Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 2:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇಸ್ರಾಯೇಲಿನ ದೇವರಾದ ಯೆಹೋವನು ಇಂತೆನ್ನುತ್ತಾನೆ, “ನಾನು ಪತ್ನಿತ್ಯಾಗವನ್ನೂ, ಹೆಂಡತಿಗೆ ಅನ್ಯಾಯ ಮಾಡುವವನನ್ನೂ ಹಗೆಮಾಡುತ್ತೇನೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ. “ಆದಕಾರಣ ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ, ದ್ರೋಹಮಾಡಬೇಡಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಇಸ್ರಯೇಲಿನ ದೇವರಾದ ಸರ್ವೇಶ್ವರ ಹೀಗೆ ಹೇಳುತ್ತಾರೆ: “ವಿವಾಹ ವಿಚ್ಛೇದನವನ್ನು ದ್ವೇಷಿಸುತ್ತೇನೆ. ತನ್ನ ಮಡದಿಗೆ ನಂಬಿಕೆದ್ರೋಹವನ್ನೆಸಗುವವನನ್ನು ಹಾಗು ದೌರ್ಜನ್ಯ ತೋರುವವನನ್ನು ಹಗೆಮಾಡುತ್ತೇನೆ.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ. ಆದಕಾರಣ ಮನಃಪೂರ್ವಕವಾಗಿ ಎಚ್ಚರಿಕೆಯಿಂದಿರಿ ನಿಮ್ಮ ಮಡದಿಗೆ ದ್ರೋಹವೆಸಗದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇಸ್ರಾಯೇಲಿನ ದೇವರಾದ ಯೆಹೋವನು ಇಂತೆನ್ನುತ್ತಾನೆ - ನಾನು ಪತ್ನೀತ್ಯಾಗವನ್ನೂ ಹೆಂಡತಿಗೆ ಅನ್ಯಾಯಮಾಡುವವನನ್ನೂ ಹಗೆಮಾಡುತ್ತೇನೆ; ಇದು ಸೇನಾಧೀಶ್ವರ ಯೆಹೋವನ ನುಡಿ; ಆದಕಾರಣ ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ, ದ್ರೋಹಮಾಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಇಸ್ರೇಲಿನ ದೇವರಾದ ಯೆಹೋವನು ಹೇಳುವುದೇನೆಂದರೆ, “ವಿವಾಹವಿಚ್ಪೇದನೆಯನ್ನು ನಾನು ಹಗೆ ಮಾಡುತ್ತೇನೆ. ಮತ್ತು ಮನುಷ್ಯನು ಮಾಡುವ ದುಷ್ಕೃತ್ಯವನ್ನು ನಾನು ಹಗೆ ಮಾಡುತ್ತೇನೆ. ಆದ್ದರಿಂದ ನಿಮ್ಮ ಆತ್ಮೀಯ ಒಗ್ಗಟ್ಟನ್ನು ಕಾಪಾಡಿಕೊಳ್ಳಿರಿ. ನಿಮ್ಮ ಹೆಂಡತಿಯರಿಗೆ ಮೋಸ ಮಾಡಬೇಡಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ವಿವಾಹ ವಿಚ್ಛೇದನವನ್ನು ನಾನು ಹಗೆಮಾಡುತ್ತೇನೆ,” ಎಂದು ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುತ್ತಾನೆ. “ತನ್ನ ಹೆಂಡತಿಗೆ ನಂಬಿಕೆದ್ರೋಹ ಬಗೆದು, ದೌರ್ಜನ್ಯ ತೋರುವವನನ್ನು ನಾನು ಹಗೆಮಾಡುತ್ತೇನೆ,” ಎಂದು ಸರ್ವಶಕ್ತರಾದ ದೇವರು ಹೇಳುತ್ತಾರೆ. ಆದ್ದರಿಂದ ನೀವು ವಂಚನೆಯುಳ್ಳವರಾಗಿ ನಡೆಯದ ಹಾಗೆ ನಿಮ್ಮ ಆತ್ಮದಲ್ಲಿ ಎಚ್ಚರಿಕೆಯಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 2:16
13 ತಿಳಿವುಗಳ ಹೋಲಿಕೆ  

“ತನ್ನ ಹೆಂಡತಿಯನ್ನು ಬಿಟ್ಟು ಬೇರೊಬ್ಬಳನ್ನು ಮದುವೆಮಾಡಿಕೊಳ್ಳುವ ಪ್ರತಿಯೊಬ್ಬನು ವ್ಯಭಿಚಾರ ಮಾಡುವವನಾಗಿದ್ದಾನೆ. ಮತ್ತು ಗಂಡಬಿಟ್ಟವಳನ್ನು ಮದುವೆಮಾಡಿಕೊಳ್ಳುವವನು ವ್ಯಭಿಚಾರ ಮಾಡುವವನಾಗಿದ್ದಾನೆ.


ದೋಷಗಳನ್ನು ಮುಚ್ಚಿಕೊಳ್ಳುವವನಿಗೆ ಶುಭವಾಗದು, ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರೆಯುವುದು.


ಇವರ ಬಲೆಯ ದಾರವು ಬಟ್ಟೆಯಾಗದು, ಇವರು ನೇಯ್ದದ್ದು ಹೊದಿಕೆಯಾಗದು; ಇವರ ಕಾರ್ಯಗಳು ಅಧರ್ಮಕಾರ್ಯಗಳು, ಇವರ ಕೈಯಲ್ಲಿ ಬಲಾತ್ಕಾರವೇ ತುಂಬಿದೆ.


ಯೆಹೋವನು ಹೀಗೆನ್ನುತ್ತಾನೆ, “ನಾನು ನಿಮ್ಮ ತಾಯಿಯನ್ನು ತ್ಯಜಿಸಿದ ತ್ಯಾಗಪತ್ರವು ಎಲ್ಲಿ? ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟಿದ್ದೇನೆ? ನೋಡಿರಿ, ನಿಮ್ಮ ದೋಷಗಳ ನಿಮಿತ್ತ ನಿಮ್ಮನ್ನು ಮಾರಿದೆನು, ನಿಮ್ಮ ದ್ರೋಹಗಳಿಗಾಗಿ ನಿಮ್ಮ ತಾಯಿಯನ್ನು ಬಿಟ್ಟೆನು.


ಒಬ್ಬನು ಕಾಲುಚಾಚಿಕೊಂಡು ಮಲಗುವನೆಂದರೆ ಹಾಸಿಗೆಯ ಉದ್ದವೂ ಸಾಲುವುದಿಲ್ಲ; ಮುದುರಿಕೊಂಡು ಮಲಗುವನೆಂದರೆ ಹೊದಿಕೆಯ ಅಗಲವೂ ಸಾಲುವುದಿಲ್ಲ.”


ವಿವಾಹಿತರಿಗೆ ನನ್ನ ಅಪ್ಪಣೆ ಅಲ್ಲ ಕರ್ತನ ಆಜ್ಞೆಯು ಏನೆಂದರೆ, ಹೆಂಡತಿಯು ಗಂಡನನ್ನು ಬಿಟ್ಟು ಅಗಲಬಾರದು.


ಆದುದರಿಂದ ಅವರಿಗೆ ಗರ್ವವು ಕಂಠಮಾಲೆಯಾಗಿದೆ; ಬಲಾತ್ಕಾರವು ಉಡುಪಾಗಿದೆ.


ಮಗನೇ, ಏಕೆ ಪರಸ್ತ್ರೀಯಲ್ಲಿ ಭ್ರಮೆಗೊಳ್ಳುವಿ, ಅನ್ಯಳ ಎದೆಯನ್ನು ತಬ್ಬಿಕೊಳ್ಳುವುದೇಕೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು