Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 5:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 “ಮತ್ತು, ನೀನು ಸುಳ್ಳಾಣೆಯಿಡಬಾರದು; ‘ನೀನು ಇಟ್ಟುಕೊಂಡ ಆಣೆಗಳನ್ನು ಕರ್ತನಿಗೆ ಸಲ್ಲಿಸಬೇಕೆಂದು ಹಿರಿಯರ ಕಾಲದಲ್ಲಿ’ ಹೇಳಿದೆ ಎಂದು ಕೇಳಿದ್ದೀರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 “ಸುಳ್ಳಾಣೆಯಿಡಬೇಡ; ದೇವರಿಗೆ ಆಣೆಯಿಟ್ಟು ವಾಗ್ದಾನಮಾಡಿದಂತೆ ನಡೆದುಕೊಳ್ಳಲೇಬೇಕು’ ಎಂದು ಪೂರ್ವಿಕರಿಗೆ ಹೇಳಿದ್ದು ನಿಮಗೆ ತಿಳಿದೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಮತ್ತು - ನೀನು ಸುಳ್ಳಾಣೆಯಿಡಬಾರದು; ನೀನು ಇಟ್ಟುಕೊಂಡ ಆಣೆಗಳನ್ನು ಕರ್ತನಿಗೆ ಸಲ್ಲಿಸಬೇಕೆಂದು ಹಿರಿಯರಿಗೆ ಹೇಳಿಯದೆ ಎಂದು ಕೇಳಿದ್ದೀರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 “‘ನೀವಿಟ್ಟ ಆಣೆಯನ್ನು ಮೀರಬೇಡಿರಿ. ಪ್ರಭುವಿಗೆ ನೀವಿಟ್ಟ ಆಣೆಗಳನ್ನು ಕೈಗೊಳ್ಳಲೇಬೇಕು’ ಎಂದು ನಮ್ಮ ಪೂರ್ವಿಕರಿಗೆ ಹೇಳಿದ್ದನ್ನು ನೀವು ಕೇಳಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 “ ‘ಇದಲ್ಲದೆ ನೀನು ಆಣೆಯಿಟ್ಟರೆ ಅದನ್ನು ಮೀರಬಾರದು, ಕರ್ತನಿಗೆ ಮಾಡಿದ ಆಣೆಗಳನ್ನು ನೆರವೇರಿಸಲೇಬೇಕು,’ ಎಂದು ನಿಮ್ಮ ಪೂರ್ವಿಕರಿಗೆ ಹೇಳಿರುವುದನ್ನು ಕೇಳಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 “ದಿಲ್ಲಿ ಗೊಸ್ಟ್ ಮೊಡುನಕೊ ಅನಿ ಆನ್ ಘಾಲುನ್ ಸರ್ವೆಸ್ವರಾಕ್ ತಿಯಾ ಕಾಯ್ಬಿ ಸಾಂಗ್ಲೆ ಜಾಲ್ಯಾರ್ ತೆ ಪುರಾ ಕರ್.” ಮನುನ್ ಲೊಕಾನಿ ಸಾಂಗಲ್ಲೆ ತುಮಿ ಆಯಿಕ್ಲ್ಯಾಶಿ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 5:33
15 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವನಿಗೆ ಹರಕೆಮಾಡಿದ ಮೇಲೆ ಅದನ್ನು ತಡಮಾಡದೆ ತೀರಿಸಬೇಕು; ಆತನು ತಪ್ಪದೆ ಅದನ್ನು ವಿಚಾರಿಸುವನು; ತೀರಿಸದೆ ಹೋಗುವುದು ಪಾಪ.


“‘ನನ್ನ ಹೆಸರಿನ ಮೇಲೆ ಸುಳ್ಳಾಣೆಯಿಟ್ಟು ನಿಮ್ಮ ದೇವರ ನಾಮವನ್ನು ಅಪಕೀರ್ತಿಗೆ ಒಳಪಡಿಸಬಾರದು. ನಾನು ಯೆಹೋವನು.


ಆದರೆ ಬಾಯಿಂದ ನುಡಿದದ್ದನ್ನು ನೆರವೇರಿಸಲೇಬೇಕು. ನಿಮ್ಮ ದೇವರಾದ ಯೆಹೋವನಿಗೆ ಬಾಯಿಂದ ಹರಕೆಮಾಡಿಕೊಂಡಂತೆಯೇ ಅದನ್ನು ಒಪ್ಪಿಸಿಬಿಡಬೇಕು.


ನಿಮ್ಮ ದೇವನಾದ ಯೆಹೋವನಿಗೆ ಹರಕೆಮಾಡಿ ಸಲ್ಲಿಸಿರಿ; ಅವನ ಸುತ್ತಲಿರುವ ಜನರು ಮಹಾಮಹಿಮನಿಗೆ ಕಾಣಿಕೆಗಳನ್ನು ಸಮರ್ಪಿಸಲಿ.


“ನಿನ್ನ ದೇವರಾದ ಯೆಹೋವನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಉಪಯೋಗಿಸಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯ ಕಾರ್ಯಕ್ಕಾಗಿ ಉಪಯೋಗಿಸುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.


ನಿನ್ನ ದೇವರಾದ ಯೆಹೋವನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಎತ್ತಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಎತ್ತುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.


ಸ್ತುತಿಯಜ್ಞವನ್ನೇ ದೇವರಿಗೆ ಸಮರ್ಪಿಸಿರಿ; ವಾಗ್ದಾನ ಮಾಡಿದ ಹರಕೆಗಳನ್ನು ಪರಾತ್ಪರನಾದ ದೇವರಿಗೆ ಸಲ್ಲಿಸಿರಿ.


ನೋಡಿರಿ ಆ ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಪರ್ವತಗಳ ಮೇಲೆ ಸಾರುವ ದೂತನ ಪಾದಗಳು ಮೇಲೆ ತ್ವರೆಪಡುತ್ತವೆ! ಯೆಹೂದವೇ, ನಿನ್ನ ಹಬ್ಬಗಳನ್ನು ಆಚರಿಸಿಕೋ, ನಿನ್ನ ಹರಕೆಗಳನ್ನು ಸಲ್ಲಿಸು; ಆ ದುಷ್ಟರು ಇನ್ನು ಮುಂದೆ ನಿನ್ನನ್ನು ಮುತ್ತಿಗೆ ಹಾಕಿ ಸೋಲಿಸಲು ಸಾಧ್ಯವಿಲ್ಲ, ಏಕೆಂದರೆ ಅವನು ಸಂಪೂರ್ಣ ನಾಶವಾಗಿದ್ದಾನೆ.


“‘ವ್ಯಭಿಚಾರ ಮಾಡಬಾರದೆಂದು’ ಹೇಳಿಯದೆ ಎಂಬುದಾಗಿ ನೀವು ಕೇಳಿದ್ದೀರಿ.


ನಿಮ್ಮ ದೇವರಾದ ಯೆಹೋವನಲ್ಲಿಯೇ ಭಯಭಕ್ತಿಯುಳ್ಳವರಾಗಿರಬೇಕು, ಆತನನ್ನೇ ಸೇವಿಸಬೇಕು ಮತ್ತು ಆತನ ಹೆಸರು ಹೇಳಿ ಪ್ರಮಾಣಮಾಡಬೇಕು.


“‘ನರಹತ್ಯ ಮಾಡಬಾರದು; ನರಹತ್ಯ ಮಾಡುವವನು ನ್ಯಾಯತೀರ್ಪಿಗೆ ಗುರಿಯಾಗುವನೆಂದು’ ಹಿರಿಯರಿಗೆ ಹೇಳಿಯದೆ ಎಂದು ಕೇಳಿದ್ದೀರಿ.


ಜಾರರು, ಸಲಿಂಗಕಾಮಿಗಳು, ನರಚೋರರು, ಸುಳ್ಳುಗಾರರು, ಅಸತ್ಯವಾದಿಗಳು, ಸ್ವಸ್ಥಬೋಧನೆಗೆ ವಿರುದ್ಧವಾಗಿರುವಂಥವುಗಳನ್ನು ಮಾಡುವವರು, ಈ ಮೊದಲಾದ ಅನೀತಿವಂತರಿಗಾಗಿ ನೇಮಕವಾಗಿದೆ ಎಂದು ನಮಗೆ ತಿಳಿದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು