Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 4:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಾನು ಕಾರ್ಯಸಾಧಿಸುವ ದಿನದಲ್ಲಿ ಅಧರ್ಮಿಗಳು ನಿಮ್ಮ ಅಂಗಾಲುಗಳ ಕೆಳಗೆ ಬೂದಿಯಾಗಿ ಬಿದ್ದಿರುವರು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನಾನು ಕಾರ್ಯತತ್ಪರನಾಗುವ ದಿನದಂದು ನೀವು ದುಷ್ಟರನ್ನು ತುಳಿದುಬಿಡುವಿರಿ. ಅವರು ನಿಮ್ಮ ಕಾಲಡಿಯ ಧೂಳಿಯಾಗುವರು.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ದುಷ್ಟರನ್ನು ತುಳಿದುಬಿಡುವಿರಿ; ನಾನು ಕಾರ್ಯಸಾಧಿಸುವ ದಿನದಲ್ಲಿ ಅವರು ನಿಮ್ಮ ಅಂಗಾಲುಗಳ ಕೆಳಗೆ ಬೂದಿಯಾಗಿ ಬಿದ್ದಿರುವರು; ಇದು ಸೇನಾಧೀಶ್ವರ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆಗ ನೀವು ದುಷ್ಟಜನರ ಮೇಲೆ ನಡೆದುಕೊಂಡು ಹೋಗುವಿರಿ; ಅವರು ನಿಮ್ಮ ಕಾಲುಗಳ ಕೆಳಗೆ ಬೂದಿಯಂತಿರುವರು. ನ್ಯಾಯತೀರ್ಪಿನ ಸಮಯದಲ್ಲಿ ನಾನು ಹಾಗೆ ಮಾಡುವೆನು.” ಇದು ಸರ್ವಶಕ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ದುಷ್ಟರನ್ನು ತುಳಿದುಬಿಡುವಿರಿ. ಏಕೆಂದರೆ ನಾನು ಕಾರ್ಯಸಾಧಿಸುವ ದಿವಸದಲ್ಲಿ ಅವರು ನಿಮ್ಮ ಪಾದಗಳ ಕೆಳಗೆ ಬೂದಿಯಾಗಿರುವರೆಂದು ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 4:3
22 ತಿಳಿವುಗಳ ಹೋಲಿಕೆ  

ಪ್ರತಿಯೊಬ್ಬ ಗರ್ವಿಷ್ಠನ ಮೇಲೆ ಕಣ್ಣಿಟ್ಟು ಕುಗ್ಗಿಸಿ, ದುಷ್ಟರನ್ನು ತಟ್ಟನೆ ಕೆಡವಿಬಿಡು.


ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಕಾಲುಗಳ ಕೆಳಗೆ ಹಾಕಿ ತುಳಿದು ಜಜ್ಜಿಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಕಾರ್ಯಸಾಧಿಸುವ ದಿನದಲ್ಲಿ ಅವರು ನನಗೆ ಸ್ವಕೀಯ ಜನರಾಗಿರುವರು; ಒಬ್ಬನು ತನ್ನನ್ನು ಸೇವಿಸುವ ಸ್ವಂತ ಮಗನನ್ನು ಕರುಣಿಸುವಂತೆ ನಾನು ಅವರನ್ನು ಕರುಣಿಸುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಇವರು ವೀರರಾಗಿ ರಣರಂಗದೊಳಗೆ ಶತ್ರುಗಳನ್ನು ಬೀದಿಗಳ ಕೆಸರಿನಲ್ಲಿ ತುಳಿದುಬಿಡುವರು; ಯೆಹೋವನು ನಮ್ಮ ಸಂಗಡ ಇದ್ದಾನೆಂದು ಯುದ್ಧಮಾಡುವರು; ಎದುರಿಸುವ ಸವಾರರು ಭಂಗಪಡುವರು.


“ನಿನ್ನ ದೇವರಾದ ಯೆಹೋವನು ಎಲ್ಲಿ?” ಎಂದು ನನ್ನನ್ನು ಹೀಯಾಳಿಸಿದ ಶತ್ರುಗಳು ಇದನ್ನು ನೋಡುವಾಗ ನಾಚಿಕೆಯು ಅವರನ್ನು ಕವಿದುಕೊಳ್ಳುವುದು. ನಾನು ಅವರನ್ನು ಕಣ್ಣಾರೆ ನೋಡುವೆನು. ಈಗಲೇ ಬೀದಿಗಳ ಕೆಸರಿನಂತೆ ತುಳಿತಕ್ಕೀಡಾಗುವರು.


ಇದಲ್ಲದೆ ಸಿಂಹವು ಕಾಡುಮೃಗಗಳನ್ನು, ಪ್ರಾಯದ ಸಿಂಹವು ಕುರಿಹಿಂಡುಗಳನ್ನು ಹಾದುಹೋಗುವಾಗೆಲ್ಲಾ ಅವುಗಳನ್ನು ಯಾರೂ ರಕ್ಷಿಸಲಾರದಂತೆ ತುಳಿದು, ಸೀಳಿಹಾಕುವ ಹಾಗೆ ಯಾಕೋಬಿನ ಜನಶೇಷವು ದೇಶದೇಶಗಳ, ಬಹು ಜನಾಂಗಗಳ ಮಧ್ಯದಲ್ಲಿ ನಾಶಕರವಾಗಿರುವರು.


ಅದು ಕಾಲು ತುಳಿತಕ್ಕೆ ಈಡಾಗಿದೆ. ದಿಕ್ಕಿಲ್ಲದ ಬಡವರೂ ಅದನ್ನು ಕಾಲಿನಿಂದ ತುಳಿದು ಬಿಡುತ್ತಾರೆ.


ಆಗ ಆಲೆಯನ್ನು ಪಟ್ಟಣದ ಹೊರಗೆ ತೆಗೆದುಕೊಂಡು ಹೋಗಿ ತುಳಿದರು. ಆ ಆಲೆಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಮೇಲಕ್ಕೆ ಬಂದು ಮುನ್ನೂರು ಕಿಲೋಮೀಟರಿನಷ್ಟು ದೂರ ಹರಿಯಿತು.


ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ, “ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನ ಕ್ರಿಸ್ತನಿಗೂ ಬಂದಿದೆ, ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು” ಎಂಬ ಮಹಾಘೋಷಣೆಯಾಯಿತು.


ಆಗ ಅವನ ರಾಜ್ಯ, ಪ್ರಭುತ್ವಗಳೂ ಸಮಸ್ತ ಭೂಮಂಡಲದಲ್ಲಿನ ರಾಜ್ಯಗಳ ಮಹಿಮೆಯೂ ಪರಾತ್ಪರನಾದ ದೇವರ ಭಕ್ತ ಜನರಿಗೆ ಕೊಡಲ್ಪಡುವುದು; ಆತನ ರಾಜ್ಯವು ಶಾಶ್ವತ ರಾಜ್ಯ; ಸಕಲ ದೇಶಾಧಿಪತಿಗಳು ಆತನಿಗೆ ಅಧೀನರಾಗಿ ಸೇವೆಮಾಡುವರು” ಎಂದು ಹೇಳಿದನು.


ಆದರೆ ರಾಜ್ಯವು ಪರಾತ್ಪರನಾದ ದೇವರ ಭಕ್ತರಿಗೆ ಲಭಿಸುವುದು, ಅವರೇ ಅದನ್ನು ತಲತಲಾಂತರಕ್ಕೂ ಶಾಶ್ವತವಾಗಿ ಅನುಭವಿಸುವರು’ ಎಂದು ಆ ವಿಷಯಗಳ ತಾತ್ಪರ್ಯವನ್ನು ವಿವರಿಸಿ ತಿಳಿಸಿದನು.


ನಿನ್ನ ಅಪಾರವಾದ ಅಪರಾಧಗಳಿಂದಲೂ, ಅನ್ಯಾಯವಾದ ವ್ಯಾಪಾರದಿಂದಲೂ ನಿನ್ನಲ್ಲಿನ ಪವಿತ್ರಾಲಯಗಳನ್ನು ಹೊಲಸು ಮಾಡಿದೆ; ಆದುದರಿಂದ ನಾನು ನಿನ್ನೊಳಗಿಂದ ಬೆಂಕಿಯನ್ನು ಬರಮಾಡಿದೆನು, ಅದು ನಿನ್ನನ್ನು ನುಂಗಿತು, ನೋಡುವವರೆಲ್ಲರ ಕಣ್ಣೆದುರಿಗೆ ನಿನ್ನನ್ನು ಬೂದಿ ಮಾಡಿಬಿಟ್ಟೆನು.


ಏಕೆಂದರೆ ಯೆಹೋವನ ಹಸ್ತವು ಈ ಪರ್ವತದಲ್ಲಿ ನೆಲೆಯಾಗಿರುವುದು; ಮೋವಾಬ್ಯರೋ ತಿಪ್ಪೆಗುಂಡಿಯ ಕೆಸರಿನಲ್ಲಿ ಒಣಹುಲ್ಲು ತುಳಿಯಲ್ಪಡುವ ಹಾಗೆ ತಾವಿದ್ದಲ್ಲೇ ತುಳಿಯಲ್ಪಡುವರು.


ಸಿಂಹ ಮತ್ತು ಸರ್ಪಗಳ ಮೇಲೆ ನಡೆಯುವಿ; ಪ್ರಾಯದ ಸಿಂಹವನ್ನೂ, ಘಟಸರ್ಪವನ್ನೂ ತುಳಿದುಬಿಡುವಿ.


ಭೂಮಿಯ ಧೂಳನ್ನೋ ಎಂಬಂತೆ ಅವರನ್ನು ಪುಡಿಪುಡಿ ಮಾಡಿದೆನು. ಬೀದಿಯಲ್ಲಿರುವ ಕೆಸರನ್ನೋ ಎಂಬಂತೆ ಅವರನ್ನು ತುಳಿದು ಎಸೆದುಬಿಟ್ಟೆನು.


ನಿನಗೂ, ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವುದು. ನೀನು ಅವನ ಹಿಮ್ಮಡಿಯನ್ನು ಕಚ್ಚುವಿ” ಎಂದು ಹೇಳಿದನು.


ಅವರನ್ನು ನಿರ್ನಾಮಗೊಳಿಸುವೆನು, ಹೊಡೆದು ಏಳಲಾರದಂತೆ ಮಾಡುವೆನು. ಅವರು ನನ್ನ ಪಾದದ ಕೆಳಗೆ ಬೀಳುವರು.


ಅವರು ಕುರಿಗಳಂತೆ ಪಾತಾಳದಲ್ಲಿ ಸೇರಿಸಲ್ಪಡುವರು; ಮೃತ್ಯುವೇ ಅವರ ಪಾಲಕನು. ಅವರು ನೇರವಾಗಿ ಪಾತಾಳಕ್ಕೆ ಇಳಿದುಹೋಗುವರು, ಅವರಿಗೆ ನಿವಾಸವಿಲ್ಲದ ಹಾಗೆ, ಪಾತಾಳವು ಅವರ ರೂಪವನ್ನು ನಾಶಮಾಡುವುದು.


ಕರ್ತನು ನನ್ನ ಶೂರರನ್ನೆಲ್ಲಾ ನನ್ನ ಕಣ್ಣೆದುರಿಗೆ ಹೊರಳಾಡಿಸಿದ್ದಾನೆ; ನನ್ನ ಯುವಕರನ್ನು ಸದೆಬಡಿದಿದ್ದಾನೆ. ನನ್ನ ಕೇಡಿಗಾಗಿಯೇ ಮಹೋತ್ಸವವನ್ನು ಏರ್ಪಡಿಸಿದ್ದಾನೆ; ಕರ್ತನು ಯೆಹೂದವೆಂಬ ಕನ್ಯೆಯನ್ನು ತೊಟ್ಟಿಯಲ್ಲಿನ ದ್ರಾಕ್ಷಿಯ ಹಾಗೆ ತುಳಿದಿದ್ದಾನೆ.


ಯೆಹೋವನು ದೀನರಿಗೆ ಆಧಾರವಾಗಿದ್ದಾನೆ, ದುಷ್ಟರನ್ನು ನೆಲಕ್ಕೆ ಹಾಕಿ ತುಳಿದುಬಿಡುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು