Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 5:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಕರುಣೆಯುಳ್ಳವರು ಧನ್ಯರು; ಅವರು ಕರುಣೆ ಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ದಯಾವಂತರು ಭಾಗ್ಯವಂತರು; ದೇವರ ದಯೆ ಅವರಿಗೆ ದೊರಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಕರುಣೆಯುಳ್ಳವರು ಧನ್ಯರು; ಅವರು ಕರುಣೆಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಕರುಣೆ ತೋರುವವರು ಧನ್ಯರು. ಅವರು ಕರುಣೆ ಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಕರುಣೆಯುಳ್ಳವರು ಧನ್ಯರು, ಅವರು ಕರುಣೆ ಪಡೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ದುಸ್ರ್ಯಾಂಚ್ಯಾ ವರ್‍ತಿ ದಯಾ ದಾಕ್ವುತಲಿ ಲೊಕಾ ಕವ್ಡಿ ಸುಖಿ; ದೆವ್ ತೆಂಚಿ ದಯಾ ಕರ್‍ತಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 5:7
37 ತಿಳಿವುಗಳ ಹೋಲಿಕೆ  

ಒಬ್ಬರಿಗೊಬ್ಬರು ದಯೆಯುಳ್ಳವರಾಗಿಯೂ, ಕರುಣೆಯುಳ್ಳವರಾಗಿಯೂ ಇರಿ. ದೇವರು ನಿಮ್ಮನ್ನು ಕ್ರಿಸ್ತನಲ್ಲಿ ಕ್ಷಮಿಸಿದಂತೆ ನೀವು ಒಬ್ಬರನ್ನೊಬ್ಬರು ಕ್ಷಮಿಸಿರಿ.


ನೀನು ಕೃಪೆಯುಳ್ಳವನಿಗೆ ಕೃಪಾವಂತನೂ, ದೋಷವಿಲ್ಲದವರಿಗೆ ನಿರ್ದೋಷಿಯೂ.


ನೀನು ಕೃಪೆಯುಳ್ಳವನಿಗೆ ಕೃಪಾವಂತನೂ, ದೋಷವಿಲ್ಲದವನಿಗೆ ನಿರ್ದೋಷಿಯೂ,


ಏಕೆಂದರೆ ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವುದಿಲ್ಲ. ಕರುಣೆಯು ನ್ಯಾಯತೀರ್ಪಿನ ಮೇಲೆ ಜಯ ಹೊಂದುತ್ತದೆ.


ಆದರೆ ಮೇಲಿಂದ ಬರುವ ಜ್ಞಾನವು ಮೊದಲು ಪರಿಶುದ್ಧವಾದದ್ದು ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸಂತೋಷವಾಗಿ ಒಪ್ಪಿಕೊಳ್ಳುವಂಥದ್ದು, ಕರುಣೆ ಮತ್ತು ಒಳ್ಳೆ ಫಲಗಳಿಂದ ತುಂಬಿರುವಂಥದ್ದು, ಪಕ್ಷಪಾತವಿಲ್ಲದ್ದು, ಪ್ರಾಮಾಣಿಕವಾದ್ದದು ಆಗಿದೆ.


ಹೀಗಿರಲಾಗಿ ದೇವರಿಂದ ಆರಿಸಿಕೊಂಡವರಾಗಿ, ಪರಿಶುದ್ಧರೂ ಹಾಗೂ ಪ್ರಿಯರೂ ಆಗಿರುವುದರಿಂದ ಕನಿಕರ, ದಯೆ, ದೀನತೆ, ಸಾತ್ವಿಕತ್ವ ಮತ್ತು ಸಹನೆ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.


ನೀವಾದರೋ ನಿಮ್ಮ ವೈರಿಗಳನ್ನು ಪ್ರೀತಿಸಿ ಅವರಿಗೆ ಉಪಕಾರಮಾಡಿರಿ. ಏನನ್ನೂ ನಿರೀಕ್ಷಿಸದೆ ಸಾಲಕೊಡಿರಿ. ಹೀಗೇ ಮಾಡಿದರೆ, ನಿಮಗೆ ಬಹಳ ಫಲಸಿಕ್ಕುವುದು ಮತ್ತು ನೀವು ಪರಾತ್ಪರನಾದ ದೇವರ ಮಕ್ಕಳಾಗುವಿರಿ. ದೇವರು ಉಪಕಾರನೆನಸದವರಿಗೂ ಕೆಟ್ಟವರಿಗೂ ಉಪಕಾರಿಯಾಗಿದ್ದಾನೆ.


ಮನುಷ್ಯನೇ, ಒಳ್ಳೆಯದು ಇಂಥದ್ದೇ ಎಂದು ಯೆಹೋವನು ನಿನಗೆ ತೋರಿಸಿದ್ದಾನಲ್ಲವೇ. ನ್ಯಾಯವನ್ನು ಆಚರಿಸುವುದು, ಕರುಣೆಯಲ್ಲಿ ಆಸಕ್ತನಾಗಿರುವುದು, ನಿನ್ನ ದೇವರಿಗೆ ನಮ್ರವಾಗಿ ನಡೆದುಕೊಳ್ಳುವುದು ಇಷ್ಟನ್ನೇ ಹೊರತು ಯೆಹೋವನು ನಿನ್ನಿಂದ ಇನ್ನೇನು ಅಪೇಕ್ಷಿಸುವನು?


ಬಡವರಿಗೆ ದಯೆತೋರಿಸುವವನು ಯೆಹೋವನಿಗೆ ಸಾಲಕೊಡುವವನು, ಆ ಉಪಕಾರಕ್ಕೆ ಯೆಹೋವನೇ ಪ್ರತ್ಯುಪಕಾರ ಮಾಡುವನು.


ನೀವು ದೇವಜನರಿಗೆ ಉಪಚಾರ ಮಾಡಿದ್ದೀರಿ, ಇನ್ನೂ ಮಾಡುತ್ತಾ ಇದ್ದಿರಿ. ಈ ಕೆಲಸವನ್ನು ಮತ್ತು ಇದರಲ್ಲಿ ನೀವು ಆತನ ನಾಮದ ಕಡೆಗೆ ತೋರಿಸಿದ ಪ್ರೀತಿಯನ್ನು ಆತನು ಮರೆಯುವುದಿಲ್ಲ, ಯಾಕೆಂದರೆ ದೇವರು ಅನೀತಿಯುಳ್ಳವನಲ್ಲ.


ಆದಕಾರಣ, ಅರಸನೇ, ಈ ನನ್ನ ಬುದ್ಧಿವಾದವು ನಿನಗೆ ಒಪ್ಪಿಗೆಯಾಗಲಿ, ನೀನು ಧರ್ಮವನ್ನು ಆಚರಿಸಿ ನಿನ್ನ ಪಾಪಗಳನ್ನು ನಾಶಗೊಳಿಸು, ಬಡವರಿಗೆ ಕರುಣೆಯನ್ನು ತೋರಿಸಿ ನಿನ್ನ ಅಪರಾಧಗಳನ್ನು ಧ್ವಂಸಮಾಡು; ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾದೀತು” ಎಂದು ಅರಿಕೆ ಮಾಡಿದನು.


ಆದುದರಿಂದ ನಾವು ತಕ್ಕ ಸಮಯದಲ್ಲಿ ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಆತನ ಕೃಪಾಸನದ ಮುಂದೆ ಬರೋಣ.


ದಯಾಪರನಿಗೆ ಉಪಕಾರವಾಗುವುದು, ಕ್ರೂರನು ತನ್ನ ಶರೀರವನ್ನು ಹಿಂಸಿಸುವನು.


ಮೊದಲು ನೀವು ಪ್ರಜೆಯಾಗಿರಲಿಲ್ಲ. ಈಗಲಾದರೂ ದೇವರ ಸ್ವಕೀಯಪ್ರಜೆಯಾಗಿದ್ದೀರಿ. ಮೊದಲು ನೀವು ಕರುಣೆ ಹೊಂದಿದವರಾಗಿರಲಿಲ್ಲ. ಈಗಲಾದರೂ ಕರುಣೆ ಹೊಂದಿದವರಾಗಿದ್ದೀರಿ.


ಇದಲ್ಲದೆ ನೀವು ನಿಂತುಕೊಂಡು ಪ್ರಾರ್ಥಿಸುವಾಗ ಯಾರ ಮೇಲೆ ಏನಾದರೂ ವಿರೋಧವಿದ್ದರೆ ಅದನ್ನು ಕ್ಷಮಿಸಿರಿ; ಆಗ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವನು” ಅಂದನು.


ನೆರೆಯವನನ್ನು ತಿರಸ್ಕರಿಸುವವನು ದೋಷಿ, ದರಿದ್ರನನ್ನು ಕನಿಕರಿಸುವವನು ಧನ್ಯನು.


ನಿಮ್ಮ ಸಹೋದರರನ್ನು “ಅಮ್ಮಿ” ಎಂದು, ನಿಮ್ಮ ಸಹೋದರಿಯರನ್ನು “ರುಹಾಮ” ಎಂದು ಕರೆಯಿರಿ.


ಬಡವರಿಗೆ ಉದಾರವಾಗಿ ಕೊಡುತ್ತಾನೆ; ಅವನ ನೀತಿಯ ಫಲವು ಸದಾಕಾಲವೂ ಇರುವುದು. ಮಹಿಮೆಯೊಡನೆ ಅವನ ಕೊಂಬು ಎತ್ತಲ್ಪಡುವುದು.


ಯಥಾರ್ಥರಿಗೆ ಕತ್ತಲೆಯಲ್ಲಿಯೂ ಜ್ಯೋತಿ ಮೂಡುವುದು; ದಯೆಯೂ, ಕನಿಕರವೂ, ನೀತಿಯುಳ್ಳ ದೇವರೇ ಆ ಜ್ಯೋತಿ.


ಅವನು ಯಾವಾಗಲೂ ಧರ್ಮಿಷ್ಠನಾಗಿ ಹಣ ಸಹಾಯವನ್ನು ಮಾಡುತ್ತಾನೆ; ಅವನ ಸಂತತಿಯವರು ಆಶೀರ್ವಾದ ಹೊಂದುವರು.


ಅವಿವಾಹಿತರಾದ ಕನ್ಯೆಯರನ್ನು ಕುರಿತಂತೆ ಕರ್ತನಿಂದ ಬಂದ ಆಜ್ಞೆ ನನಗೆ ಯಾವುದೂ ಇಲ್ಲ. ಆದರೆ ನಾನು ನಂಬಿಗಸ್ತನಾಗಿರುವುದಕ್ಕೆ ಕರ್ತನಿಂದ ಕರುಣೆಯನ್ನು ಹೊಂದಿದವನಾಗಿ ನನ್ನ ಅಭಿಪ್ರಾಯವನ್ನು ಹೇಳುತ್ತೇನೆ.


ಆದರೆ ಇನ್ನು ಮುಂದೆ ನಿತ್ಯಜೀವಕ್ಕಾಗಿ ತನ್ನ ಮೇಲೆ ನಂಬಿಕೆಯಿಡುವವರಿಗೆ, ತನ್ನ ದೀರ್ಘಶಾಂತಿಯ ದೃಷ್ಟಾಂತವಿರಬೇಕೆಂದು ಕ್ರಿಸ್ತ ಯೇಸುವು ಪಾಪಿಗಳಲ್ಲಿ ಪ್ರಮುಖನಾಗಿದ್ದ ನನ್ನನ್ನು ಕರುಣಿಸಿ, ನನ್ನಲ್ಲಿ ತನ್ನ ಪೂರ್ಣ ದೀರ್ಘಶಾಂತಿಯನ್ನು ತೋರ್ಪಡಿಸಿದನು.


ನಾನು ದೇಶದಲ್ಲಿ ಇಜ್ರೇಲನ್ನು ನನಗಾಗಿ ಬಿತ್ತಿಕೊಳ್ಳುವೆನು, ಲೋ ರುಹಾಮಳಿಗೆ ವಾತ್ಸಲ್ಯವನ್ನು ತೋರಿಸುವೆನು; ಲೋ ಅಮ್ಮಿಗೆ ‘ನೀನು ನನ್ನ ಪ್ರಜೆಯೇ’ ಎಂದು ಹೇಳುವೆನು. ಅವರು ನನ್ನನ್ನು ‘ನನ್ನ ದೇವರೇ’ ಎಂದು ಭಜಿಸುವರು” ಎಂದು ನುಡಿಯುತ್ತಾನೆ.


ಗೋಮೆರಳು ಪುನಃ ಗರ್ಭಿಣಿಯಾಗಿ ಹೆಣ್ಣು ಮಗುವಿಗೆ ಜನ್ಮ ನೀಡಿದಾಗ ಯೆಹೋವನು ಹೋಶೇಯನಿಗೆ, “ಈ ಮಗುವಿಗೆ ‘ಲೋ ರುಹಾಮ’ ಎಂಬ ಹೆಸರಿಡು; ಏಕೆಂದರೆ ನಾನು ಇಸ್ರಾಯೇಲ್ ವಂಶದವರಲ್ಲಿ ಇನ್ನು ವಾತ್ಸಲ್ಯವಿಡುವುದಿಲ್ಲ, ಅವರನ್ನು ಕ್ಷಮಿಸುವುದಿಲ್ಲ.


ಸಜ್ಜನರು ನಾಶವಾಗುತ್ತಾರೆ, ಯಾರೂ ಮನಸ್ಸಿಗೆ ತಾರರು; ಸದ್ಭಕ್ತರು ಗತಿಸುತ್ತಾರೆ, ಆಹಾ, ಶಿಷ್ಟರು ಕೇಡಿನಿಂದ ಪಾರಾಗಿದ್ದಾರೆ ಎಂದು ಯಾರೂ ಯೋಚಿಸರು.


ಆದ್ದರಿಂದ ದೇವರ ಕರುಣೆಯಿಂದ ಈ ಸೇವೆಯನ್ನು ಹೊಂದಿದವರಾದ ನಾವು ಧೈರ್ಯಗೆಟ್ಟು ಹಿಂಜರಿಯುವುದಿಲ್ಲ.


ಯಾವ ಪ್ರಕಾರ ನೀವು ಪೂರ್ವದಲ್ಲಿ ಅವಿಧೇಯರಾಗಿದ್ದರೂ ಈಗ ಅವರ ಅವಿಧೇಯತೆಯ ದೆಸೆಯಿಂದ ಕರುಣೆ ಹೊಂದಿದ್ದೀರೋ,


ದಾವೀದನಿಗೂ ಅವನ ಜನರಿಗೂ ಹಾಸಿಗೆ, ಬಟ್ಟಲು, ಮಡಕೆ ಇವುಗಳೊಂದಿಗೆ, ಊಟಕ್ಕಾಗಿ ಗೋದಿ, ಜವೆಗೋದಿ, ಹಿಟ್ಟು, ಹುರಿಗಾಳು, ಅವರೆಕಾಳು, ಅಲಸಂದಿ, ಬೇಳೆ ಜೇನುತುಪ್ಪ,


ಉದಾರಿಯು ಪುಷ್ಟನಾಗುವನು, ನೀರು ಹಾಯಿಸುವವನಿಗೆ ನೀರು ಸಿಕ್ಕುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು