Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 4:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಬಳಿಕ ಸೈತಾನನು ಆತನನ್ನು ಬಹಳ ಎತ್ತರವಾದ ಬೆಟ್ಟಕ್ಕೆ ಕರೆದುಕೊಂಡು ಹೋಗಿ ಪ್ರಪಂಚದ ಎಲ್ಲಾ ರಾಜ್ಯಗಳನ್ನೂ ಅವುಗಳ ವೈಭವವನ್ನೂ ಆತನಿಗೆ ತೋರಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅನಂತರ ಪಿಶಾಚಿ ಯೇಸುವನ್ನು ಬಹಳ ಎತ್ತರವಾದ ಬೆಟ್ಟಕ್ಕೆ ಕೊಂಡೊಯ್ದು, ಪ್ರಪಂಚದ ಎಲ್ಲಾ ರಾಜ್ಯಗಳನ್ನೂ ಅವುಗಳ ವೈಭವವನ್ನೂ ತೋರಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಬಳಿಕ ಸೈತಾನನು ಆತನನ್ನು ಬಹಳ ಎತ್ತರವಾದ ಬೆಟ್ಟಕ್ಕೆ ಕರಕೊಂಡು ಹೋಗಿ ಪ್ರಪಂಚದ ಎಲ್ಲಾ ರಾಜ್ಯಗಳನ್ನೂ ಅವುಗಳ ವೈಭವವನ್ನೂ ಆತನಿಗೆ ತೋರಿಸಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಬಳಿಕ ಸೈತಾನನು ಯೇಸುವನ್ನು ಎತ್ತರವಾದ ಬೆಟ್ಟದ ತುದಿಗೆ ಕರೆದುಕೊಂಡು ಹೋಗಿ ಲೋಕದ ಎಲ್ಲಾ ರಾಜ್ಯಗಳನ್ನು ಮತ್ತು ಅವುಗಳ ವೈಭವವನ್ನು ತೋರಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅನಂತರ ಸೈತಾನನು ಯೇಸುವನ್ನು ಬಹಳ ಎತ್ತರವಾದ ಪರ್ವತಕ್ಕೆ ಕರೆದುಕೊಂಡು ಹೋಗಿ, ಲೋಕದ ಎಲ್ಲಾ ರಾಜ್ಯಗಳನ್ನೂ ಅವುಗಳ ಮಹಿಮೆಯನ್ನೂ ಅವರಿಗೆ ತೋರಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತನ್ನಾ ಸೈತಾನಾನ್ ಜೆಜುಕ್ ಎಕ್ ಲೈ ಮೊಟ್ಯಾ ಮಡ್ಡಿ ವರ್‍ತಿ ಘೆವ್ನ್ ಗೆಲ್ಯಾನ್, ಅನಿ ದುನಿಯಾತ್ಲ್ಯಾ ಸಗ್ಳ್ಯಾ ರಾಜಾಂಚೊ ವೈಭವ್ ದಾಕ್ವುಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 4:8
13 ತಿಳಿವುಗಳ ಹೋಲಿಕೆ  

ಒಬ್ಬ ಮನುಷ್ಯನು ಭೂಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಅವನ ಪ್ರಾಣವನ್ನು ಕಳೆದುಕೊಂಡರೆ ಅವನಿಗೆ ಪ್ರಯೋಜನವೇನು? ಅಥವಾ ಒಬ್ಬನು ತನ್ನ ಪ್ರಾಣಕ್ಕೆ ಬದಲಿಗೆ ಏನು ಕೊಟ್ಟಾನು?


ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ, “ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನ ಕ್ರಿಸ್ತನಿಗೂ ಬಂದಿದೆ, ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು” ಎಂಬ ಮಹಾಘೋಷಣೆಯಾಯಿತು.


ಏಕೆಂದರೆ ಪವಿತ್ರಗ್ರಂಥದಲ್ಲಿ ಬರೆದಿರುವಂತೆ: “ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಅದರ ಮಹಿಮೆಯೆಲ್ಲಾ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿ ಹೋಗುವುದು. ಅದರ ಹೂವು ಉದುರಿ ಹೋಗುವುದು.


“ನನ್ನ ಮಹಿಮೆಯು ಪ್ರಸಿದ್ಧಿಗೆ ಬರುವಂತೆ ನನ್ನ ಸಾಮರ್ಥ್ಯ ಬಲದಿಂದ ರಾಜನಿವಾಸಕ್ಕಾಗಿ ನಾನು ಕಟ್ಟಿಸಿಕೊಂಡಿರುವುದು ಇಗೋ, ಮಹಾ ಪಟ್ಟಣವಾದ ಈ ಬಾಬೆಲ್” ಎಂದು ಕೊಚ್ಚಿಕೊಂಡನು.


ಅವರ ಮುಂದೆ ತನ್ನ ಘನೈಶ್ವರ್ಯಗಳನ್ನೂ, ಪುತ್ರಲಾಭಾತಿಶಯವನ್ನೂ, ಅರಸನು ತನ್ನನ್ನು ಸನ್ಮಾನಿಸಿ ಎಲ್ಲಾ ಸರದಾರರಿಗಿಂತ, ರಾಜಸೇವಕರಿಗಿಂತ ತನಗೇ ಶ್ರೇಷ್ಠಸ್ಥಾನವನ್ನು ಅನುಗ್ರಹಿಸಿದ್ದನ್ನೂ ವರ್ಣಿಸಿ,


ಅವನು ಅನೇಕ ದಿನ ಅಂದರೆ, ನೂರ ಎಂಭತ್ತು ದಿನಗಳವರೆಗೂ ಅವರಿಗೆ ತನ್ನ ಘನವಾದ ರಾಜ್ಯದ ಐಶ್ವರ್ಯವನ್ನೂ ಮತ್ತು ಮಹಾಮಹಿಮೆಯ ವೈಭವದ ಪ್ರತಾಪಗಳನ್ನೂ ಪ್ರದರ್ಶಿಸಿದನು.


ಆಗ ಸೈತಾನನು ಯೇಸುವನ್ನು ಪರಿಶುದ್ಧ ಪಟ್ಟಣಕ್ಕೆ ಕರೆದುಕೊಂಡು ಹೋಗಿ ದೇವಾಲಯದ ಗೋಪುರದ ಮೇಲೆ ನಿಲ್ಲಿಸಿ


ಬಿಳಾಮನು ಬಾಲಾಕನಿಗೆ, “ನೀನು ಸರ್ವಾಂಗಹೋಮದ ಸ್ಥಳದಲ್ಲೇ ಇರು. ನಾನು ಸ್ವಲ್ಪ ದೂರ ಹೋಗಿ ಬರುತ್ತೇನೆ. ಯೆಹೋವನು ನನಗೆ ಎದುರಾಗಿ ಬಂದು, ಆತನು ನನಗೆ ಏನನ್ನು ಸೂಚಿಸುವನೋ ಅದನ್ನು ನಿನಗೆ ತಿಳಿಸುವೆನು” ಎಂದು ಹೇಳಿ ಮರವಿಲ್ಲದ ಒಂದು ಎತ್ತರವಾದ ಸ್ಥಳಕ್ಕೆ ಹೋದನು.


ಏಕೆಂದರೆ, ತಂದೆಯು ಮಗನನ್ನು ಪ್ರೀತಿಸುತ್ತಾನೆ, ತಾನು ಮಾಡುವುದನ್ನೆಲ್ಲಾ ಅವನಿಗೆ ತೋರಿಸುತ್ತಾನೆ. ಇದಲ್ಲದೆ ಇವುಗಳಿಗಿಂತ ಮಹತ್ತಾದ ಕೆಲಸಗಳನ್ನು ಆತನಿಗೆ ತೋರಿಸುವನು. ಅವುಗಳನ್ನು ನೋಡಿ ನಿಮಗೆ ಆಶ್ಚರ್ಯವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು