Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ಅವನು ದೇವಾಲಯದಲ್ಲಿ ಆ ಹಣವನ್ನು ಎಸೆದು ಹೊರಟುಹೋಗಿ ನೇಣು ಹಾಕಿಕೊಂಡು ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆಗ ಅವನು ಆ ಹಣವನ್ನು ದೇವಾಲಯದಲ್ಲೇ ಎಸೆದು, ಹೊರಟುಹೋಗಿ ನೇಣುಹಾಕಿಕೊಂಡು ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಗ ಅವನು ಆ ಹಣವನ್ನು ದೇವಾಲಯದೊಳಗೆ ಬಿಸಾಟುಬಿಟ್ಟು ಹೊರಟುಹೋಗಿ ಉರ್ಲು ಹಾಕಿಕೊಂಡು ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ಯೂದನು ಆ ಹಣವನ್ನು ದೇವಾಲಯದೊಳಗೆ ಬಿಸಾಡಿ ಹೊರಟುಹೋಗಿ ನೇಣು ಹಾಕಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವನು ಆ ಬೆಳ್ಳಿಯ ನಾಣ್ಯಗಳನ್ನು ದೇವಾಲಯದಲ್ಲಿ ಬಿಸಾಡಿಬಿಟ್ಟು ಹೊರಟುಹೋಗಿ ನೇಣು ಹಾಕಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತನ್ನಾ ಜುದಾಸ್ ದೆವಾಚ್ಯಾ ಗುಡಿತ್ ಗೆಲೊ ಅನಿ ತೆ ಪೈಸೆ ಥೈಚ್ ಟಾಕುನ್ ಭಾಯ್ರ್ ಗೆಲೊ ಅನಿ ಪಾಸಿ ಘಾಲುನ್ ಘೆವ್ನ್ ಮರ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:5
12 ತಿಳಿವುಗಳ ಹೋಲಿಕೆ  

ಅಹೀತೋಫೆಲನು ತನ್ನ ಆಲೋಚನೆಯು ನಡೆಯಲಿಲ್ಲವೆಂದು ತಿಳಿದಾಗ ಅವನು ಕತ್ತೆಗೆ ತಡಿಹಾಕಿಸಿ, ಅದರ ಮೇಲೆ ತನ್ನ ಊರಿಗೆ ಹೋದನು. ತನ್ನ ಮನೆಯಲ್ಲಿ ವ್ಯವಸ್ಥೆಮಾಡಿದ ನಂತರ, ಉರ್ಲು ಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು.


ಇತ್ತ ಜನರು ಜಕರೀಯನಿಗಾಗಿ ಕಾದುಕೊಂಡಿದ್ದು ಅವನು ದೇವಾಲಯದೊಳಗೆ ತಡಮಾಡಿದ್ದಕ್ಕೆ ಆಶ್ಚರ್ಯಪಟ್ಟರು.


ದೇವಾಲಯದೊಳಕ್ಕೆ ಹೋಗಿ ಧೂಪವನ್ನರ್ಪಿಸುವುದಕ್ಕೆ ಯಾಜಕರ ಪದ್ಧತಿಯ ಪ್ರಕಾರ ಚೀಟು ಹಾಕಲು ಅದು ಅವನ ಪಾಲಿಗೆ ಬಂದಿತು.


ದೇವರೇ, ನೀನು ದುಷ್ಟರನ್ನು ಪಾತಾಳದ ಕೆಳಕ್ಕೆ ದೊಬ್ಬಿಬಿಡುವಿ. ಕೊಲೆಪಾತಕರೂ ವಂಚಕರೂ ನರಾಯುಷ್ಯದ ಅರ್ಧಾಂಶವಾದರೂ ಬದುಕುವುದಿಲ್ಲ. ನಾನಂತೂ ನಿನ್ನನ್ನೆ ನಂಬಿಕೊಂಡಿರುವೆನು.


ನನ್ನ ಆತ್ಮವು ಈ ಅಸ್ಥಿಪಂಜರದಲ್ಲಿ ಉಳಿಯುವುದಕ್ಕಿಂತಲೂ, ಉಸಿರುಕಟ್ಟಿ ಸಾಯುವುದೇ ಲೇಸೆಂದು ಬಯಸುತ್ತದೆ.


ಹೀಗಿರುವಲ್ಲಿ ಅವನ ಹೆಂಡತಿ ಅವನಿಗೆ, “ನಿನ್ನ ಯಥಾರ್ಥತ್ವವನ್ನು ಇನ್ನೂ ಬಿಡಲಿಲ್ಲವೋ? ಇದೆಲ್ಲವನ್ನು ಕೊಟ್ಟ ದೇವರನ್ನು ದೂಷಿಸಿ ಸಾಯಿ” ಎಂದು ಹೇಳಿದಳು.


ಪಟ್ಟಣವು ಅವರ ವಶವಾದುದನ್ನು ಜಿಮ್ರಿಯು ಕಂಡು ಅರಮನೆಯ ಗರ್ಭಗೃಹಕ್ಕೆ ಹೋಗಿ, ಅರಮನೆಗೆ ಬೆಂಕಿ ಹೊತ್ತಿಸಿ ಸುಟ್ಟುಕೊಂಡು ಸತ್ತನು.


ಅವನು ಕೂಡಲೆ ತನ್ನ ಆಯುಧ ಹೊರುವವನನ್ನು ಕರೆದು ಅವನಿಗೆ, “ಕತ್ತಿಯನ್ನು ಹಿರಿದು ನನ್ನನ್ನು ಕೊಲ್ಲು; ಇಲ್ಲವಾದರೆ ನಾನು ಹೆಂಗಸಿನ ಕೈಯಿಂದ ಸತ್ತನೆಂದು ಜನರು ಹೇಳಾರು” ಎನ್ನಲು ಆ ಪ್ರಾಯಸ್ಥನು ಅವನನ್ನು ತಿವಿದು ಕೊಂದುಹಾಕಿದನು.


“ನಾನು ದೇವರ ಆಲಯವನ್ನು ಕೆಡವಿಬಿಟ್ಟು ಮೂರು ದಿನಗಳಲ್ಲಿ ತಿರುಗಿ ಕಟ್ಟಬಲ್ಲೆನೆಂದು ‘ಈ ಮನುಷ್ಯನು ಹೇಳಿದನು’” ಅಂದರು;


ಮುಖ್ಯಯಾಜಕರು ಆ ಹಣವನ್ನು ತೆಗೆದುಕೊಂಡು “ಇದು ಜೀವಹತ್ಯೆಗೆ ಕೊಟ್ಟ ಕ್ರಯವಾದುದರಿಂದ ಇದನ್ನು ಕಾಣಿಕೆ ಪೆಟ್ಟಿಗೆಯಲ್ಲಿ ಹಾಕಬಾರದು” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು