Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 4:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಾನು ಬಂದು ದೇಶವನ್ನು ಶಾಪದಿಂದ ಹತಮಾಡದಂತೆ ಯೆಹೋವನ ಆಗಮನದ ಭಯಂಕರವಾದ ಮಹಾದಿನವು ಬರುವುದಕ್ಕೆ ಮೊದಲೇ ಪ್ರವಾದಿಯಾದ ಎಲೀಯನನ್ನು ನಿಮ್ಮ ಬಳಿಗೆ ಕಳುಹಿಸುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 “ಇಗೋ, ಸರ್ವೇಶ್ವರಸ್ವಾಮಿಯ ಆಗಮನದ ಭಯಂಕರ ಮಹಾದಿನ ಬರುವುದಕ್ಕೆ ಮುಂಚೆ ಪ್ರವಾದಿ ಎಲೀಯನನ್ನು ನಿಮ್ಮಲ್ಲಿಗೆ ಕಳುಹಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಾನು ಬಂದು ದೇಶವನ್ನು ಶಾಪದಿಂದ ಹತಮಾಡದಂತೆ ಯೆಹೋವನ ಆಗಮನದ ಭಯಂಕರವಾದ ಮಹಾದಿನವು ಬರುವದಕ್ಕೆ ಮುಂಚೆಯೇ ಪ್ರವಾದಿಯಾದ ಎಲೀಯನನ್ನು ನಿಮ್ಮ ಬಳಿಗೆ ಕಳುಹಿಸುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಹೋವನು ಹೀಗೆನ್ನುತ್ತಾನೆ, “ನಾನು ಪ್ರವಾದಿಯಾದ ಎಲೀಯನನ್ನು ನಿಮ್ಮ ಬಳಿಗೆ ಕಳುಹಿಸುವೆನು. ಅವನು ಯೆಹೋವನಿಂದ ಪ್ರಾಪ್ತಿಯಾಗುವ ಭಯಂಕರವಾದ ಮಹಾ ನ್ಯಾಯತೀರ್ಪಿನ ಕಾಲದಲ್ಲಿ ಬರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ಇಗೋ, ಯೆಹೋವ ದೇವರ ಮಹಾ ಭಯಂಕರವಾದ ದಿವಸವು ಬರುವುದಕ್ಕಿಂತ ಮುಂಚೆ ನಿಮಗೆ ಪ್ರವಾದಿಯಾದ ಎಲೀಯನನ್ನು ಕಳುಹಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 4:5
16 ತಿಳಿವುಗಳ ಹೋಲಿಕೆ  

ಅವನು ಎಲೀಯನ ಗುಣಶಕ್ತಿಗಳಿಂದ ಕೂಡಿದವನಾಗಿ ಕರ್ತನ ಮುಂದೂತನಾಗಿ ಹೋಗುವನು. ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ, ಅವಿಧೇಯರನ್ನು ನೀತಿವಂತರ ಜ್ಞಾನದ ಕಡೆಗೂ ತಿರುಗಿಸಿ, ಕರ್ತನಿಗಾಗಿ ಜನರನ್ನು ಸಿದ್ಧಪಡಿಸುವನು” ಎಂದು ಹೇಳಿದನು.


“ಇಗೋ, ನನ್ನ ದೂತನನ್ನು ಕಳುಹಿಸುತ್ತೇನೆ, ಆತನು ನನ್ನ ಮುಂದೆ ದಾರಿಯನ್ನು ಸರಿಮಾಡುವನು; ನೀವು ಹಂಬಲಿಸುವ ಕರ್ತನು ತನ್ನ ಆಲಯಕ್ಕೆ ಪಕ್ಕನೇ ಬರುವನು; ಆಹಾ, ನಿಮಗೆ ಇಷ್ಟನಾದ ಒಡಂಬಡಿಕೆಯ ದೂತನು ಬರುತ್ತಾನೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಅದಕ್ಕೆ ಅವರು, “ಹಾಗಾದರೆ ನೀನು ಯಾರು? ಎಲೀಯನೋ?” ಎಂದು ಕೇಳಿದರು. ಅದಕ್ಕೆ ಅವನು, “ನಾನು ಎಲೀಯನಲ್ಲ” ಅಂದನು. “ನೀನು ಬರಬೇಕಾದ ಆ ಪ್ರವಾದಿಯೋ?” ಎಂದು ಕೇಳಿದ್ದಕ್ಕೆ “ಅಲ್ಲ,” ಅಂದನು.


ಯೆಹೋವನ ಮಹಾ ಭಯಂಕರವಾದ ದಿನವು ಬರುವುದಕ್ಕಿಂತ ಮೊದಲು, ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು.


ಇಗೋ ಒಂದು ವಾಣಿ! “ಅರಣ್ಯದಲ್ಲಿ ಯೆಹೋವನ ದಾರಿಯನ್ನು ಸರಿಪಡಿಸಿರಿ, ಅಡವಿಯಲ್ಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ಸರಿಪಡಿಸಿರಿ”


ಏಕೆಂದರೆ ಅವರ ಕೋಪಾಗ್ನಿಯು ಕಾಣಿಸುವ ಮಹಾ ದಿನವು ಬಂದಿದೆ, ಅದರ ಮುಂದೆ ನಿಲ್ಲುವುದಕ್ಕೆ ಯಾರಿಂದಾದೀತು?” ಎಂದು ಹೇಳಿದರು.


“ಇಗೋ, ಯೆಹೋವನ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ, ದುಷ್ಕರ್ಮಿಗಳೂ ಒಣಹುಲ್ಲಿನಂತೆ ಇರುವರು. ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಳಯವಾಗುವುದು. ಬುಡ, ರೆಂಬೆಗಳಾವುದನ್ನೂ ಉಳಿಸದು.


ಅವರು ಅವನಿಗೆ, “ನೀನು ಕ್ರಿಸ್ತನಾಗಲಿ, ಎಲೀಯನಾಗಲಿ ಆ ಪ್ರವಾದಿಯಾಗಲಿ ಆಗಿರದಿದ್ದರೆ, ನೀನು ದೀಕ್ಷಾಸ್ನಾನ ಕೊಡುವುದೇಕೆ?” ಎಂದು ಪ್ರಶ್ನಿಸಿದರು.


ಇದಲ್ಲದೆ ಇಬ್ಬರು ಪುರುಷರು ಆತನ ಸಂಗಡ ಮಾತನಾಡುತ್ತಿದ್ದರು. ಅವರು ಯಾರೆಂದರೆ ಮೋಶೆಯೂ ಎಲೀಯನೂ.


ಯೆಹೋವನ ಮಹಾದಿನವು ಸಮೀಪಿಸಿತು, ಬಹು ತ್ವರೆಯಾಗಿ ಬರುತ್ತಿದೆ; ಆಹಾ, ಕಿವಿಗೊಡಿರಿ, ಯೆಹೋವನ ದಿನವೇ ಬಂದಿತು; ಇಗೋ, ಅಲ್ಲಿ ಒಬ್ಬ ಶೂರನು ಘೋರವಾಗಿ ಗೋಳಾಡುತ್ತಿದ್ದಾನೆ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು