Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 9:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಯೇಸು ಮನೆಗೆ ಬಂದಾಗ ಆ ಕುರುಡರು ಆತನ ಬಳಿಗೆ ಬಂದರು. ಯೇಸು ಅವರನ್ನು, “ನಾನು ಇದನ್ನು ಮಾಡಬಲ್ಲೆನೆಂಬುದನ್ನು ನೀವು ನಂಬುತ್ತೀರೋ” ಎಂದು ಕೇಳಿದ್ದಕ್ಕೆ, ಅವರು “ಹೌದು, ಕರ್ತನೇ, ನಂಬುತ್ತೇವೆ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಯೇಸು ಮನೆ ಸೇರಿದಾಗ ಆ ಕುರುಡರು ಸಮೀಪಕ್ಕೆ ಬಂದರು. “ನಾನು ನಿಮ್ಮನ್ನು ಗುಣಪಡಿಸಬಲ್ಲೆನೆಂದು ನೀವು ವಿಶ್ವಾಸವಿಡುತ್ತೀರೋ?” ಎಂದು ಯೇಸು ಪ್ರಶ್ನಿಸಿದರು. “ಹೌದು ಸ್ವಾಮೀ, ಹೌದು,” ಎಂದು ಅವರು ಉತ್ತರವಿತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆತನು ಮನೆಗೆ ಬಂದಾಗ ಆ ಕುರುಡರು ಆತನ ಬಳಿಗೆ ಬಂದರು. ಯೇಸು ಅವರನ್ನು - ನಾನು ಇದನ್ನು ಮಾಡಬಲ್ಲೆನೆಂಬದನ್ನು ನಂಬುತ್ತೀರೋ ಎಂದು ಕೇಳಿದ್ದಕ್ಕೆ ಅವರು - ಹೌದು, ಸ್ವಾಮೀ, ನಂಬುತ್ತೇವೆ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಯೇಸು ಮನೆಯೊಳಗೆ ಹೋದನು. ಕುರುಡರೂ ಆತನ ಸಂಗಡ ಹೋದರು. ಯೇಸು ಅವರಿಗೆ, “ನಾನು ನಿಮ್ಮನ್ನು ಗುಣಪಡಿಸಬಲ್ಲೆನೆಂದು ನೀವು ನಂಬುತ್ತೀರೋ?” ಎಂದು ಕೇಳಿದನು. ಕುರುಡರು, “ಹೌದು ಪ್ರಭುವೇ, ನಾವು ನಂಬುತ್ತೇವೆ” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಯೇಸು ಮನೆಗೆ ಬಂದಾಗ, ಆ ಕುರುಡರು ಅವರ ಬಳಿಗೆ ಬಂದರು. ಆಗ ಯೇಸು ಅವರಿಗೆ, “ನಾನು ಇದನ್ನು ಮಾಡಲು ಶಕ್ತನೆಂದು ನೀವು ನಂಬುತ್ತೀರೋ?” ಎಂದು ಕೇಳಿದರು. ಅದಕ್ಕವರು ಯೇಸುವಿಗೆ, “ಹೌದು ಕರ್ತನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಜೆಜು ಥೈ ಘರಾತ್ ಪಾವಲ್ಲ್ಯಾ ತನ್ನಾ ದೊಗೆಬಿ ಕುಡ್ಡೆ ಜೆಜುಕ್ಡೆ ಯೆಲೆ. ಜೆಜುನ್ ತೆಂಕಾ, “ಮಿಯಾ ತುಮ್ಕಾ ದಿಸ್ಟ್ ದಿವ್ಕ್ ಹೊತಾ ಮನುನ್ ತುಮ್ಕಾ ವಿಶ್ವಾಸ್ ಹಾಯ್ ಕಾಯ್?” ಮನುನ್ ಇಚಾರ್‍ಲ್ಯಾನ್. ತನ್ನಾ ತೆನಿ “ಹೊಯ್ ಧನಿಯಾ,” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 9:28
14 ತಿಳಿವುಗಳ ಹೋಲಿಕೆ  

ಆಗ ಯೇಸು ಹಿಂತಿರುಗಿ ಆಕೆಯನ್ನು ನೋಡಿ, “ಮಗಳೇ, ಧೈರ್ಯವಾಗಿರು; ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು” ಅಂದನು. ಆ ಕ್ಷಣವೇ ಆ ಹೆಂಗಸು ಸ್ವಸ್ಥಳಾದಳು.


ಆಗ ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದು ಆತನಿಗೆ ಅಡ್ಡಬಿದ್ದು, “ಕರ್ತನೇ, ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ” ಅಂದನು.


ಯೇಸು ಆಕೆಗೆ, “ನೀನು ನಂಬಿದರೆ ದೇವರ ಮಹಿಮೆಯನ್ನು ಕಾಣುವಿ ಎಂದು ನಾನು ನಿನಗೆ ಹೇಳಲಿಲ್ಲವೇ?” ಎಂದು ಉತ್ತರ ಕೊಟ್ಟನು


ಮತ್ತು ಜೀವಿಸುವ ಪ್ರತಿಯೊಬ್ಬನು ನನ್ನಲ್ಲಿ ನಂಬಿಕೆಯಿಟ್ಟರೆ, ಅವನು ಎಂದಿಗೂ ಸಾಯುವುದಿಲ್ಲ. ಇದನ್ನು ನೀನು ನಂಬುತ್ತೀಯೋ?” ಎಂದು ಕೇಳಿದಕ್ಕೆ,


ಅವರ ಅಪನಂಬಿಕೆಯ ನಿಮಿತ್ತ ಆತನು ಅಲ್ಲಿ ಹೆಚ್ಚು ಮಹತ್ಕಾರ್ಯಗಳನ್ನು ಮಾಡಲಿಲ್ಲ.


ತರುವಾಯ ಯೇಸು ಪೇತ್ರನ ಮನೆಗೆ ಬಂದಾಗ, ಪೇತ್ರನ ಅತ್ತೆ ಜ್ವರದಲ್ಲಿ ಮಲಗಿರುವುದನ್ನು ಕಂಡು, ಆತನು ಆಕೆಯ ಕೈಯನ್ನು ಮುಟ್ಟಿದನು ತಕ್ಷಣವೇ


ಅನಂತರ ಯೇಸು ಜನರ ಗುಂಪನ್ನು ಬಿಟ್ಟು ಮನೆಯೊಳಗೆ ಹೋದನು. ಆಗ ಆತನ ಶಿಷ್ಯರು ಆತನ ಬಳಿಗೆ ಬಂದು, ಹೊಲದ ಕಳೆಯ ಸಾಮ್ಯದ ಅರ್ಥವನ್ನು ನಮಗೆ ವಿವರಿಸು ಅಂದರು.


ಯೇಸು ಅಲ್ಲಿಂದ ಹಾದುಹೋಗುತ್ತಿರುವಾಗ ಇಬ್ಬರು ಕುರುಡರು, “ದಾವೀದ ಕುಮಾರನೇ, ನಮ್ಮನ್ನು ಕರುಣಿಸು” ಎಂದು ಕೂಗುತ್ತಾ ಆತನನ್ನು ಹಿಂಬಾಲಿಸಿದರು.


ಆಗ ಆತನು ಅವರ ಕಣ್ಣುಗಳನ್ನು ಮುಟ್ಟಿ, “ನಿಮ್ಮ ನಂಬಿಕೆಯಂತೆ ನಿಮಗೆ ಆಗಲಿ” ಅಂದನು. ಆಗ ಅವರ ಕಣ್ಣುಗಳು ತೆರೆಯಲ್ಪಟ್ಟವು.


ಆದೇ ದಿನದಲ್ಲಿ ಯೇಸು ಮನೆಯಿಂದ ಹೊರಟು ಸಮುದ್ರದ ದಡದಲ್ಲಿ ಕುಳಿತುಕೊಂಡನು.


ಪೌಲನು ಆಡುವ ಮಾತುಗಳನ್ನು ಅವನು ಕಿವಿಗೊಟ್ಟು ಕೇಳುತ್ತಿದ್ದನು. ಪೌಲನು ಅವನನ್ನು ದಿಟ್ಟಿಸಿ ನೋಡಿ ವಾಸಿಯಾಗುವುದಕ್ಕೆ ಬೇಕಾದ ನಂಬಿಕೆಯು ಅವನಲ್ಲಿ ಉಂಟೆಂದು ತಿಳಿದು;


ಯೆಹೋವನು ಎಲೀಯನ ಮುಖಾಂತರವಾಗಿ ಹೇಳಿದಂತೆ ಮಡಿಕೆಯಲ್ಲಿದ್ದ ಹಿಟ್ಟು ತೀರಲಿಲ್ಲ ಮತ್ತು ಮೊಗೆಯಲ್ಲಿದ್ದ ಎಣ್ಣೆಯು ಮುಗಿದುಹೋಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು