Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 9:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನೀವು ಹೋಗಿ, ‘ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ’ ಎಂಬ ಮಾತಿನ ಅರ್ಥವನ್ನು ಕಲಿತುಕೊಳ್ಳಿರಿ. ನಾನು ನೀತಿವಂತರನ್ನು ಕರೆಯುವುದಕ್ಕೆ ಬಂದವನಲ್ಲ, ಆದರೆ ಪಾಪಿಗಳನ್ನು ಕರೆಯುವುದಕ್ಕೆ ಬಂದವನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನೀವು ಹೋಗಿ, ನನಗೆ ಬೇಕಾದುದು ದಯೆ, ಯಜ್ಞಬಲಿಯಲ್ಲ’ ಎಂದು ಪವಿತ್ರಗ್ರಂಥದಲ್ಲಿ ಬರೆದಿರುವ ವಾಕ್ಯದ ಅರ್ಥವನ್ನು ಕಲಿತುಕೊಳ್ಳಿ. ನಾನು ಕರೆಯಲು ಬಂದಿರುವುದು ಧರ್ಮಿಷ್ಠರನ್ನಲ್ಲ, ಪಾಪಿಷ್ಠರನ್ನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನೀವು ಹೋಗಿ - ನನಗೆ ಯಜ್ಞವು ಬೇಡ, ಕರುಣೆಯೇಬೇಕು ಎಂಬ ಮಾತಿನ ಅರ್ಥವನ್ನು ಕಲಿತುಕೊಳ್ಳಿರಿ. ನಾನು ನೀತಿವಂತರನ್ನು ಕರೆಯುವದಕ್ಕೆ ಬಂದವನಲ್ಲ, ಪಾಪಿಗಳನ್ನು ಕರೆಯುವದಕ್ಕೆ ಬಂದವನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನೀವು ಹೋಗಿ, ‘ನನಗೆ ಯಜ್ಞ ಬೇಡ, ದಯೆ ಬೇಕು’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿರುವ ವಾಕ್ಯದ ಅರ್ಥವನ್ನು ಕಲಿತುಕೊಳ್ಳಿ. ನಾನು ನೀತಿವಂತರನ್ನು ಕರೆಯಲು ಬರಲಿಲ್ಲ, ಪಾಪಿಗಳನ್ನು ಕರೆಯಲು ಬಂದೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದರೆ ನೀವು ಹೋಗಿ, ‘ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ,’ ಎಂಬುದರ ಅರ್ಥವನ್ನು ಕಲಿತುಕೊಳ್ಳಿರಿ. ಏಕೆಂದರೆ ನಾನು ನೀತಿವಂತರನ್ನಲ್ಲ, ಪಾಪಿಗಳನ್ನು ಕರೆಯಲು ಬಂದಿದ್ದೇನೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಜಾವಾ, ಅನಿ ಪವಿತ್ರ್ ಪುಸ್ತಕ್, ಮಾಕಾ ದಯಾ ಪಾಜೆ, ಜನಾವರಾಂಚಿ ಬಲಿ ನಕ್ಕೊ ಮನುನ್ ಸಾಂಗಲ್ಲ್ಯಾಚೊ ಅರ್ತ್‍ ಕಾಯ್ ಮನುನ್ ಹುಡ್ಕುನ್‍ ಕಾಡಾ. ಮಿಯಾ ಧರ್ಮಾನಿ ಚಲ್ತಲ್ಯಾ ಲೊಕಾಂಚ್ಯಾ ಸಾಟ್ನಿ ಯೆವ್ಕ್ ನಾ, ಪಾಪಿ ಲೊಕಾಂಚ್ಯಾ ಸಾಟ್ನಿ ಯೆಲಾ”. ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 9:13
39 ತಿಳಿವುಗಳ ಹೋಲಿಕೆ  

ಯೇಸು ಅದನ್ನು ಕೇಳಿ ಅವರಿಗೆ, “ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ; ಕ್ಷೇಮವಿಲ್ಲದವರಿಗೆ ಬೇಕು. ನಾನು ನೀತಿವಂತರನ್ನು ಕರೆಯುವುದಕ್ಕೆ ಬಂದಾತನಲ್ಲ, ಪಾಪಿಗಳನ್ನು ಕರೆಯುವುದಕ್ಕೆ ಬಂದವನು” ಅಂದನು.


ಮನುಷ್ಯಕುಮಾರನು ದಾರಿತಪ್ಪಿ ಹೋದದ್ದನ್ನು ಹುಡುಕಿ ರಕ್ಷಿಸುವುದಕ್ಕೆ ಬಂದನು” ಎಂದು ಹೇಳಿದನು.


ನನಗೆ ಯಜ್ಞವು ಬೇಡ, ಕರುಣೆಯೇ ಬೇಕು; ಹೋಮಗಳಿಗಿಂತ ದೇವಜ್ಞಾನವೇ ಇಷ್ಟ.


ನಾನು ನೀತಿವಂತರನ್ನಲ್ಲ, ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ ಎಂದು ಪಾಪಿಗಳನ್ನು ಕರೆಯುವುದಕ್ಕೆ ಬಂದಿದ್ದೇನೆ” ಎಂದು ಅವರಿಗೆ ಉತ್ತರಕೊಟ್ಟನು.


‘ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ’ ಎಂಬುದರ ಅರ್ಥವನ್ನು ನೀವು ತಿಳಿದಿದ್ದರೆ ನಿರಪರಾಧಿಗಳನ್ನು ಅಪರಾಧಿಗಳೆಂದು ತೀರ್ಪುಮಾಡುತ್ತಿರಲಿಲ್ಲಾ.


ಯಜ್ಞಕ್ಕಿಂತಲೂ ನೀತಿನ್ಯಾಯಗಳು ಯೆಹೋವನಿಗೆ ಇಷ್ಟ.


ಕರ್ತನು ತನ್ನ ವಾಗ್ದಾನಗಳನ್ನು ನೆರವೇರಿಸುವುದಕ್ಕೆ ತಡಮಾಡುತ್ತಾನೆಂಬುದಾಗಿ ಕೆಲವರು ತಿಳಿದುಕೊಂಡಿರುವ ಪ್ರಕಾರ ಆತನು ತಡಮಾಡುವವನಲ್ಲ. ಯಾರೊಬ್ಬನೂ ನಾಶವಾಗುವುದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪ ಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಿಮ್ಮ ವಿಷಯದಲ್ಲಿ ದೀರ್ಘಶಾಂತಿಯುಳ್ಳವನಾಗಿದ್ದಾನೆ.


ಆದುದರಿಂದ ನಿಮ್ಮ ಪಾಪಗಳನ್ನು ಅಳಿಸಿಬಿಡುವ ಹಾಗೆ ನೀವು ಪಶ್ಚಾತ್ತಾಪಪಟ್ಟು ಆತನ ಕಡೆಗೆ ತಿರುಗಿಕೊಳ್ಳಿರಿ. ಹಾಗೆ ತಿರುಗಿದರೆ ಕರ್ತನ, ಸನ್ನಿಧಾನದಿಂದ


ಈ ಮಾತುಗಳನ್ನು ಅವರು ಕೇಳಿ ಆಕ್ಷೇಪಣೆ ಮಾಡುವುದನ್ನು ಬಿಟ್ಟು; “ಹಾಗಾದರೆ ದೇವರು ಅನ್ಯಜನರಿಗೂ ಜೀವಕೊಡಬೇಕೆಂದು ಅವರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿದ್ದಾನೆ” ಎಂದು ದೇವರನ್ನು ಕೊಂಡಾಡಿದರು.


ಹೇಳಿದ್ದೇನೆಂದರೆ, “ಪಶ್ಚಾತ್ತಾಪಪಡಿರಿ; ಏಕೆಂದರೆ ಪರಲೋಕ ರಾಜ್ಯವು ಸಮೀಪಿಸುತ್ತಿದೆ.”


ದೇವರು ಆತನನ್ನೇ ಇಸ್ರಾಯೇಲ್ ಜನರಿಗೆ ಮಾನಸಾಂತರವನ್ನೂ, ಪಾಪಕ್ಷಮಾಪಣೆಯನ್ನೂ ದಯಪಾಲಿಸುವುದಕ್ಕಾಗಿ ಅವನನ್ನು ಪ್ರಭುವನ್ನಾಗಿಯೂ, ರಕ್ಷಕನಾಗಿಯೂ ತನ್ನ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಿದನು.


ಅದಲ್ಲದೆ ಜನರು ಪಾಪಕ್ಷಮಾಪಣೆಗೋಸ್ಕರ ಪಶ್ಚಾತ್ತಾಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಈ ಸುವಾರ್ತೆಯು ಯೆರೂಸಲೇಮ್ ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡಬೇಕು’ ಎಂದು ಬರೆದದೆ.


ಅಂದಿನಿಂದ ಯೇಸು, “ಪಶ್ಚಾತ್ತಾಪಪಡಿರಿ ಪರಲೋಕ ರಾಜ್ಯವು ಸಮೀಪಿಸಿತು” ಎಂದು ಸಾರುವುದಕ್ಕೆ ಪ್ರಾರಂಭಿಸಿದನು.


ಪೇತ್ರನು ಅವರಿಗೆ, “ನಿಮ್ಮ ಪಾಪಗಳು ಕ್ಷಮಿಸಲ್ಪಡುವುದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿಕೊಳ್ಳಲಿ, ಆಗ ನೀವು ಪವಿತ್ರಾತ್ಮದಾನವನ್ನು ಹೊಂದುವಿರಿ.


ನೀವು ಮಾನಸಾಂತರ ಹೊಂದಿರುವಿರಿ ಎಂಬುದಕ್ಕೆ ಯೋಗ್ಯವಾದ ಫಲವನ್ನು ತೋರಿಸಿರಿ.


ಯೆಹೂದ್ಯರಿಗೂ, ಗ್ರೀಕರಿಗೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ನಮ್ಮ ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡಬೇಕೆಂತಲೂ ದೃಢವಾಗಿ ಬೋಧಿಸುವವನಾಗಿದ್ದೆನು, ಇದೆಲ್ಲಾ ನಿಮಗೇ ತಿಳಿದಿದೆ.


ಯೇಸು ಅವರಿಗೆ, “‘ಮನೆ ಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಇದು ಕರ್ತನಿಂದಲೇ ಆಯಿತು; ಮತ್ತು ನಮ್ಮ ಕಣ್ಣುಗಳಿಗೆ ಅದು ಆಶ್ಚರ್ಯವಾಗಿ ತೋರುತ್ತದೆ ಎಂಬ ಮಾತನ್ನು ನೀವು ಶಾಸ್ತ್ರದಲ್ಲಿ ಎಂದಾದರೂ ಓದಲಿಲ್ಲವೋ?’


ಆತನು ಅವರಿಗೆ, “ದಾವೀದನು ತಾನೂ ತನ್ನ ಸಂಗಡ ಇದ್ದವರೂ ಹಸಿದಾಗ ಏನು ಮಾಡಿದನೆಂಬುದನ್ನು ನೀವು ಓದಲಿಲ್ಲವೋ?


ಆದರೆ ಸತ್ತವರು ಬದುಕಿ ಬರುತ್ತಾರೆಂಬುದನ್ನು ಕುರಿತು ಹೇಳಬೇಕಾದರೆ ‘ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಆಗಿದ್ದೇನೆ ಎಂದು ಪೊದೆಯಲ್ಲಿ ದೇವರು ಮೋಶೆಯ ಸಂಗಡ ಮಾತನಾಡಿದನೆಂದು ನೀವು ಮೋಶೆಯ ಗ್ರಂಥದಲ್ಲಿ ಓದಲಿಲ್ಲವೋ?’


ಅದಕ್ಕೆ ಯೇಸು, “‘ನೀವು ದೇವರುಗಳೇ ಆಗಿದ್ದೀರಿ ಎಂದು ನಾನು ಹೇಳಿದೆನು’ ಎಂಬುದಾಗಿ ನಿಮ್ಮ ಧರ್ಮಶಾಸ್ತ್ರದಲ್ಲಿ ಬರೆದಿಲ್ಲವೋ?


ಆತನು ಪ್ರತ್ಯುತ್ತರವಾಗಿ, “ಮನುಷ್ಯರನ್ನು ಉಂಟುಮಾಡಿದವನು ಆದಿಯಿಂದಲೇ ಅವರನ್ನು ಗಂಡು ಮತ್ತು ಹೆಣ್ಣಾಗಿ ಉಂಟುಮಾಡಿದನು,


ಇದಲ್ಲದೆ ಸಬ್ಬತ್ ದಿನದಲ್ಲಿ ಯಾಜಕರು ದೇವಾಲಯದಲ್ಲಿ ಸಬ್ಬತ್ ದಿನವನ್ನು ಹೊಲೆಮಾಡಿದಾಗ್ಯೂ ಅವರು ನಿರಪರಾಧಿಗಳಾಗಿದ್ದಾರೆ. ಇದನ್ನು ನೀವು ಧರ್ಮಶಾಸ್ತ್ರದಲ್ಲಿ ಓದಲಿಲ್ಲವೋ?


ಆತನು ಅವನಿಗೆ, “ಧರ್ಮಶಾಸ್ತ್ರದಲ್ಲಿ ಏನು ಬರೆದದೆ? ಹೇಗೆ ಓದಿದ್ದೀ?” ಎಂದು ಕೇಳಿದನು.


ಆತನನ್ನು ಪೂರ್ಣಹೃದಯದಿಂದಲೂ, ಪೂರ್ಣ ಬುದ್ಧಿಯಿಂದಲೂ, ಪೂರ್ಣ ಶಕ್ತಿಯಿಂದಲೂ ಪ್ರೀತಿಸತಕ್ಕದ್ದು. ಇದಲ್ಲದೆ ತನ್ನನ್ನು ಪ್ರೀತಿಸಿಕೊಳ್ಳುವಂತೆ ತನ್ನ ನೆರೆಯವನನ್ನು ಪ್ರೀತಿಸುವುದು ಇವೆರಡೂ ಎಲ್ಲಾ ಸರ್ವಾಂಗಹೋಮಗಳಿಗಿಂತಲೂ ಎಲ್ಲಾ ಯಜ್ಞಗಳಿಗಿಂತಲೂ ಮೇಲಾದುವು” ಅಂದನು.


ಅದಕ್ಕೆ ಯೇಸು, “ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ, ಕ್ಷೇಮವಿಲ್ಲದವರಿಗೆ ಬೇಕು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು