Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಮನುಷ್ಯಕುಮಾರನು ಆತನ ವಿಷಯವಾಗಿ ಬರೆದಿರುವ ಹಾಗೆ ಹೊರಟುಹೋಗುತ್ತಾನೆ; ಆದರೆ ಯಾವನು ಮನುಷ್ಯಕುಮಾರನನ್ನು ಹಿಡಿದುಕೊಡುವನೋ ಅವನ ಗತಿಯನ್ನು ಏನೆಂದು ಹೇಳಲಿ. ಆ ಮನುಷ್ಯನು ಹುಟ್ಟದಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ನರಪುತ್ರನೇನೋ ಪವಿತ್ರಗ್ರಂಥದಲ್ಲಿ ಬರೆದಿರುವ ಪ್ರಕಾರ ಹೊರಟುಹೋಗುತ್ತಾನೆ, ನಿಜ. ಆದರೆ ಅಯ್ಯೋ, ನರಪುತ್ರನಿಗೆ ದ್ರೋಹಬಗೆಯುವವನ ದುರ್ಗತಿಯನ್ನು ಏನೆಂದು ಹೇಳಲಿ! ಅವನು ಹುಟ್ಟದೇ ಇದ್ದಿದ್ದರೆ ಎಷ್ಟೋ ಚೆನ್ನಾಗಿತ್ತು!” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಮನುಷ್ಯಕುಮಾರನು ಹೊರಟುಹೋಗುತ್ತಾನೆ ಸರಿ; ಹಾಗೆ ಆತನ ವಿಷಯವಾಗಿ ಬರೆದದೆಯಲ್ಲಾ. ಆದರೆ ಯಾವನು ಮನುಷ್ಯಕುಮಾರನನ್ನು ಹಿಡುಕೊಡುವನೋ ಅವನ ಗತಿಯನ್ನು ಏನು ಹೇಳಲಿ. ಆ ಮನುಷ್ಯನು ಹುಟ್ಟದಿದ್ದರೆ ಅವನಿಗೆ ಒಳ್ಳೇದಾಗಿತ್ತು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಪವಿತ್ರ ಗ್ರಂಥದಲ್ಲಿ ಬರೆದಿರುವ ಪ್ರಕಾರ ಮನುಷ್ಯಕುಮಾರನು ಹೊರಟುಹೋಗಿ ಮರಣ ಹೊಂದುತ್ತಾನೆ. ಆದರೆ ಆತನನ್ನು ಕೊಲ್ಲಲು ಒಪ್ಪಿಸುವವನಿಗೆ ಬಹಳ ಕೇಡಾಗುತ್ತದೆ. ಅವನು ಹುಟ್ಟದೆ ಇದ್ದಿದ್ದರೆ ಎಷ್ಟೋ ಚೆನ್ನಾಗಿತ್ತು!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಮನುಷ್ಯಪುತ್ರನಾದ ನನ್ನ ವಿಷಯದಲ್ಲಿ ಬರೆದಿರುವ ಪ್ರಕಾರ ಹೊರಟುಹೋಗುತ್ತೇನೆ. ಆದರೆ ಮನುಷ್ಯಪುತ್ರನಾದ ನನಗೆ ಯಾವನು ದ್ರೋಹಬಗೆಯುತ್ತಾನೋ ಆ ಮನುಷ್ಯನಿಗೆ ಕಷ್ಟ! ಆ ಮನುಷ್ಯನು ಹುಟ್ಟದೆ ಹೋಗಿದ್ದರೆ ಅವನಿಗೆ ಎಷ್ಟೋ ಒಳ್ಳೆಯದಾಗುತ್ತಿತ್ತು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಪವಿತ್ರ್ ಪುಸ್ತಕಾತ್ ಸಾಂಗಲ್ಲ್ಯಾ ಸರ್ಕೆ ಮಾನ್ಸಾಚೊ ಲೆಕ್ ಮರುಕುಚ್ ಮಾಜೆ, ಅನಿ ತೊ ಮರ್‍ತಾಚ್ ಖರೆ ಮಾನ್ಸಾಚ್ಯಾ ಲೆಕಾಕ್ ವಿಶ್ವಾಸ್ ಘಾತ್ ಕರ್‍ತಲ್ಯಾಚಿ ಗತ್ ಕಾಯ್ ಸಾಂಗು! ತೊ ಉಪ್ಜುಕುಚ್ ನಸ್ಲ್ಯಾರ್ ತ್ಯಾ ಮಾನ್ಸಾಕುಚ್ ಬರೆ ಹೊತ್ತೆ!” ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:24
34 ತಿಳಿವುಗಳ ಹೋಲಿಕೆ  

ಅನಂತರ, “ಮೊದಲೇ ಪ್ರಕಟವಾದ ಪ್ರಕಾರ ‘ಕ್ರಿಸ್ತನು ಕಷ್ಟ ಪಟ್ಟು, ಸತ್ತು ಮೂರನೆಯ ದಿನದಲ್ಲಿ ಜೀವಿತನಾಗಿ ಎದ್ದು ಬರುವನೆಂತಲೂ,


“ತೊಡಕುಗಳ ನಿಮಿತ್ತ ಲೋಕಕ್ಕೆ ಅಯ್ಯೋ, ತೊಡಕುಗಳು ಬರುವುದು ಅನಿವಾರ್ಯ, ಆದಾಗ್ಯೂ ಯಾವ ಮನುಷ್ಯನಿಂದ ತೊಡಕು ಬರುತ್ತದೋ ಅವನಿಗೆ ಅಯ್ಯೋ.


ನಾನು ಸಹ ಕಲಿತುಕೊಂಡ ಮೊದಲನೆಯ ಸಂಗತಿಗಳೊಳಗೆ ಪ್ರಮುಖವಾದ ಸಂಗತಿಯನ್ನೇ ನಿಮಗೆ ತಿಳಿಸಿದ್ದೇನೆ ಅದೇನೆಂದರೆ ಧರ್ಮಶಾಸ್ತ್ರದಲ್ಲಿ ತಿಳಿಸಿರುವ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳ ನಿವಾರಣೆಗಾಗಿ ಸತ್ತನು; ಹೂಣಲ್ಪಟ್ಟನು;


ನಾನು ಇವರ ಜೊತೆ ಇದ್ದಾಗ ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಪಾಡಿ ಸಂರಕ್ಷಿಸಿದೆನು. ಧರ್ಮಶಾಸ್ತ್ರದ ಮಾತು ನೆರವೇರುವಂತೆ ನಾಶಕ್ಕಾಗಿ ಹುಟ್ಟಿದವನೇ ಹೊರತು ಇವರಲ್ಲಿ ಒಬ್ಬನೂ ನಾಶವಾಗಲಿಲ್ಲ.


ನಿರ್ಣಯವಾಗಿರುವ ಪ್ರಕಾರ ಮನುಷ್ಯಕುಮಾರನು ಹೊರಟುಹೋಗುತ್ತಾನೆ ಸರಿ, ಆದರೆ ಆತನನ್ನು ಹಿಡಿದುಕೊಡುವ ಮನುಷ್ಯನ ಗತಿಯನ್ನು ಏನು ಹೇಳಲಿ” ಅಂದನು.


ಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ಮನುಷ್ಯಕುಮಾರನು ಹೊರಟುಹೋಗುತ್ತಾನೆ ಸರಿ, ಆದರೆ ಯಾರು ಮನುಷ್ಯಕುಮಾರನನ್ನು ಹಿಡಿದುಕೊಡುವನೋ ಅವನ ದುರ್ಗತಿಯನ್ನು ಏನೆಂದು ಹೇಳಲಿ? ಅವನು ಹುಟ್ಟದಿದ್ದರೆ ಅವನಿಗೆ ಎಷ್ಟೋ ಒಳ್ಳೆಯದಾಗಿತ್ತು” ಅಂದನು.


ಕಳುಹಿಸಿಕೊಟ್ಟರೆ ನನಗೆ ಹೀಗೀಗೆ ಆಗಬೇಕೆಂಬ ಶಾಸ್ತ್ರದ ಮಾತುಗಳು ನೆರವೇರುವುದಾದರೂ ಹೇಗೆ?” ಎಂದು ಹೇಳಿದನು.


ಅರುವತ್ತೆರಡು ವಾರಗಳಾದ ಮೇಲೆ ಅಭಿಷಿಕ್ತನೊಬ್ಬನು ಛೇದಿಸಲ್ಪಡುವನು; ಅವನಿಗೆ ಏನೂ ಇರದು; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪವಿತ್ರಾಲಯವನ್ನೂ ಹಾಳು ಮಾಡುವರು; ತುಂಬಿ ತುಳುಕುವ ಪ್ರಳಯವು ಪಟ್ಟಣವನ್ನು ಕೊನೆಗಾಣಿಸುವುದು; ಅಂತ್ಯದವರೆಗೂ ಯುದ್ಧವಾಗುವುದು, ನಿಶ್ಚಿತ ನಾಶನಗಳು ಸಂಭವಿಸುವವು.


ಅದಕ್ಕೆ ಯೇಸು ಅವರಿಗೆ, “ಎಲೀಯನು ಮೊದಲು ಬಂದು ಎಲ್ಲವನ್ನು ಪುನರ್ಸ್ಥಾಪಿಸುವುದು ನಿಜ. ಮತ್ತು ಮನುಷ್ಯಕುಮಾರನ ವಿಷಯವಾಗಿ; ಅವನು ಬಹು ಕಷ್ಟಗಳನ್ನನುಭವಿಸಿ ತಿರಸ್ಕರಿಸಲ್ಪಡಬೇಕೆಂಬುದಾಗಿ ಬರೆದಿದೆ, ಇದು ಹೇಗೆ?


ಆದರೆ ಪ್ರವಾದಿಗಳು ಬರೆದ ವಚನಗಳು ನೆರವೇರುವಂತೆ ಇದೆಲ್ಲಾ ಆಯಿತು” ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.


ದಾವೀದ ವಂಶದವರಲ್ಲಿಯೂ, ಯೆರೂಸಲೇಮಿನವರಲ್ಲಿಯೂ ದೇವರ ದಯೆಯನ್ನು ಹಂಬಲಿಸಿ ಬೇಡುವ ಭಾವವನ್ನು ಸುರಿಸುವೆನು; ತಾವು ಇರಿದವನನ್ನು ದಿಟ್ಟಿಸಿ ನೋಡುವರು; ಇದ್ದ ಒಬ್ಬ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಚೊಚ್ಚಲ ಮಗನ ವಿಯೋಗಕ್ಕೋಸ್ಕರ ದುಃಖಪಟ್ಟಂತೆ ಅವನಿಗಾಗಿ ದುಃಖಿಸುವರು.


ದೇವರೇ, ನೀನು ದುಷ್ಟರನ್ನು ಪಾತಾಳದ ಕೆಳಕ್ಕೆ ದೊಬ್ಬಿಬಿಡುವಿ. ಕೊಲೆಪಾತಕರೂ ವಂಚಕರೂ ನರಾಯುಷ್ಯದ ಅರ್ಧಾಂಶವಾದರೂ ಬದುಕುವುದಿಲ್ಲ. ನಾನಂತೂ ನಿನ್ನನ್ನೆ ನಂಬಿಕೊಂಡಿರುವೆನು.


ಆ ದುಷ್ಟರಿಗೆ ಮರಣವು ತಟ್ಟನೆ ಬರಲಿ; ಸಜೀವರಾಗಿಯೇ ಪಾತಾಳಕ್ಕೆ ಇಳಿದುಹೋಗಲಿ. ಅವರ ಮನೆಯಲ್ಲಿಯೂ, ಮನಸ್ಸಿನಲ್ಲಿಯೂ ಕೆಟ್ಟತನವೇ ತುಂಬಿದೆ.


ಅವರು ಅವನಿಗೆ ಒಂದು ದಿನವನ್ನು ಗೊತ್ತುಮಾಡಲು, ಬಹುಮಂದಿ ಅವನ ಬಿಡಾರದಲ್ಲಿ ಅವನ ಬಳಿಗೆ ಬಂದರು. ಅವನು ಬೆಳಗ್ಗಿನಿಂದ ಸಾಯಂಕಾಲದ ವರೆಗೂ ದೇವರ ರಾಜ್ಯವನ್ನು ಕುರಿತು ಪ್ರಾಮಾಣಿಕವಾಗಿ ಸಾಕ್ಷಿಹೇಳುತ್ತಾ, ಮೋಶೆಯ ಧರ್ಮಶಾಸ್ತ್ರವನ್ನೂ, ಪ್ರವಾದಿಗಳ ಗ್ರಂಥಗಳನ್ನೂ, ಆಧಾರಮಾಡಿಕೊಂಡು ಯೇಸುವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಇದ್ದನು.


ನಿನ್ನ ಕೈಯೂ ನಿನ್ನ ಸಂಕಲ್ಪವೂ ಮೊದಲು ನೇಮಿಸಿದ್ದನ್ನೇ ನಡಿಸಿದರು.


ಆದರೂ ಆ ಯೇಸು ದೇವರ ಸ್ಥಿರಸಂಕಲ್ಪಕ್ಕೂ, ಭವಿಷ್ಯದ ಜ್ಞಾನಕ್ಕೂ ಅನುಸಾರವಾಗಿ ಒಪ್ಪಿಸಲ್ಪಟ್ಟಿರಲು ನೀವು ಅನ್ಯಜನರ ಕೈಯಿಂದ ಆತನನ್ನು ಶಿಲುಬೆಗೆ ಹಾಕಿ ಮೊಳೆ ಜಡಿದು ಕೊಂದಿರಿ.


ಇದಾದ ಮೇಲೆ ಯೇಸು ಈಗ ಎಲ್ಲ ಪೂರ್ತಿಯಾಗಿದೆಯೆಂದು ತಿಳಿದು, ಧರ್ಮಶಾಸ್ತ್ರದ ಮಾತು ನೆರವೇರುವಂತೆ, “ನನಗೆ ನೀರಡಿಕೆಯಾಗಿದೆ” ಎಂದನು.


ಆಮೇಲೆ ಅವರು, “ನಾವು ಇದನ್ನು ಹರಿಯಬಾರದು ಚೀಟು ಹಾಕಿ, ಇದು ಯಾರಿಗೆ ಬರುವುದೋ ನೋಡೋಣ” ಎಂದು ಮಾತನಾಡಿಕೊಂಡರು. ಇದರಿಂದ “ನನ್ನ ಬಟ್ಟೆಗಳನ್ನು ತಮ್ಮಲ್ಲಿ ಪಾಲುಮಾಡಿಕೊಂಡರು. ನನ್ನ ಅಂಗಿಗೋಸ್ಕರ ಚೀಟು ಹಾಕಿದರು” ಎಂಬ ಧರ್ಮಶಾಸ್ತ್ರದ ಮಾತು ನೆರವೇರಿತು. ಸಿಪಾಯಿಗಳು ಇದನ್ನೆಲ್ಲಾ ಮಾಡಿದರು.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಖಡ್ಗವೇ, ನಾನು ನೇಮಿಸಿದ ಕುರುಬನೂ, ನನ್ನ ಸಂಗಡಿಗನೂ ಆಗಿರುವವನ ವಿರುದ್ಧ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದುರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ.


ನಿನಗೂ, ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವುದು. ನೀನು ಅವನ ಹಿಮ್ಮಡಿಯನ್ನು ಕಚ್ಚುವಿ” ಎಂದು ಹೇಳಿದನು.


ಆಗ ಯೇಸು, ಅವರಿಗೆ, “ಕುರುಬನನ್ನು ಹೊಡೆಯುವೆನು; ಹಿಂಡಿನ ಕುರಿಗಳು ಚದರಿಹೋಗುವವು ಎಂದು ಬರೆದಿರುವ ಹಾಗೆ ನೀವೆಲ್ಲರೂ ಈ ರಾತ್ರಿ ನನ್ನ ವಿಷಯದಲ್ಲಿ ಹಿಂಜರಿಯುವಿರಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು