Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 5:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ನೀನು ಒಂದು ಕಾಸನ್ನಾದರೂ ಉಳಿಸಿಕೊಳ್ಳದೆ ಎಲ್ಲವನ್ನು ಸಲ್ಲಿಸುವ ತನಕ ಅಲ್ಲಿಂದ ಬರುವುದಕ್ಕಾಗುವುದೇ ಇಲ್ಲ ಎಂದು ನಿನಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅಲ್ಲಿಂದ ನೀನು ಹೊರಗೆ ಬರಬೇಕಾದರೆ ಬಿಡಿಕಾಸನ್ನೂ ಬಿಡದೆ ಎಲ್ಲವನ್ನೂ ತೆರಬೇಕಾಗುವುದು. ಇದನ್ನು ನೆನಪಿನಲ್ಲಿಡು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ನೀನು ಒಂದು ಕಾಸನ್ನಾದರೂ ನಿಲ್ಲಿಸಿಕೊಳ್ಳದೆ ಎಲ್ಲಾ ಸಲ್ಲಿಸುವ ತನಕ ಅಲ್ಲಿಂದ ಬರುವದೇ ಇಲ್ಲ ಎಂದು ನಿನಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆಗ ನೀವು ನಿಮ್ಮ ಸಾಲವನ್ನೆಲ್ಲ ತೀರಿಸುವ ತನಕ ಸೆರೆಯಿಂದ ಬಿಡುಗಡೆ ಆಗುವುದಿಲ್ಲವೆಂದು ನಾನು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಇಲ್ಲದಿದ್ದರೆ, ನೀನು ಕೊನೆಯ ಪೈಸೆಯನ್ನಾದರೂ ಸಲ್ಲಿಸುವವರೆಗೂ ಅಲ್ಲಿಂದ ಹೊರಗೆ ಬರುವುದೇ ಇಲ್ಲವೆಂದು ನಿನಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಮಿಯಾ ತುಮ್ಕಾ ಖರೆಚ್ ಸಾಂಗ್ತಾ, ತುಜ್ಯಾ ದಂಡಾಚೊ ಎಕ್-ಎಕ್ ಪೈಸೊ ಸೈತ್ ಭರುನ್ ಹೊಯ್ ಪತರ್ ತಿಯಾ ಥೈಚ್ ರ್‍ಹಾತೆಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 5:26
10 ತಿಳಿವುಗಳ ಹೋಲಿಕೆ  

ಒಡೆಯನು ಸಿಟ್ಟುಗೊಂಡು ತನಗೆ ಕೊಡಬೇಕಾದ ಸಾಲವನ್ನು ತೀರಿಸುವ ತನಕ ಅವನನ್ನು ಪೀಡಿಸುವವರ ಕೈಗೆ ಒಪ್ಪಿಸಿದನು.


ನೀನು ಕೊನೆಯ ಕಾಸನ್ನು ಕೊಟ್ಟು ತೀರಿಸುವವರೆಗೂ ಅಲ್ಲಿಂದ ಹೊರ ಬರುವುದಕ್ಕೆ ಸಾಧ್ಯವಿಲ್ಲವೆಂದು ನಾನು ನಿನಗೆ ಒತ್ತಿ ಹೇಳುತ್ತೇನೆ” ಅಂದನು.


ಏಕೆಂದರೆ ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವುದಿಲ್ಲ. ಕರುಣೆಯು ನ್ಯಾಯತೀರ್ಪಿನ ಮೇಲೆ ಜಯ ಹೊಂದುತ್ತದೆ.


ಅವರು ಕರ್ತನ ಸಮ್ಮುಖಕ್ಕೂ ಆತನ ಪರಾಕ್ರಮದ ವೈಭವಕ್ಕೂ ದೂರವಾಗಿ ನಿತ್ಯನಾಶನವೆಂಬ ದಂಡನೆಯನ್ನು ಅನುಭವಿಸುವರು.


ಇದು ಮಾತ್ರವಲ್ಲದೆ ನಮಗೂ ನಿಮಗೂ ನಡುವೆ ದೊಡ್ಡದೊಂದು ಆಳವಾದ ಕಂದಕ ಇದೆ. ಆದಕಾರಣ ಈ ಕಡೆಯಿಂದ ನಿಮ್ಮ ಬಳಿಗೆ ಹೋಗಬೇಕೆಂದಿರುವವರು ಹೋಗಲಾರರು. ಮತ್ತು ಆ ಕಡೆಯಿಂದ ನಮ್ಮ ಬಳಿಗೆ ಯಾರಿಂದಲೂ ಬರಲಿಕ್ಕಾಗದು’ ಅಂದನು.


ಮತ್ತು ಅನೀತಿವಂತರಾದ ಇವರು ನಿತ್ಯದಂಡನೆಗೆ ಹೋಗುವರು ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು” ಎಂದು ಹೇಳಿದನು.


ಆ ಮೇಲೆ ಆತನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.


ಕಾಸಿಗೆ ಎರಡು ಗುಬ್ಬಿಗಳನ್ನು ಮಾರುವುದುಂಟಲ್ಲಾ; ಆದರೂ ನಿಮ್ಮ ತಂದೆಯ ಚಿತ್ತವಿಲ್ಲದೆ ಅವುಗಳಲ್ಲಿ ಒಂದಾದರೂ ನೆಲಕ್ಕೆ ಬೀಳದು.


ಒಬ್ಬ ಬಡ ವಿಧವೆಯು ಬಂದು, ಎರಡು ಕಾಸು ಬೆಲೆಯುಳ್ಳ ಒಂದು ದುಗ್ಗಾಣಿ ಹಾಕಿದಳು.


ನೀನು ಪ್ರತಿವಾದಿಯ ಸಂಗಡ ನ್ಯಾಯಾಧಿಪತಿಯ ಬಳಿಗೆ ಹೋಗುತ್ತಿರುವಾಗ ದಾರಿಯಲ್ಲಿಯೇ ಜಗಳವನ್ನು ಪರಿಹರಿಸಿಕೊಳ್ಳಲು ಪ್ರಯತ್ನಿಸು. ಇಲ್ಲದಿದ್ದರೆ ಅವನು ನಿನ್ನನ್ನು ನ್ಯಾಯಾಧಿಪತಿಯ ಬಳಿಗೆ ಎಳಕೊಂಡು ಹೋದಾನು. ನ್ಯಾಯಾಧಿಪತಿಯು ನಿನ್ನನ್ನು ಸೆರೆ ಯಜಮಾನನ ವಶಕ್ಕೆ ಒಪ್ಪಿಸಾನು. ಸೆರೆಯಜಮಾನನು ನಿನ್ನನ್ನು ಸೆರೆಮನೆಯಲ್ಲಿ ಹಾಕಿಯಾನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು