Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 3:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆಗ ಶಿಷ್ಟರಿಗೂ, ದುಷ್ಟರಿಗೂ, ದೇವರನ್ನು ಸೇವಿಸುವವರಿಗೂ, ಸೇವಿಸದೇ ಇರುವವರಿಗೂ ಇರುವ ವ್ಯತ್ಯಾಸವನ್ನು ಮತ್ತೆ ಕಾಣುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆಗ ಸಜ್ಜನರಿಗೂ ದುರ್ಜನರಿಗೂ, ದೇವರಸೇವೆ ಮಾಡುವವರಿಗೂ ಮಾಡದವರಿಗೂ ಇರುವ ವ್ಯತ್ಯಾಸವನ್ನು ಮತ್ತೆ ನೀವು ಮನಗಾಣುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆಗ ಶಿಷ್ಟರಿಗೂ ದುಷ್ಟರಿಗೂ ದೇವರನ್ನು ಸೇವಿಸುವವರಿಗೂ ಸೇವಿಸದವರಿಗೂ ಇರುವ ತಾರತಮ್ಯವನ್ನು ಮತ್ತೆ ಕಾಣುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನೀವು ನನ್ನ ಬಳಿಗೆ ಹಿಂತಿರುಗಿ ಬರುವಿರಿ. ಆಗ ನೀವು ಒಳ್ಳೆಯವರಿಗೂ ಕೆಟ್ಟವರಿಗೂ ಇರುವ ವ್ಯತ್ಯಾಸವನ್ನು ತಿಳಿದುಕೊಳ್ಳುವಿರಿ. ಆಗ ನೀವು ದೇವರನ್ನು ಹಿಂಬಾಲಿಸುವವರಿಗೂ ಹಿಂಬಾಲಿಸದೆ ಇರುವವರಿಗೂ ಇರುವ ವ್ಯತ್ಯಾಸವನ್ನು ನೋಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಗ ನೀವು ನೀತಿವಂತನಿಗೂ, ದುಷ್ಟನಿಗೂ, ದೇವರ ಸೇವೆ ಮಾಡುವವನಿಗೂ, ಮಾಡದವನಿಗೂ ಇರುವ ವ್ಯತ್ಯಾಸವನ್ನು ಪುನಃ ನೋಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 3:18
24 ತಿಳಿವುಗಳ ಹೋಲಿಕೆ  

ಮತ್ತು ಅನೀತಿವಂತರಾದ ಇವರು ನಿತ್ಯದಂಡನೆಗೆ ಹೋಗುವರು ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು” ಎಂದು ಹೇಳಿದನು.


ಆ ರೀತಿಯಾಗಿ ದುಷ್ಟರಿಗೂ ಶಿಷ್ಟರಿಗೂ ಭೇದ ಮಾಡದೆ ದುಷ್ಟರ ಸಂಗಡ ನೀತಿವಂತರನ್ನೂ ಸಂಹರಿಸುವುದು ನಿನ್ನಿಂದ ಎಂದಿಗೂ ಆಗಬಾರದು; ಸರ್ವಲೋಕಕ್ಕೆ ನ್ಯಾಯತೀರಿಸುವವನು ನ್ಯಾಯವನ್ನೇ ನಡಿಸುವನಲ್ಲವೇ” ಎಂದು ಹೇಳಲು.


ಯೆಹೋವನನ್ನು ಆರಾಧಿಸುವುದು ನಿಮಗೆ ಸರಿಕಾಣದಿದ್ದರೆ ಯಾರನ್ನು ಸೇವಿಸಬೇಕೆಂದಿದ್ದೀರೆಂಬುದನ್ನು? ಈ ಹೊತ್ತೇ ಆರಿಸಿಕೊಳ್ಳಿರಿ: ನಿಮ್ಮ ಪೂರ್ವಿಕರು ಯೂಫ್ರೆಟಿಸ್ ನದಿಯ ಆಚೆಯಲ್ಲಿ ಸೇವಿಸುತ್ತಿದ್ದ ದೇವತೆಗಳೋ ಈ ದೇಶದ ಮೂಲ ನಿವಾಸಿಗಳಾದ ಅಮೋರಿಯರ ದೇವತೆಗಳೋ ಹೇಳಿರಿ. ನಾನೂ, ನನ್ನ ಮನೆಯವರೂ ಯೆಹೋವನನ್ನೇ ಸೇವಿಸುವೆವು” ಎಂದನು.


ನೋಡಿರಿ, ನಾನು ಅವರನ್ನು ಕಿತ್ತುಹಾಕಿದ ಮೇಲೆ ತಿರುಗಿ ಅವರ ಮೇಲೆ ಕನಿಕರಪಟ್ಟು ಪ್ರತಿಯೊಬ್ಬನನ್ನೂ ಅವನವನ ಸ್ವತ್ತಿಗೂ, ಅವನವನ ದೇಶಕ್ಕೂ ಪುನಃ ಬರಮಾಡುವೆನು.


ಏಕೆಂದರೆ, ನಾನು ಯಾರವನಾಗಿದ್ದೇನೋ, ಯಾರನ್ನು ಸ್ತುತಿಸುತ್ತೇನೋ ಆ ದೇವರಿಂದ ಬಂದ ಒಬ್ಬ ದೂತನು ಕಳೆದ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು;


ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನನ್ನು ಹಿಂಬಾಲಿಸಲಿ, ಮತ್ತು ಎಲ್ಲಿ ನಾನು ಇರುತ್ತೇನೋ ಅಲ್ಲಿ ನನ್ನ ಸೇವಕನೂ ಸಹ ಇರುವನು. ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು.


ನಾವು ನಿಮ್ಮಲ್ಲಿಗೆ ಬಂದಾಗ ನೀವು ನಮ್ಮನ್ನು ಹೇಗೆ ಸ್ವಾಗತಿಸಿದಿರಿ; ನೀವು ವಿಗ್ರಹಗಳನ್ನು ತೊರೆದು ದೇವರ ಕಡೆಗೆ ತಿರುಗಿಕೊಂಡು ಜೀವಸ್ವರೂಪನಾದ ಸತ್ಯ ದೇವರನ್ನು ಸೇವಿಸುವವರಾಗಿದ್ದೀರಿ


ಪೌಲನೂ, ನಾವೂ ಹೋಗುತ್ತಿರುವಾಗ ಅವಳು ನಮ್ಮ ಹಿಂದೆ ಬಂದು; “ಈ ಮನುಷ್ಯರು ಪರಾತ್ಪರನಾದ ದೇವರ ಸೇವಕರು; ನಿಮಗೆ ರಕ್ಷಣೆಯ ಮಾರ್ಗವನ್ನು ಸಾರುತ್ತಾರೆ” ಎಂದು ಕೂಗಿ ಹೇಳುತ್ತಿದ್ದಳು.


ಹೀಗಿರಲು ಎದೋಮ್ಯರು, “ನಾವು ಹಾಳಾದೆವು, ಆದರೆ ಹಾಳುಪ್ರದೇಶಗಳನ್ನು ಮತ್ತೆ ಕಟ್ಟುವೆವು” ಅಂದುಕೊಂಡರೆ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಅವರು ಕಟ್ಟಿದರೂ ನಾನು ಕೆಡವಿಹಾಕುವೆನು; ಅವರು ದುಷ್ಟ ಕೇಡಿಗರು, ಯೆಹೋವನ ನಿತ್ಯ ಕೋಪಕ್ಕೆ ಗುರಿಯಾದ ಜನರೂ ಅನ್ನಿಸಿಕೊಳ್ಳುವರು.


ನಾನು ಪ್ರಾರ್ಥನೆ ಮಾಡುವಾಗೆಲ್ಲಾ ಎಡೆಬಿಡದೆ ನಿಮಗೋಸ್ಕರ ವಿಜ್ಞಾಪನೆ ಮಾಡುತ್ತೇನೆ. ದೇವರ ಮಗನ ಸುವಾರ್ತೆಯನ್ನು ಸಾರುತ್ತಾ ದೈವಸೇವೆಯನ್ನು ಮನಃಪೂರ್ವಕವಾಗಿ ಮಾಡಿಕೊಂಡು ಬರುತ್ತಿರುವ ದೇವರೇ ನನಗೆ ಸಾಕ್ಷಿ.


ಆದರೆ ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯಗಳೂ ಮತ್ತು ವಿಧಿಗಳೂ ನಿಮ್ಮ ಪೂರ್ವಿಕರನ್ನು ಹಿಂದಟ್ಟಿ ಹಿಡಿದು ಶಾಶ್ವತವಾಗಿ ಉಳಿದಿದೆ. ಅವರು ತಿರುಗಿಕೊಂಡು, ಸೇನಾಧೀಶ್ವರ ಯೆಹೋವನಿಗೆ ‘ನಮ್ಮ ದುಷ್ಕೃತ್ಯಗಳಿಗೆ ತಕ್ಕ ಹಾಗೆ ನಮಗೆ ಏನು ಮಾಡಬೇಕೆಂದು ಸಂಕಲ್ಪಿಸಿದನೋ ಅದನ್ನು ನಮಗೆ ಮಾಡಿದ್ದಾನಲ್ಲಾ’” ಅಂದುಕೊಂಡರು.


ಆತನು ಒಂದು ವೇಳೆ ಮನಸ್ಸನ್ನು ಬದಲಾಯಿಸಿ, ನಿಮ್ಮ ಕಡೆಗೆ ತಿರುಗಿಕೊಂಡು ನಿಮ್ಮನ್ನು ಆಶೀರ್ವದಿಸಬಹುದು; ನಿಮ್ಮ ದೇವರಾದ ಯೆಹೋವನಿಗೆ ನೀವು ಅರ್ಪಿಸುವ ನೈವೇದ್ಯವನ್ನು ಸ್ವೀಕರಿಸಿ ಸುವರಗಳನ್ನು ದಯಪಾಲಿಸಬಹುದು.


ಆದರೆ ನೀವೆಲ್ಲರೂ ಮತ್ತೆ ವಾದಕ್ಕೆ ಬನ್ನಿರಿ, ನಿಮ್ಮಲ್ಲಿ ಒಬ್ಬ ಜ್ಞಾನಿಯನ್ನಾದರೂ ಕಾಣೆನು.


ದಯವಿಟ್ಟು ನನ್ನ ವಿಚಾರಣೆಗೆ ಅನ್ಯಾಯವಾಗದಿರಲಿ; ಮತ್ತೆ ವಿಮರ್ಶೆ ಮಾಡಿರಿ. ನನ್ನ ವ್ಯಾಜ್ಯವು ನ್ಯಾಯವಾದದ್ದು.


“ದಾನಿಯೇಲನು ಆ ಸಮಾಚಾರವನ್ನು ತಿಳಿಸಿ, ನಾವು ಬಾಬೆಲಿನ ಇತರ ವಿದ್ವಾಂಸರೊಂದಿಗೆ ನಾಶವಾಗದಂತೆ ಪರಲೋಕ ದೇವರು ಈ ರಹಸ್ಯದ ವಿಷಯವಾಗಿ ಕೃಪೆತೋರಿಸಲು ಆತನನ್ನು ಬೇಡಿಕೊಳ್ಳೋಣ” ಎಂದನು.


ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ, ಚಾವಡಿಯಲ್ಲಿ ನ್ಯಾಯವನ್ನು ಸ್ಥಾಪಿಸಿರಿ. ಒಂದು ವೇಳೆ ಸೇನಾಧೀಶ್ವರ ದೇವರಾದ ಯೆಹೋವನು ಯೋಸೇಫನ ವಂಶದಲ್ಲಿ ಉಳಿದವರಿಗೆ ಪ್ರಸನ್ನನಾದನು.


ಆದರೆ ಐಗುಪ್ತ್ಯರಿಗೂ, ಇಸ್ರಾಯೇಲರಿಗೂ ಯೆಹೋವನು ವ್ಯತ್ಯಾಸಮಾಡಿದ್ದಾನೆಂಬುದು ನಿಮಗೆ ತಿಳಿಯುವಂತೆ ಇಸ್ರಾಯೇಲರಲ್ಲಿರುವ ಮನುಷ್ಯರ ಎದುರಿಗಾಗಲಿ, ಪಶುಗಳ ಎದುರಿಗಾಗಲಿ ಒಂದು ನಾಯಿಯಾದರೂ ಬೊಗಳುವುದಿಲ್ಲ’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು