Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 7:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಕರ್ತನೇ, ಕರ್ತನೇ, ನಿನ್ನ ಹೆಸರಿನಲ್ಲಿ ನಾವು ಪ್ರವಾದನೆ ಮಾಡಲಿಲ್ಲವೇ? ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ನಿನ್ನ ಹೆಸರಿನಲ್ಲಿ ಅನೇಕ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ತೀರ್ಪಿನ ದಿನದಲ್ಲಿ ಎಷ್ಟೋ ಜನರು ನನಗೆ ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ತೀರ್ಪಿನ ದಿನದಂದು, ‘ಸ್ವಾಮೀ, ಸ್ವಾಮೀ, ನಿಮ್ಮ ಹೆಸರಿನಲ್ಲಿ ನಾವು ಪ್ರವಾದನೆ ಮಾಡಲಿಲ್ಲವೇ? ನಿಮ್ಮ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೆ? ನಿಮ್ಮ ಹೆಸರಿನಲ್ಲಿ ಹಲವಾರು ಮಹತ್ಕಾರ್ಯಗಳನ್ನು ಮಾಡಲಿಲ್ಲವೇ?’ ಎಂದು ಅನೇಕರು ನನಗೆ ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಸ್ವಾಮೀ, ಸ್ವಾಮೀ, ನಿನ್ನ ಹೆಸರಿನ ಮೇಲೆ ನಾವು ಬೋಧನೆ ಹೇಳಲಿಲ್ಲವೇ? ನಿನ್ನ ಹೆಸರಿನ ಮೇಲೆ ದೆವ್ವಗಳನ್ನು ಬಿಡಿಸಲಿಲ್ಲವೇ? ನಿನ್ನ ಹೆಸರಿನ ಮೇಲೆ ಅನೇಕ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ಆ ದಿನದಲ್ಲಿ ಎಷ್ಟೋ ಜನರು ನನಗೆ ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಕೊನೆಯ ದಿನಗಳಲ್ಲಿ ಅನೇಕರು ನನಗೆ, ‘ನೀನೇ ನಮ್ಮ ಪ್ರಭು! ನಿನ್ನ ವಿಷಯವಾಗಿ ನಾವು ಬೋಧಿಸಿದೆವು. ನಿನ್ನ ಹೆಸರಿನ ಮೂಲಕ ದೆವ್ವಗಳನ್ನು ಬಿಡಿಸಿದೆವು ಮತ್ತು ಅನೇಕ ಅದ್ಭುತಕಾರ್ಯಗಳನ್ನು ಮಾಡಿದೆವು’ ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆ ದಿನದಲ್ಲಿ, ‘ಕರ್ತದೇವರೇ, ಕರ್ತದೇವರೇ, ನಿಮ್ಮ ಹೆಸರಿನಲ್ಲಿ ನಾವು ಪ್ರವಾದಿಸಲಿಲ್ಲವೇ? ನಿಮ್ಮ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ನಿಮ್ಮ ಹೆಸರಿನಲ್ಲಿ ಅನೇಕ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ?’ ಎಂದು ಅನೇಕರು ನನಗೆ ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಝಡ್ತಿ ದಿತಲೊ ದಿಸ್ ಯೆಲ್ಲ್ಯಾ ತನ್ನಾ ಲೈ ಜಾನಾ, ಧನಿಯಾ, ಧನಿಯಾ, ತುಜ್ಯಾ ನಾವಾನ್ ಅಮಿ ದೆವಾಚಿ ಬರಿ ಖಬರ್ ಸಾಂಗ್ಲಾಂವ್, ತುಜ್ಯಾ ನಾವಾನ್ ಅಮಿ ಗಿರೆ ಕಾಡ್ಲಾಂವ್ ಅನಿ ಲೈ ಅಜಾಪಾ ಕರ್ಲಾಂವ್! ಮನುನ್ ಸಾಂಗ್ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 7:22
23 ತಿಳಿವುಗಳ ಹೋಲಿಕೆ  

ಅದರ ನಿಮಿತ್ತದಿಂದಲೇ ಈ ಕಷ್ಟಗಳನ್ನು ಅನುಭವಿಸುತ್ತಾ ಇದ್ದೇನೆ. ಆದರೂ ನಾನು ನಾಚಿಕೆಪಡುವುದಿಲ್ಲ. ನಾನು ನಂಬಿರುವಾತನನ್ನು ಬಲ್ಲೆನು. ಆತನು ನನಗೆ ಒಪ್ಪಿಸಿಕೊಟ್ಟಿರುವುದನ್ನು ಆತನು ಆ ದಿನದವರೆಗೆ ಕಾಪಾಡುವುದಕ್ಕೆ ಶಕ್ತನಾಗಿದ್ದಾನೆಂದು ದೃಢವಾಗಿ ನಂಬಿದ್ದೇನೆ.


ನೀತಿವಂತರಿಗೆ ದೊರಕುವ ಜಯಮಾಲೆಯು ಮುಂದೆ ನನಗಾಗಿ ಸಿದ್ಧವಾಗಿದೆ, ಅದನ್ನು ನೀತಿವಂತನಾದ ನ್ಯಾಯಾಧಿಪತಿಯಾಗಿರುವ ಕರ್ತನು ಆ ದಿನದಲ್ಲಿ ನನಗೆ ಕೊಡುವನು, ನನಗೆ ಮಾತ್ರವಲ್ಲದೆ ತನ್ನ ಪ್ರತ್ಯಕ್ಷತೆಯನ್ನು ಪ್ರೀತಿಸುವವರೆಲ್ಲರಿಗೂ ಕೊಡುವನು.


ಇದನ್ನು ಅವನು ತನ್ನಷ್ಟಕ್ಕೆ ತಾನೇ ಹೇಳಲಿಲ್ಲ, ಆದರೆ ತಾನು ಆ ವರ್ಷದಲ್ಲಿ ಮಹಾಯಾಜಕನಾಗಿದ್ದುದರಿಂದ, ಯೇಸು ಆ ಜನರಿಗೋಸ್ಕರ ಹಾಗೂ


ದೇವರ ಮಾತುಗಳನ್ನು ಕೇಳುವವನಾಗಿಯೂ, ಸರ್ವಶಕ್ತನ ದರ್ಶನವನ್ನು ಹೊಂದುವವನಾಗಿಯೂ ಪರವಶವಾಗಿ ತೆರೆದ ಕಣ್ಣುಳ್ಳವನೂ ಹೇಳಿದ್ದು.


ಆದರೆ ಸಹೋದರರೇ, ಆ ದಿನವು ಕಳ್ಳನಂತೆ ನಿಮ್ಮ ಮೇಲೆ ಬರತಕ್ಕದ್ದಲ್ಲ, ಯಾಕೆಂದರೆ ನೀವು ಕತ್ತಲೆಯಲ್ಲಿರುವವರಲ್ಲ.


ಆ ದಿನದಲ್ಲಿ ಅಂತಹ ಊರಿನ ಗತಿಯು ಸೊದೋಮ್ ಊರಿನ ಗತಿಗಿಂತಲೂ ಕಠಿಣವಾಗಿರುವುದು ಎಂದು ನಿಮಗೆ ಹೇಳುತ್ತೇನೆ.


ಅನಂತರ ಉಳಿದ ಕನ್ನಿಕೆಯರು ಸಹ ಬಂದು, ‘ಕರ್ತನೇ, ಕರ್ತನೇ, ನಮಗೆ ಬಾಗಿಲು ತೆರೆಯಿರಿ’ ಅಂದರು.


“ಇದಲ್ಲದೆ ಆ ದಿನವನ್ನು ಕುರಿತು ಆ ಗಳಿಗೆಯನ್ನು ಕುರಿತು, ನನ್ನ ತಂದೆಗೆ ಮಾತ್ರ ತಿಳಿದಿದೆಯೇ ಹೊರತು ಮತ್ತಾರಿಗೂ ತಿಳಿಯದು; ಪರಲೋಕದಲ್ಲಿರುವ ದೂತರಿಗೂ ಕೂಡ ತಿಳಿಯದು, ಮಗನಿಗೂ ತಿಳಿಯದು,


“ನನ್ನನ್ನು ಕರ್ತನೇ, ಕರ್ತನೇ ಅನ್ನುವವರೆಲ್ಲರು ಪರಲೋಕ ರಾಜ್ಯವನ್ನು ಪ್ರವೇಶಿಸುವುದಿಲ್ಲ; ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನು ಮಾತ್ರ ಪರಲೋಕ ರಾಜ್ಯಕ್ಕೆ ಪ್ರವೇಶಿಸುವನು.


ಮನುಷ್ಯರ ಗರ್ವವು ಕುಗ್ಗುವುದು. ಮನುಷ್ಯರ ಅಹಂಕಾರವು ತಗ್ಗುವುದು. ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.


ಮನುಷ್ಯನ ಗರ್ವದೃಷ್ಟಿಯು ತಗ್ಗಿಹೋಗುವುದು, ಮನುಷ್ಯರ ಅಹಂಕಾರವು ತಗ್ಗುವುದು. ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.


ಅವನು ಆ ದಿನದಲ್ಲಿ ಕರ್ತನಿಂದ ಕರುಣೆಯನ್ನು ಹೊಂದುವಂತೆ ಕರ್ತನು ಅವನಿಗೆ ಅನುಗ್ರಹಿಸಲಿ. ಎಫೆಸದಲ್ಲಿ ಅವನು ನನಗೆ ಎಷ್ಟೋ ಉಪಚಾರಮಾಡಿದನೆಂಬದು ನಿನಗೆ ಚೆನ್ನಾಗಿ ಗೊತ್ತಿದೆ.


ಆ ದಿನದಲ್ಲಿ ಆತನು ಬರುವಾಗ ತನ್ನ ಪರಿಶುದ್ಧ ಜನರಿಂದ ಮಹಿಮೆ ಹೊಂದಿದವನಾಗಿಯೂ ಮತ್ತು ನಾವು ನಿಮಗೆ ಹೇಳಿದ ಸಾಕ್ಷಿಯನ್ನು ನಂಬಿದವರೆಲ್ಲರ ಮೂಲಕ ತನ್ನ ವಿಷಯದಲ್ಲಿ ಆಶ್ಚರ್ಯ ಹುಟ್ಟಿಸುವನು.


ನ್ಯಾಯವಿಚಾರಣೆಯ ದಿನದಲ್ಲಿ ಅಂಥ ಊರಿನ ಗತಿಯು ಸೊದೋಮ್ ಗೊಮೋರಗಳ ಸೀಮೆಯ ಗತಿಗಿಂತಲೂ ಕಠಿಣವಾಗಿರುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಖಡ್ಗದಿಂದ ಹತರಾದವರಲ್ಲಿ ಎವೀ, ರೆಕೆಮ್, ಚೂರ್, ಹೂರ್, ರೆಬಾ ಎಂಬ ಮಿದ್ಯಾನ್ಯರ ಐದು ಮಂದಿ ರಾಜರು ಇದ್ದರು. ಅದಲ್ಲದೆ ಬೆಯೋರನ ಮಗನಾದ ಬಿಳಾಮನನ್ನು ಕೊಂದುಬಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು