Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:58 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

58 ಆದರೆ ಪೇತ್ರನು ದೂರದಿಂದ ಆತನನ್ನು ಹಿಂಬಾಲಿಸುತ್ತಾ, ಮಹಾಯಾಜಕನ ಭವನದ ಅಂಗಳದ ಒಳಗೆ ನುಗ್ಗಿ ಬಂದು ಆತನಿಗೆ ಏನಾಗುವುದೋ ಎಂದು ನೋಡಬೇಕೆಂದು ಸೈನಿಕರ ಸಂಗಡ ಕುಳಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

58 ಅಲ್ಲಿ ಧರ್ಮಶಾಸ್ತ್ರಿಗಳೂ ಪ್ರಮುಖರೂ ಸಭೆಸೇರಿದ್ದರು. ಪೇತ್ರನಾದರೋ ದೂರದಿಂದ ಯೇಸುವನ್ನು ಹಿಂಬಾಲಿಸುತ್ತಿದ್ದನು. ಅವನು ಪ್ರಧಾನಯಾಜಕನ ಭವನದವರೆಗೂ ಬಂದು, ಹೊರಾಂಗಣವನ್ನು ಹೊಕ್ಕು ಪಹರೆಯವರ ಜೊತೆ ಕುಳಿತುಕೊಂಡನು. ಇದೆಲ್ಲ ಹೇಗೆ ಕೊನೆಗೊಳ್ಳುವುದೆಂದು ನೋಡಬೇಕೆಂಬ ಉದ್ದೇಶ ಅವನದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

58 ಅಲ್ಲಿ ಶಾಸ್ತ್ರಿಗಳೂ ಹಿರಿಯರೂ ಕೂಡಿ ಬಂದಿದ್ದರು. ಪೇತ್ರನಾದರೋ ದೂರದಿಂದ ಆತನ ಹಿಂದೆ ಹೋಗುತ್ತಾ ಮಹಾಯಾಜಕನ ಮಠದ ಅಂಗಳದ ತನಕ ಬಂದು ಒಳಗೆ ಹೊಕ್ಕು ಆತನ ಗತಿ ಏನಾಗುವದೋ ನೋಡಬೇಕೆಂದು ಓಲೇಕಾರರ ಸಂಗಡ ಕೂತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

58 ಯೇಸುವಿಗೆ ಏನಾಗುತ್ತದೋ ಎಂಬುದನ್ನು ನೋಡಲು ಪೇತ್ರನು ಆತನನ್ನು ದೂರದಿಂದ ಹಿಂಬಾಲಿಸುತ್ತಾ ಪ್ರಧಾನಯಾಜಕನ ಭವನದ ಅಂಗಳದೊಳಗೆ ಬಂದು ಕಾವಲುಗಾರರೊಂದಿಗೆ ಕುಳಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

58 ಆದರೆ ಪೇತ್ರನು ಮಹಾಯಾಜಕನ ಅರಮನೆಗೆ ದೂರದಿಂದಲೇ ಯೇಸುವನ್ನು ಹಿಂಬಾಲಿಸಿ, ಒಳಗೆ ಹೋಗಿ ಅಂತ್ಯವೇನಾಗುವುದೆಂದು ನೋಡಲು ಸೇವಕರೊಂದಿಗೆ ಕುಳಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

58 ಪೆದ್ರು ಧುರ್-ಧುರ್‍ನಾಚ್ ತೆಂಚ್ಯಾ ಫಾಟ್ನಾ ಮಹಾಯಾಜಕಾಚ್ಯಾ ಘರಾಚ್ಯಾ ದಾರಾತ್ ಪತರ್ ಯೆಲೊ, ತೊ ದಾರಾತ್ ಭುತ್ತುರ್ ಗುಸ್ಲೊ ಅನಿ ಕಾಯ್ ಕಾಯ್ ಹೊತಾ ಬಗುಸಾಟ್ನಿ ಮನುನ್ ರಾಕ್ವಾಲ್ಯಾಂಚ್ಯಾ ವಾಂಗ್ಡಾ ಬಸ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:58
10 ತಿಳಿವುಗಳ ಹೋಲಿಕೆ  

ಜನರು ಆತನ ವಿಷಯವಾಗಿ ಗೊಣಗುಟ್ಟಿದ ಮಾತುಗಳನ್ನು ಫರಿಸಾಯರು ಕೇಳಿಸಿಕೊಂಡು ಮುಖ್ಯಯಾಜಕರೂ ಮತ್ತು ಫರಿಸಾಯರೂ ಆತನನ್ನು ಬಂಧಿಸಲು ದೇವಾಲಯದ ಕಾವಲುಗಾರರನ್ನು ಕಳುಹಿಸಿದರು.


ಇತ್ತ, ಸೀಮೋನ್ ಪೇತ್ರನು ನಿಂತುಕೊಂಡು ಚಳಿ ಕಾಯಿಸಿಕೊಳ್ಳುತ್ತಾ ಇದ್ದನು. ಆಗ ಅಲ್ಲಿದ್ದವರು ಅವನನ್ನು, “ನೀನು ಸಹ ಆತನ ಶಿಷ್ಯರಲ್ಲಿ ಒಬ್ಬನಲ್ಲವೇ?” ಎಂದು ಕೇಳಲು, ಅವನು ಅದನ್ನು ನಿರಾಕರಿಸಿ, “ನಾನಲ್ಲ” ಎಂದನು.


ಬಳಿಕ ಆ ದೇವಾಲಯದ ಕಾವಲುಗಾರರು, ಮುಖ್ಯಯಾಜಕರ ಮತ್ತು ಫರಿಸಾಯರ ಬಳಿಗೆ ಬಂದಾಗ ಅವರು, “ನೀವು ಏಕೆ ಆತನನ್ನು ಕರೆತರಲಿಲ್ಲ?” ಎಂದು ಅವರನ್ನು ಕೇಳಿದ್ದಕ್ಕೆ,


“ಇನ್ನೂ ದಾರಿಯಲ್ಲಿರುವಾಗಲೇ ನಿನ್ನ ಪ್ರತಿವಾದಿಯೊಂದಿಗೆ ಬೇಗ ಸಂಧಾನ ಮಾಡಿಕೋ; ಇಲ್ಲದಿದ್ದರೆ ಆ ಆಪಾದಕನು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಾನು ನ್ಯಾಯಾಧಿಪತಿಯು ನಿನ್ನನ್ನು ಸೆರೆಮನೆ ಅಧಿಕಾರಿಯ ಕೈಗೆ ಒಪ್ಪಿಸಿಕೊಟ್ಟಾನು. ಆಗ ನೀನು ಸೆರೆಯಲ್ಲಿ ಎಸೆಯಲ್ಪಡುವಿ.


ಆ ಕಾಲದಲ್ಲಿ ಮುಖ್ಯಯಾಜಕರೂ, ಜನರ ಹಿರಿಯರೂ ಕಾಯಫನೆಂಬ ಮಹಾಯಾಜಕನ ಭವನದಲ್ಲಿ ಕೂಡಿಬಂದು


ಅವರು ಆತನನ್ನು ಹಿಡಿದು ಮಹಾಯಾಜಕನ ಮನೆಯೊಳಕ್ಕೆ ಕರೆದುಕೊಂಡು ಹೋದರು. ಪೇತ್ರನು ದೂರದಿಂದ ಅವರನ್ನು ಹಿಂಬಾಲಿಸುತ್ತಿದ್ದನು.


ಮುಖ್ಯಯಾಜಕರೂ ಮತ್ತು ಕಾವಲುಗಾರರು ಆತನನ್ನು ಕಾಣುತ್ತಲೇ, “ಶಿಲುಬೆಗೆ ಹಾಕಿಸು, ಶಿಲುಬೆಗೆ ಹಾಕಿಸು” ಎಂದು ಕೂಗಿದರು. ಪಿಲಾತನು ಅವರಿಗೆ, “ಬೇಕಾದರೆ ನೀವೇ ಅವನನ್ನು ತೆಗೆದುಕೊಂಡು ಹೋಗಿ ಶಿಲುಬೆಗೆ ಹಾಕಿರಿ, ನನಗೆ ಆತನಲ್ಲಿ ಯಾವ ಅಪರಾಧವೂ ಕಾಣಿಸಲಿಲ್ಲ” ಎಂದನು.


ಓಲೇಕಾರರು ಹೋಗಿ ಅವರನ್ನು ಸೆರೆಮನೆಯಲ್ಲಿ ಕಾಣದೆ ಹಿಂತಿರುಗಿ ಬಂದು,


ಆಗ ಸೈನ್ಯದ ಅಧಿಕಾರಿಯು ಓಲೇಕಾರರ ಸಂಗಡ ಹೋಗಿ ಅವರನ್ನು ಕರೆದುಕೊಂಡು ಬಂದನು. ಆದರೆ ತಮಗೆ ಜನರು ಕಲ್ಲೆಸೆದಾರೆಂದು ಹೆದರಿ ಅವರನ್ನು ಹಿಂಸಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು