ದಾರಲ್ಲಾ; ಅವರಿಗಂತು ಅವಮಾನವಾಗುವುದು.


“ಬನ್ನಿರಿ, ನಾನು ದ್ರಾಕ್ಷಾರಸವನ್ನು ತರಿಸುವೆನು, ಬೇಕಾದಷ್ಟು ಮದ್ಯವನ್ನು ಕುಡಿಯುವ; ನಾಳೆಯೂ ಈ ದಿನದಂತೆ ಕೇವಲ ಅತ್ಯಂತ ವಿಶೇಷ ದಿನವಾಗಿರುವುದು” ಎಂದು ಹರಟೆ ಕೊಚ್ಚಿಕೊಳ್ಳುವರು.


ನನ್ನ ಪ್ರಜೆಗಳಾದ ಇಸ್ರಾಯೇಲರು ನನ್ನ ಆಜ್ಞಾನುಸಾರವಾಗಿ ನನ್ನ ಮಂದಿರಕ್ಕೆ ತರುವ ಯಜ್ಞನೈವೇದ್ಯಗಳ ಘನತೆಯನ್ನು ನೀವು ಭಂಗಪಡಿಸಿ, ಅವುಗಳ ಶ್ರೇಷ್ಠ ಭಾಗಗಳಿಂದ ನಿಮ್ಮನ್ನು ಕೊಬ್ಬಿಸಿಕೊಳ್ಳುವುದೇಕೆ? ನೀನು ನನ್ನನ್ನು ಗೌರವಿಸುವುದಕ್ಕಿಂತ ಹೆಚ್ಚಾಗಿ ನಿನ್ನ ಮಕ್ಕಳನ್ನೇ ಗೌರವಿಸುವುದು ಸರಿಯೋ?’


ಕುಡುಕರಲ್ಲಿಯೂ, ಅತಿಮಾಂಸಭಕ್ಷಕರಲ್ಲಿಯೂ ಸೇರದಿರು.


ತರುವಾಯ ಆ ಸೇವಕನು ಹೊರಕ್ಕೆ ಬಂದು ತನಗೆ ನೂರು ಬೆಳ್ಳಿ ನಾಣ್ಯ ಕೊಡಬೇಕಾಗಿದ್ದ ಒಬ್ಬ ಜೊತೆ ಸೇವಕನನ್ನು ಕಂಡು ಅವನನ್ನು ಹಿಡಿದು ಕುತ್ತಿಗೆ ಹಿಸುಕಿ, ‘ನನ್ನ ಸಾಲ ತೀರಿಸು’ ಎಂದು ಹೇಳಿದನು.


ಆದರೆ ಆ ದುಷ್ಟ ಆಳು, ‘ನನ್ನ ಯಜಮಾನನು ಬರುವುದಕ್ಕೆ ತಡ ಮಾಡುತ್ತಾನೆ’ ಎಂದು ತನ್ನ ಮನಸ್ಸಿನಲ್ಲಿ ಅಂದುಕೊಂಡು


ಅವನು ನೆನಸದ ದಿನದಲ್ಲಿಯೂ, ತಿಳಿಯದ ಗಳಿಗೆಯಲ್ಲಿಯೂ ಆ ಆಳಿನ ಯಜಮಾನನು ಬಂದು ಅವನನ್ನು ಕಠಿಣವಾಗಿ ದಂಡಿಸಿ


“ಎಲ್ಲರೂ ಉತ್ತಮವಾದ ದ್ರಾಕ್ಷಾರಸವನ್ನು ಮೊದಲು ಕೊಟ್ಟು ಅಮಲೇರಿದ ಮೇಲೆ ಸಾಧಾರಣವಾದ ದ್ರಾಕ್ಷಾರಸವನ್ನು ಕೊಡುತ್ತಾರೆ. ನೀನಾದರೋ ಉತ್ತಮವಾದ ದ್ರಾಕ್ಷಾರಸವನ್ನು ಇದುವರೆಗೂ ಇಟ್ಟುಕೊಂಡಿರುವೆ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು