Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 2:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಮ್ಮೆಲ್ಲರಿಗೂ ಒಬ್ಬನೇ ತಂದೆ; ಒಬ್ಬನೇ ದೇವರು ನಮ್ಮನ್ನು ಸೃಷ್ಟಿಮಾಡಿದ್ದನಲ್ಲವೇ; ಹೀಗಿರಲು ನಾವು ಒಬ್ಬರಿಗೊಬ್ಬರು ದ್ರೋಹಮಾಡಿ ದೇವರು ನಮ್ಮ ಪೂರ್ವಿಕರೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಹೊಲೆಮಾಡುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನಮ್ಮೆಲ್ಲರಿಗೂ ತಂದೆ ಒಬ್ಬರೇ ಅಲ್ಲವೇ? ನಮ್ಮೆಲ್ಲರನ್ನು ಸೃಷ್ಟಿಸಿದ ದೇವರು ಒಬ್ಬರೇ ಅಲ್ಲವೇ? ಹೀಗಿರಲು ನಾವು ಒಬ್ಬರಿಗೊಬ್ಬರು ದ್ರೋಹ ಮಾಡುವುದೇಕೆ? ದೇವರು ನಮ್ಮ ಪೂರ್ವಜರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ನಾವು ಉಲ್ಲಂಘಿಸುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಮ್ಮೆಲ್ಲರಿಗೂ ಒಬ್ಬನೇ ತಂದೆಯಷ್ಟೆ; ಒಬ್ಬನೇ ದೇವರು ನಮ್ಮನ್ನು ಸೃಷ್ಟಿಸಿದನಲ್ಲಾ; ಹೀಗಿರಲು ನಾವು ಒಬ್ಬರಿಗೊಬ್ಬರು ದ್ರೋಹಮಾಡಿ ದೇವರು ನಮ್ಮ ಪಿತೃಗಳೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಭಂಗಪಡಿಸುವದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಮಗೆಲ್ಲರಿಗೂ ಒಬ್ಬನೇ ತಂದೆಯಾದ ದೇವರು. ಆ ದೇವರೇ ನಮ್ಮೆಲ್ಲರನ್ನು ಉಂಟುಮಾಡಿದನು. ಹೀಗಿರುವಾಗ ಜನರು ತಮ್ಮ ಸಹೋದರರನ್ನು ಯಾಕೆ ಮೋಸಪಡಿಸುತ್ತಾರೆ? ಒಡಂಬಡಿಕೆಯನ್ನು ಅವರು ಮಾನ್ಯತೆ ಮಾಡುವವರೆಂದು ಜನರಿಗೆ ತೋರಿಸುವದಿಲ್ಲ. ತಮ್ಮ ಪೂರ್ವಿಕರು ಯೆಹೋವನೊಂದಿಗೆ ಮಾಡಿದ್ದ ಒಡಂಬಡಿಕೆಯನ್ನು ಅವರು ಮಾನ್ಯತೆ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಮ್ಮೆಲ್ಲರಿಗೆ ಒಬ್ಬನೇ ತಂದೆಯಲ್ಲವೋ? ನಮ್ಮನ್ನು ಒಬ್ಬರೇ ದೇವರು ಸೃಷ್ಟಿಸಿದರಲ್ಲವೋ? ಏಕೆ ಪ್ರತಿಯೊಬ್ಬನು ತನ್ನ ಸಹೋದರನಿಗೆ ವಿರೋಧವಾಗಿ ವಂಚನೆಯಾಗಿ ನಡೆದು, ನಮ್ಮ ತಂದೆಗಳ ಒಡಂಬಡಿಕೆಯನ್ನು ಮುರಿಯುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 2:10
50 ತಿಳಿವುಗಳ ಹೋಲಿಕೆ  

ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ. ನಮ್ಮನ್ನು ಉಂಟುಮಾಡಿದವನು ಆತನೇ; ನಾವು ಆತನವರು, ಆತನ ಪ್ರಜೆಯೂ, ಆತನು ಪಾಲಿಸುವ ಹಿಂಡೂ ಆಗಿದ್ದೇವೆ.


ಯೆಹೂದವು ದ್ರೋಹಮಾಡಿದೆ, ಇಸ್ರಾಯೇಲಿನಲ್ಲಿಯೂ, ಯೆರೂಸಲೇಮಿನಲ್ಲಿಯೂ ಒಂದು ದುರಾಚಾರವು ನಡೆಯುತ್ತಿದೆ; ಯೆಹೂದವು ಅನ್ಯದೇವತೆಯನ್ನು ಆರಾಧಿಸುವ ಮಹಿಳೆಯರನ್ನು ಮದುವೆಯಾಗಿ ಯೆಹೋವನ ಪ್ರಿಯ ದೇವಾಲಯವನ್ನು ಹೊಲೆಗೆಡಿಸಿದೆ.


“ನಮಗಾದರೋ ಒಬ್ಬನೇ ತಂದೆಯಾದ ದೇವರು; ಆತನೇ ಸಮಸ್ತಕ್ಕೂ ಮೂಲಕಾರಣನು; ನಾವು ಜೀವಿಸುವುದು ಆತನಿಗಾಗಿಯೇ, ಮತ್ತು ಒಬ್ಬನೇ ಕರ್ತನಾದ ಯೇಸು ಕ್ರಿಸ್ತನೆಂಬ ಏಕ ಕರ್ತನು ನಮಗಿದ್ದಾನೆ. ಆತನ ಮುಖಾಂತರವೇ ಸಮಸ್ತವೂ ಉಂಟಾಯಿತು. ನಾವೂ ಆತನ ಮುಖಾಂತರ ಉಂಟಾದೆವು.”


ಎಲ್ಲರಿಗೂ ತಂದೆಯಾಗಿರುವ ದೇವರು ಒಬ್ಬನೇ. ಆತನು ಎಲ್ಲರ ಮೇಲಿರುವವನೂ, ಎಲ್ಲರ ಮುಖಾಂತರ ಕಾರ್ಯ ನಡಿಸುವವನೂ, ಎಲ್ಲರಲ್ಲಿ ವಾಸಿಸುವವನೂ ಆಗಿದ್ದಾನೆ.


ನೀನೇ ನಮ್ಮ ಪಿತೃವಾಗಿದ್ದೀಯಲ್ಲಾ; ಅಬ್ರಹಾಮನು ನಮ್ಮನ್ನರಿಯನು, ಇಸ್ರಾಯೇಲನು ನಮ್ಮನ್ನು ಗುರುತಿಸನು; ಯೆಹೋವನೇ, ನೀನೇ ನಮ್ಮ ಪಿತೃ; ನೀನು ಆದಿಯಿಂದಲೂ ‘ನಮ್ಮ ವಿಮೋಚಕನು’ ಅನ್ನಿಸಿಕೊಂಡಿದ್ದಿ.


ಈಗಲಾದರೋ ಯೆಹೋವನೇ, ನೀನು ನಮ್ಮ ತಂದೆಯಾಗಿದ್ದಿ; ನೀನು ಕುಂಬಾರನು, ನಾವು ಜೇಡಿಮಣ್ಣು, ನಾವೆಲ್ಲರೂ ನಿನ್ನ ಕೈಕೆಲಸವೇ.


ಮರುದಿನ ತಾವು ತಾವೇ ಹೊಡೆದಾಡಿಕೊಳ್ಳುತ್ತಿರುವಾಗ ಅವನು ಅವರಿಗೆ ಎದುರಾಗಿ ಬಂದು, ‘ಜನರೇ, ನೀವು ಸಹೋದರರಲ್ಲವೇ, ನೀವೇಕೆ ಒಬ್ಬರಿಗೊಬ್ಬರು ಅನ್ಯಾಯ ಮಾಡುತ್ತೀರಿ?’ ಎಂದು ಹೇಳಿ ಅವರನ್ನು ಸಮಾಧಾನ ಪಡಿಸಲು ಬಂದನು.


ಅಬ್ರಹಾಮನು ನಮ್ಮ ತಂದೆ ಎಂದು ನಿಮ್ಮೊಳಗೆ ಅಂದುಕೊಳ್ಳಬೇಡಿರಿ. ದೇವರು ಅಬ್ರಹಾಮನಿಗಾಗಿ ಈ ಕಲ್ಲುಗಳಿಂದಲೂ ಮಕ್ಕಳನ್ನು ಸೃಷ್ಟಿಮಾಡಬಲ್ಲನೆಂದು ನಿಮಗೆ ಹೇಳುತ್ತೇನೆ.


ನೀವು ನಿಮ್ಮ ತಂದೆಯ ಕಾರ್ಯಗಳನ್ನು ಮಾಡುತ್ತಿದ್ದೀರಿ” ಎಂದನು. ಅದಕ್ಕವರು, “ನಾವು ವ್ಯಭಿಚಾರದಿಂದ ಹುಟ್ಟಿದವರಲ್ಲ. ನಮಗೆ ಒಬ್ಬನೇ ತಂದೆ, ಆತನು ದೇವರೇ” ಎಂದರು.


ಆತನ ಬಳಿಗೆ ತಮ್ಮ ಶಿಷ್ಯರನ್ನು ಹೆರೋದ್ಯರ ಜೊತೆಮಾಡಿ ಕಳುಹಿಸಿದರು. ಇವರು ಯೇಸುವಿಗೆ, “ಗುರುವೇ, ನೀನು ಸತ್ಯವಂತನು, ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನು, ಯಾರಿಗೂ ಹೆದರದವನು; ನೀನು ಜನರ ದಾಕ್ಷಿಣ್ಯಕ್ಕೆ ತಕ್ಕಂತೆ ಮಾತನಾಡುವವನಲ್ಲ ಎಂದು ಬಲ್ಲೆವು.


ಇದಲ್ಲದೆ ಸಹೋದರನು ಸಹೋದರನನ್ನು, ತಂದೆಯು ಮಗನನ್ನು, ಮರಣಕ್ಕೆ ಒಪ್ಪಿಸುವರು; ಮಕ್ಕಳು ತಂದೆತಾಯಿಗಳ ಮೇಲೆ ತಿರುಗಿಬಿದ್ದು ಅವರನ್ನು ಕೊಲ್ಲಿಸುವರು.


“ನಿಮ್ಮ ಧರ್ಮೋಪದೇಶದಿಂದ ಬಹು ಜನರನ್ನು ಮುಗ್ಗರಿಸುವ ಹಾಗೆ ಮಾಡಿದ್ದೀರಿ; ಲೇವಿಯ ಒಡಂಬಡಿಕೆಯನ್ನು ಭಂಗಪಡಿಸಿದ್ದೀರಿ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


“ನನ್ನ ನಾಮವನ್ನು ಧಿಕ್ಕರಿಸುವ ಯಾಜಕರೇ, ಮಗನು ತಂದೆಗೆ ಸನ್ಮಾನ ಸಲ್ಲಿಸುತ್ತಾನಲ್ಲಾ, ಆಳು ಧಣಿಗೆ ಭಯಭಕ್ತಿ ತೋರಿಸುತ್ತಾನಷ್ಟೇ; ನಾನು ತಂದೆಯಾಗಿರಲು ನನಗೆ ಸಲ್ಲುವ ಸನ್ಮಾನವೆಲ್ಲಿ? ನಾನು ದಣಿಯಾಗಿರಲು ನನಗೆ ತೋರಿಸುವ ಭಯಭಕ್ತಿಯೆಲ್ಲಿ?” ಎಂದು ಸೇನಾಧೀಶ್ವರನಾದ ಯೆಹೋವನು ನಿಮಗೇ ನುಡಿಯುತ್ತಾನೆ. ಆದರೆ ನೀವು, “ಯಾವ ವಿಷಯದಲ್ಲಿ ನಿನ್ನ ನಾಮವನ್ನು ಧಿಕ್ಕರಿಸಿದ್ದೇವೆ?” ಅನ್ನುತ್ತೀರಿ.


“ನರಪುತ್ರನೇ, ಇಸ್ರಾಯೇಲ್ ಸೀಮೆಯ ಹಾಳು ಪ್ರದೇಶಗಳಲ್ಲಿ ವಾಸಿಸುವವರು ‘ಅಬ್ರಹಾಮನು ಒಂಟಿಗನಾಗಿದ್ದರೂ ಈ ದೇಶವು ಅವನಿಗೆ ಸ್ವತ್ತಾಗಿ ಸಿಕ್ಕಿತಲ್ಲಾ; ಅದು ಬಹು ಜನರಾದ ನಮಗೆ ಸ್ವತ್ತಾಗಿ ಸಿಕ್ಕಿದ್ದು ಬಹು ದೊಡ್ಡದು?’” ಎಂದು ಅಂದುಕೊಳ್ಳುತ್ತಿದ್ದಾರೆ.


ನಿಮ್ಮ ಪಿತೃವಾದ ಅಬ್ರಹಾಮನನ್ನೂ, ನಿಮ್ಮನ್ನು ಹೆತ್ತ ಸಾರಳನ್ನೂ ದೃಷ್ಟಿಸಿರಿ. ಅಬ್ರಹಾಮನು ಒಬ್ಬನೇ ಇದ್ದಾಗ ನಾನು ಅವನನ್ನು ಕರೆದು, ಆಶೀರ್ವದಿಸಿ ಅವನ ಸಂತಾನವನ್ನು ಹೆಚ್ಚಿಸಿದೆನು.


ನಿನ್ನನ್ನು ನಿರ್ಮಾಣಮಾಡಿ, ಗರ್ಭದಿಂದಲೂ ರೂಪಿಸುತ್ತಾ ಬಂದು ನಿನಗೆ ಸಹಾಯ ಮಾಡುವವನಾದ ಯೆಹೋವನು ಹೀಗೆನ್ನುತ್ತಾನೆ, “ನನ್ನ ಸೇವಕನಾದ ಯಾಕೋಬೇ, ನಾನು ಆದುಕೊಂಡ ಯೆಶುರೂನೇ, ಭಯಪಡಬೇಡ!


ನಾನು ಯೆಹೋವನು, ನಿಮ್ಮ ಸದಮಲಸ್ವಾಮಿಯು, ಇಸ್ರಾಯೇಲನ್ನು ಸೃಷ್ಟಿಸಿದವನು, ನಿಮ್ಮ ಅರಸನೂ ಆಗಿದ್ದೇನೆ.


ನನ್ನ ಮಹಿಮೆಗಾಗಿ ನಾನು ಸೃಷ್ಟಿಸಿ ರೂಪಿಸಿ ಉಂಟುಮಾಡಿದ ನನ್ನ ಹೆಸರಿನವರೆಲ್ಲರನ್ನೂ ಬರಮಾಡಬೇಕೆಂದು ಅಪ್ಪಣೆಕೊಡುವೆನು.


ಈಗಲಾದರೋ, ಯಾಕೋಬನ ವಂಶವೇ, ಇಸ್ರಾಯೇಲ್ ಸಂತಾನವೇ, ನಿನ್ನನ್ನು ಸೃಷ್ಟಿಸಿ ರೂಪಿಸಿದವನಾದ ಯೆಹೋವನು ಹೀಗೆನ್ನುತ್ತಾನೆ, “ಭಯಪಡಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ, ನಿನ್ನ ಹೆಸರು ಹಿಡಿದು ಕರೆದೆನಲ್ಲಾ, ನೀನು ನನ್ನವನೇ.


ನನ್ನನ್ನು ಗರ್ಭದಲ್ಲಿ ನಿರ್ಮಿಸಿದಾತನೇ ಅವನನ್ನೂ ನಿರ್ಮಿಸಲಿಲ್ಲವೋ? ಆತನೊಬ್ಬನೇ ನಮ್ಮಿಬ್ಬರನ್ನೂ ಗರ್ಭದಲ್ಲಿ ರೂಪಿಸಿದನಲ್ಲವೇ.


ನನ್ನ ದೇವರೇ, ಅವರು ಯಾಜಕತ್ವವನ್ನೂ, ಯಾಜಕರ ಮತ್ತು ಲೇವಿಯರ ಪ್ರತಿಜ್ಞೆಯನ್ನೂ ಹೊಲೆಮಾಡಿದ್ದಾರಲ್ಲಾ. ಅವರ ಕೃತ್ಯಗಳನ್ನೂ ನೆನಪುಮಾಡಿಕೋ.


ನಾನು ನಿಮ್ಮ ಪಿತೃವಾದ ಅಬ್ರಹಾಮನನ್ನು ಅಲ್ಲಿಂದ ಕರೆತಂದು ಕಾನಾನ್ ದೇಶದಲ್ಲೆಲ್ಲಾ ಸಂಚಾರ ಮಾಡಿ, ಇಸಾಕನೆಂಬ ಮಗನನ್ನು ಕೊಟ್ಟು ಅವನ ಸಂತಾನವನ್ನು ಹೆಚ್ಚಿಸಿದೆನು.


ಆದ್ದರಿಂದ ನೀವು ನನ್ನ ಮಾತುಗಳನ್ನು ಶ್ರದ್ಧೆಯಿಂದ ಕೇಳಿ, ನನ್ನ ಒಡಂಬಡಿಕೆಯನ್ನು ಕಾಪಾಡಿಕೊಂಡರೆ, ನೀವು ಎಲ್ಲಾ ಜನಾಂಗಗಳಲ್ಲಿ ನನಗೆ ಸ್ವಕೀಯ ಜನರಾಗಿರುವಿರಿ. ಸಮಸ್ತ ಭೂಮಿಯು ನನ್ನದೇ.


ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದ ಲೌಕಿಕ ತಂದೆಗಳನ್ನು ನಾವು ಸನ್ಮಾನಿಸಿತ್ತೇವಲ್ಲ. ನಮ್ಮ ಆತ್ಮಗಳಿಗೆ ತಂದೆಯಾಗಿರುವಾತನಿಗೆ ನಾವು ಇನ್ನೂ ಹೆಚ್ಚಾಗಿ ಅಧೀನರಾಗಿ ಜೀವಿಸಬೇಕಲ್ಲವೇ?


ಈ ವಿಷಯದಲ್ಲಿ ಯಾರೂ ತನ್ನ ಸಹೋದರನನ್ನು ವಂಚಿಸಿ ಕೇಡು ಮಾಡಬಾರದು. ನಾವು ಮೊದಲೇ ತಿಳಿಸಿ, ನಿಮಗೆ ಖಂಡಿತವಾಗಿ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ ಕರ್ತನು ಪ್ರತಿಕಾರ ಮಾಡುವವನಾಗಿದ್ದಾನೆ.


ಆದಕಾರಣ ಸುಳ್ಳಾಡುವುದನ್ನು ಬಿಟ್ಟುಬಿಟ್ಟು “ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ನುಡಿಯಲಿ.” ಏಕೆಂದರೆ ನಾವು ಪ್ರತಿಯೊಬ್ಬರೂ ಒಂದೇ ದೇಹದ ಅಂಗಗಳಾಗಿದ್ದೇವಲ್ಲಾ.


ಇದು ಮಾತ್ರವಲ್ಲದೆ ರೆಬೆಕ್ಕಳು ಸಹ ನಮ್ಮ ಮೂಲಪಿತೃವಾದ ಇಸಾಕನಿಂದ ಅವಳಿ ಜವಳಿ ಮಕ್ಕಳಿಗೆ ಬಸುರಾದಾಗ ಅದರಂತೆಯೇ ಆಯಿತು.


ಹಾಗಾದರೆ ವಂಶಾನುಕ್ರಮವಾಗಿ ನಮಗೆ ಮೂಲಪಿತೃವಾಗಿರುವ ಅಬ್ರಹಾಮನು ಈ ವಿಷಯದಲ್ಲಿ ಏನು ಪಡೆದುಕೊಂಡನೆಂದು ಹೇಳಬೇಕು?


ತಾನೇ ಎಲ್ಲರಿಗೂ ಜೀವಶ್ವಾಸ ಹಾಗೂ ಜೀವಿಸುವುದಕ್ಕೆ ಬೇಕಾದದ್ದೆಲ್ಲವನ್ನೂ ಕೊಡುವವನಾಗಿರಲಾಗಿ ಕೊರತೆಯಿದ್ದವನಂತೆ ಮನುಷ್ಯರ ಕೈಗಳಿಂದ ಸೇವೆಹೊಂದುವವನೂ ಅಲ್ಲ.


ನಮ್ಮ ಮೂಲಪುರುಷನಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಮೆಸೊಪೊತಾಮ್ಯದಲ್ಲಿದ್ದಾಗ ಮಹಿಮೆಯುಳ್ಳ ದೇವರು ಅವನಿಗೆ ಕಾಣಿಸಿಕೊಂಡು;


ನಿಮ್ಮ ಮೂಲಪುರುಷನಾದ ಅಬ್ರಹಾಮನು ನನ್ನ ದಿನವನ್ನು ತಾನು ನೋಡುತ್ತೇನೆಂದು ಉಲ್ಲಾಸಪಟ್ಟನು ಮತ್ತು ಅದನ್ನು ನೋಡಿ ಸಂತೋಷಪಟ್ಟನು” ಎಂದು ಹೇಳಿದನು.


ಸತ್ತುಹೋದ ನಮ್ಮ ತಂದೆಯಾದ ಅಬ್ರಹಾಮನಿಗಿಂತಲೂ ನೀನು ದೊಡ್ಡವನೋ? ಪ್ರವಾದಿಗಳೂ ಸತ್ತುಹೋದರು, ನಿನ್ನನ್ನೇ ನೀನು ಯಾರೆಂದು ಭಾವಿಸಿಕೊಳ್ಳುತ್ತಿದ್ದೀ?” ಎಂದು ಕೇಳಿದರು.


ಅದಕ್ಕೆ ಅವರು, “ನಮ್ಮ ತಂದೆಯು ಅಬ್ರಹಾಮನೇ” ಎಂದರು. ಅದಕ್ಕೆ ಯೇಸು ಅವರಿಗೆ, “ನೀವು ಅಬ್ರಹಾಮನ ಮಕ್ಕಳಾಗಿದ್ದರೆ, ಅಬ್ರಹಾಮನು ಮಾಡಿದಂಥ ಕೃತ್ಯಗಳನ್ನು ಮಾಡುತ್ತಿದ್ದೀರಿ.


ಹಾಗಾದರೆ ಮಾನಸಾಂತರಕ್ಕೆ ಯೋಗ್ಯವಾದ ಫಲಗಳನ್ನು ತೋರಿಸಿರಿ. ‘ಅಬ್ರಹಾಮನು ನಮಗೆ ತಂದೆಯಲ್ಲವೇ’ ಎಂದು ನಿಮ್ಮೊಳಗೆ ಅಂದುಕೊಳ್ಳಬೇಡಿರಿ. ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದಲೂ ಮಕ್ಕಳನ್ನು ಹುಟ್ಟಿಸಬಲ್ಲನೆಂದು ನಿಮಗೆ ಹೇಳುತ್ತೇನೆ.


“ಜಗತ್ತನ್ನೂ ಅದರಲ್ಲಿರುವ ಎಲ್ಲವುಗಳನ್ನೂ, ಉಂಟುಮಾಡಿದ ದೇವರು ಭೂಮ್ಯಾಕಾಶಗಳ ಒಡೆಯನಾಗಿರುವುದರಿಂದ ಆತನು ಕೈಯಿಂದ ಕಟ್ಟಿರುವ ಗುಡಿಗಳಲ್ಲಿ ವಾಸಮಾಡುವವನಲ್ಲ;


ದೇವರು ಒಬ್ಬ ಮನುಷ್ಯನಿಂದ ಎಲ್ಲಾ ಜನಾಂಗಗಳನ್ನು ಸೃಷ್ಟಿಸಿ, ಅವರವರು ಇರತಕ್ಕ ಕಾಲಗಳನ್ನೂ ಹಾಗು ಅವರವರ ನಿವಾಸಗಳ ಮೇರೆಗಳನ್ನೂ ನಿಷ್ಕರ್ಷಿಸಿ ಭೂಮಂಡಲದಲ್ಲೆಲ್ಲಾ ಅವರನ್ನು ಇರಿಸಿ,


‘ನಾನು ಐಗುಪ್ತ್ಯರಿಗೆ ಮಾಡಿದ್ದನ್ನೂ, ಹದ್ದು ತನ್ನ ಮರಿಗಳನ್ನು ರೆಕ್ಕೆಗಳ ಮೇಲೆ ಹೊತ್ತುಕೊಳ್ಳುವಂತೆ ನಾನು ನಿಮ್ಮನ್ನು ಹೊತ್ತುಕೊಂಡು ಈ ಸ್ಥಳಕ್ಕೆ ಬರಮಾಡಿದ್ದನ್ನೆಲ್ಲಾ ನೀವು ನೋಡಿದ್ದೀರಿ.


ಮೋಶೆ ಜನರ ಬಳಿಗೆ ಬಂದು ಯೆಹೋವನ ಎಲ್ಲಾ ಮಾತುಗಳನ್ನೂ ಮತ್ತು ಅಜ್ಞಾವಿಧಿಗಳನ್ನೂ ವಿವರಿಸಲು ಜನರೆಲ್ಲರೂ, “ಯೆಹೋವನ ಮಾತುಗಳನ್ನೆಲ್ಲಾ ಅನುಸರಿಸಿ ನಡೆಯುವೆವು” ಎಂದು ಒಕ್ಕೊರಳಿನಿಂದ ಉತ್ತರಕೊಟ್ಟರು.


ತರುವಾಯ ಒಡಂಬಡಿಕೆಯ ಗ್ರಂಥವನ್ನು ತೆಗೆದುಕೊಂಡು ಜನರಿಗೆ ಕೇಳಿಸುವಂತೆ ಓದಿದನು. ಅವರು ಕೇಳಿ, “ಯೆಹೋವನ ಆಜ್ಞೆಗಳನ್ನೆಲ್ಲಾ ನಾವು ಅನುಸರಿಸಿ ವಿಧೇಯರಾಗುವೆವು” ಅಂದರು.


ಅವರು ತಮ್ಮ ವಿಜ್ಞಾಪನೆಗಳಿಂದ ಅಳುತ್ತಾ ನಡೆದು ಬರುವರು, ನಾನು ಅವರನ್ನು ಸಂತೈಸಿ ಮುನ್ನಡೆಸುವೆನು. ಎಡವದ ಸಮಮಾರ್ಗದಲ್ಲಿ ನಡೆಸುತ್ತಾ ತುಂಬಿದ ತೊರೆಗಳ ಬಳಿಗೆ ಬರಮಾಡುವೆನು. ನಾನು ಇಸ್ರಾಯೇಲಿಗೆ ತಂದೆ, ಎಫ್ರಾಯೀಮು ನನ್ನ ಹಿರಿಯ ಮಗನಲ್ಲವೆ.


ಈಗ ನಿನ್ನ ಹೆಸರೆತ್ತಿ ಪ್ರಾರ್ಥಿಸಿ, ನಿನ್ನನ್ನು ಆಶ್ರಯಿಸಲು ತ್ರಾಣ ತಂದುಕೊಳ್ಳುವವನು ಎಲ್ಲಿಯೂ ಇಲ್ಲ; ನೀನು ನಮಗೆ ವಿಮುಖನಾಗಿ ನಮ್ಮನ್ನು ನಮ್ಮ ಅಪರಾಧಗಳಿಗೆ ವಶಮಾಡಿದ್ದಿಯಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು