Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 9:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಯೇಸು ಅಲ್ಲಿಂದ ಹಾದುಹೋಗುತ್ತಿರುವಾಗ ಇಬ್ಬರು ಕುರುಡರು, “ದಾವೀದ ಕುಮಾರನೇ, ನಮ್ಮನ್ನು ಕರುಣಿಸು” ಎಂದು ಕೂಗುತ್ತಾ ಆತನನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಯೇಸುಸ್ವಾಮಿ ಅಲ್ಲಿಂದ ಹೋಗುತ್ತಿರುವಾಗ ಇಬ್ಬರು ಕುರುಡರು, “ಸ್ವಾಮೀ, ದಾವೀದ ಕುಲಪುತ್ರರೇ, ನಮಗೆ ದಯೆತೋರಿ,” ಎಂದು ದನಿಯೆತ್ತಿ ಕೂಗಿಕೊಳ್ಳುತ್ತಾ ಅವರ ಹಿಂದೆಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಯೇಸು ಅಲ್ಲಿಂದ ಹೋಗುವಾಗ ಇಬ್ಬರು ಕುರುಡರು - ದಾವೀದನ ಕುಮಾರನೇ, ನಮ್ಮನ್ನು ಕರುಣಿಸು ಎಂದು ಕೂಗುತ್ತಾ ಆತನ ಹಿಂದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಯೇಸು ಅಲ್ಲಿಂದ ಹೊರಡುತ್ತಿರುವಾಗ ಇಬ್ಬರು ಕುರುಡರು ಆತನನ್ನು ಹಿಂಬಾಲಿಸಿದರು. ಅವರು, “ದಾವೀದನ ಕುಮಾರನೇ, ನಮಗೆ ದಯೆ ತೋರು” ಎಂದು ಗಟ್ಟಿಯಾಗಿ ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಯೇಸು ಅಲ್ಲಿಂದ ಹೋಗುತ್ತಿರುವಾಗ ಇಬ್ಬರು ಕುರುಡರು, “ದಾವೀದನ ಪುತ್ರನೇ, ನಮ್ಮ ಮೇಲೆ ಕರುಣೆಯಿಡು,” ಎಂದು ಮೊರೆಯಿಡುತ್ತಾ ಯೇಸುವಿನ ಹಿಂದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಜೆಜು ತೊ ಜಾಗೊ ಸೊಡುನ್ ಚಲುನ್ಗೆತ್ ಜಾತಾನಾ, ದೊಗೆ ಜಾನಾ ಕುಡ್ಡೆ ಜೆಜುಚ್ಯಾ ಫಾಟ್ನಾ ಯೆವ್ನಗೆತ್ “ಜೆಜು, ದಾವಿದಾಚ್ಯಾ ಲೆಕಾ ಅಮ್ಚಿ ದಯಾ ಕರ್” ಮನುನ್ ಬೊಬ್ ಮಾರುಕ್‍ಲಾಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 9:27
24 ತಿಳಿವುಗಳ ಹೋಲಿಕೆ  

ಆ ಸೀಮೆಯಿಂದ ಕಾನಾನ್ಯಳಾದ ಸ್ತ್ರೀಯೊಬ್ಬಳು ಹೊರಟು ಬಂದು, “ಕರ್ತನೇ, ದಾವೀದನ ಕುಮಾರನೇ, ನನ್ನ ಮೇಲೆ ಕರುಣೆಯಿಡು, ನನ್ನ ಮಗಳಿಗೆ ದೆವ್ವಹಿಡಿದು ಬಹಳ ಯಾತನೆಪಡುತ್ತಿದ್ದಾಳೆ” ಎಂದು ಕೂಗಿಕೊಂಡಳು.


ಕುರುಡರು ನೋಡುತ್ತಿದ್ದಾರೆ, ಕುಂಟರು ನಡೆಯುತ್ತಿದ್ದಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಿದ್ದಾರೆ, ಕಿವುಡರು ಕೇಳುತ್ತಿದ್ದಾರೆ, ಸತ್ತವರು ಜೀವದಿಂದ ಎಬ್ಬಿಸಲ್ಪಡುತ್ತಿದ್ದಾರೆ, ಮತ್ತು ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತಿದ್ದೆ.


“ಕರ್ತನೇ ನನ್ನ ಮಗನನ್ನು ಕರುಣಿಸು, ಅವನು ಮೂರ್ಛೆರೋಗದಿಂದ ಬಹಳ ಕಷ್ಟಪಡುತ್ತಿದ್ದಾನೆ. ಅನೇಕ ಬಾರಿ ಬೆಂಕಿಯಲ್ಲಿಯೂ, ನೀರಿನಲ್ಲಿಯೂ ಬೀಳುತ್ತಾನೆ.


ದಾವೀದನ ಸಂತಾನದಿಂದಲೂ ದಾವೀದನು ಇದ್ದ ಬೇತ್ಲೆಹೇಮೆಂಬ ಗ್ರಾಮದಿಂದಲೂ ಕ್ರಿಸ್ತನು ಬರುವನು ಎಂಬುದಾಗಿ ಪವಿತ್ರ ಗ್ರಂಥವು ಹೇಳುತ್ತದಲ್ಲವೇ?” ಅಂದರು.


ಅದೇ ಗಳಿಗೆಯಲ್ಲಿ ಆತನು ಅನೇಕರನ್ನು ರೋಗ, ಕಾಯಿಲೆ, ದೆವ್ವ ಇಂಥವುಗಳಿಂದ ಪೀಡಿತರಾದವರನ್ನು ವಾಸಿಮಾಡಿದನು ಮತ್ತು ಅನೇಕ ಕುರುಡರಿಗೆ ಕಣ್ಣಿನ ದೃಷ್ಟಿ ದಯಪಾಲಿಸಿದನು.


ನಮ್ಮ ಪಿತೃವಾದ ದಾವೀದನ ರಾಜ್ಯವು ಬರುತ್ತದೆ, ಅದಕ್ಕೆ ಆಶೀರ್ವಾದವುಂಟಾಗಲಿ; ಮೇಲಣ ಲೋಕಗಳಲ್ಲಿ ಹೊಸನ್ನ” ಎಂದು ಆರ್ಭಟಿಸಿದರು.


ಮತ್ತು ಇವನನ್ನು ಕೊಲ್ಲಬೇಕೆಂದು ಪದೇಪದೇ ಬೆಂಕಿಯಲ್ಲಿಯೂ ನೀರಿನಲ್ಲಿಯೂ ಕೆಡವಿತು; ನಿನ್ನ ಕೈಯಲ್ಲಿ ಏನಾದರೂ ಆಗುವ ಹಾಗಿದ್ದರೆ ನಮ್ಮ ಮೇಲೆ ಕನಿಕರವಿಟ್ಟು ನಮಗೆ ಸಹಾಯಮಾಡು” ಅಂದನು.


ಆತನ ಹಿಂದೆ ಮುಂದೆ ಗುಂಪಾಗಿ ಹೋಗುತ್ತಿದ್ದ ಜನರು, “ದಾವೀದನ ಕುಮಾರನಿಗೆ ಹೊಸನ್ನ! ಕರ್ತನ ಹೆಸರಿನಲ್ಲಿ ಬರುವವನು ಧನ್ಯನು! ಮೇಲಣ ಲೋಕಗಳಲ್ಲಿ ಹೊಸನ್ನ!” ಎಂದು ಆರ್ಭಟಿಸಿದರು.


ಅಬ್ರಹಾಮನ ಮಗನಾದ ದಾವೀದನ ಕುಮಾರನಾದ ಯೇಸು ಕ್ರಿಸ್ತನ ವಂಶಾವಳಿ.


ಆದರೆ ಮುಖ್ಯಯಾಜಕರೂ ಶಾಸ್ತ್ರಿಗಳೂ ಆತನು ಮಾಡಿದ ಆಶ್ಚರ್ಯಕರವಾದ ಕಾರ್ಯಗಳನ್ನು ನೋಡಿ ಹಾಗು “ದಾವೀದನ ಕುಮಾರನಿಗೆ ಹೊಸನ್ನ” ಎಂದು ದೇವಾಲಯದಲ್ಲಿ ಹುಡುಗರು ಕೂಗುತ್ತಿರುವುದನ್ನು ಕೇಳಿ ಕೋಪಗೊಂಡರು.


ಅವರ ಪೂರ್ವಿಕರು ಇವರಿಗೆ ಸಂಬಂಧಪಟ್ಟವರೇ, ಕ್ರಿಸ್ತನು ಶರೀರಸಂಬಂಧವಾಗಿ ಅವರ ವಂಶದಲ್ಲಿಯೇ ಹುಟ್ಟಿದನು. ಆತನು ಎಲ್ಲಾದರ ಮೇಲೆ ಒಡೆಯನೂ, ನಿರಂತರ ಸ್ತುತಿ ಹೊಂದತಕ್ಕ ದೇವರೂ ಆಗಿದ್ದಾನೆ. ಆಮೆನ್.


ಆಗ ಯೇಸು, “ಬರಬೇಕಾದ ಕ್ರಿಸ್ತನು ದಾವೀದನ ಮಗನೆಂದು ಹೇಳುತ್ತಾರಲ್ಲಾ, ಅದು ಹೇಗಾದೀತು?


“ಯೇಸುವೇ, ಗುರುವೇ, ನಮ್ಮ ಮೇಲೆ ದಯವಿಡು” ಎಂದು ಕೂಗಿ ಹೇಳಿದರು.


ನಮ್ಮ ತಂದೆಯಾಗಿರುವ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಲಭಿಸಲಿ.


ಯೇಸು ಮನೆಗೆ ಬಂದಾಗ ಆ ಕುರುಡರು ಆತನ ಬಳಿಗೆ ಬಂದರು. ಯೇಸು ಅವರನ್ನು, “ನಾನು ಇದನ್ನು ಮಾಡಬಲ್ಲೆನೆಂಬುದನ್ನು ನೀವು ನಂಬುತ್ತೀರೋ” ಎಂದು ಕೇಳಿದ್ದಕ್ಕೆ, ಅವರು “ಹೌದು, ಕರ್ತನೇ, ನಂಬುತ್ತೇವೆ” ಅಂದರು.


ಅವರು ಯೆರಿಕೋವಿನಿಂದ, ಹೊರಟುಹೋಗುತ್ತಿರುವಾಗ ಜನರ ದೊಡ್ಡ ಗುಂಪು ಆತನನ್ನು ಹಿಂಬಾಲಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು