Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆತನು, “ನೀವು ಪಟ್ಟಣದೊಳಕ್ಕೆ ನಾನು ಸೂಚಿಸಿದವನ ಬಳಿಗೆ ಹೋಗಿ ಅವನಿಗೆ, ‘ನನ್ನ ಕಾಲ ಸಮೀಪವಾಯಿತು, ನಾನು ನಿನ್ನ ಮನೆಯಲ್ಲಿ ನನ್ನ ಶಿಷ್ಯರ ಸಂಗಡ ಪಸ್ಕಹಬ್ಬ ಮಾಡುತ್ತೇನೆ’ ಎಂಬುದಾಗಿ ಗುರುವು ಹೇಳುತ್ತಿದ್ದಾನೆ ಎಂದು ಹೇಳಿರಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅದಕ್ಕೆ ಅವರು, “ಪಟ್ಟಣದಲ್ಲಿ ನಾನು ಸೂಚಿಸುವಂಥವನ ಬಳಿಗೆ ಹೋಗಿರಿ. ‘ನನ್ನ ಕಾಲ ಸಮೀಪಿಸಿತು. ಪಾಸ್ಕವನ್ನು ನನ್ನ ಶಿಷ್ಯರ ಸಮೇತ ನಿನ್ನ ಮನೆಯಲ್ಲಿಯೇ ಆಚರಿಸಬೇಕೆಂದಿದ್ದೇನೆ’; ಇದನ್ನು ನಮ್ಮ ಗುರುವೇ ಹೇಳಿಕಳುಹಿಸಿದ್ದಾರೆ ಎಂದು ಅವನಿಗೆ ತಿಳಿಸಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆತನು - ನೀವು ಪಟ್ಟಣದೊಳಕ್ಕೆ ಇಂಥವನ ಬಳಿಗೆ ಹೋಗಿ ಅವನಿಗೆ - ನನ್ನ ಕಾಲ ಸಮೀಪವಾಯಿತು, ನಿನ್ನ ಮನೆಯಲ್ಲಿ ನನ್ನ ಶಿಷ್ಯರ ಸಂಗಡ ಪಸ್ಕಹಬ್ಬಮಾಡುತ್ತೇನೆಂದು ಬೋಧಕನು ಹೇಳುತ್ತಾನೆ ಎಂಬದಾಗಿ ಹೇಳಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅದಕ್ಕೆ ಯೇಸು, “ನೀವು ನಗರಕ್ಕೆ ಹೋಗಿ ನಾನು ಸೂಚಿಸುವ ವ್ಯಕ್ತಿಯನ್ನು ಭೇಟಿಮಾಡಿ ಅವನಿಗೆ, ‘ಆರಿಸಿಕೊಂಡ ಸಮಯ ಸಮೀಪಿಸಿತು. ನಾನು ಪಸ್ಕಹಬ್ಬದ ಊಟವನ್ನು ನಿನ್ನ ಮನೆಯಲ್ಲಿ ನನ್ನ ಶಿಷ್ಯರೊಂದಿಗೆ ಮಾಡುತ್ತೇನೆ ಎಂದು ಉಪದೇಶಕನು ಹೇಳುತ್ತಾನೆ’ ಎಂಬುದಾಗಿ ತಿಳಿಸಿರಿ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅದಕ್ಕೆ ಯೇಸು, “ನೀವು ಪಟ್ಟಣದೊಳಕ್ಕೆ ಇಂಥವನ ಬಳಿಗೆ ಹೋಗಿ, ‘ನನ್ನ ಸಮಯವು ಸಮೀಪವಾಗಿದೆ. ನನ್ನ ಶಿಷ್ಯರ ಜೊತೆಗೆ ನಿನ್ನ ಮನೆಯಲ್ಲಿ ಪಸ್ಕವನ್ನು ಆಚರಿಸುತ್ತೇನೆಂದು ಬೋಧಕರು ಕೇಳುತ್ತಾರೆ’ ಎಂಬುದಾಗಿ ಅವನಿಗೆ ಹೇಳಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ತನ್ನಾ ಜೆಜುನ್ ತೆಂಕಾ,“ಶಾರಾತ್ಲ್ಯಾ ಅಮುಕ್‌ ಹ್ಯಾ ಮಾನ್ಸಾಕ್ಡೆ ಜಾವಾ, ಅನಿ,‘ಗುರುಜಿ, ಮಾಜೊ ಎಳ್ ಜಗ್ಗೊಳ್ ಯೆಲಾ; ಮಿಯಾ ಮಾಜ್ಯಾ ಶಿಸಾಂಚ್ಯಾ ವಾಂಗ್ಡಾ ತುಜ್ಯಾ ಘರಾತ್ ಪಾಸ್ಕಾಚ್ಯಾ ಸನಾಚೆ ಜೆವಾನ್ ಕರ್‍ತಾ,’ ಮನುಲಾ ಮನುನ್ ಸಾಂಗಾ.” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:18
18 ತಿಳಿವುಗಳ ಹೋಲಿಕೆ  

ಅದಕ್ಕೆ ಯೇಸು ಅವರಿಗೆ, “ನನ್ನ ಸಮಯವು ಇನ್ನೂ ಬಂದಿಲ್ಲ. ನಿಮ್ಮ ಸಮಯವು ಯಾವಾಗಲೂ ಸಿದ್ಧವಾಗಿದೆ.


ಯೇಸು ಈ ಮಾತುಗಳನ್ನು ಹೇಳಿದ ಮೇಲೆ ಆಕಾಶದ ಕಡೆಗೆ ಕಣ್ಣೆತ್ತಿ ನೋಡಿ ಹೇಳಿದ್ದೇನೆಂದರೆ, “ತಂದೆಯೇ, ಸಮಯ ಬಂದಿದೆ; ಮಗನು ನಿನ್ನನ್ನು ಮಹಿಮೆಪಡಿಸುವುದಕೊಸ್ಕರ ನಿನ್ನ ಮಗನನ್ನು ಮಹಿಮೆಪಡಿಸು.


ಪಸ್ಕಹಬ್ಬದ ಹಿಂದಿನ ದಿನ ಯೇಸು, ತಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗಬೇಕಾದ ತನ್ನ ಗಳಿಗೆ ಬಂದಿತೆಂದು ತಿಳಿದುಕೊಂಡು, ಈ ಲೋಕದಲ್ಲಿರುವ ತನ್ನವರನ್ನು ಪ್ರೀತಿಸಿ, ಅವರನ್ನು ಕೊನೆಯವರೆಗೂ ಪ್ರೀತಿಸುತ್ತಾ ಬಂದನು.


ಇದಕ್ಕಾಗಿ ಆತನನ್ನು ಬಂಧಿಸುವುದಕ್ಕೆ ಪ್ರಯತ್ನಿಸಿದರೂ ಆತನ ಸಮಯ ಇನ್ನೂ ಬಾರದೆ ಇದ್ದ ಕಾರಣ ಯಾರೂ ಆತನ ಮೇಲೆ ಕೈ ಹಾಕಲಿಲ್ಲ.


ನೀವು ಈ ಹಬ್ಬಕ್ಕೆ ಹೋಗಿರಿ, ನನ್ನ ಸಮಯವು ಇನ್ನೂ ಬಾರದಿರುವುದರಿಂದ ನಾನು ಈ ಹಬ್ಬಕ್ಕೆ ಈಗ ಹೋಗುವುದಿಲ್ಲ” ಎಂದು ಹೇಳಿದನು.


ಆಗ ಯೇಸು ಅವರಿಗೆ, “ಮನುಷ್ಯಕುಮಾರನು ಮಹಿಮೆ ಹೊಂದುವ ಗಳಿಗೆಯು ಬಂದಿದೆ.


ನಾನು ಪ್ರತಿದಿನ ದೇವಾಲಯದಲ್ಲಿ ನಿಮ್ಮ ಸಂಗಡ ಇದ್ದಾಗ ನೀವು ನನ್ನ ಮೇಲೆ ಕೈಹಾಕಲಿಲ್ಲ. ಆದರೆ ಇದು ನಿಮ್ಮ ಕಾಲ, ಇದು ಅಂಧಕಾರದ ದೊರೆತನದ ಕಾಲ” ಎಂದು ಹೇಳಿದನು.


ಇದನ್ನು ಹೇಳಿ ಆಕೆ ಹೋಗಿ ತನ್ನ ತಂಗಿಯಾದ ಮರಿಯಳನ್ನು ಗುಪ್ತವಾಗಿ ಕರೆದು, “ಗುರುವು ಬಂದಿದ್ದಾರೆ, ನಿನ್ನನ್ನು ಕರೆಯುತ್ತಿದ್ದಾರೆ” ಎಂದಳು.


ಆತನು ಇನ್ನೂ ಮಾತನಾಡುತ್ತಿರುವಾಗಲೇ ಸಭಾಮಂದಿರದ ಅಧಿಕಾರಿಯ ಕಡೆಯವರು ಬಂದು, “ನಿನ್ನ ಮಗಳು ತೀರಿಹೋದಳು; ಇನ್ನೇಕೆ ಗುರುವಿಗೆ ತೊಂದರೆ ಕೊಡುವಿ?” ಅಂದರು.


ಆಗ ಮನುಷ್ಯಕುಮಾರನನ್ನು ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿ ಕೊಡಲಾಗುವುದು” ಎಂದು ಹೇಳಿದನು.


ಮತ್ತು ‘ಗುರುವೆಂದು’ ಅನ್ನಿಸಿಕೊಳ್ಳಬೇಡಿರಿ; ಏಕೆಂದರೆ, ಕ್ರಿಸ್ತನೊಬ್ಬನೇ ನಿಮಗಿರುವ ಗುರುವು


ಆದರೆ ನೀವು ‘ಬೋಧಕರೆನ್ನಿಸಿಕೊಳ್ಳಬೇಡಿರಿ;’ ಏಕೆಂದರೆ ಕ್ರಿಸ್ತನೊಬ್ಬನೇ ನಿಮಗಿರುವ ಬೋಧಕನು ಮತ್ತು ನೀವೆಲ್ಲರೂ ಸಹೋದರರು.


ಯಾವನಾದರೂ ನಿಮಗೆ ಏನಾದರೂ ಹೇಳಿದರೆ, ‘ಇವು ನಮ್ಮ ಕರ್ತನಿಗೆ ಬೇಕಾಗಿವೆ’ ಎಂದು ನೀವು ಹೇಳಿರಿ; ಅವನು ಕೂಡಲೆ ಅವುಗಳನ್ನು ಬಿಟ್ಟು ಕೊಡುವನು” ಎಂದು ಹೇಳಿ ಕಳುಹಿಸಿದನು.


ಯೇಸು ಆಕೆಗೆ, “ಮರಿಯಳೇ,” ಎಂದು ಹೇಳಲು, ಆಕೆಯು ಅವನ ಕಡೆಗೆ ತಿರುಗಿ ಇಬ್ರಿಯ ಭಾಷೆಯಲ್ಲಿ ಆತನಿಗೆ, “ರಬ್ಬೂನಿ” ಎಂದಳು. ಹಾಗೆಂದರೆ ಗುರುವೇ ಎಂದರ್ಥ.


ಕೂಡಲೇ ಅವನು ಯೇಸುವಿನ ಬಳಿಗೆ ಬಂದು, “ಗುರುವೇ ನಮಸ್ಕಾರ” ಎಂದು ಹೇಳಿ ಆತನಿಗೆ ಮುದ್ದಿಟ್ಟನು.


ಶಿಷ್ಯರು ಯೇಸು ತಮಗೆ ಅಪ್ಪಣೆಕೊಟ್ಟಂತೆಯೇ ಮಾಡಿ ಪಸ್ಕದ ಭೋಜನವನ್ನು ತಯಾರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು