Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 25:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ತಕ್ಷಣವೇ ಐದು ತಲಾಂತು ಹೊಂದಿದವನು ಹೋಗಿ ಅದನ್ನು ವ್ಯಾಪಾರಕ್ಕೆ ಹಾಕಿ ಇನ್ನೂ ಐದು ತಲಾಂತು ಗಳಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಐದು ತಲೆಂತು ಪಡೆದ ಸೇವಕ ಒಡನೇ ಹೋಗಿ ಆ ಮೊತ್ತದಿಂದ ವ್ಯಾಪಾರಮಾಡಿ ಇನ್ನೂ ಐದನ್ನು ಸಂಪಾದಿಸಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಐದು ತಲಾಂತು ಹೊಂದಿದವನು ಹೋಗಿ ಅದನ್ನು ವ್ಯಾಪಾರಕ್ಕೆ ಹಾಕಿ ಇನ್ನೂ ಐದು ತಲಾಂತು ಗಳಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಐದು ತಲಾಂತು ತೆಗೆದುಕೊಂಡ ಸೇವಕನು ತಕ್ಷಣವೇ ಹೋಗಿ ಆ ಹಣವನ್ನು ವ್ಯಾಪಾರಕ್ಕೆ ಹಾಕಿ ಇನ್ನೂ ಐದು ತಲಾಂತು ಸಂಪಾದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಐದು ಚಿನ್ನದ ನಾಣ್ಯಗಳನ್ನು ಹೊಂದಿದವನು ಹೋಗಿ ಅವುಗಳಿಂದ ವ್ಯಾಪಾರಮಾಡಿ ಬೇರೆ ಐದು ಚಿನ್ನದ ನಾಣ್ಯಗಳನ್ನು ಸಂಪಾದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಪಾಂಚ್ ಹಜಾರ್ ಸೊನ್ಯಾಚ್ಯಾ ಪೈಸ್ಯಾಂಚ್ಯಾ ಗಾಲಿಯಾ ಘೆಟಲ್ಲೊ ಗೆಲೊ ಅನಿ ತೆ ಪೈಸೆ ಯಾವಾರಾತ್ ಘಾಟ್ಲ್ಯಾನ್. ಅನಿ ಅನಿ ಪಾಚ್ ಹಜಾರ್ ಸೊನ್ಯಾಚ್ಯಾ ಪೈಸೆ ಖಮ್ವುಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 25:16
27 ತಿಳಿವುಗಳ ಹೋಲಿಕೆ  

ವ್ಯವಸಾಯದ ಹುಟ್ಟುವಳಿಯಲ್ಲಿ ಮೊದಲನೆಯ ಪಾಲು ಕಷ್ಟಪಟ್ಟ ಕೃಷಿಕನಿಗೆ ದೊರೆಯುತ್ತದೆ.


“ದಾವೀದನಾದರೋ ತನ್ನ ಜೀವಮಾನ ಕಾಲದಲ್ಲಿ ದೇವರ ಸಂಕಲ್ಪಕ್ಕನುಸಾರವಾಗಿ ಸೇವೆಮಾಡಿದ ನಂತರ, ಸತ್ತಾಗ ತನ್ನ ಪೂರ್ವಜರ ಬಳಿ ಅವನನ್ನು ಸಮಾಧಿಮಾಡಲಾಯಿತು, ಅವನ ದೇಹವು ಕೊಳೆಯುವ ಅವಸ್ಥೆಯನ್ನು ಅನುಭವಿಸಿತು.


ಅವಳ ವ್ಯಾಪಾರವೂ ಮತ್ತು ಅವಳ ಆದಾಯವೂ ಅವಳಿಗೆ ನಿಧಿನಿಕ್ಷೇಪವಾಗದೆ ಯೆಹೋವನಿಗೇ ಮೀಸಲಾಗುವುದು. ಆ ವ್ಯಾಪಾರವು ಯೆಹೋವನ ಸನ್ನಿಧಾನದಲ್ಲಿ ವಾಸಿಸುವವರಿಗೆ ಬೇಕಾದಷ್ಟು ಅನ್ನವನ್ನೂ, ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನುಕೂಲವಾಗುವುದು.


ಆದರೆ ನಾನು ಈಗ ಎಂಥವನಾಗಿದ್ದೇನೊ ಅದು ದೇವರ ಕೃಪೆಯಿಂದಲೇ ಮತ್ತು ಆತನ ಕೃಪೆಯು ನನ್ನಲ್ಲಿ ನಿಷ್ಫಲವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಹೆಚ್ಚಾಗಿ ಪ್ರಯಾಸಪಟ್ಟೆನು. ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿರುವ ದೇವರ ಕೃಪೆಯೇ.


ರಾಜರು ನಿನಗೆ ಸಾಕುತಂದೆಗಳು, ಅವರ ರಾಣಿಯರು ನಿನಗೆ ಸಾಕುತಾಯಿಯರು ಆಗುವರು. ನಿನಗೆ ಸಾಷ್ಟಾಂಗವಾಗಿ ಅಡ್ಡಬಿದ್ದು ನಿನ್ನ ಪಾದಧೂಳನ್ನು ನೆಕ್ಕುವರು. ನಾನೇ ಯೆಹೋವನು. ನನ್ನನ್ನು ನಿರೀಕ್ಷಿಸಿಕೊಂಡವರು ಆಶಾಭಂಗಪಡುವುದಿಲ್ಲ” ಎಂದು ನಿನಗೆ ಗೊತ್ತಾಗುವುದು.


ಅವರು ಸೇರಿ ಬಂದಾಗ ಅರಸನಾದ ದಾವೀದನು ಎದ್ದು ನಿಂತು ಅವರಿಗೆ ಹೇಳಿದ್ದೇನೆಂದರೆ, “ನನ್ನ ಸಹೋದರರೇ, ನನ್ನ ಪ್ರಜೆಗಳೇ, ನನ್ನ ಮಾತನ್ನು ಕೇಳಿರಿ, ಯೆಹೋವನ ಒಡಂಬಡಿಕೆಯ ಮಂಜೂಷಕ್ಕೋಸ್ಕರ ನಮ್ಮ ದೇವರ ಪಾದಪೀಠಕ್ಕೋಸ್ಕರ ಆಲಯವನ್ನು ಕಟ್ಟಬೇಕೆಂದು ಮನಸ್ಸು ಮಾಡಿ ಅದಕ್ಕಾಗಿ ಎಲ್ಲವನ್ನೂ ಸಿದ್ಧಪಡಿಸಿದೆನು.


ಅವನು ಲೆಕ್ಕ ತೆಗೆದುಕೊಳ್ಳುವುದಕ್ಕೆ ಪ್ರಾರಂಭಮಾಡಿದಾಗ ಹತ್ತು ಸಾವಿರ ಬಂಗಾರದ ನಾಣ್ಯ ನೀಡಬೇಕಿದ್ದ ಸೇವಕನನ್ನು ಅವನ ಬಳಿಗೆ ಕರತಂದರು.


ಹಾಗೆಯೇ ಎರಡು ತಲಾಂತು ಹೊಂದಿದವನು ಇನ್ನೂ ಎರಡು ಸಂಪಾದಿಸಿಕೊಂಡನು.


ಹೊರಡುವಾಗ ತನ್ನ ಆಳುಗಳಲ್ಲಿ ಹತ್ತು ಮಂದಿಯನ್ನು ಕರೆದು ಅವರಿಗೆ ಹತ್ತು ಚಿನ್ನದ ನಾಣ್ಯಗಳನ್ನು ಕೊಟ್ಟು, ‘ನಾನು ಬರುವ ತನಕ ವ್ಯಾಪಾರಮಾಡಿಕೊಂಡಿರಿ’ ಎಂದು ಹೇಳಿ ಹೊರಟು ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು