Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 5:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ವಿನಯವುಳ್ಳವರು ಧನ್ಯರು; ಅವರು ಭೂಮಿಗೆ ಬಾಧ್ಯರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ವಿನಯಶೀಲರು ಭಾಗ್ಯವಂತರು; ದೇವರ ವಾಗ್ದತ್ತ ನಾಡಿಗೆ ಬಾಧ್ಯಸ್ಥರು ಅವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಶಾಂತರು ಧನ್ಯರು; ಅವರು ಭೂವಿುಗೆ ಬಾಧ್ಯರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ದೀನರು ಧನ್ಯರು. ದೇವರು ವಾಗ್ದಾನ ಮಾಡಿದ ಭೂಮಿಯನ್ನು ಅವರು ಹೊಂದಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಸಾತ್ವಿಕರು ಧನ್ಯರು, ಅವರು ಭೂಮಿಗೆ ಬಾಧ್ಯರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಜೆ ಕೊನ್ ಖಾಲ್ತಿ ಹೊವ್ನ್ ಹಾತ್ ತೆನಿ ಕವ್ಡೆ ಸುಖಿ; ದೆವಾನ್ ತೆಂಕಾ ದಿತಾ ಮನುನ್ ಗೊಸ್ಟ್ ದಿಲ್ಲೆ ತೆನಿ ಘೆತ್ಯಾತ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 5:5
30 ತಿಳಿವುಗಳ ಹೋಲಿಕೆ  

ಆದರೆ ದೀನರು ದೇಶವನ್ನು ಅನುಭವಿಸುವರು; ಅವರು ಮಹಾಸೌಖ್ಯದಿಂದ ಆನಂದಿಸುವರು.


ದೀನರು ಯೆಹೋವನಲ್ಲಿ ಹೆಚ್ಚಾಗಿ ಆನಂದಿಸುವರು, ಬಡವರು ಇಸ್ರಾಯೇಲರ ಸದಮಲಸ್ವಾಮಿಯಲ್ಲಿ ಉಲ್ಲಾಸಿಸುವರು.


ನಿಮ್ಮಲ್ಲಿ ಜ್ಞಾನಿಯೂ, ಬುದ್ಧಿವಂತನೂ ಯಾರು? ಅಂಥವನು ಒಳ್ಳೆಯ ನಡತೆಯಿಂದ, ಜ್ಞಾನದ ಲಕ್ಷಣವಾದ ವಿನಯಶೀಲತೆಯ ಕ್ರಿಯೆಗಳಿಂದ ಅದನ್ನು ತೋರಿಸಲಿ.


ಯೆಹೋವನು ತನ್ನ ಪ್ರಜೆಗೆ ಪ್ರಸನ್ನನಾದನು; ದೀನರನ್ನು ರಕ್ಷಣೆಯಿಂದ ಭೂಷಿಸುತ್ತಾನೆ.


ಸಾಧುತ್ವ, ಶಮೆದಮೆ ಇಂಥವುಗಳೇ. ಇವುಗಳಿಗೆ ವಿರುದ್ಧವಾಗಿ ಯಾವ ಧರ್ಮಶಾಸ್ತ್ರವೂ ಇಲ್ಲ.


ಆದಕಾರಣ ಎಲ್ಲಾ ನೀಚತನವನ್ನೂ, ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಮನಸ್ಸಿನೊಳಗೆ ಬೇರೂರಿರುವ ದೇವರ ವಾಕ್ಯವನ್ನು ನಮ್ರತೆಯಿಂದ ಸ್ವೀಕರಿಸಿರಿ. ಅದು ನಿಮ್ಮ ಆತ್ಮಗಳನ್ನು ರಕ್ಷಿಸುವುದಕ್ಕೆ ಸಾಮರ್ಥ್ಯವುಳ್ಳದ್ದಾಗಿರುತ್ತದೆ.


ಆತನು ದೀನರನ್ನು ತನ್ನ ವಿಧಿಗನುಗುಣವಾಗಿ ನಡೆಸುವನು; ಅವರಿಗೆ ತನ್ನ ಮಾರ್ಗವನ್ನು ತೋರಿಸುವನು.


ಮೋಶೆಯು ಭೂಮಿಯ ಮೇಲಿರುವ ಎಲ್ಲಾ ಮನುಷ್ಯರಿಗಿಂತಲೂ ಬಹು ಸಾತ್ವಿಕನು.


ಹೀಗಿರಲಾಗಿ ದೇವರಿಂದ ಆರಿಸಿಕೊಂಡವರಾಗಿ, ಪರಿಶುದ್ಧರೂ ಹಾಗೂ ಪ್ರಿಯರೂ ಆಗಿರುವುದರಿಂದ ಕನಿಕರ, ದಯೆ, ದೀನತೆ, ಸಾತ್ವಿಕತ್ವ ಮತ್ತು ಸಹನೆ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.


ನಾನು ಸಾತ್ವಿಕನೂ ದೀನಹೃದಯನೂ ಆಗಿರುವುದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ, ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು.


ನೀವು ಪೂರ್ಣ ವಿನಯ, ಸಾತ್ವಿಕತ್ವಗಳಿಂದಲೂ ದೀರ್ಘಶಾಂತಿಯಿಂದಲೂ ಕೂಡಿದವರಾಗಿ, ಪ್ರೀತಿಯಿಂದ ಒಬ್ಬರನ್ನೊಬ್ಬರು ಸಹಿಸಿಕೊಳ್ಳಿರಿ.


ಆದರೆ ಕ್ರಿಸ್ತನನ್ನು ಕರ್ತನೆಂದು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೆನೆಂದು ಕೇಳುವವರೆಲ್ಲರಿಗೂ ಉತ್ತರ ಹೇಳುವುದಕ್ಕೆ ಯಾವಾಗಲೂ ಸಿದ್ಧರಾಗಿರಿ. ಆದರೆ ಅದನ್ನು ಸಾತ್ವಿಕತ್ವದಿಂದಲೂ ಮತ್ತು ಗೌರವದಿಂದಲೂ ಹೇಳಿರಿ.


ಯೆಹೋವನ ನಿಯಮವನ್ನು ಕೈಕೊಂಡು ನಡೆಯುವ ಲೋಕದ ದೀನರೇ, ನೀವೆಲ್ಲರೂ ಯೆಹೋವನ ನೀತಿಯನ್ನು ಅನುಸರಿಸಿರಿ, ಧರ್ಮವನ್ನು ಅಭ್ಯಾಸಿಸಿರಿ, ನಮ್ರತೆಯನ್ನು ಹೊಂದಿಕೊಳ್ಳಿರಿ; ಬಹುಶಃ ಯೆಹೋವನ ಸಿಟ್ಟಿನ ದಿನದಲ್ಲಿ ನೀವು ಮರೆಯಾಗುವಿರಿ.


ಯಾರನ್ನೂ ದೂಷಿಸದೆ, ಕುತರ್ಕ ಮಾಡದೆ ಎಲ್ಲಾ ಜನರಿಗೂ ಪೂರ್ಣಸದ್ಗುಣವನ್ನು ತೋರಿಸುತ್ತಾ ಸಾತ್ವಿಕರಾಗಿರಬೇಕೆಂತಲೂ, ಅವರಿಗೆ ನೆನಪಿಸು.


ಯೆಹೋವನ ಆಶೀರ್ವಾದವು ಯಾರಿಗಿರುವುದೋ ಅವರು ದೇಶವನ್ನು ಅನುಭವಿಸುವರು; ಆತನ ಶಾಪವು ಯಾರಿಗಿರುವುದೋ ಅವರು ತೆಗೆದುಹಾಕಲ್ಪಡುವರು.


ಕೆಡುಕರು ತೆಗೆದುಹಾಕಲ್ಪಡುವರು; ಯೆಹೋವನನ್ನು ನಿರೀಕ್ಷಿಸುವವರೇ ದೇಶವನ್ನು ಅನುಭವಿಸುವರು.


ಆದರೆ ದೇವರ ದೃಷ್ಟಿಯಲ್ಲಿ ಅಮೂಲ್ಯವಾದದ್ದೂ ಮತ್ತು ಶಾಶ್ವತವಾದದ್ದೂ ಆಗಿರುವ ಸಾತ್ವಿಕತೆ ಮತ್ತು ಶಾಂತಮನಸ್ಸು ಎಂಬ ಆಂತರ್ಯದ ಭೂಷಣವೇ ನಿಮ್ಮ ಅಲಂಕಾರವಾಗಿರಲಿ.


ಆದರೆ ಬಡವರಿಗೋಸ್ಕರ ನ್ಯಾಯವಾಗಿ ತೀರ್ಪುಮಾಡುವನು. ಲೋಕದ ದೀನರಿಗಾಗಿ ಧರ್ಮವನ್ನು ನಿರ್ಣಯಿಸುವನು. ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ದಂಡಿಸುವನು. ದುಷ್ಟನನ್ನು ತನ್ನ ತುಟಿಗಳ ಉಸಿರಿನಿಂದ ಕೊಲ್ಲುವನು.


ಅವರು ಸುಖದಿಂದಲೇ ಇರುವರು; ಅವರ ಸಂತತಿಯವರು ದೇಶವನ್ನು ಅನುಭವಿಸುವರು.


ಎಲೈ, ದೇವರ ಮನುಷ್ಯನೇ, ನೀನಾದರೋ ಇವುಗಳಿಗೆ ದೂರವಾಗಿರು. ನೀತಿ, ಭಕ್ತಿ, ನಂಬಿಕೆ, ಪ್ರೀತಿ, ಸ್ಥಿರಚಿತ್ತ ಹಾಗೂ ಸಾತ್ವಿಕತ್ವ ಇವುಗಳನ್ನು ಸಂಪಾದಿಸುವುದಕ್ಕೆ ಪ್ರಯಾಸಪಡು.


ದೀನರು ಇದನ್ನು ನೋಡಿ ಹರ್ಷಿಸುವರು. ದೇವದರ್ಶನವನ್ನು ಅಪೇಕ್ಷಿಸುವವರೇ, ನಿಮ್ಮ ಆತ್ಮವು ಉಜ್ಜೀವಿಸಲಿ.


ನೀತಿವಂತರೋ ದೇಶವನ್ನು ಅನುಭವಿಸುವವರಾಗಿ, ಅದರಲ್ಲಿ ಶಾಶ್ವತವಾಗಿ ವಾಸಿಸುವರು.


ಯೆಹೋವನನ್ನು ನಿರೀಕ್ಷಿಸುವವನಾಗಿ ಆತನ ಮಾರ್ಗವನ್ನೇ ಅನುಸರಿಸು; ಆಗ ಆತನು ನಿನ್ನನ್ನು ಮುಂದಕ್ಕೆ ತಂದು ದೇಶವನ್ನು ಅನುಭವಿಸುವಂತೆ ಮಾಡುವನು; ದುಷ್ಟರು ತೆಗೆದುಹಾಕಲ್ಪಡುವುದನ್ನು ನೀನು ನೋಡುವಿ.


ಎದುರಿಸುವವರನ್ನು ಸೌಮ್ಯತೆಯಿಂದ ತಿದ್ದುವವನೂ ಆಗಿರಬೇಕು. ಬಹುಶಃ ದೇವರು ಆ ಎದುರಿಸುವವರ ಮನಸ್ಸನ್ನು ತನ್ನ ಕಡೆಗೆ ತಿರುಗಿಸಿ ಸತ್ಯದ ಜ್ಞಾನವನ್ನು ಅವರಿಗೆ ಕೊಟ್ಟಾನು.


ನೀನು ಲೋಕಕ್ಕೆ ಬಾಧ್ಯನಾಗುವಿ ಎಂಬ ವಾಗ್ದಾನವು ಅಬ್ರಹಾಮನಿಗಾಗಲಿ ಅವನ ಸಂತತಿಯವರಿಗಾಗಲಿ ಧರ್ಮಶಾಸ್ತ್ರದಿಂದ ಆದದ್ದಲ್ಲ; ನಂಬಿಕೆಯಿಂದ ಬರುವ ನೀತಿಯಾಗಿದೆ.


ಯೆಹೋವನು ದೀನರಿಗೆ ಆಧಾರವಾಗಿದ್ದಾನೆ, ದುಷ್ಟರನ್ನು ನೆಲಕ್ಕೆ ಹಾಕಿ ತುಳಿದುಬಿಡುತ್ತಾನೆ.


“ಚೀಯೋನ್ ಪುತ್ರಿಯೇ, ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಿದ್ದಾನೆ; ಆತನು ಸಾತ್ವಿಕ ಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು ಕತ್ತೆಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆಂದು” ಹೇಳಿರಿ ಎಂಬುದು.


ನಿನ್ನ ಜನರೆಲ್ಲಾ ಸದ್ಧರ್ಮಿಗಳಾಗಿರುವರು; ನನ್ನ ಪ್ರಭಾವಕ್ಕೋಸ್ಕರ ನಾನು ನೆಟ್ಟ ಸಸಿಯಾಗಿಯೂ, ನನ್ನ ಕೈ ಸೃಷ್ಟಿಸಿದ ಪ್ರಜೆಯಾಗಿಯೂ ದೇಶವನ್ನು ಸದಾ ಅನುಭವಿಸುವರು.


ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವುದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವುದಕ್ಕೂ, ಸೆರೆಯವರಿಗೆ ಬಿಡುಗಡೆಯಾಗುವುದನ್ನು, ಬಂದಿಗಳಿಗೆ ಕದ ತೆರೆಯುವುದನ್ನು ಪ್ರಸಿದ್ಧಿಪಡಿಸುವುದಕ್ಕೂ,


ದೀನರು ಉಂಡು ತೃಪ್ತರಾಗುವರು; ಯೆಹೋವನ ಭಕ್ತರೆಲ್ಲರೂ ಆತನನ್ನು ಕೊಂಡಾಡುವರು. ಅವರ ಅಂತರಾತ್ಮವು ಯಾವಾಗಲು ಚೈತನ್ಯವುಳ್ಳದ್ದಾಗಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು