Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 5:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಶಾಂತಿಗಾಗಿ ಶ್ರಮಿಸುವವರು ಧನ್ಯರು; ಅವರು ದೇವರ ಮಕ್ಕಳು ಎಂದೆನಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಶಾಂತಿಗಾಗಿ ಶ್ರಮಿಸುವವರು ಭಾಗ್ಯವಂತರು; ಅವರು ದೇವರ ಮಕ್ಕಳೆನಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಸಮಾಧಾನ ಪಡಿಸುವವರು ಧನ್ಯರು; ಅವರು ದೇವರ ಮಕ್ಕಳು ಅನ್ನಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಸಮಾಧಾನಪಡಿಸುವವರು ಧನ್ಯರು. ಅವರು ‘ದೇವರ ಮಕ್ಕಳು’ ಎನಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಸಮಾಧಾನ ಪಡಿಸುವವರು ಧನ್ಯರು, ಅವರು ದೇವರ ಮಕ್ಕಳೆನಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಸಮಾದಾನ್ ಹಾನುಸಾಟ್ನಿ ರಾಬ್ತಲಿ ಲೊಕಾ ಕವ್ಡಿ ಸುಖಿ; ದೆವ್ ತೆಂಕಾ ಅಪ್ನಾಚಿ ಪೊರಾ ಮನುನ್ ಬಲ್ವುತಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 5:9
31 ತಿಳಿವುಗಳ ಹೋಲಿಕೆ  

ಎಲ್ಲರೊಂದಿಗೆ ಸಮಾಧಾನದಿಂದ ಜೀವಿಸಲು ಮತ್ತು ಪರಿಶುದ್ಧರಾಗಿರಲು ಪ್ರಯತ್ನಮಾಡಿರಿ. ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವುದಿಲ್ಲ.


ಸಾಧ್ಯವಾದರೆ ನಿಮ್ಮಿಂದಾಗುವ ಮಟ್ಟಿಗೆ ಎಲ್ಲರ ಸಂಗಡ ಸಮಾಧಾನದಿಂದಿರಿ.


ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ, ಪ್ರೀತಿ, ಸಂತೋಷ, ಸಮಾಧಾನ, ದೀರ್ಘಶಾಂತಿ, ದಯೆ, ಪರೋಪಕಾರ, ನಂಬಿಕೆ,


ಸಮಾಧಾನವನ್ನು ದ್ವೇಷಿಸುವವರೊಳಗೆ, ಇದ್ದು ಇದ್ದು ಸಾಕಾಯಿತು.


ಯಾರು ದೇವರ ಆತ್ಮಾನುಸಾರವಾಗಿ ನಡೆದುಕೊಳ್ಳುತ್ತಾರೋ, ಅವರು ದೇವರ ಮಕ್ಕಳಾಗಿದ್ದಾರೆ.


ನೀವಾದರೋ ನಿಮ್ಮ ವೈರಿಗಳನ್ನು ಪ್ರೀತಿಸಿ ಅವರಿಗೆ ಉಪಕಾರಮಾಡಿರಿ. ಏನನ್ನೂ ನಿರೀಕ್ಷಿಸದೆ ಸಾಲಕೊಡಿರಿ. ಹೀಗೇ ಮಾಡಿದರೆ, ನಿಮಗೆ ಬಹಳ ಫಲಸಿಕ್ಕುವುದು ಮತ್ತು ನೀವು ಪರಾತ್ಪರನಾದ ದೇವರ ಮಕ್ಕಳಾಗುವಿರಿ. ದೇವರು ಉಪಕಾರನೆನಸದವರಿಗೂ ಕೆಟ್ಟವರಿಗೂ ಉಪಕಾರಿಯಾಗಿದ್ದಾನೆ.


ಕಡೆಯದಾಗಿ ಸಹೋದರರೇ, ಸಂತೋಷಪಡಿರಿ! ಕ್ರಮಪಡಿಸಿಕೊಳ್ಳಿರಿ. ಧೈರ್ಯವುಳ್ಳವರಾಗಿರಿ, ಏಕ ಮನಸ್ಸುಳ್ಳವರಾಗಿರಿ, ಸಮಾಧಾನದಿಂದ ಇರಿ; ಆಗ ಪ್ರೀತಿಸ್ವರೂಪನೂ, ಶಾಂತಿದಾಯಕನೂ ಆದ ದೇವರು ನಿಮ್ಮ ಸಂಗಡ ಇರುವನು.


ಒಬ್ಬರನ್ನೊಬ್ಬರು ಸೈರಿಸಿಕೊಂಡು ಯಾರಿಗಾದರೂ ಮತ್ತೊಬ್ಬನ ಮೇಲೆ ತಪ್ಪುಹೊರಿಸುವುದಕ್ಕೆ ಕಾರಣವಿದ್ದರೂ, ತಪ್ಪುಹೊರಿಸದೆ ಕ್ಷಮಿಸಿರಿ, ಕರ್ತನು ನಿಮ್ಮನ್ನು ಕ್ಷಮಿಸಿದಂತೆಯೇ ನೀವೂ ಕ್ಷಮಿಸಿರಿ.


ದೀರ್ಘಾಯುಷ್ಯವು ಬೇಕೋ? ಬಹುದಿನ ಬದುಕಿ ಸುಖವನ್ನು ಅನುಭವಿಸಬೇಕೋ?


ಆದುದರಿಂದ ಪರಲೋಕದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣನಾಗಿರುವ ಹಾಗೆಯೇ ನೀವೂ ಪರಿಪೂರ್ಣರಾಗಿರಿ.


ಆದ್ದರಿಂದ ನಾವು ಕ್ರಿಸ್ತನ ರಾಯಭಾರಿಗಳು. ದೇವರೇ ನಮ್ಮ ಮುಖಾಂತರ ಕರೆನೀಡುತ್ತಿದ್ದಾನೆ. ದೇವರೊಡನೆ ನೀವು ಸಂಧಾನಮಾಡಿಕೊಳ್ಳಿರೆಂದು ಕ್ರಿಸ್ತನ ಹೆಸರಿನಲ್ಲಿ ನಾವು ನಿಮ್ಮನ್ನು ವಿನಂತಿಸುತೇವೆ.


ಮರುದಿನ ತಾವು ತಾವೇ ಹೊಡೆದಾಡಿಕೊಳ್ಳುತ್ತಿರುವಾಗ ಅವನು ಅವರಿಗೆ ಎದುರಾಗಿ ಬಂದು, ‘ಜನರೇ, ನೀವು ಸಹೋದರರಲ್ಲವೇ, ನೀವೇಕೆ ಒಬ್ಬರಿಗೊಬ್ಬರು ಅನ್ಯಾಯ ಮಾಡುತ್ತೀರಿ?’ ಎಂದು ಹೇಳಿ ಅವರನ್ನು ಸಮಾಧಾನ ಪಡಿಸಲು ಬಂದನು.


ಹೀಗೆ ಮಾಡಿದರೆ, ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾಗುವಿರಿ. ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಉದಯಿಸುವಂತೆ ಮಾಡುತ್ತಾನೆ. ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆ ಸುರಿಸುತ್ತಾನೆ.


“ನೀವು ಸ್ನೇಹಭಾವದಿಂದ ಸಹಾಯ ಮಾಡುವುದಕ್ಕಾಗಿ ನನ್ನ ಬಳಿಗೆ ಬಂದಿರುವುದಾದರೆ ನಿಮ್ಮೊಡನೆ ನನಗೆ ಐಕ್ಯಭಾವವಿರುವುದು. ನಿರಪರಾಧಿಯಾದ ನನ್ನನ್ನು ನನ್ನ ವಿರೋಧಿಗಳಿಗೆ ಒಪ್ಪಿಸುವ ಕುಯುಕ್ತಿಯಿಂದ ಬಂದಿರುವುದಾದರೆ ನಮ್ಮ ಪೂರ್ವಿಕರ ದೇವರು ನಿಮ್ಮನ್ನು ನೋಡಿ ದಂಡಿಸಲಿ” ಎಂದು ಹೇಳಿದನು.


ಆದರೆ ಅದಕ್ಕೆ ಬದಲಾಗಿ ಒಬ್ಬ ವಿಶ್ವಾಸಿಯು ಮತ್ತೊಬ್ಬ ವಿಶ್ವಾಸಿಯ ವಿರುದ್ಧ ನ್ಯಾಯಾಲಯಕ್ಕೆ ಹೋಗುವುದು ಅಲ್ಲದೆ ಅದನ್ನು ಅವಿಶ್ವಾಸಿಯ ಮುಂದೆ ತೆಗೆದುಕೊಂಡು ಹೋಗುವುದು ಸರಿಯೋ?


ಕರ್ತನಲ್ಲಿ ಒಂದೇ ಮನಸ್ಸುಳ್ಳವರಾಗಿರಿ ಎಂದು ಯುವೊದ್ಯಳನ್ನೂ ಹಾಗೂ ಸಂತುಕೆಯನ್ನೂ ಬೇಡಿಕೊಳ್ಳುತ್ತೇನೆ.


ಅವರು ಇನ್ನು ಮರಣಕ್ಕೆ ಗುರಿಯಾಗುವುದೇ ಇಲ್ಲ. ಏಕೆಂದರೆ ಅವರು ದೇವದೂತರಿಗೆ ಸರಿಸಮಾನರೂ, ಪುನರುತ್ಥಾನವನ್ನು ಹೊಂದಿದವರಾಗಿವುದ್ದರಿಂದ ಅವರು ದೇವರ ಮಕ್ಕಳೂ ಆಗಿರುತ್ತಾರೆ.


ನೀವು ದೇವರಿಂದ ಕರೆಯಲ್ಪಟ್ಟವರಾದ ಕಾರಣ ಆ ಕರೆಗೆ ಯೋಗ್ಯರಾಗಿ ಜೀವಿಸಬೇಕೆಂದು, ಕರ್ತನ ಸೇವೆಯಲ್ಲಿ ಸೆರೆಯವನಾದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ನಾವು ದೇವರ ಮಕ್ಕಳಾಗಿದ್ದೇವೆಂಬುದಕ್ಕೆ ಪವಿತ್ರಾತ್ಮನೇ ನಮ್ಮ ಆತ್ಮದೊಂದಿಗೆ ಸಾಕ್ಷಿ ಹೇಳುತ್ತಾನೆ.


ದೇವರ ಮಕ್ಕಳ ಮಹಿಮೆಯು ಯಾವಾಗ ಪ್ರತ್ಯಕ್ಷವಾದೀತೆಂದು ಸೃಷ್ಟಿಯು ಬಹು ಕಾತುರದಿಂದ ಎದುರು ನೋಡುತ್ತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು