Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 1:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವನು ಕೂಡಲೇ ಅವರನ್ನೂ ಕರೆದನು. ಅವರು ತಮ್ಮ ತಂದೆಯಾದ ಜೆಬೆದಾಯನನ್ನು ಕೂಲಿಯಾಳುಗಳ ಸಂಗಡ ದೋಣಿಯಲ್ಲಿ ಬಿಟ್ಟು ಆತನನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅವರು ದೋಣಿಯಲ್ಲಿ ಕುಳಿತು ತಮ್ಮ ಬಲೆಗಳನ್ನು ಸರಿಪಡಿಸುತ್ತಿದ್ದರು. ಕೂಡಲೇ, ಯೇಸು ಅವರನ್ನು ಕರೆದರು. ಅವರೂ ತಮ್ಮ ತಂದೆ ಜೆಬೆದಾಯನನ್ನು ಕೂಲಿಯಾಳುಗಳ ಸಂಗಡ ದೋಣಿಯಲ್ಲೇ ಬಿಟ್ಟು ಯೇಸುವನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಇವರು ದೋಣಿಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದರು. ಕೂಡಲೆ ಇವರನ್ನೂ ಕರೆದನು. ಅವರು ತಮ್ಮ ತಂದೆಯಾದ ಜೆಬೆದಾಯನನ್ನು ಕೂಲಿಯಾಳುಗಳ ಸಂಗಡ ದೋಣಿಯಲ್ಲಿ ಬಿಟ್ಟು ಆತನ ಹಿಂದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಅವರ ತಂದೆಯಾದ ಜೆಬೆದಾಯನೂ ಅವನ ಕೆಲಸಗಾರರೂ ಸಹೋದರರೊಂದಿಗೆ ದೋಣಿಯಲ್ಲಿದ್ದರು. ಯೇಸು ಅವರನ್ನು ಕರೆದನು. ಕೂಡಲೇ ಅವರು ತಮ್ಮ ತಂದೆಯನ್ನು ಬಿಟ್ಟು ಯೇಸುವನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಕೂಡಲೇ ಯೇಸು ಅವರನ್ನು ಕರೆಯಲು, ಅವರು ತಮ್ಮ ತಂದೆ ಜೆಬೆದಾಯನನ್ನು ಕೂಲಿಯಾಳುಗಳ ಸಂಗಡ ದೋಣಿಯಲ್ಲಿ ಬಿಟ್ಟು ಯೇಸುವನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಜೆಜು ತೆನಿ ಢೊನಾತ್ ಹೊತ್ತ್ಯಾಕ್ಡೆ ಗೆಲೊ ಅನಿ “ಮಾಜ್ಯಾ ಫಾಟ್ನಾ ಯೆವಾ” ಮನುನ್ ತೆಂಕಾ ಬಲ್ವುಲ್ಯಾನ್. ತನ್ನಾ ತೆನಿ ಅಪ್ನಾಚ್ಯಾ ಬಾಬಾಕ್ ಆಳಾಂಚ್ಯಾ ವಾಂಗ್ಡಾ ಥೈಚ್ ಸೊಡ್ಲ್ಯಾನಿ, ಅನಿ ಜೆಜುಚ್ಯಾ ವಾಂಗ್ಡಾ ಗೆಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 1:20
11 ತಿಳಿವುಗಳ ಹೋಲಿಕೆ  

“ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆತಾಯಿ, ಹೆಂಡತಿ, ಮಕ್ಕಳು, ಅಣ್ಣತಮ್ಮಂದಿರು, ಅಕ್ಕತಂಗಿಯರು ಇವರನ್ನೂ ತನ್ನ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು.


ಅದಕ್ಕೆ ಯೇಸು, “ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾರು ನನ್ನ ನಿಮಿತ್ತವೂ, ಸುವಾರ್ತೆಯ ನಿಮಿತ್ತವೂ ಮನೆಯನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಾಯಿಯನ್ನಾಗಲಿ, ತಂದೆಯನ್ನಾಗಲಿ, ಮಕ್ಕಳನ್ನಾಗಲಿ, ಹೊಲಗದ್ದೆಗಳನ್ನಾಗಲಿ ಬಿಟ್ಟು ಬಿಟ್ಟಿರುವನೋ,


ತಂದೆಯ ಮೇಲಾಗಲಿ ತಾಯಿಯ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ; ಮಗನ ಮೇಲಾಗಲಿ ಮಗಳ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ.


ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಮಾನವ ದೃಷ್ಟಿಯಿಂದ ಪರಿಗಣಿಸುವುದಿಲ್ಲ. ಒಮ್ಮೆ ಕ್ರಿಸ್ತನನ್ನು ನಾವು ಹೀಗೇ ಪರಿಗಣಿಸಿದ್ದುಂಟು. ಆದರೆ ಇನ್ನು ಮುಂದೆ ಆ ರೀತಿಯಾಗಿ ಪರಿಗಣಿಸುವುದಿಲ್ಲ.


ಕೂಡಲೇ ಅವನು ಎತ್ತುಗಳನ್ನು ಬಿಟ್ಟು ಓಡುತ್ತಾ ಬಂದು ಎಲೀಯನಿಗೆ, “ನನ್ನ ತಂದೆತಾಯಿಗಳನ್ನು ಮುದ್ದಿಟ್ಟು ಬರುವುದಕ್ಕೆ ಅಪ್ಪಣೆಯಾಗಲಿ, ಅನಂತರ ನಿನ್ನನ್ನು ಹಿಂಬಾಲಿಸುವೆನು” ಅಂದನು. ಅದಕ್ಕೆ ಎಲೀಯನು “ಹೋಗು ನಾನು ನಿನಗೆ ಮಾಡಿರುವುದನ್ನು ಮರೆಯಬೇಡ?” ಎಂದು ಉತ್ತರಕೊಟ್ಟನು.


ಅವರು ನಿನ್ನ ಆಜ್ಞೆಯನ್ನು ಅನುಸರಿಸುತ್ತಾ ನಿನ್ನ ನಿಬಂಧನೆಯನ್ನು ಕೈಕೊಳ್ಳುವವರಾಗಿ ತಾಯಿತಂದೆಗಳನ್ನು ‘ಪರಿಚಯವಿಲ್ಲವೆಂದೂ, ಅಣ್ಣತಮ್ಮಂದಿರನ್ನು ಅರಿಯವೆಂದೂ ಮತ್ತು ಸ್ವಂತ ಮಕ್ಕಳನ್ನು ಗುರುತಿಲ್ಲವೆಂದೂ’ ಹೇಳಿಬಿಟ್ಟರಲ್ಲಾ.


ಯೇಸು ಇನ್ನು ಸ್ವಲ್ಪ ಮುಂದೆ ಹೋಗಿ ಜೆಬೆದಾಯನ ಮಗನಾದ ಯಾಕೋಬನನ್ನೂ ಅವನ ತಮ್ಮನಾದ ಯೋಹಾನನನ್ನೂ ಕಂಡನು; ಅವರು ದೋಣಿಯೊಳಗೆ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದರು.


ಬಳಿಕ ಅವರು ಕಪೆರ್ನೌಮೆಂಬ ಊರಿಗೆ ಹೋದರು. ಸಬ್ಬತ್ ದಿನವಾದಾಗ ಯೇಸು ಸಭಾಮಂದಿರಕ್ಕೆ ಹೋಗಿ ಉಪದೇಶ ಮಾಡತೊಡಗಿದನು.


ಅವರು ತಮ್ಮ ದೋಣಿಗಳನ್ನು ದಡಕ್ಕೆ ತಂದು ಮತ್ತು ಎಲ್ಲವನ್ನು ಬಿಟ್ಟು ಅಂದಿನಿಂದ ಯೇಸುವನ್ನು ಹಿಂಬಾಲಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು