Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 8:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆ ಶತಾಧಿಪತಿಯು, “ಕರ್ತನೇ, ನೀನು ನನ್ನ ಮನೆಗೆ ಬರುವಷ್ಟು ಯೋಗ್ಯತೆ ನನ್ನಲ್ಲಿಲ್ಲ; ನೀನು ಒಂದು ಮಾತು ಹೇಳಿದರೆ ಸಾಕು, ನನ್ನ ಆಳಿಗೆ ಗುಣವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅದಕ್ಕೆ ಆ ಶತಾಧಿಪತಿ, “ಪ್ರಭುವೇ, ತಾವು ನನ್ನ ಮನೆಗೆ ಬರುವಷ್ಟು ಯೋಗ್ಯತೆ ನನಗಿಲ್ಲ. ತಾವು ಒಂದೇ ಒಂದು ಮಾತು ಹೇಳಿದರೆ ಸಾಕು, ನನ್ನ ಸೇವಕ ಸ್ವಸ್ಥನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆ ಶತಾಧಿಪತಿಯು - ಪ್ರಭುವೇ, ನೀನು ನನ್ನ ಮನೆಗೆ ಬರತಕ್ಕಷ್ಟು ಯೋಗ್ಯತೆ ನನ್ನಲ್ಲಿಲ್ಲ; ನೀನು ಒಂದು ಮಾತು ಹೇಳಿದರೆ ಸಾಕು, ನನ್ನ ಆಳಿಗೆ ಗುಣವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅದಕ್ಕೆ ಆ ಅಧಿಕಾರಿ, “ಪ್ರಭುವೇ, ನನ್ನ ಮನೆಗೆ ನೀನು ಬರುವಷ್ಟು ಯೋಗ್ಯತೆ ನನಗಿಲ್ಲ. ಅವನಿಗೆ ಗುಣವಾಗಲಿ ಎಂದು ನೀನು ಆಜ್ಞಾಪಿಸಿದರೆ ಸಾಕು, ಅವನಿಗೆ ಗುಣವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅದಕ್ಕೆ ಶತಾಧಿಪತಿಯು, “ಸ್ವಾಮೀ, ನನ್ನ ಮನೆಯೊಳಗೆ ನೀವು ಬರುವಷ್ಟು ಯೋಗ್ಯತೆ ನನಗಿಲ್ಲ. ಆದರೆ, ನೀವು ಒಂದು ಮಾತು ಮಾತ್ರ ಹೇಳಿರಿ, ಆಗ ನನ್ನ ಸೇವಕ ಗುಣಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತನ್ನಾ ತ್ಯಾ ಅದಿಕಾರ್‍ಯಾನ್ ಜೆಜುಕ್, “ಧನಿಯಾ, ತಿಯಾ ಮಾಜ್ಯಾ ಘರಾಕ್ ಯೆವ್ಕ್ ಮಿಯಾ ಯೊಗ್ಯ್ ನ್ಹಯ್, ತಿಯಾ ಹಿತ್ನಾಚ್ ಮಾಜೊ ಆಳ್ ಆರಾಮ್ ಹೊಂವ್ದಿ ಮನುನ್ ಸಾಂಗ್ ತೊ ಆರಾಮ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 8:8
18 ತಿಳಿವುಗಳ ಹೋಲಿಕೆ  

ಆತನು ದೂತನನ್ನೋ ಎಂಬಂತೆ ತನ್ನ ವಾಕ್ಯವನ್ನು ಕಳುಹಿಸಿ, ಅವರನ್ನು ಗುಣಪಡಿಸಿದನು; ಸಮಾಧಿಗೆ ಸೇರದಂತೆ ಮಾಡಿದನು.


ಆತನು ನುಡಿದ ಮಾತ್ರಕ್ಕೆ ಸಮಸ್ತವೂ ಉಂಟಾಯಿತು; ಆತನು ಆಜ್ಞಾಪಿಸುತ್ತಲೇ ಸರ್ವವೂ ಸ್ಥಾಪನೆಯಾಯಿತು.


ಆತನು ಕೈಚಾಚಿ ಆತನನ್ನು ಮುಟ್ಟಿ, “ನನಗೆ ಮನಸ್ಸುಂಟು; ಶುದ್ಧನಾಗು” ಅಂದನು. ಕೂಡಲೆ ಅವನು ಕುಷ್ಠದಿಂದ ಶುದ್ಧನಾದನು.


ಆತನೇ ನನ್ನ ನಂತರ ಬರತಕ್ಕವನು. ಆತನ ಚಪ್ಪಲಿಗಳ ಪಟ್ಟಿ ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ” ಅಂದನು.


ಸೀಮೋನ್ ಪೇತ್ರನು ಇದನ್ನು ಕಂಡು ಯೇಸುವಿನ ಮೊಣಕಾಲಿಗೆ ಬಿದ್ದು, “ಕರ್ತನೇ, ನಾನು ಪಾಪಾತ್ಮನು; ನನ್ನನ್ನು ಬಿಟ್ಟುಹೋಗು” ಅಂದನು.


ನಾನಂತೂ ಮಾನಸಾಂತರಕ್ಕಾಗಿ ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುತ್ತೇನೆ. ಆದರೆ ನನ್ನ ನಂತರ ಬರುವವನು ನನಗಿಂತ ಶಕ್ತನು; ಆತನ ಪಾದರಕ್ಷೆಗಳನ್ನು ಹೊರಲಿಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾತ್ಮನಲ್ಲಿಯೂ ಬೆಂಕಿಯಲ್ಲಿಯೂ ನಿಮಗೆ ದೀಕ್ಷಾಸ್ನಾನಮಾಡಿಸುವನು.


ಆದರೂ ಮಗನು ಅವನಿಗೆ, ‘ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ಪಾಪ ಮಾಡಿದ್ದೇನೆ. ಇನ್ನು ನಾನು ನಿನ್ನ ಮಗನೆನಿಸಿಕೊಳ್ಳುವುದಕ್ಕೆ ಯೋಗ್ಯನಲ್ಲ’ ಎಂದು ಹೇಳಲು,


ಇನ್ನು ನಾನು ನಿನ್ನ ಮಗನೆನಿಸಿಕೊಳ್ಳುವುದಕ್ಕೆ ಯೋಗ್ಯನಲ್ಲ, ನನ್ನನ್ನು ನಿನ್ನ ಕೂಲಿಯಾಳುಗಳಲ್ಲಿ ಒಬ್ಬನಂತೆ ಮಾಡು’ ಎಂದು ಹೇಳುವೆನು ಅಂದುಕೊಂಡು,


ಆತನಿಗೆ ಯೋಹಾನನು ತಡೆಯುತ್ತಾ, “ನಾನೇ ನಿನ್ನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕಾಗಿತ್ತು, ಆದರೆ ನೀನು ನನ್ನ ಬಳಿಗೆ ಬರುವುದೇಕೆ?” ಎಂದು ಹೇಳಿದಕ್ಕೆ,


“ನೀನು ಕೋಲನ್ನು ಕೈಯಲ್ಲಿ ಹಿಡಿದು ನಿನ್ನ ಅಣ್ಣನಾದ ಆರೋನನ ಜೊತೆಯಲ್ಲಿ ಸಮೂಹದವರನ್ನು ಕೂಡಿಸಿಕೊಂಡು ಅವರ ಎದುರಿನಲ್ಲೇ ಆ ಕಡಿದಾದ ಬಂಡೆಗೆ ನೀರುಕೊಡಬೇಕೆಂದು ಆಜ್ಞಾಪಿಸು. ಅದರೊಳಗಿಂದ ನೀರು ಹೊರಟುಬರುವುದು, ನೀನು ಸಮೂಹದವರಿಗೂ, ಅವರ ಪಶುಗಳಿಗೂ ನೀರನ್ನು ಕುಡಿಯುವುದಕ್ಕೆ ಕೊಡಬಹುದು” ಎಂದು ಹೇಳಿದನು.


ಯೆಹೋವನೇ, ನೀನು ದೀನರ ಕೋರಿಕೆಯನ್ನು ನೆರವೇರಿಸುವವನೇ ಆಗಿದ್ದಿ; ಅವರ ಹೃದಯವನ್ನು ಧೈರ್ಯಪಡಿಸುತ್ತಿ; ಅವರ ಮೊರೆಗೆ ಕಿವಿಗೊಡುತ್ತಿ.


ನೀನು ನಿನ್ನ ದಾಸನಾದ ನನ್ನ ಮೇಲೆ ಎಷ್ಟೋ ನಂಬಿಕೆಯನ್ನಿಟ್ಟು ನಿನ್ನ ವಾಗ್ದಾನವನ್ನು ನೆರವೇರಿಸಿದ್ದೀಯಲ್ಲಾ. ನಾನು ಅದಕ್ಕೆ ಕೇವಲ ಅಯೋಗ್ಯನು. ನಾನು ಮೊದಲು ಈ ಯೊರ್ದನ್ ನದಿಯನ್ನು ದಾಟಿದಾಗ ನನ್ನ ಬಳಿಯಲ್ಲಿ ಒಂದು ಕೋಲು ಮಾತ್ರವೇ ಇತ್ತು. ಈಗ ಎರಡು ಗುಂಪುಗಳಿಗೆ ಒಡೆಯನಾಗಿದ್ದೇನೆ.


ಯೇಸು ಅವನಿಗೆ, “ನಾನು ಬಂದು ಅವನನ್ನು ವಾಸಿ ಮಾಡುತ್ತೇನೆ” ಎಂದು ಹೇಳಲು,


ನಾನು ಸಹ ಅಧಿಕಾರದ ಕೆಳಗಿರುವ ಮನುಷ್ಯನು; ನನ್ನ ಕೈಕೆಳಗೆ ಸಿಪಾಯಿಗಳಿದ್ದಾರೆ; ನಾನು ಅವರಲ್ಲಿ ಒಬ್ಬನಿಗೆ ‘ಹೋಗು’ ಎಂದು ಹೇಳಿದರೆ ಹೋಗುತ್ತಾನೆ; ಮತ್ತೊಬ್ಬನಿಗೆ ‘ಬಾ’ ಎಂದು ಹೇಳಿದರೆ ಬರುತ್ತಾನೆ; ‘ನನ್ನ ಆಳಿಗೆ ಇಂಥಿಂಥದ್ದನ್ನು ಮಾಡು’ ಎಂದು ಹೇಳಿದರೆ ಮಾಡುತ್ತಾನೆ” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು