Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 “ಆದರೂ ಹಬ್ಬದಲ್ಲಿ ಹಿಡಿಯಬಾರದು, ನಮ್ಮ ಜನರಲ್ಲಿ ಗದ್ದಲವಾದೀತು” ಎಂದು ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆದರೆ,, ‘ಹಬ್ಬದ ಸಂದರ್ಭದಲ್ಲಿ ನಾವು ಈ ಕಾರ್ಯವನ್ನು ಮಾಡಬಾರದು. ಏಕೆಂದರೆ ಜನರು ದಂಗೆಯೆದ್ದಾರು,’ ಎಂದೂ ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆದರೂ - ಹಬ್ಬದಲ್ಲಿ ಹಿಡಿಯಬಾರದು, ನಮ್ಮ ಜನರಲ್ಲಿ ಗದ್ದಲವಾದೀತು ಎಂದು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದರೆ ಸಭಿಕರು, “ನಾವು ಪಸ್ಕಹಬ್ಬದ ಕಾಲದಲ್ಲಿ ಯೇಸುವನ್ನು ಬಂಧಿಸಲು ಸಾಧ್ಯವಿಲ್ಲ. ಏಕೆಂದರೆ ಜನರು ಕೋಪಗೊಂಡು ದಂಗೆ ಏಳಬಹುದು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆದರೆ ಅವರು, “ಜನರಲ್ಲಿ ಗದ್ದಲವಾದೀತು, ಹಬ್ಬದಲ್ಲಿ ಬೇಡ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತನ್ನಾ ತೆನಿ,“ಸನಾಚ್ಯಾ ದಿಸಾತ್ನಿ ಹೆ ಸಗ್ಳೆ ಕರ್‍ತಲೆ ನಕ್ಕೊ ಲೊಕಾ ಡಂಗೊ ಉಟ್ವುತಿಲ್.” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:5
17 ತಿಳಿವುಗಳ ಹೋಲಿಕೆ  

ಆಗ ಪಿಲಾತನು ತನ್ನ ಯತ್ನ ನಡೆಯುವುದಿಲ್ಲ ಗದ್ದಲ ಮಾತ್ರ ಹೆಚ್ಚಾಗುತ್ತದೆ ಎಂದು ತಿಳಿದು ನೀರನ್ನು ತೆಗೆದುಕೊಂಡು ಜನರ ಮುಂದೆ ಕೈ ತೊಳೆದುಕೊಂಡು, “ಈ ನೀತಿವಂತನನ್ನು ಕೊಲ್ಲಿಸುವುದರಲ್ಲಿ ನಾನು ನಿರಪರಾಧಿ, ನೀವೇ ನೋಡಿಕೊಳ್ಳಿರಿ” ಎನ್ನಲು


‘ಮನುಷ್ಯರಿಂದ ಬಂದಿತೆಂದು’ ಹೇಳಿದರೆ, ನಮಗೆ ಜನರ ಭಯವಿದೆ ಯೋಹಾನನು ಪ್ರವಾದಿಯೆಂದು ಎಲ್ಲರೂ ಒಪ್ಪಿಕೊಂಡಿದ್ದಾರಲ್ಲಾ” ಎಂಬುದಾಗಿ ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.


ಹೆರೋದನು ಅವನನ್ನು ಕೊಲ್ಲಿಸಬೇಕೆಂದಿದ್ದರೂ ಜನರಿಗೆ ಭಯಪಟ್ಟನು, ಏಕೆಂದರೆ ಅವರು ಅವನನ್ನು ಪ್ರವಾದಿಯೆಂದು ಎಣಿಸಿದ್ದರು.


ಆಗ ಯೇಸು ಅವರಿಗೆ, “ನೀವೆಲ್ಲರೂ ನನ್ನನ್ನು ಬಿಟ್ಟು ಓಡಿಹೋಗುವಿರಿ. ಏಕೆಂದರೆ; “‘ನಾನು ಕುರುಬನನ್ನು ಹೊಡೆಯುವೆನು; ಕುರಿಗಳು ಚದರಿ ಹೋಗುವವು’ ಎಂದು ಬರೆದಿದೆಯಲ್ಲಾ ಅಂದನು.


ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನ ಅಂದರೆ ಪಸ್ಕದ ಕುರಿಮರಿಯನ್ನು ಕೊಯ್ಯುವ ದಿನವಾಗಿತ್ತು. ಶಿಷ್ಯರು ಯೇಸುವಿಗೆ, “ನೀನು ಪಸ್ಕದ ಭೋಜನ ಮಾಡಲು ನಾವು ಎಲ್ಲಿ ಸಿದ್ಧಮಾಡಬೇಕೆಂದು ಹೇಳು” ಎಂದು ಕೇಳಿದರು.


“ಆದರೆ ಹಬ್ಬದ ಸಂದರ್ಭದಲ್ಲಿ ಈ ಕಾರ್ಯವನ್ನು ಮಾಡಬಾರದು. ಏಕೆಂದರೆ ನಮ್ಮ ಮೇಲೆ ಜನರು ದಂಗೆ ಎದ್ದಾರು” ಎಂದು ಮಾತನಾಡಿಕೊಂಡರು.


ಆರಂಭದಲ್ಲಿಯೇ ಅಂತ್ಯವನ್ನು ತಿಳಿಸಿದ್ದೇನೆ. ‘ನನ್ನ ಸಂಕಲ್ಪವು ನಿಲ್ಲುವುದು, ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವೆನು’ ಎಂದು ಹೇಳಿ ಇನ್ನೂ ನಡೆಯದಿರುವ ಕಾರ್ಯಗಳನ್ನು ಪುರಾತನಕಾಲದಲ್ಲಿಯೇ ಅರುಹಿದ್ದೇನೆ.


ಯಾವ ಜ್ಞಾನವೂ, ಯಾವ ವಿವೇಕವೂ, ಯಾವ ಆಲೋಚನೆಯೂ ಯೆಹೋವನೆದುರಿಗೆ ನಿಲ್ಲುವುದಿಲ್ಲ.


ಮನುಷ್ಯನ ಮನಸ್ಸಿನಲ್ಲಿ ಅನೇಕ ಸಂಕಲ್ಪಗಳಿವೆ, ಯೆಹೋವನ ಸಂಕಲ್ಪವೇ ಈಡೇರುವುದು.


ನಿನ್ನ ಕೈಯೂ ನಿನ್ನ ಸಂಕಲ್ಪವೂ ಮೊದಲು ನೇಮಿಸಿದ್ದನ್ನೇ ನಡಿಸಿದರು.


ಮುಂಜಾನೆ ಅವರು ಯೇಸುವನ್ನು ಕಾಯಫನ ಬಳಿಯಿಂದ ಅರಮನೆಗೆ ಕರೆದುಕೊಂಡು ಹೋದರು. ಅವರು ತಮಗೆ ಮೈಲಿಗೆಯಾಗಿ ಪಸ್ಕದ ಊಟ ಮಾಡುವುದಕ್ಕೆ ಅಡ್ಡಿಯಾದೀತೆಂದು ಅರಮನೆಯ ಒಳಗೆ ಹೋಗಲಿಲ್ಲ.


ಹುಳಿಯಿಲ್ಲದ ರೊಟ್ಟಿಯನ್ನು ತಿನ್ನುವ ದಿನಗಳಲ್ಲಿ ಪಸ್ಕದ ಕುರಿಮರಿಯನ್ನು ಕೊಯ್ಯತಕ್ಕ ದಿನ ಬಂದಾಗ,


ಕರ್ತನ ಅಪ್ಪಣೆಯಿಲ್ಲದೆ ಯಾರ ಮಾತು ಸಾರ್ಥಕವಾದೀತು?


ಮನುಷ್ಯರ ಮೇಲಿನ ಕೋಪವೂ ನಿನ್ನ ಘನತೆಗೆ ಸಾಧನವಾಗುವುದು; ಕೋಪಶೇಷವನ್ನು ನಡುಕಟ್ಟಿನಂತೆ ಬಿಗಿದುಕೊಳ್ಳುವಿ.


ಮನುಷ್ಯರಿಂದ ಬಂದಿತೆಂದು ಹೇಳಿದರೆ ಜನರೆಲ್ಲರೂ ಯೋಹಾನನನ್ನು ಪ್ರವಾದಿಯೆಂದು ನಂಬಿರುವುದರಿಂದ ಅವರು ನಮ್ಮನ್ನು ಕಲ್ಲೆಸೆದು ಕೊಂದಾರು’” ಎಂದು ತಮ್ಮ ತಮ್ಮೊಳಗೆ ಮಾತನಾಡಿಕೊಂಡು,


ಆಗ ಊರಿನಲ್ಲೆಲ್ಲಾ ಗಲಿಬಿಲಿಯಾಯಿತು. ಪ್ರಯಾಣದಲ್ಲಿ ಪೌಲನಿಗೆ ಜೊತೆಯವರಾಗಿದ್ದ ಮಕೆದೋನ್ಯದ ಗಾಯನನ್ನೂ, ಅರಿಸ್ತಾರ್ಕನನ್ನೂ ಜನರು ಹಿಡಿದುಕೊಂಡು ಒಟ್ಟಾಗಿ ನಾಟಕ ಶಾಲೆಯೊಳಗೆ ನುಗ್ಗಿದರು.


ಕೆಲವು ದಿನಗಳ ಹಿಂದೆ ದಂಗೆ ಎಬ್ಬಿಸಿ ಆ ನಾಲ್ಕು ಸಾವಿರ ಮಂದಿ ಘಾತಕರನ್ನು ಅಡವಿಗೆ ಕರೆದುಕೊಂಡು ಹೋದ ಆ ಐಗುಪ್ತ್ಯನು ನೀನೇ ಅಲ್ಲವೇ” ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು