Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 9:36 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಯೇಸು ಜನರ ಗುಂಪುಗಳನ್ನು ನೋಡಿ ಅವರು ಕುರುಬನಿಲ್ಲದ ಕುರಿಗಳ ಹಾಗೆ ಚದುರಿರುವುದನ್ನು ಕಂಡು ಅವರ ಮೇಲೆ ಕನಿಕರಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಆ ಜನಸಮೂಹವನ್ನು ಕಂಡಾಗ ಅವರ ಮನ ಕರಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಆದರೆ ಜನರ ಗುಂಪುಗಳನ್ನು ನೋಡಿ ಅವರು ಕುರುಬನಿಲ್ಲದ ಕುರಿಗಳ ಹಾಗೆ ತೊಳಲಿ ಬಳಲಿ ಹೋಗಿದ್ದಾರಲ್ಲ ಎಂದು ಅವರ ಮೇಲೆ ಕನಿಕರಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ನೋವಿನಿಂದ ನರಳುತ್ತಿದ್ದ ಮತ್ತು ಅಸಹಾಯಕರಾಗಿದ್ದ ಅನೇಕ ಜನರನ್ನು ಯೇಸು ನೋಡಿ ದುಃಖಪಟ್ಟನು. ಕುರುಬನಿಲ್ಲದ ಕುರಿಗಳಂತೆ ಅವರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಜನಸಮೂಹವೂ ಕುರುಬನಿಲ್ಲದ ಕುರಿಗಳಂತೆ ಅಲೆಯುವವರಾಗಿಯೂ ನಿಸ್ಸಹಾಯಕರಾಗಿಯೂ ಇರುವುದನ್ನು ಕಂಡು ಯೇಸು ಅವರ ಮೇಲೆ ಕನಿಕರಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ಖರೆ ಲೊಕಾಂಚ್ಯಾ ತಾಂಡ್ಯಾಕ್ನಿ ಬಗುನ್, ಜೆಜುಕ್ ತೆಂಚೊ ಪಾಪ್ ದಿಸ್ಲೊ. ಕಶ್ಯಾಕ್ ಮಟ್ಲ್ಯಾರ್, ತಿ ಲೊಕಾ ಬೆಜಾರಾನ್ ಅನಿ ಕಾಯ್ಬಿ ಅದಾರ್ ‍ನಸ್ತಾನಾ ರಾಕ್ವಾಲಿನಸಲ್ಲ್ಯಾ ಬಕ್ರ್ಯಾಂಚ್ಯಾ ಸರ್ಕೆ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 9:36
18 ತಿಳಿವುಗಳ ಹೋಲಿಕೆ  

ಯೆಹೋವನು ಅವರ ಮುಂದಾಗಿ ಹೋಗಲಿ ಅಥವಾ ಅವರನ್ನು ಮುನ್ನಡೆಸಲು, ಮುಂದಾಗಿ ಬರಲಿ ಅವರನ್ನು ಹಿಂದಕ್ಕೆ ಕರೆದುಕೊಂಡು ಬರಲು, ಒಬ್ಬ ನಾಯಕನನ್ನು ನೇಮಿಸು ನಿನ್ನವರಾದ ಈ ಜನ ಸಮೂಹವು ಕುರುಬನಿಲ್ಲದ ಕುರಿಗಳಂತೆ ಆಗಬಾರದು” ಎಂದು ಬೇಡಿದನು.


ಯೇಸು ದೋಣಿಯಿಂದ ಇಳಿದಾಗ ದೊಡ್ಡ ಜನಸಮೂಹವನ್ನು ನೋಡಿ ಇವರು ಕುರುಬನಿಲ್ಲದ ಕುರಿಗಳ ಹಾಗಿದ್ದಾರಲ್ಲಾ ಎಂದು ಕನಿಕರಪಟ್ಟು ಅವರಿಗೆ ಅನೇಕ ವಿಷಯಗಳನ್ನು ಕುರಿತು ಬೋಧಿಸಲಾರಂಭಿಸಿದನು.


ನನ್ನ ಜನರು ತಪ್ಪಿಸಿಕೊಂಡ ಕುರಿಗಳು; ಪಾಲಕರು ಅವರನ್ನು ದಾರಿತಪ್ಪಿಸಿ ಪರ್ವತಗಳಲ್ಲಿ ಅಲೆದಾಡಿಸಿದ್ದಾರೆ; ನನ್ನ ಜನರು ತಮ್ಮ ಹಕ್ಕೆಯನ್ನು ಮರೆತು ಬೆಟ್ಟಗುಡ್ಡಗಳಲ್ಲಿ ತಿರುಗಾಡುತ್ತಲಿದ್ದಾರೆ.


ಆತನು ಅವರಿಗಿಂತ ಮುಂದಾಗಿ ಬಂದು ಬಹು ಜನರ ಗುಂಪನ್ನು ಕಂಡು ಅವರ ಮೇಲೆ ಕನಿಕರಪಟ್ಟು ಅವರಲ್ಲಿದ್ದ ರೋಗಿಗಳನ್ನು ಸ್ವಸ್ಥಮಾಡಿದನು.


ವಿಗ್ರಹಗಳು ನುಡಿಯುವುದು ಸುಳ್ಳು; ಕಣಿಹೇಳುವವರು ದರ್ಶನವನ್ನು ಕಾಣುವುದು ಸುಳ್ಳು, ತಿಳಿಸುವ ಕನಸುಗಳು ಮೋಸವಾದವುಗಳು, ಹೇಳುವ ಸಮಾಧಾನವು ವ್ಯರ್ಥ. ಆದುದರಿಂದ ನನ್ನ ಜನರು ದಿಕ್ಕಾಪಾಲಾಗಿದ್ದಾರೆ; ಕುರುಬನು ಇಲ್ಲದ ಕಾರಣ ಬಾಧೆಗೆ ಒಳಗಾಗಿದ್ದಾರೆ.


ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ, “ನಾನು ಈ ಜನರನ್ನು ನೋಡಿ ಕನಿಕರಪಡುತ್ತೇನೆ. ಏಕೆಂದರೆ ಅವರು ಮೂರು ದಿನಗಳಿಂದಲೂ ನನ್ನ ಜೊತೆಯಲ್ಲಿದ್ದಾರೆ. ಅವರಿಗೆ ತಿನ್ನುವುದಕ್ಕೆ ಏನೂ ಇಲ್ಲ. ಅವರನ್ನು ಹಸಿವಿನಿಂದ ಕಳುಹಿಸಿಬಿಡುವುದಕ್ಕೆ ನನಗೆ ಇಷ್ಟವಿಲ್ಲ. ಅವರು ದಾರಿಯಲ್ಲಿ ಬಳಲಿ ಹೋದಾರು” ಎಂದು ಹೇಳಿದನು.


ಆದರೆ ಯೇಸು ಹೇಳಿದ್ದೇನೆಂದರೆ “ಕಳೆದುಹೋದ ಕುರಿಗಳಂತಿರುವ ಇಸ್ರಾಯೇಲ್ ಮನೆತನದವರ ಬಳಿಗೇ ಹೊರತು ಮತ್ತಾರ ಬಳಿಗೂ ನಾನು ಕಳುಹಿಸಲ್ಪಟ್ಟವನಲ್ಲ” ಅಂದನು.


ಆಗ ಅವನು, “ಇಸ್ರಾಯೇಲರೆಲ್ಲರೂ ಕುರುಬನಿಲ್ಲದ ಕುರಿ ಹಿಂಡುಗಳಂತೆ ಬೆಟ್ಟಗಳಲ್ಲಿ ಚದರಿ ಹೋದದ್ದನ್ನು ಕಂಡೆನು; ಆಗ ಯೆಹೋವನು, ‘ಇವರು ಒಡೆಯನಿಲ್ಲದವರಾಗಿ ಇರುತ್ತಾರೆ; ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ’” ಎಂಬುದಾಗಿ ಉತ್ತರಕೊಟ್ಟನು.


ತಾನೂ ಸಹ ಬಲಹೀನನಾಗಿರುವುದರಿಂದ ಅವನು ಅಜ್ಞಾನಿಗಳಿಗೂ ಮತ್ತು ಮಾರ್ಗತಪ್ಪಿದವರಿಗೂ ದಯಾಪರನಾಗಿ ನಡೆದುಕೊಳ್ಳುವುದಕ್ಕೆ ಶಕ್ತನಾಗಿರುವನು.


ಏಕೆಂದರೆ ನಮಗಿರುವ ಮಹಾಯಾಜಕನು ನಮ್ಮ ಬಲಹೀನತೆಗಳಲ್ಲಿ ಅನುಕಂಪ ತೋರಿಸುವವನಾಗಿದ್ದಾನೆ. ಆತನು ಸರ್ವ ವಿಷಯಗಳಲ್ಲಿಯೂ ನಮ್ಮ ಹಾಗೆ ಶೋಧನೆಗೆ ಗುರಿಯಾದವನು, ಪಾಪ ಮಾತ್ರ ಮಾಡಲಿಲ್ಲವಷ್ಟೇ.


ಇವರನ್ನು ಬಿಟ್ಟು ತಪ್ಪಿಸಿಕೊಂಡ ಕುರಿಗಳಂತಿರುವ ಇಸ್ರಾಯೇಲಿನ ಮನೆತನದವರ ಬಳಿಗೆ ಹೋಗಿರಿ.


ಆಗ ಮೀಕಾಯೆಹುವು, “ಇಸ್ರಾಯೇಲರೆಲ್ಲರು ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳಲ್ಲಿ ಚದುರಿಹೋದದ್ದನ್ನು ಕಂಡೆನು. ಆಗ ಯೆಹೋವನು, ‘ಇವರು ಒಡೆಯನಿಲ್ಲದವರಾಗಿರುತ್ತಾರೆ, ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ’ ಎಂದನು” ಎಂಬುದಾಗಿ ಉತ್ತರಕೊಟ್ಟನು.


ಇಗೋ, ದೇಶದಲ್ಲಿ ನಾನು ಒಬ್ಬ ಕುರುಬನನ್ನು ನೇಮಿಸುವೆನು; ಅವನು ಹಾಳಾಗುತ್ತಿರುವ ಕುರಿಗಳನ್ನು ನೋಡಿಕೊಳ್ಳನು, ಚದುರಿದವುಗಳನ್ನು ಹುಡುಕನು, ಊನವಾದವುಗಳನ್ನು ಗುಣಪಡಿಸನು, ನೆಟ್ಟಗಿರುವವುಗಳನ್ನು ಸಾಕನು; ಕೊಬ್ಬಿದವುಗಳ ಮಾಂಸವನ್ನು ತಿನ್ನುವನು, ಕುರಿಗಳ ಗೊರಸುಗಳನ್ನು ಚೂರುಚೂರು ಮಾಡುವನು.


ಬೇಟೆಗಾರನಿಂದ ತಪ್ಪಿಸಿಕೊಂಡು ಓಡುವ ಜಿಂಕೆಯಂತೆಯೂ, ಒಟ್ಟುಗೂಡಿಸಲು ಯಾರೂ ಇಲ್ಲದಂಥ ಕುರಿಗಳಂತೆಯೂ ಪ್ರತಿಯೊಬ್ಬನೂ ಸ್ವಜನರ ಕಡೆಗೆ ತಿರುಗಿಕೊಂಡು ಸ್ವದೇಶಕ್ಕೆ ಓಡಿಹೋಗುವನು.


“ಈ ಜನರನ್ನು ನೋಡಿ ಕನಿಕರಪಡುತ್ತೇನೆ, ಏಕೆಂದರೆ ಮೂರು ದಿನಗಳಿಂದ ಇವರು ನನ್ನ ಬಳಿಯಲ್ಲಿದ್ದಾರೆ; ಇವರಿಗೆ ಊಟಕ್ಕೆ ಏನೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು