Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಹೀಗೆ ಆತನನ್ನು ಪರಿಹಾಸ್ಯಮಾಡಿದ ಮೇಲೆ ಆ ನಿಲುವಂಗಿಯನ್ನು ತೆಗೆದು ಆತನ ಬಟ್ಟೆಗಳನ್ನು ಹೊದಿಸಿ ಆತನನ್ನು ಶಿಲುಬೆಗೆ ಹಾಕುವುದಕ್ಕೆ ತೆಗೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಹೀಗೆ ಪರಿಹಾಸ್ಯಮಾಡಿ ಆದಮೇಲೆ, ಹೊದಿಸಿದ್ದ ಮೇಲಂಗಿಯನ್ನು ತೆಗೆದುಹಾಕಿ, ಅವರ ಉಡುಪನ್ನೇ ಪುನಃ ತೊಡಿಸಿದರು. ಬಳಿಕ ಅವರನ್ನು ಶಿಲುಬೆಗೇರಿಸಲು ಕರೆದೊಯ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಹೀಗೆ ಆತನನ್ನು ಪರಿಹಾಸ್ಯ ಮಾಡಿದ ಮೇಲೆ ಆ ಒಲ್ಲಿಯನ್ನು ತೆಗೆದು ಆತನ ಬಟ್ಟೆಗಳನ್ನು ಹೊದಿಸಿ ಆತನನ್ನು ಶಿಲುಬೆಗೆ ಹಾಕುವದಕ್ಕೆ ತೆಗೆದುಕೊಂಡುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಹೀಗೆ ಅಪಹಾಸ್ಯ ಮಾಡಿದ ಬಳಿಕ, ಆತನ ನಿಲುವಂಗಿಯನ್ನು ತೆಗೆದುಹಾಕಿ ಆತನ ಬಟ್ಟೆಗಳನ್ನು ಮತ್ತೆ ಆತನಿಗೆ ತೊಡಿಸಿ ಶಿಲುಬೆಗೇರಿಸಲು ಕರೆದೊಯ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಹೀಗೆ ಹಾಸ್ಯ ಮಾಡಿದ ಮೇಲೆ, ಆ ನಿಲುವಂಗಿಯನ್ನು ಯೇಸುವಿನಿಂದ ತೆಗೆದುಹಾಕಿ ಅವರ ವಸ್ತ್ರವನ್ನು ಹೊದಿಸಿ, ಯೇಸುವನ್ನು ಶಿಲುಬೆಗೆ ಹಾಕುವುದಕ್ಕಾಗಿ ನಡೆಸಿಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ತೆಂಚೆ ಎಡ್ಸಡುನ್ ಸರಲ್ಲ್ಯಾ ತನ್ನಾ ತೆನಿ ತೆಕಾ ನೆಸ್ವಲ್ಲೊ ತಾಂಬ್ಡೊ ಝಗೊ ವೊಡುನ್ ಕಾಡ್ಲ್ಯಾನಿ ಅನಿ ತೆಚೆ ಅದ್ದಿಚೆಚ್ ಕಪ್ಡೆ ತೆಕಾ ನೆಸ್ವುಲ್ಯಾನಿ. ಮಾನಾ ತೆನಿ ತೆಕಾ ಕುರ್ಸಾರ್ ಮಾರುಕ್ ಘೆವ್ನ್ ಗೆಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:31
12 ತಿಳಿವುಗಳ ಹೋಲಿಕೆ  

ಅವನು ಬಾಧೆಗೆ ಒಳಗಾಗಿ ತನ್ನನ್ನು ತಗ್ಗಿಸಿಕೊಂಡನು, ಬಾಯಿ ತೆರೆಯಲಿಲ್ಲ; ವಧ್ಯಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆಯೂ, ಉಣ್ಣೆ ಕತ್ತರಿಸುವವರ ಮುಂದೆ ಮೌನವಾಗಿರುವ ಕುರಿಯ ಹಾಗೂ ಇದ್ದನು, ಬಾಯಿ ತೆರೆಯಲೇ ಇಲ್ಲ.


ಅದರಂತೆ ಯೇಸು ಕೂಡ ಸ್ವಂತ ರಕ್ತದಿಂದ ತನ್ನ ಜನರನ್ನು ಶುದ್ಧೀಕರಿಸುವುದಕ್ಕೋಸ್ಕರ ಪಟ್ಟಣದ ಹೊರಗೆ ಸತ್ತನು.


ಅವನನ್ನು ಊರ ಹೊರಕ್ಕೆ ನೂಕಿಕೊಂಡು ಹೋಗಿ ಕೊಲ್ಲುವುದಕ್ಕೆ ಕಲ್ಲೆಸೆದರು. ಸಾಕ್ಷಿಯವರು ತಮ್ಮ ಬಟ್ಟೆಗಳನ್ನು ತೆಗೆದು ಸೌಲನೆಂಬ ಒಬ್ಬ ಯೌವನಸ್ಥನ ಕಾಲುಗಳ ಬಳಿಯಲ್ಲಿ ಇಟ್ಟರು.


ಅವನನ್ನು ಹಿಡಿದು ದ್ರಾಕ್ಷಾತೋಟದಿಂದ ಹೊರಕ್ಕೆ ದೊಬ್ಬಿ ಕೊಂದು ಹಾಕಿದರು.


ತರುವಾಯ ಇಬ್ಬರು ದುಷ್ಟರು ಬಂದು ಅವನ ಮುಂದೆ ಕುಳಿತು ಇವನು ದೇವರನ್ನೂ ಅರಸನನ್ನೂ ಶಪಿಸಿದ್ದಾನೆ ಎಂಬುದಾಗಿ ಜನರ ಎದುರಿನಲ್ಲಿ ಅವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಿದರು. ಜನರು ಅವನನ್ನು ಊರಿನ ಹೊರಗೆ ಒಯ್ದು ಕಲ್ಲೆಸೆದು ಕೊಂದರು.


ಅವನು ದೇವರನ್ನೂ ಮತ್ತು ಅರಸನನ್ನೂ ಶಪಿಸಿದನು ಎಂಬುದಾಗಿ ಇಬ್ಬರ ಸಾಕ್ಷಿ ಹೇಳಿಸಿ, ಅವನನ್ನು ಹೊರಗೆ ಒಯ್ದು ಕಲ್ಲೆಸೆದು ಕೊಲ್ಲಿರಿ” ಎಂದು ಬರೆದಿದ್ದಳು.


ತರುವಾಯ ಆ ಶಿಷ್ಯನಿಗೆ, “ಇಗೋ, ನಿನ್ನ ತಾಯಿ” ಎಂದು ಹೇಳಿದನು. ಆ ಗಳಿಗೆಯಿಂದ ಆ ಶಿಷ್ಯನು ಆಕೆಯನ್ನು ತನ್ನ ಸ್ವಂತ ಮನೆಯಲ್ಲೇ ಇರಿಸಿಕೊಂಡನು.


ಆಗ ಅವನು ಯೇಸುವನ್ನು ಶಿಲುಬೆಗೆ ಹಾಕಿಸುವುದಕ್ಕೆ ಅವರ ವಶಕ್ಕೆ ಒಪ್ಪಿಸಿ ಕೊಟ್ಟನು. ಅವರು ಯೇಸುವನ್ನು ತೆಗೆದುಕೊಂಡು ಹೋದರು.


ಆತನನ್ನು ಅಪಹಾಸ್ಯ ಮಾಡುವುದಕ್ಕಾಗಿಯೂ ಚಾಟಿಗಳಿಂದ ಹೊಡೆಯುವುದಕ್ಕಾಗಿಯೂ ಶಿಲುಬೆಗೆ ಹಾಕುವುದಕ್ಕಾಗಿಯೂ ಅನ್ಯಜನರ ಕೈಗೆ ಒಪ್ಪಿಸುವರು. ಆದರೆ ಆತನು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡುವನು” ಎಂದು ಹೇಳಿದನು.


ತರುವಾಯ ಯೆಹೋವನು ಮೋಶೆಗೆ, “ಆ ಮನುಷ್ಯನಿಗೆ ಮರಣಶಿಕ್ಷೆಯಾಗಬೇಕು; ಸರ್ವಸಮೂಹದವರ ಪಾಳೆಯದ ಹೊರಗೆ ಅವನನ್ನು ಕಲ್ಲೆಸೆದು ಕೊಲ್ಲಬೇಕು” ಎಂದು ಆಜ್ಞಾಪಿಸಿದನು.


ಆಗ ಮನುಷ್ಯಕುಮಾರನನ್ನು ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿ ಕೊಡಲಾಗುವುದು” ಎಂದು ಹೇಳಿದನು.


ಹೀಗೆ ಆತನನ್ನು ಪರಿಹಾಸ್ಯ ಮಾಡಿದ ಮೇಲೆ ಆ ನಸುಗೆಂಪು ಮೇಲಂಗಿಯನ್ನು ತೆಗೆದು ಆತನ ಬಟ್ಟೆಗಳನ್ನು ಆತನಿಗೆ ತೊಡಿಸಿ ಆತನನ್ನು ಶಿಲುಬೆಗೆ ಹಾಕುವುದಕ್ಕೆ ತೆಗೆದುಕೊಂಡು ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು