Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:53 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

53 ಮತ್ತು ಆತನ ಪುನರುತ್ಥಾನವಾದ ಮೇಲೆ ಸಮಾಧಿಗಳೊಳಗಿಂದ ಹೊರಗೆ ಬಂದು ಪರಿಶುದ್ಧ ಪಟ್ಟಣದೊಳಗೆ ಹೋಗಿ ಅನೇಕರಿಗೆ ಕಾಣಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

53 ಹೀಗೆ ಎದ್ದವರು ಸಮಾಧಿಗಳಿಂದ ಹೊರಗೆಬಂದು, ಯೇಸು ಪುನರುತ್ಥಾನ ಹೊಂದಿದ ಬಳಿಕ ಪವಿತ್ರನಗರಕ್ಕೆ ಹೋಗಿ ಅನೇಕರಿಗೆ ಕಾಣಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

53 ಮತ್ತು ಆತನು ಎದ್ದ ಮೇಲೆ ಸಮಾಧಿಗಳೊಳಗಿಂದ ಹೊರಗೆ ಬಂದು ಪರಿಶುದ್ಧ ಪಟ್ಟಣದೊಳಕ್ಕೆ ಹೋಗಿ ಅನೇಕರಿಗೆ ಕಾಣಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

53 ಯೇಸು ಪುನರುತ್ಥಾನ ಹೊಂದಿದ ಬಳಿಕ, ಅವರು ಪವಿತ್ರ ನಗರವಾದ ಜೆರುಸಲೇಮಿಗೆ ಹೋದರು. ಜನರು ಅವರನ್ನು ಕಣ್ಣಾರೆ ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

53 ಯೇಸು ಪುನರುತ್ಥಾನವಾದ ಮೇಲೆ ಅವರು ಸಮಾಧಿಗಳೊಳಗಿಂದ ಹೊರಗೆ ಬಂದು ಪವಿತ್ರ ಪಟ್ಟಣದೊಳಕ್ಕೆ ಹೋಗಿ ಅನೇಕರಿಗೆ ಕಾಣಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

53 ಜೆಜು ಝಿತ್ತೊ ಹೊವ್ನ್ ಉಟಲ್ಲ್ಯಾ ತೆನಿ ತೆಂಕಾ ಮಾಟಿ ದಿಲ್ಲ್ಯಾ ಸಾರಿಯಾ ಸೊಡುನ್ ಉಟ್ಲ್ಯಾನಿ ಅನಿ ಪವಿತ್ರ್ ಶಾರಾಕ್ ಜೆರುಜಲೆಮಾಕ್ ಗೆಲ್ಯಾನಿ. ಥೈ ಸುಮಾರ್ ಲೊಕಾನಿ ತೆಂಕಾ ಬಗಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:53
7 ತಿಳಿವುಗಳ ಹೋಲಿಕೆ  

ಆಲಯದ ಹೊರಗಿರುವ ಹೊರಾಂಗಣವನ್ನು ಅಳೆಯದೆ ಬಿಟ್ಟುಬಿಡು, ಅದು ಅನ್ಯಜನರಿಗಾಗಿ ಕೊಡಲ್ಪಟ್ಟಿದೆ. ಅವರು ಪರಿಶುದ್ಧ ಪಟ್ಟಣವನ್ನು ನಲವತ್ತೆರಡು ತಿಂಗಳು ತುಳಿದಾಡುವರು.


ಆಗ ಸೈತಾನನು ಯೇಸುವನ್ನು ಪರಿಶುದ್ಧ ಪಟ್ಟಣಕ್ಕೆ ಕರೆದುಕೊಂಡು ಹೋಗಿ ದೇವಾಲಯದ ಗೋಪುರದ ಮೇಲೆ ನಿಲ್ಲಿಸಿ


ಇವರು ತಮ್ಮನ್ನು ಪರಿಶುದ್ಧ ಪಟ್ಟಣದವರು ಎಂದುಕೊಂಡು, ದೇವರು ಇಸ್ರಾಯೇಲಿನವನೇ ಎಂದು ಆತನ ಮೇಲೆ ಭರವಸವಿಟ್ಟುಕೊಂಡಿರುತ್ತಾರೆ. ಆತನ ಹೆಸರೋ ಸಕಲ ಸೈನ್ಯಗಳ ಸರ್ವಶಕ್ತನಾದ ಯೆಹೋವನು ಎಂಬುದು.


ಯಾವನಾದರೂ ಈ ಪ್ರವಾದನಾ ಪುಸ್ತಕದಲ್ಲಿರುವ ಮಾತುಗಳಲ್ಲಿ ಒಂದನ್ನಾದರೂ ತೆಗೆದುಬಿಟ್ಟರೆ ಈ ಪುಸ್ತಕದಲ್ಲಿ ಬರೆದಿರುವ ಪರಿಶುದ್ಧ ಪಟ್ಟಣದಲ್ಲಿಯೂ ಜೀವವೃಕ್ಷದಲ್ಲಿಯೂ ಅವನಿಗಿರುವ ಪಾಲನ್ನು ದೇವರು ತೆಗೆದುಬಿಡುವನು.


ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮ್ ದೇವರ ಬಳಿಯಿಂದ ಇಳಿದು ಬರುವುದನ್ನು ಕಂಡೆನು. ಅದು ತನ್ನ ಪತಿಗೋಸ್ಕರ ಸಿದ್ಧಳಾಗಿರುವ ಮದಲಗಿತ್ತಿಯಂತೆ ಶೃಂಗರಿಸಲ್ಪಟ್ಟಿತ್ತು.


ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.


ಇಸ್ರಾಯೇಲರ ಪ್ರಮುಖರು ಮಾತ್ರ ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದರು. ಉಳಿದ ಜನರೊಳಗೆ ಹತ್ತು ಜನರಲ್ಲಿ ಒಂಭತ್ತು ಜನ ತಮ್ಮ ತಮ್ಮ ಊರುಗಳಲ್ಲಿ ವಾಸಮಾಡುತ್ತಿದ್ದರು, ಒಬ್ಬನು ಮಾತ್ರ ಪವಿತ್ರನಗರವಾಗಿರುವ ಯೆರೂಸಲೇಮಿನಲ್ಲಿ ವಾಸಮಾಡಬೇಕು ಎಂದು ಚೀಟು ಹಾಕಿ ಅವನನ್ನು ಗೊತ್ತು ಮಾಡುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು