Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:42 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಅವನು ಇಸ್ರಾಯೇಲಿನ ಅರಸನಲ್ಲವೇ. ಈಗ ಶಿಲುಬೆಯಿಂದ ಇಳಿದು ಬರಲಿ, ಇಳಿದು ಬಂದರೆ ಅವನಲ್ಲಿ ನಂಬಿಕೆಯಿಡುತ್ತೇವೆ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 “ಇವನು ಇತರರನ್ನು ರಕ್ಷಿಸಿದ; ಆದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲು ಇವನಿಂದಾಗದು; ಇಸ್ರಯೇಲಿನ ಅರಸನಂತೆ! ಈಗ ಶಿಲುಬೆಯಿಂದ ಇಳಿದು ಬರಲಿ; ಆಗ ಇವನನ್ನು ನಂಬುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಅವನು ಮತ್ತೊಬ್ಬರನ್ನು ರಕ್ಷಿಸಿದನು, ತನ್ನನ್ನು ರಕ್ಷಿಸಿಕೊಳ್ಳಲಾರನು. ಅವನು ಇಸ್ರಾಯೇಲಿನ ಅರಸನಲ್ಲವೇ. ಈಗ ಶಿಲುಬೆಯಿಂದ ಇಳಿದು ಬರಲಿ, ಇಳಿದು ಬಂದರೆ ಅವನಲ್ಲಿ ನಂಬಿಕೆಯಿಟ್ಟೇವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 “ಇವನು ಬೇರೆಯವರನ್ನು ರಕ್ಷಿಸಿದನು. ಆದರೆ ತನ್ನನ್ನು ರಕ್ಷಿಸಿಕೊಳ್ಳಲಾರ! ಇಸ್ರೇಲರ ರಾಜ ಎಂದು ಜನ ಹೇಳುತ್ತಾರೆ. ಇವನು ರಾಜನಾಗಿದ್ದರೆ ಶಿಲುಬೆಯಿಂದ ಕೆಳಗಿಳಿದು ಬರಲಿ. ಆಗ ನಾವು ಇವನನ್ನು ನಂಬುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 “ಈತನು ಬೇರೆಯವರನ್ನು ರಕ್ಷಿಸಿದನು; ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು! ಈತನು ಇಸ್ರಾಯೇಲಿನ ಅರಸನಾಗಿದ್ದರೆ ಈಗಲೇ ಶಿಲುಬೆಯಿಂದ ಕೆಳಗೆ ಇಳಿದು ಬರಲಿ. ಆಗ ನಾವು ಈತನನ್ನು ನಂಬುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

42 “ತೆನಿ ದುಸ್ರ್ಯಾಕ್ನಿ ಹುರ್‍ವುನ್ ಘೆಟ್ಲ್ಯಾನ್, ಖರೆ ಅತ್ತಾ ಅಪ್ನಾಕುಚ್ ಹುರ್‍ವುನ್ ಘೆವ್ಕ್ ತೆಕಾ ಹೊಯ್ನಾ ಹೊಲಾ! ಇಸ್ರಾಯೆಲಾಚೊ ರಾಜಾ ನ್ಹಯ್ ಹ್ಯೊ? ತೊ ಕುರ್ಸಾ ವೈನಾ ಉತ್ರುನ್ ಯೆಲ್ಯಾರ್, ಅಮಿ ತೆಚ್ಯಾ ವರ್‍ತಿ ವಿಶ್ವಾಸ್ ಕರ್‍ತಾವ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:42
14 ತಿಳಿವುಗಳ ಹೋಲಿಕೆ  

ಅದಕ್ಕೆ ನತಾನಯೇಲನು, “ಗುರುವೇ, ನೀನು ದೇವಕುಮಾರನು! ನೀನೇ ಇಸ್ರಾಯೇಲಿನ ಅರಸನು” ಎಂದನು.


ಇದಲ್ಲದೆ ಆತನ ಮೇಲೆ ಹೊರಿಸಿದ ಅಪರಾಧವನ್ನು ಬರೆದು ಆತನ ತಲೆಯ ಮೇಲ್ಗಡೆ ಹಚ್ಚಿದರು; ಅದೇನೆಂದರೆ, “ಈತನು ಯೇಸು, ಯೆಹೂದ್ಯರ ಅರಸನು” ಎಂಬುದೇ.


ಇವರು ಯೇಸುವಿನ ಸಂಗಡ ಇದ್ದವರೆಂದು ಗುರುತು ಹಿಡಿದರು. ಮತ್ತು ಕ್ಷೇಮ ಹೊಂದಿದ ಆ ಮನುಷ್ಯನು ಅವರ ಸಂಗಡ ನಿಂತಿರುವುದನ್ನು ನೋಡಿ ಪ್ರತಿಯಾಗಿ ಏನೂ ಮಾತನಾಡಲಾರದೆ ಇದ್ದರು.


ಯಾರಾದರೂ ನನ್ನ ಮಾತುಗಳನ್ನು ಕೇಳಿದರೂ ಅದನ್ನು ಕೈಕೊಂಡು ನಡೆಯದೆ ಹೋದರೆ, ನಾನು ಅವನಿಗೆ ತೀರ್ಪುಮಾಡುವುದಿಲ್ಲ. ಲೋಕಕ್ಕೆ ತೀರ್ಪುಮಾಡುವುದಕ್ಕಾಗಿ ನಾನು ಬಂದಿಲ್ಲ, ಆದರೆ ಲೋಕವನ್ನು ರಕ್ಷಿಸುವುದಕ್ಕಾಗಿ ಬಂದಿದ್ದೇನಷ್ಟೇ.


ಖರ್ಜೂರದ ಗರಿಗಳನ್ನು ತೆಗೆದುಕೊಂಡು, ಆತನನ್ನು ಎದುರುಗೊಳ್ಳುವುದಕ್ಕೆ ಊರಿನಿಂದ ಹೊರಗೆ ಬಂದು, “ಹೊಸನ್ನ! ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ; ಇಸ್ರಾಯೇಲಿನ ಅರಸನಿಗೆ ಶುಭವಾಗಲಿ” ಎಂದು ಆರ್ಭಟಿಸಿದರು.


ಆದಕಾರಣ ಅವರು ಕುರುಡನಾಗಿದ್ದ ಆ ಮನುಷ್ಯನನ್ನು ಎರಡನೆಯ ಸಾರಿ ಕರೆದು, “ನೀನು ದೇವರಿಗೆ ಗೌರವವನ್ನು ಸಲ್ಲಿಸು; ಈ ಮನುಷ್ಯನು ಪಾಪಿಷ್ಠನೆಂದು ನಾವು ಬಲ್ಲೆವು” ಎಂದರು.


“ಕರ್ತನ ಹೆಸರಿನಲ್ಲಿ ಬರುವ ಅರಸನಿಗೆ ಆಶೀರ್ವಾದ, ಪರಲೋಕದಲ್ಲಿ ಸಮಾಧಾನ, ಮೇಲಣಲೋಕಗಳಲ್ಲಿ ಮಹಿಮೆ” ಎಂದು ಮಹಾ ಶಬ್ದದಿಂದ ದೇವರನ್ನು ಕೊಂಡಾಡುವುದಕ್ಕೆ ತೊಡಗಿದರು.


“ಯೆಹೂದ್ಯರ ಅರಸನಾಗಿ ಹುಟ್ಟಿದಾತನು ಎಲ್ಲಿದ್ದಾನೆ? ಆತನನ್ನು ಸೂಚಿಸುವ ನಕ್ಷತ್ರವನ್ನು ನಾವು ಪೂರ್ವದಿಕ್ಕಿನಲ್ಲಿ ಕಂಡು ಆತನಿಗೆ ಅಡ್ಡಬಿದ್ದು ನಮಸ್ಕರಿಸುವುದಕ್ಕಾಗಿ ಬಂದೆವು” ಎಂದರು.


“ದೇವಾಲಯವನ್ನು ಕೆಡವಿ ಮೂರು ದಿನದಲ್ಲಿ ಕಟ್ಟುವವನೇ, ನಿನ್ನನ್ನು ರಕ್ಷಿಸಿಕೊ; ನೀನು ದೇವರ ಮಗನೇ ಆಗಿದ್ದರೆ ಶಿಲುಬೆಯಿಂದ ಇಳಿದು ಬಾ” ಎಂದು ಆತನನ್ನು ಹಂಗಿಸುತ್ತಿದ್ದರು.


ಅದೇ ರೀತಿ ಮುಖ್ಯಯಾಜಕರೂ, ಶಾಸ್ತ್ರಿಗಳೂ, ಹಿರಿಯರೂ, “ಅವನು ಮತ್ತೊಬ್ಬರನ್ನು ರಕ್ಷಿಸಿದನು, ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು.


ಅದೇ ಮೇರೆಗೆ ಮುಖ್ಯಯಾಜಕರೂ ಶಾಸ್ತ್ರಿಗಳೂ, “ಅವನು ಮತ್ತೊಬ್ಬರನ್ನು ರಕ್ಷಿಸಿದನು; ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು.


ಇಸ್ರಾಯೇಲರ ಅರಸನಾದ ಈ ಕ್ರಿಸ್ತನು ಈಗ ಶಿಲುಬೆಯಿಂದ ಇಳಿದು ಬರಲಿ; ಇಳಿದು ಬಂದರೆ ನಾವು ನೋಡಿ ನಂಬುತ್ತೇವೆ” ಎಂದು ತಮ್ಮತಮ್ಮೊಳಗೆ ಅಣಕಿಸುತ್ತಾ ಮಾತನಾಡುತ್ತಿದ್ದರು. ಆತನೊಂದಿಗೆ ಶಿಲುಬೆಗೆ ಹಾಕಲ್ಪಟ್ಟವರು ಸಹ ಆತನನ್ನು ನಿಂದಿಸುತ್ತಿದ್ದರು.


ಜನರೆಲ್ಲರೂ ನೋಡುತ್ತಾ ನಿಂತರು. ಇದಲ್ಲದೆ ಅಧಿಕಾರಿಗಳು “ಅವನು ಮತ್ತೊಬ್ಬರನ್ನು ರಕ್ಷಿಸಿದನು, ಅವನು ದೇವರು ಆರಿಸಿಕೊಂಡ ಕ್ರಿಸ್ತನೇ ಆಗಿದ್ದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ” ಎಂದು ಗೇಲಿಮಾಡಿದರು.


“ನೀನು ಯೆಹೂದ್ಯರ ಅರಸನಾಗಿದ್ದರೆ ನಿನ್ನನ್ನು ನೀನು ರಕ್ಷಿಸಿಕೋ” ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು