Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 3:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದರೆ ಯೋಹಾನನು ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ದೀಕ್ಷಾಸ್ನಾನಮಾಡಿಸಿಕೊಳ್ಳುವುದಕ್ಕೆ ಬರುವುದನ್ನು ಕಂಡು ಅವರಿಗೆ, “ಎಲೈ ಸರ್ಪಸಂತತಿಯವರೇ, ಮುಂದೆ ಬರಲಿರುವ ದೈವಕೋಪದಿಂದ ತಪ್ಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಚ್ಚರಿಸಿದವರಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಫರಿಸಾಯರಲ್ಲೂ ಸದ್ದುಕಾಯರಲ್ಲೂ ಅನೇಕರು ತನ್ನಿಂದ ಸ್ನಾನದೀಕ್ಷೆ ಪಡೆಯಲು ಬರುವುದನ್ನು ಯೊವಾನ್ನನು ನೋಡಿದನು. ಅವರನ್ನು ಉದ್ದೇಶಿಸಿ, “ಎಲೈ ವಿಷಸರ್ಪಗಳ ಪೀಳಿಗೆಯೇ, ಬರಲಿರುವ ದೈವಕೋಪದಿಂದ ತಪ್ಪಿಸಿಕೊಳ್ಳಬಹುದೆಂದು ನಿಮಗೆ ಎಚ್ಚರಿಕೆ ಕೊಟ್ಟವರಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆದರೆ ಅವನು ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ಸ್ನಾನಮಾಡಿಸಿಕೊಳ್ಳುವದಕ್ಕೆ ಬರುವದನ್ನು ಕಂಡು ಅವರಿಗೆ - ಎಲೈ ಸರ್ಪಜಾತಿಯವರೇ, ಮುಂದೆ ಕಾಣಬರುವ ದೈವಕೋಪದಿಂದ ತಪ್ಪಿಸಿಕೊಳ್ಳುವದಕ್ಕೆ ನಿಮಗೆ ಉಪದೇಶ ಮಾಡಿದವರಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅನೇಕ ಫರಿಸಾಯರು ಮತ್ತು ಸದ್ದುಕಾಯರು ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಲು ಬಂದರು. ಯೋಹಾನನು ಅವರನ್ನು ನೋಡಿ, “ನೀವೆಲ್ಲರು ಸರ್ಪಗಳು! ಬರಲಿರುವ ದೇವರ ಕೋಪದಿಂದ ತಪ್ಪಿಸಿಕೊಳ್ಳಲು ನಿಮಗೆ ಎಚ್ಚರಿಸಿದವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದರೆ ಫರಿಸಾಯರು ಹಾಗೂ ಸದ್ದುಕಾಯರಲ್ಲಿ ಅನೇಕರು ದೀಕ್ಷಾಸ್ನಾನಕ್ಕಾಗಿ ಬರುವುದನ್ನು ಕಂಡು, ಯೋಹಾನನು ಅವರಿಗೆ: “ಎಲೈ ಸರ್ಪಸಂತತಿಯವರೇ! ಮುಂದೆ ಬರುವ ಕೋಪಾಗ್ನಿಯಿಂದ ತಪ್ಪಿಸಿಕೊಳ್ಳಲು ನಿಮ್ಮನ್ನು ಎಚ್ಚರಿಸಿದವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಸುಮಾರ್ ಸಾದುಸೆವಾ ಅನಿ ಫಾರಿಜೆವಾ ಬಾಲ್ತಿಮ್ ಘೆವ್ಕ್ ಯೆತಲೆ ಬಗುನ್ ಜುವಾಂವ್ “ಅರೆ! ಸಾಪಾಚ್ಯಾ ಪಿಲ್ಲಾನೊ, ಫಿಡೆ ಯೆತಲ್ಯಾ ನಾಸಾತ್ನಾ ಚುಕ್ವುನ್ ಘೆವ್ಕ್ ತುಮ್ಕಾ ಉಶಾರ್ಕಿ ಕೊನ್ ದಿಲ್ಯಾನಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 3:7
49 ತಿಳಿವುಗಳ ಹೋಲಿಕೆ  

ಸರ್ಪ ಸಂತತಿಯವರೇ ನೀವು ಕೆಟ್ಟವರಾಗಿರಲಾಗಿ ಒಳ್ಳೆಯ ಮಾತುಗಳನ್ನಾಡುವುದಕ್ಕೆ ನಿಮ್ಮಿಂದ ಹೇಗಾದೀತು? ಹೃದಯದಲ್ಲಿ ತುಂಬಿರುವುದೇ ಬಾಯಿಂದ ಹೊರಡುವುದು.


ಮತ್ತು ಆತನು ಸತ್ತವರೊಳಗಿಂದ ಎಬ್ಬಿಸಿದ, ಆಕಾಶದೊಳಗಿಂದ ಬರಲಿಕ್ಕಿರುವಂಥ ಆತನ ಕುಮಾರನನ್ನು ಕಾದುಕುಳಿತಿರುವಿರೆಂತಲೂ ಆ ಜನರೇ ಹೇಳುತ್ತಾರೆ. ಈ ಯೇಸು ಮುಂದೆ ಬರುವ ದೈವಕೋಪದಿಂದ ನಮ್ಮನ್ನು ತಪ್ಪಿಸುವಾತನು.


ಅನೀತಿಯಿಂದ ಸತ್ಯವನ್ನು ಅಡ್ಡಿಮಾಡುವವರಾದ ದುಷ್ಟಮನುಷ್ಯರ ಎಲ್ಲಾ ವಿಧವಾದ ಭಕ್ತಿಹೀನತೆಯ ಮೇಲೆಯೂ, ದುಷ್ಟತನದ ಮೇಲೆಯೂ ದೇವರ ಕೋಪವು ಪರಲೋಕದಿಂದ ಇಳಿದುಬರುತ್ತದೆ,


ಹಾವುಗಳೇ, ಸರ್ಪಜಾತಿಯವರೇ, ನರಕದಂಡನೆಯಿಂದ ಹೇಗೆ ನೀವು ತಪ್ಪಿಸಿಕೊಳ್ಳುವಿರಿ?


ಈಗ ನಾವು ಆತನ ರಕ್ತದಿಂದ ನೀತಿವಂತರಾಗಿರಲಾಗಿ ಆತನ ಮೂಲಕವಾಗಿ ದೇವರ ಕೋಪದಿಂದ ಖಂಡಿತವಾಗಿಯೂ ರಕ್ಷಣೆಯಾಗುವುದು ಅಷ್ಟೇ ನಿಶ್ಚಯವಲ್ಲವೇ?


ಅದೇ ದಿನದಲ್ಲಿ ಪುನರುತ್ಥಾನವಿಲ್ಲ ಎಂದು ವಾದಿಸುವ ಕೆಲವು ಸದ್ದುಕಾಯರು ಆತನ ಬಳಿಗೆ ಬಂದರು.


ಯೇಸು ಅವರಿಗೆ “ಎಚ್ಚರಿಕೆ! ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರಿ” ಎಂದು ಹೇಳಿದನು.


ಆದ್ದರಿಂದ ದೇವರ ಮಕ್ಕಳು ಯಾರೆಂಬುದು ಹಾಗೂ ಸೈತಾನನ ಮಕ್ಕಳು ಯಾರೆಂಬುದು ಇದರಿಂದ ತಿಳಿದುಬರುತ್ತದೆ. ನೀತಿಯನ್ನು ಅನುಸರಿಸದವರೂ ತನ್ನ ಸಹೋದರನನ್ನು ಪ್ರೀತಿಸದವರೂ ದೇವರಿಗೆ ಸಂಬಂಧಪಟ್ಟವರಲ್ಲ.


ಇದನ್ನು ಆತನೊಂದಿಗಿದ್ದ ಫರಿಸಾಯರಲ್ಲಿ ಕೆಲವರು ಕೇಳಿ, “ನಾವು ಸಹ ಕುರುಡರೇನು?” ಎಂದು ಕೇಳಿದಾಗ,


ನೀವು ಬಾಬೆಲಿನೊಳಗಿಂದ ಓಡಿಹೋಗಿ ನಿಮ್ಮ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳಿರಿ; ಅದಕ್ಕೆ ಉಂಟಾಗುವ ದಂಡನೆಗೆ ಒಳಗಾಗಬೇಡಿರಿ. ಯೆಹೋವನು ಮುಯ್ಯಿತೀರಿಸುವ ಕಾಲ ಬಂದಿದೆ; ಆತನು ಬಾಬಿಲೋನಿಗೆ ಪ್ರತಿಕಾರ ಮಾಡುವನು.


ನಾನು, ಯಾರ ಸಂಗಡ ಮಾತನಾಡಿ ಅವರು ಗಮನಿಸುವಂತೆ ಸಾಕ್ಷಿಕೊಡಲಿ? ಇಗೋ, ಅವರ ಕಿವಿ ಮುಚ್ಚಲ್ಪಟ್ಟಿವೆ. ಅಯ್ಯೋ, ಯೆಹೋವನ ಮಾತು ಅವರಿಗೆ ತಿರಸ್ಕಾರ, ಅದರಲ್ಲಿ ಅವರಿಗೆ ಆನಂದವೇ ಇಲ್ಲ.


ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ದೈವೋಕ್ತಿಯನ್ನು ಹೊಂದಿ, ಭಯಭಕ್ತಿಯುಳ್ಳವನಾಗಿ ತನ್ನ ಮನೆಯವರ ಸಂರಕ್ಷಣೆಗೋಸ್ಕರ ನಾವೆಯನ್ನು ಕಟ್ಟಿ ಸಿದ್ಧಮಾಡಿದನು. ನಂಬಿಕೆಯಿಂದಲೇ ಅವನು ಲೋಕದವರು ದಂಡನೆಗೆ ಪಾತ್ರರೆಂದು ನಿರ್ಣಯಿಸಿಕೊಂಡನು. ಆದುದ್ದರಿಂದ ನಂಬಿಕೆಯ ಫಲವಾದ ನೀತಿಗೆ ಬಾಧ್ಯನಾದನು.


ನಾನು, ನಮ್ಮ ಧರ್ಮದಲ್ಲಿ ಬಹು ಕಟ್ಟುನಿಟ್ಟಾಗಿ ಆಚರಿಸುವ ಫರಿಸಾಯರ ಪಂಥವನ್ನನುಸರಿಸಿ ಫರಿಸಾಯನಾಗಿ ನಡೆದುಕೊಂಡೆನೆಂಬುದನ್ನು, ಪ್ರಾರಂಭದಿಂದಲೂ ಅವರು ಬಲ್ಲರು. ಸಾಕ್ಷಿ ಹೇಳುವುದಕ್ಕೆ ಅವರಿಗೆ ಮನಸ್ಸಿದ್ದರೆ ಹೇಳಬಹುದು.


ಆದಕಾರಣ ನಾನು ಕಣ್ಣೀರು ಸುರಿಸುತ್ತಾ ಮೂರು ವರ್ಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬನಿಗೆ ಬುದ್ಧಿ ಹೇಳಿದೆನೆಂಬುದನ್ನು ನೀವು ನೆನಪಿಸಿಕೊಂಡು ಎಚ್ಚರವಾಗಿರಿ.


ಆದರೆ ಫರಿಸಾಯ ಮತದವರಲ್ಲಿ ಯೇಸುವನ್ನು ನಂಬಿದ್ದ ಕೆಲವರು ಎದ್ದು; “ದೇವರ ಕಡೆಗೆ ತಿರುಗಿಕೊಂಡಿರುವ ಅನ್ಯಜನರಿಗೆ ಸುನ್ನತಿಮಾಡಿಸಬೇಕು, ಮತ್ತು ಮೋಶೆಯ ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುವುದಕ್ಕೆ ಅವರಿಗೆ ಅಪ್ಪಣೆಕೊಡಬೇಕು” ಎಂದು ಹೇಳಿದರು.


ಹೀಗಿರುವಲ್ಲಿ ಮಹಾಯಾಜಕನೂ, ಸದ್ದುಕಾಯರ ಮತಕ್ಕೆ ಸೇರಿದವರಾದ ಅವನ ಜೊತೆಯಲ್ಲಿದ್ದವರೆಲ್ಲರೂ ಎದ್ದು,


ಸೈತಾನನು ನಿಮ್ಮ ತಂದೆ, ನೀವು ಆತನಿಗೆ ಸೇರಿದವರಾಗಿದ್ದು ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡಬಯಸುತ್ತೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನೆಲೆಗೊಂಡಿಲ್ಲ. ಏಕೆಂದರೆ ಅವನಲ್ಲಿ ಸತ್ಯವೇ ಇಲ್ಲ. ಅವನು ತನ್ನ ಸ್ವಭಾವಕ್ಕನುಸಾರವಾಗಿ ಸುಳ್ಳಾಡುತ್ತಾನೆ, ಏಕೆಂದರೆ ಅವನು ಸುಳ್ಳುಗಾರನೂ ಮತ್ತು ಸುಳ್ಳಿನ ತಂದೆಯೂ ಆಗಿದ್ದಾನೆ.


ಅಲ್ಲಿ ಬಂದವರು ಫರಿಸಾಯರ ಕಡೆಯವರಾಗಿದ್ದರು.


ಫರಿಸಾಯನು ನಿಂತುಕೊಂಡು ಪ್ರಾರ್ಥಿಸುವಾಗ ತನ್ನೊಳಗೆ, ‘ದೇವರೇ, ದರೋಡೆಕೋರರೂ, ಅನ್ಯಾಯಗಾರರೂ, ಹಾದರಮಾಡುವವರೂ ಆಗಿರುವ ಉಳಿದ ಜನರಂತೆ ನಾನಲ್ಲ, ಈ ಸುಂಕದವನಂತೆಯೂ ಅಲ್ಲ, ಆದುದರಿಂದ ನಿನಗೆ ಸ್ತೋತ್ರಮಾಡುತ್ತೇನೆ.


ಫರಿಸಾಯರು ಹಣದಾಸೆಯುಳ್ಳವರಾಗಿದ್ದರಿಂದ ಈ ಮಾತುಗಳನ್ನೆಲ್ಲಾ ಕೇಳಿ ಆತನನ್ನು ಹಾಸ್ಯ ಮಾಡಿದರು.


ಆದರೆ ಫರಿಸಾಯರೂ ಧರ್ಮೋಪದೇಶಕರೂ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳದೆ ಹೋದದ್ದರಿಂದ ಅವರು ತಮ್ಮ ಕುರಿತಾದ ದೈವಸಂಕಲ್ಪವನ್ನು ನಿರಾಕರಿಸಿದರು.


ತರುವಾಯ ಪುನರುತ್ಥಾನವಿಲ್ಲವೆಂದು ಹೇಳುವ ಸದ್ದುಕಾಯರು ಆತನ ಬಳಿಗೆ ಬಂದು,


ಆ ಮೇಲೆ ಅವರು ಯೇಸುವನ್ನು ಮಾತುಗಳಲ್ಲಿ ಹಿಡಿಯಬೇಕೆಂದು ಫರಿಸಾಯರಲ್ಲಿಯೂ, ಹೆರೋದ್ಯರಲ್ಲಿಯೂ ಕೆಲವರನ್ನು ಆತನ ಬಳಿಗೆ ಕಳುಹಿಸಿದರು.


ಯೇಸು ಅವರಿಗೆ, “ಫರಿಸಾಯರ ಮತ್ತು ಹೆರೋದನ ಹುಳಿಹಿಟ್ಟಿನ ವಿಷಯದಲ್ಲಿ ನೀವು ಜಾಗರೂಕತೆಯಿಂದಿರಿ” ಎಂದು ಎಚ್ಚರಿಸಿದನು.


ಯೇಸು ಸದ್ದುಕಾಯರನ್ನು ಸದ್ದಿಲ್ಲದವರನ್ನಾಗಿ ಮಾಡಿದ್ದಾನೆಂದು ಫರಿಸಾಯರು ಕೇಳಿ ಅಲ್ಲಿಗೆ ಸೇರಿ ಬಂದರು.


ಅನಂತರ ಫರಿಸಾಯರು ಹೊರಟು ಯೇಸುವನ್ನು ಮಾತಿನಲ್ಲಿ ಹೇಗೆ ಸಿಕ್ಕಿಸೋಣ ಎಂದು ಕೂಡಿ ಆಲೋಚಿಸಿಕೊಂಡು


ಆದರೆ ಫರಿಸಾಯರು ಅದನ್ನು ಕೇಳಿ, “ಇವನು ದೆವ್ವಗಳ ಒಡೆಯನಾದ ಬೆಲ್ಜೆಬೂಲನ ಸಹಾಯದಿಂದ ದೆವ್ವಗಳನ್ನು ಬಿಡಿಸುತ್ತಾನೆಯೇ ಹೊರತು ಬೇರೆ ರೀತಿಯಿಂದ ಅಲ್ಲ” ಅಂದರು.


ನಿಮ್ಮ ನೀತಿಯು ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ಉತ್ತಮವಾಗಿರದಿದ್ದರೆ ನೀವು ಪರಲೋಕ ರಾಜ್ಯಕ್ಕೆ ಸೇರಲಾರಿರಿ ಎಂದು ನಿಮಗೆ ಹೇಳುತ್ತೇನೆ.


ಹಾವಿನಂತೆ ಕೇಡಿನ ಮೊಟ್ಟೆಗಳನ್ನು ಮರಿಮಾಡುತ್ತಾರೆ, ಜೇಡರ ಹುಳದಂತೆ ಬಲೆಯನ್ನು ನೇಯುತ್ತಾರೆ; ಆ ಮೊಟ್ಟೆಗಳನ್ನು ತಿನ್ನುವವನಿಗೆ ಮರಣ ಉಂಟಾಗುವುದು, ಅದನ್ನು ಒಡೆದುಬಿಡುವುದರಿಂದ ವಿಷದ ಮರಿ ಹೊರಡುವುದು.


ನಿನಗೂ, ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವುದು. ನೀನು ಅವನ ಹಿಮ್ಮಡಿಯನ್ನು ಕಚ್ಚುವಿ” ಎಂದು ಹೇಳಿದನು.


ದೇವರ ವಾಗ್ದಾನ ಮತ್ತು ಆಣೆ ಇವೆರಡೂ ನಿಶ್ಚಲವಾದ ಆಧಾರಗಳು ಏಕೆಂದರೆ ದೇವರು ಸುಳ್ಳಾಡುವವನಲ್ಲ. ಅದುದರಿಂದ ಆಶ್ರಯವನ್ನು ಹೊಂದಬೇಕೆಂದು ಓಡಿಬಂದು, ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಂಡವರಾದ ನಮಗೆ ಬಲವಾದ ಪ್ರೋತ್ಸಾಹ ಉಂಟಾಯಿತು.


ಆಗ ಶಿಷ್ಯರು ಬಂದು ಆತನನ್ನು, “ಫರಿಸಾಯರು ಈ ಮಾತನ್ನು ಕೇಳಿ ಬೇಸರಗೊಂಡರೆಂದು ನಿನಗೆ ಗೊತ್ತಾಯಿತೋ” ಎಂದು ಕೇಳಿದರು.


ಧರ್ಮೋಪದೇಶವನ್ನು ಕೈಕೊಳ್ಳದವರು ದುಷ್ಟರನ್ನು ಹೊಗಳುವರು, ಕೈಕೊಳ್ಳುವವರು ಅವರನ್ನು ಎದುರಿಸುವರು.


ತರುವಾಯ ಫರಿಸಾಯರು ಸದ್ದುಕಾಯರು ಬಂದು ಯೇಸುವನ್ನು ಪರೀಕ್ಷಿಸುವುದಕ್ಕಾಗಿ, ನೀನು ಪರಲೋಕದಿಂದ ಒಂದು ಸೂಚಕಕಾರ್ಯವನ್ನು ನಮಗೆ ತೋರಿಸಿಕೊಡಬೇಕೆಂದು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು