Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 28:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇಗೋ, ಮಹಾ ಭೂಕಂಪವುಂಟಾಯಿತು, ಕರ್ತನ ದೂತನು ಆಕಾಶದಿಂದ ಇಳಿದು ಬಂದು ಆ ಕಲ್ಲನ್ನು ಬಾಗಿಲಿನಿಂದ ಉರುಳಿಸಿ ಅದರ ಮೇಲೆ ಕುಳಿತುಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಇದ್ದಕ್ಕಿದ್ದಂತೆ ಭೂಮಿ ಗಡಗಡನೆ ನಡುಗಿತು. ಆಗ ದೇವದೂತನು ಸ್ವರ್ಗದಿಂದ ಇಳಿದುಬಂದನು. ಸಮಾಧಿಯ ಕಲ್ಲನ್ನು ಹಿಂದಕ್ಕೆ ಉರುಳಿಸಿ ಅದರ ಮೇಲೆ ಕುಳಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಗ ಮಹಾ ಭೂಕಂಪವಾಯಿತು. ಕರ್ತನ ದೂತನು ಆಕಾಶದಿಂದ ಇಳಿದು ಬಂದು ಆ ಕಲ್ಲನ್ನು ಬಾಗಿಲಿನಿಂದ ಉರುಳಿಸಿ ಅದರ ಮೇಲೆ ಕೂತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆಗ ಭೀಕರ ಭೂಕಂಪವಾಯಿತು. ಪ್ರಭುವಿನ ದೂತನೊಬ್ಬನು ಆಕಾಶದಿಂದ ಇಳಿದುಬಂದನು. ಆ ದೇವದೂತನು ಸಮಾಧಿಯ ಬಳಿಗೆ ಹೋಗಿ, ಸಮಾಧಿಯ ಬಾಗಿಲಿನಿಂದ ಬಂಡೆಯನ್ನು ಉರುಳಿಸಿ ಆ ಬಂಡೆಯ ಮೇಲೆ ಕುಳಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಮಹಾ ಭೂಕಂಪವಾಯಿತು. ಕರ್ತನ ದೂತನು ಪರಲೋಕದಿಂದ ಇಳಿದುಬಂದು, ಬಾಗಿಲಿನಿಂದ ಬಂಡೆಯನ್ನು ಉರುಳಿಸಿ ಅದರ ಮೇಲೆ ಕುಳಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತನ್ನಾ ಎಗ್ದಮ್ ಮೊಟೆ ಭುಕಂಪ್ ಹೊಲೆ; ಧನಿಯಾಚೊ ಎಕ್ ದುತ್ ಸರ್‍ಗಾ ವೈನಾ ಉತ್ರುನ್ ಯೆಲೊ, ಸಮಾದಿಚ್ಯಾ ದಾರಾರ್ ಹೊತ್ತ್ಯಾ ಗುಂಡ್ಯಾಕ್ ಕಡೆಕ್ ಗುಳ್ವುನ್ ತೆಚೆ ವರ್‍ತಿ ಬಸ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 28:2
12 ತಿಳಿವುಗಳ ಹೋಲಿಕೆ  

ಆಕಸ್ಮಾತ್ತಾಗಿ ಮಹಾಭೂಕಂಪವುಂಟಾಯಿತು; ಸೆರೆಮನೆಯ ಅಸ್ತಿವಾರಗಳು ಕದಲಿದವು. ಅದೇ ಕ್ಷಣದಲ್ಲಿ ಕದಗಳೆಲ್ಲಾ ತೆರೆದವು, ಎಲ್ಲರ ಬೇಡಿಗಳು ಕಳಚಿಬಿದ್ದವು.


ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ, ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು, ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು, ದೇವದೂತರಿಗೆ ಕಾಣಿಸಿಕೊಂಡನು, ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು, ಲೋಕದಲ್ಲಿ ನಂಬಲ್ಪಟ್ಟನು, ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.


ವಾರದ ಮೊದಲನೆಯ ದಿನದಲ್ಲಿ ಮಗ್ದಲದ ಮರಿಯಳು ಬೆಳಿಗ್ಗೆ ಇನ್ನೂ ಕತ್ತಲೆ ಇರುವಾಗಲೇ ಸಮಾಧಿಯ ಬಳಿಗೆ ಬಂದು ಸಮಾಧಿಯ ಕಲ್ಲು ಅಲ್ಲಿಂದ ಉರುಳಿ ಹೋಗಿರುವುದನ್ನು ಕಂಡಳು.


ಆಗ ಪರಲೋಕದಲ್ಲಿರುವ ದೇವಾಲಯವು ತೆರೆಯಿತು. ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು. ಇದಲ್ಲದೆ, ಗರ್ಜನೆ, ಗುಡುಗು, ಮಿಂಚುಗಳು, ಭೂಕಂಪವು, ದೊಡ್ಡ ಆಲಿಕಲ್ಲಿನ ಮಳೆಯೂ ಸುರಿಯಿತು.


ಆದರೆ ಈ ಸಂಗತಿಗಳನ್ನು ಮುಂತಿಳಿಸುವುದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದಾರೆಂಬುದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಲ್ಪಡುತ್ತಿವೆ ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂದು ಬಯಸುತ್ತಿದ್ದಾರೆ.


ಬಂಡೆಯಲ್ಲಿ ತೋಡಿದ್ದ ಹೊಸ ಸಮಾಧಿಯಲ್ಲಿ ಇಟ್ಟು ಸಮಾಧಿಯ ಬಾಗಿಲಿಗೆ ದೊಡ್ಡ ಕಲ್ಲನ್ನು ಉರುಳಿಸಿ ಹೊರಟುಹೋದನು.


ಅವರು ಹೊರಟು ಕಾವಲುಗಾರರನ್ನು ಇರಿಸಿ ಆ ಕಲ್ಲಿಗೆ ಮುದ್ರೆಹಾಕಿ ಸಮಾಧಿಯನ್ನು ಸುಭದ್ರಮಾಡಿದರು.


ಆದರೆ ಕರ್ತನ ದೂತನು ರಾತ್ರಿಯಲ್ಲಿ ಸೆರೆಮನೆಯ ದ್ವಾರಗಳನ್ನು ತೆರೆದು ಅವರನ್ನು ಹೊರಕ್ಕೆ ಕರೆದುಕೊಂಡು ಬಂದು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು