Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 2:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಗಮನವಿಟ್ಟು ಕೇಳಿ, ನಿಮ್ಮ ಸಂತಾನ ಬೆಳೆಯದಂತೆ ಶಪಿಸುವೆ; ನಿಮ್ಮ ಮೇಲೆ ಯಜ್ಞಪಶುಗಳ ಸಗಣಿಯನ್ನು ಎರಚುವೆನು. ಈ ಅವಮಾನದಿಂದ ನೀವು ತಿಪ್ಪೆಯ ಪಾಲಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆದ್ದರಿಂದ ಇದನ್ನು ಗಮನವಿಟ್ಟು ಕೇಳಿ: ನಿಮ್ಮ ಸಂತಾನವನ್ನು ಖಂಡಿಸುವೆನು. ನಿಮ್ಮ ಮುಖಕ್ಕೆ ಸಗಣಿ ಬಳಿಯುವೆನು. ನಿಮ್ಮ ಯಜ್ಞಪಶುಗಳ ಸಗಣಿಯನ್ನೇ ಎರಚುವೆನು. ನೀವು ಆ ಸಗಣಿ ತಿಪ್ಪೆಯ ಪಾಲಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಹಾ, ನಿಮ್ಮ ಬೀಜವನ್ನು [ಬೆಳೆಯದಂತೆ]ಖಂಡಿಸುವೆನು; ನಿಮ್ಮ ಮುಖದ ಮೇಲೆ ಮಲವನ್ನು, ನಿಮ್ಮ ಹಬ್ಬದ ಪಶುಗಳ ಮಲವನ್ನು ಚೆಲ್ಲಿಬಿಡುವೆನು; ನೀವು ಆ ಮಲದ ತಿಪ್ಪೆಯ ಪಾಲಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ನಿಮ್ಮ ಸಂತತಿಯವರನ್ನು ನಾನು ಶಿಕ್ಷಿಸುವೆನು. ಹಬ್ಬದ ದಿವಸಗಳಲ್ಲಿ ಯಾಜಕರೇ, ನೀವು ನನಗೆ ಯಜ್ಞಗಳನ್ನರ್ಪಿಸುತ್ತೀರಿ. ಪಶುವನ್ನು ಕೊಯಿದ ಬಳಿಕ ಅದರ ಒಳಗಿನ ಭಾಗಗಳನ್ನೂ ಅದರ ಮಲವನ್ನು ನಿಮ್ಮ ಮುಖಗಳಿಗೆ ಹಚ್ಚುವೆನು ಮತ್ತು ನೀವು ಅದರೊಂದಿಗೆ ಹೊರಗೆ ಬಿಸಾಡಲ್ಪಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ಇಗೋ, ನಾನು ನಿಮ್ಮ ಸಂತತಿಯನ್ನು ಗದರಿಸುವೆನು. ನಿಮ್ಮ ಮುಖಗಳ ಮೇಲೆ, ನಿಮ್ಮ ಹಬ್ಬ ಬಲಿಗಳ ಸಗಣಿ ಬಳಿಯುವೆನು. ಅದರೊಂದಿಗೆ ನೀವು ಒಯ್ಯಲಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 2:3
16 ತಿಳಿವುಗಳ ಹೋಲಿಕೆ  

ನಿನ್ನ ಮೇಲೆ ಹೊಲಸನ್ನು ಹಾಕಿ ಮಾನಕಳೆದು ನಿನ್ನನ್ನು ಎಲ್ಲರೂ ಪರಿಹಾಸ್ಯ ಮಾಡುವಂತೆ ಮಾಡುವೆನು.


“ನೀವು ನನ್ನ ಮಾರ್ಗಗಳನ್ನು ಅನುಸರಿಸದೆ ನಿಮ್ಮ ಧರ್ಮನಿಯಮ ಉಪದೇಶದಲ್ಲಿ ಪಕ್ಷಪಾತ ತೋರಿಸಿದ್ದರಿಂದ ನಾನಂತೂ ನಿಮ್ಮನ್ನು ಎಲ್ಲಾ ಜನರ ಮುಂದೆ ಅವಮಾನ ಹೊಂದುವಂತೆ ಅವರು ನಿಮ್ಮನ್ನು ಹೀಯಾಳಿಸಿ ಕೀಳಾಗಿ ಕಾಣುವಂತೆ ಮಾಡುವೆನು.”


ಬೀಜಗಳು, ಹೆಂಟೆಗಳ ಕೆಳಗೆ ಕೆಟ್ಟುಹೋಗಿವೆ. ಉಗ್ರಾಣಗಳು ಬರಿದಾಗಿವೆ. ಕಣಜಗಳು ಕೆಡವಲ್ಪಟ್ಟಿವೆ, ಏಕೆಂದರೆ ಧಾನ್ಯವು ಒಣಗಿದೆ.


ಆದುದರಿಂದ ಯಾರೊಬ್ಬಾಮನೇ ಕೇಳು, ನಾನು ನಿನ್ನ ಮನೆಯವರ ಮೇಲೆ ಕೇಡನ್ನು ಬರಮಾಡುವೆನು. ನಿನ್ನ ಕುಟುಂಬದ ಗಂಡಸರಲ್ಲಿ ಸ್ವತಂತ್ರರಾಗಲಿ, ದಾಸರಾಗಲಿ ಎಲ್ಲರನ್ನೂ ಇಸ್ರಾಯೇಲರೊಳಗಿಂದ ಸಂಹರಿಸಿಬಿಡುವೆನು. ಒಬ್ಬನು ಕಸವನ್ನು ಗುಡಿಸಿ ತೆಗೆದುಹಾಕುವಂತೆ ನಾನು ನಿನ್ನ ಮನೆಯವರನ್ನು ತೆಗೆದುಹಾಕುವೆನು.


ಹೋರಿಯ ಮಾಂಸವನ್ನು, ಚರ್ಮವನ್ನು ಮತ್ತು ಕಲ್ಮಷವನ್ನು ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟುಬಿಡಬೇಕು. ಏಕೆಂದರೆ ಇದು ದೋಷಪರಿಹಾರಕ ಯಜ್ಞ.


ಅಪವಾದ ಹೊರಿಸುವವರನ್ನು ಕನಿಕರದಿಂದ ಮಾತನಾಡಿಸುತ್ತೇವೆ. ನಾವು ಈಗಿನವರೆಗೂ ಲೋಕದ ಕಸವೋ ಎಲ್ಲಾದಕ್ಕಿಂತಲೂ ಹೀನವೋ ಎಂಬಂತೆ ಆಗಿದ್ದೇವೆ.


ಅದು ಭೂಮಿಗಾದರೂ ತಿಪ್ಪೆಗಾದರೂ ಉಪಯೋಗಕ್ಕೆ ಬರುವುದಿಲ್ಲ, ಅದನ್ನು ಹೊರಗೆ ಬಿಸಾಡುತ್ತಾರೆ. ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ” ಅಂದನು.


ಅನಂತರ ಅವರು ಅದನ್ನು ತಾವು ಪ್ರೀತಿಸಿ, ಸೇವಿಸಿ, ಹಿಂಬಾಲಿಸಿ, ಆಶ್ರಯಿಸಿ ಪೂಜಿಸಿದ ಸೂರ್ಯ, ಚಂದ್ರ ತಾರಾಗಣಗಳ ಎದುರಿಗೆ ಹರಡಿಬಿಡುವರು. ಅವುಗಳನ್ನು ಯಾರೂ ಕೂಡಿಸಿ ಹೂಣಿಡುವುದಿಲ್ಲ; ಅವು ಭೂಮಿಯ ಮೇಲೆ ಗೊಬ್ಬರವಾಗುವವು.


ಅವರು ಎಂದೋರಿನಲ್ಲಿ ವಧಿಸಲ್ಪಟ್ಟು, ಹೊಲದ ಗೊಬ್ಬರವಾಗಿ ಹೋದರಲ್ಲಾ.


ತನ್ನ ಮಲದ ಹಾಗೆ ನಿತ್ಯನಾಶನವನ್ನೂ ಹೊಂದುವನು, ಅವನನ್ನು ಕಂಡವರು ಕೂಡ ‘ಅವನು ಎಲ್ಲಿ?’ ಎನ್ನುವರು.


ನಾನು ನಿಮಗೆ ಮಾಡುವುದೇನೆಂದರೆ, ಕ್ಷಯರೋಗ, ಚಳಿಜ್ವರ ಮುಂತಾದ ಭಯಂಕರ ವ್ಯಾಧಿಗಳನ್ನು ನಿಮ್ಮಲ್ಲಿ ಇರುವಂತೆ ಮಾಡುವೆನು; ಇವುಗಳ ದೆಸೆಯಿಂದ ನೀವು ಕಂಗೆಟ್ಟವರಾಗಿಯೂ, ಮನಗುಂದಿದವರಾಗಿಯೂ ಇರುವಿರಿ. ನೀವು ಬೀಜಬಿತ್ತಿದಾಗ ಅದರ ಫಲವು ನಿಮಗೆ ದೊರೆಯದೆ ಹೋಗುವುದು; ಶತ್ರುಗಳು ಬಂದು ಅದನ್ನು ತಿಂದುಬಿಡುವರು.


ನೀವು ಹೊಲದಲ್ಲಿ ಎಷ್ಟು ಬೀಜವನ್ನು ಬಿತ್ತಿದ್ದರೂ ಮಿಡತೆಯ ದಂಡು ಬಂದು ಅದನ್ನು ತಿಂದು ಬಿಡುವುದರಿಂದ ನಿಮಗೆ ದೊರೆಯುವ ಬೆಳೆ ಅತ್ಯಲ್ಪವಾಗುವುದು.


ದೇವರು ಜಯಘೋಷದಿಂದ ಏರಿದ್ದಾನೆ; ಯೆಹೋವನು ತುತ್ತೂರಿಯ ಧ್ವನಿಯೊಡನೆ ಆರೋಹಣ ಮಾಡಿದ್ದಾನೆ.


ಬೆಳೆ ಬೆಳೆಯುವ ಹೊಲವು ಹಾಳಾಗಿದೆ, ನೆಲವು ದುಃಖದಲ್ಲಿ ಮುಳುಗಿದೆ. ಏಕೆಂದರೆ ಧಾನ್ಯವು ನಾಶವಾಗಿದೆ, ಹೊಸ ದ್ರಾಕ್ಷಾರಸವು ಒಣಗಿದೆ, ಎಣ್ಣೆಯು ಕೆಟ್ಟುಹೋಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು