Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 3:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನುಂಗುವ ಹುಳವನ್ನು ನಾನು ನಿಮಗಾಗಿ ತಡೆಯುವೆನು. ಅದು ನಿಮ್ಮ ಭೂಮಿಯ ಫಲವನ್ನು ನಾಶಮಾಡದು; ನಿಮ್ಮ ದ್ರಾಕ್ಷಿಯಹಣ್ಣು ತೋಟದಲ್ಲಿ ಉದುರಿಹೋಗದು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 “ನಿಮ್ಮ ಭೂಮಿಯ ಬೆಳೆ ಹುಳುಹುಪ್ಪಟೆಗಳಿಂದ ನಾಶವಾಗದಂತೆ ನೋಡಿಕೊಳ್ಳುವೆನು. ನಿಮ್ಮ ತೋಟದಲ್ಲಿ ದ್ರಾಕ್ಷಿಹಣ್ಣು ಉದುರಿಹೋಗದಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನುಂಗುವ ಹುಳವನ್ನು ನಾನು ನಿಮಗಾಗಿ ತಡೆಯುವೆನು, ಅದು ನಿಮ್ಮ ಭೂವಿುಯ ಫಲವನ್ನು ನಾಶಮಾಡದು; ನಿಮ್ಮ ದ್ರಾಕ್ಷೆಯ ಹಣ್ಣು ತೋಟದಲ್ಲಿ ಉದುರಿಹೋಗದು; ಇದು ಸೇನಾಧೀಶ್ವರ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಿಮ್ಮ ಬೆಳೆಗಳು ಹುಳಗಳಿಂದ ನಾಶವಾಗದಂತೆ ನಾನು ಸಂರಕ್ಷಿಸುವೆನು; ನಿಮ್ಮ ದ್ರಾಕ್ಷಾಲತೆಗಳೆಲ್ಲಾ ದ್ರಾಕ್ಷಿಯನ್ನು ಫಲಿಸುವವು.” ಇದು ಸರ್ವಶಕ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ನಿಮ್ಮ ಬೆಳೆಯನ್ನು ತಿಂದು ಬಿಡದಂತೆ ಕ್ರಿಮಿಕೀಟಗಳನ್ನು ತಡೆಯುವೆನು. ನಿಮ್ಮ ದ್ರಾಕ್ಷಿ ತೋಟಗಳಲ್ಲಿಂದ ದ್ರಾಕ್ಷಿಹಣ್ಣುಗಳನ್ನು ಉದುರಿಸಿ ಬಿಡುವುದಿಲ್ಲ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 3:11
15 ತಿಳಿವುಗಳ ಹೋಲಿಕೆ  

ನಿಮಗೆ ಗೋದಿ, ದ್ರಾಕ್ಷಿ, ಎಣ್ಣೇಕಾಯಿ ಇವುಗಳ ಬೆಳೆ ಚೆನ್ನಾಗಿ ಉಂಟಾಗುವಂತೆ ಆತನು ನಿಮ್ಮ ಭೂಮಿಗೆ ಬೇಕಾದ ಮುಂಗಾರು ಮತ್ತು ಹಿಂಗಾರು ಮಳೆಯನ್ನು ಸರಿಯಾಗಿ ಕೊಡುವನು.


ಕಾಡುಮೃಗಗಳೇ ಅಂಜಬೇಡಿರಿ, ಕಾಡುಗಾವಲಲ್ಲಿ ಹುಲ್ಲು ಮೊಳೆಯುವುದು, ಮರವು ಹಣ್ಣು ಬಿಡುವುದು. ಅಂಜೂರದ ಗಿಡವೂ ದ್ರಾಕ್ಷಾಲತೆಯೂ ಸಾರವತ್ತಾಗಿ ಫಲಿಸುವವು.


“ನೆಮ್ಮದಿಯ ಬೆಳೆಯಾಗುವುದು; ದ್ರಾಕ್ಷಾಲತೆಯು ಹಣ್ಣುಬಿಡುವುದು, ಭೂಮಿಯು ಧಾನ್ಯವನ್ನೀಯುವುದು, ಆಕಾಶವು ಇಬ್ಬನಿಯನ್ನು ಸುರಿಸುವುದು; ಈ ಜನಶೇಷದವರು ಇವುಗಳನ್ನೆಲ್ಲಾ ಅನುಭವಿಸುವಂತೆ ಅನುಗ್ರಹಿಸುವೆನು.


ನಾನು ಉತ್ತರ ದಿಕ್ಕಿನ ಸೈನ್ಯವನ್ನು ನಿಮ್ಮ ಕಡೆಯಿಂದ ದೂರಮಾಡುವೆನು, ಅದನ್ನು ಹಾಳುಬಿದ್ದ ಬಂಜರು ಭೂಮಿಗೂ ಓಡಿಸುವೆನು. ಅದರ ಮುಂಭಾಗವನ್ನು ಪೂರ್ವದ ಸಮುದ್ರಕ್ಕೂ, ಅದರ ಹಿಂಭಾಗವನ್ನು ಪಶ್ಚಿಮ ಸಮುದ್ರಕ್ಕೂ ತಳ್ಳಿಬಿಡುವೆನು. ಅದರ ದುರ್ವಾಸನೆಯು ಏರುವುದು. ಏಕೆಂದರೆ ಆತನು ಮಹತ್ಕಾರ್ಯಗಳನ್ನು ಮಾಡುತ್ತಾನೆ.


ಚೂರಿಮಿಡತೆ ತಿಂದು ಉಳಿದಿದ್ದ ಬೆಳೆಯನ್ನು ಗುಂಪು ಮಿಡತೆ ತಿಂದು ಬಿಟ್ಟಿತು; ಗುಂಪು ಮಿಡತೆ ತಿಂದು ಉಳಿದದ್ದನ್ನು ಕುದರೆ ಮಿಡತೆ ತಿಂದು ಬಿಟ್ಟಿತು; ಕುದರೆ ಮಿಡತೆ ತಿಂದು ಉಳಿದದ್ದನ್ನು ಕಂಬಳಿ ಮಿಡತೆ ತಿಂದುಬಿಟ್ಟಿತು.


ನಾನು ನಿಮ್ಮ ದುಡಿತದ ಫಲವನ್ನೆಲ್ಲಾ ಆನೆಕಲ್ಲು ಮಳೆಯಿಂದಲೂ, ಬಿಸಿಗಾಳಿಗೂ ಹಾಳುಮಾಡಿ ನಿಮ್ಮನ್ನು ಬಾಧಿಸಿದರೂ, ನೀವು ನನ್ನ ಕಡೆಗೆ ತಿರುಗಿಕೊಳ್ಳಲಿಲ್ಲ” ಇದು ಯೆಹೋವನ ನುಡಿ.


“ನಿಮ್ಮನ್ನು ಬೂದಿಯಿಂದಲೂ, ಬಿಸಿಗಾಳಿಯಿಂದಲೂ ಬಾಧಿಸಿದೆನು. ನಿಮ್ಮ ಲೆಕ್ಕವಿಲ್ಲದ ವನ, ದ್ರಾಕ್ಷಿತೋಟಗಳನ್ನು, ಅಂಜೂರದ ಗಿಡಗಳನ್ನು, ನಿಮ್ಮ ಎಣ್ಣೆಯ ಮರಗಳನ್ನು ಮಿಡತೆಯು ತಿಂದುಬಿಟ್ಟಿತು. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನು ನುಡಿ.


ಆಹಾ, ಅಂಜೂರವು ಚಿಗುರದಿದ್ದರೂ, ದ್ರಾಕ್ಷಾಲತೆಗಳಲ್ಲಿ ಹಣ್ಣು ಸಿಕ್ಕದಿದ್ದರೂ, ಎಣ್ಣೆ ಮರಗಳ ಉತ್ಪತ್ತಿಯು ಶೂನ್ಯವಾದರೂ, ಹೊಲಗದ್ದೆಗಳು ಆಹಾರ ಧಾನ್ಯಗಳನ್ನು ಉತ್ಪತ್ತಿಮಾಡದಿದ್ದರೂ, ಕುರಿಹಟ್ಟಿಗಳು ಬರಿದಾಗಿ ಹೋದರೂ, ಕೊಟ್ಟಿಗೆಗಳಲ್ಲಿ ದನಕರುಗಳು ಇಲ್ಲವಾದರೂ,


ದ್ರಾಕ್ಷಾಲತೆಯು ಒಣಗಿದೆ ಮತ್ತು ಅಂಜೂರದ ಗಿಡವು ಬಾಡಿಹೋಗಿದೆ; ದಾಳಿಂಬೆ, ಖರ್ಜೂರ ಮತ್ತು ಸೇಬು ಮರಗಳು ಹಾಗು ಹೊಲದ ಸಕಲ ವನವೃಕ್ಷಗಳು ಒಣಗಿ ಹೋಗಿವೆ. ಮನುಷ್ಯರು ಸೊರಗಿ ಸಂತೋಷವಿಲ್ಲದೆ ಕಳೆಗುಂದಿದ್ದಾರೆ.


ನಾನು ಇವರನ್ನು ಸಂಪೂರ್ಣವಾಗಿ ನಿರ್ಮೂಲ ಮಾಡಿಬಿಡುವೆನು. ದ್ರಾಕ್ಷಿಯ ಬಳ್ಳಿಯಲ್ಲಿಯೂ, ಅಂಜೂರದ ಮರದಲ್ಲಿಯೂ ಹಣ್ಣಿರುವುದಿಲ್ಲ, ಎಲೆಯು ಬಾಡುವುದು; ನಾನು ಹಾಳುಮಾಡುವವರನ್ನು ಅವರಿಗೆ ನೇಮಿಸುವೆನು” ಇದು ಯೆಹೋವನ ನುಡಿ.


ಅದು ನನ್ನ ದ್ರಾಕ್ಷಾತೋಟವನ್ನು ಹಾಳುಮಾಡಿ, ನನ್ನ ಅಂಜೂರದ ಗಿಡವನ್ನು ಮುರಿದುಹಾಕಿದೆ. ಅವುಗಳನ್ನು ಹಾಳುಮಾಡಿ ದೂರ ಬಿಸಾಡಿಬಿಟ್ಟಿದೆ; ಅದರ ಕೊಂಬೆಗಳು ಬಿಳುಪಾದವು.


ಆ ದಿನದಲ್ಲಿ ಯೆಹೋವನು, “ಆ ಕಾಲದಲ್ಲಿ ನಾನು ಒಲುಮೆ ತೋರಿಸುವೆನು. ಬೇಡುವ ಆಕಾಶಕ್ಕೆ ನಾನು ಒಲಿಯಲು, ಬೇಡುವ ಭೂಮಿಗೆ ಅದು ಒಲಿಯುವುದು.


ಗುಂಪು ಮಿಡತೆಗಳು, ಸಣ್ಣ ಮಿಡತೆಗಳು, ದೊಡ್ಡ ಮಿಡತೆಗಳು, ಚೂರಿ ಮಿಡತೆಗಳು, ನಾನು ಕಳುಹಿಸಿದ ಈ ಮಿಡತೆಗಳ ಸೈನ್ಯಗಳು ತಿಂದು ನಷ್ಟಮಾಡಿದ ವರ್ಷಗಳನ್ನು ನಾನು ನಿಮಗೆ ತಿರುಗಿಕೊಡುವೆನು.


ಇದಲ್ಲದೆ ನಾನು ದೇಶ, ಬೆಟ್ಟ, ಧಾನ್ಯ, ದ್ರಾಕ್ಷಾರಸ, ಎಣ್ಣೆ, ಭೂಮಿಯ ಉತ್ಪತ್ತಿ, ಮನುಷ್ಯ, ಪಶು, ನಾನಾ ಕೈದುಡಿತ ಇವುಗಳಿಗೆಲ್ಲಾ ಕ್ಷಾಮವನ್ನು ತಂದಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು