Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 1:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆ ದೆವ್ವವು, “ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನೀನು ನಮ್ಮನ್ನು ನಾಶಮಾಡುವುದಕ್ಕೆ ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು. ನೀನು ದೇವರಿಂದ ಬಂದ ಪರಿಶುದ್ಧನು” ಎಂದು ಕೂಗಿ ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ನೀವು ಯಾರೆಂದು ನನಗೆ ಗೊತ್ತು. ದೇವರಿಂದ ಬಂದ ಪರಮಪೂಜ್ಯರು ನೀವು,” ಎಂದು ಕಿರುಚಿದನು. ಆದರೆ ಯೇಸುಸ್ವಾಮಿ ಅವನನ್ನು ಗದರಿಸಿ, “ಸುಮ್ಮನಿರು, ಇವನನ್ನು ಬಿಟ್ಟು ತೊಲಗು,” ಎಂದು ಆ ದೆವ್ವಕ್ಕೆ ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆ ದೆವ್ವವು - ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡುವದಕ್ಕೆ ಬಂದೆಯಾ? ನಿನ್ನನ್ನು ಬಲ್ಲೆನು; ನೀನು ದೇವರು ಪ್ರತಿಷ್ಠಿಸಿದವನೇ ಎಂದು ಕೂಗಿ ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 “ನಜರೇತಿನ ಯೇಸುವೇ! ನಮ್ಮಿಂದ ನಿನಗೆ ಏನಾಗಬೇಕಾಗಿದೆ? ನಮ್ಮನ್ನು ನಾಶಗೊಳಿಸಲು ಬಂದಿರುವೆಯಾ? ನೀನು ದೇವರಿಂದ ಬಂದ ಪರಿಶುದ್ಧನೆಂದು ನನಗೆ ಗೊತ್ತಿದೆ!” ಎಂದು ಕೂಗಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಅವನು, “ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನೀವು ನಮ್ಮನ್ನು ನಾಶಮಾಡುವುದಕ್ಕಾಗಿ ಬಂದಿರುವೆಯೋ? ನೀವು ಯಾರೆಂದು ನಾನು ಬಲ್ಲೆನು. ನೀವು ದೇವರಿಂದ ಬಂದ ಪರಿಶುದ್ಧರು,” ಎಂದು ಕೂಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಅನಿ ಜೆಜುಕ್ ಬಗುನ್ “ನಜರೆತಾಚ್ಯಾ ಜೆಜು! ತಿಯಾ ಅಮ್ಚ್ಯಾ ಖಬ್ರೆಕ್ ಕಶ್ಯಾಕ್ ಯೆಲೆ? ಅಮ್ಕಾ ನಾಸ್ ಕರುಕ್ ಮನುನ್ ಯೆಲೆ ಕಾಯ್? ತಿಯಾ ಕೊನ್ ಮನುನ್ ಮಾಕಾ ಗೊತ್ತ್ ಹಾಯ್. ತಿಯಾ ದೆವಾಕ್ನಾ ಯೆಲ್ಲೊ ಎಕ್ಲೊ ಪವಿತ್ರ್” ಮನುನ್ ಬೊಬ್ ಮಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 1:24
25 ತಿಳಿವುಗಳ ಹೋಲಿಕೆ  

ಅವರು, “ದೇವರ ಕುಮಾರನೇ, ನಮ್ಮ ಗೊಡವೆ ನಿನಗೇಕೆ? ಕಾಲ ಬರುವುದಕ್ಕಿಂತ ಮೊದಲೇ ನಮ್ಮನ್ನು ದಂಡಿಸುವುದಕ್ಕೆ ಇಲ್ಲಿಗೆ ಬಂದಿರುವೆಯಾ” ಎಂದು ಕೂಗಿದರು.


ದೇವರು ಒಬ್ಬನೇ ಎಂದು ನೀನು ನಂಬುತ್ತೀ; ಹಾಗೆ ನಂಬುವುದು ಸರಿ. ಆದರೆ ದೆವ್ವಗಳು ಸಹ ಹಾಗೆಯೇ ನಂಬಿ ಹೆದರಿ ನಡುಗುತ್ತವೆ.


ನೀವು ಪರಿಶುದ್ಧನೂ, ನೀತಿವಂತನೂ ಆಗಿರುವ ಯೇಸುವನ್ನು ಬೇಡವೆಂದು ಹೇಳಿ ಕೊಲೆಗಾರನಾದ ಒಬ್ಬನನ್ನು ಬಿಡಿಸಿಕೊಡಬೇಕೆಂದು ಬೇಡಿಕೊಂಡು ಜೀವದಾಯಕನಾದ ಕ್ರಿಸ್ತನನ್ನು ಕೊಲ್ಲಿಸಿದ್ದೀರಿ.


“ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ, ಪರಿಶುದ್ಧನೂ, ಸತ್ಯವಂತನೂ, ದಾವೀದನ ಬೀಗದಕೈಯುಳ್ಳವನೂ, ಯಾರಿಂದಲೂ ಮುಚ್ಚಲಾಗದಂತೆ ತೆರೆಯುವವನೂ, ಯಾರಿಂದಲೂ ತೆರೆಯಲಾಗದಂತೆ ಮುಚ್ಚುವವನೂ ಆಗಿರುವಾತನು ಹೇಳುವುದೇನಂದರೆ,


ಏಕೆಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ, ನಿನ್ನ ಪವಿತ್ರನಿಗೆ ಕೊಳೆಯಲು ಬಿಡಲಾರೆ.


ಇವನು ಯೇಸುವನ್ನು ಕಂಡು ಆರ್ಭಟಿಸಿ ಆತನ ಮುಂದೆ ಅಡ್ಡಬಿದ್ದು ಮಹಾಶಬ್ದದಿಂದ, “ಯೇಸುವೇ, ಪರಾತ್ಪರನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ನನ್ನನ್ನು ಕಾಡಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ” ಅಂದನು.


ಮಹಾಶಬ್ದದಿಂದ ಆರ್ಭಟಿಸಿ, “ಯೇಸುವೇ, ಮಹೋನ್ನತನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ದೇವರಾಣೆ ನನ್ನನ್ನು ಹಿಂಸಿಸಬೇಡ ಎಂದು ನಿನ್ನನ್ನು ನಾನು ಬೇಡಿಕೊಳ್ಳುತ್ತೇನೆ” ಎಂದು ಹೇಳಿದನು.


ಏಕೆಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ; ನಿನ್ನ ಭಕ್ತನಿಗೆ ಅಧೋಲೋಕವನ್ನು ನೋಡಗೊಡಿಸುವುದಿಲ್ಲ.


ನೀನು ದೇವರಿಂದ ಬಂದ ಅತಿಪರಿಶುದ್ಧನೆಂದು ನಾವು ನಂಬಿದ್ದೇವೆ ಮತ್ತು ತಿಳಿದಿದ್ದೇವೆ” ಎಂದನು.


ಅದಕ್ಕೆ ದೂತನು, “ಪವಿತ್ರಾತ್ಮನು ನಿನ್ನ ಮೇಲೆ ಬರುವನು; ಪರಾತ್ಪರನಾದ ದೇವರ ಶಕ್ತಿಯು ನಿನ್ನನ್ನು ಅವರಿಸುವುದು; ಆದುದರಿಂದ ನಿನಗೆ ಹುಟ್ಟುವ ಆ ಪವಿತ್ರ ಶಿಶು ದೇವರ ಮಗನೆನಿಸಿಕೊಳ್ಳುವನು.


“ಈ ಮನುಷ್ಯನನು ‘ಹಾನಿಕರವೂ ಲೋಕದ ಎಲ್ಲೆಡೆ ಇರುವ, ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೆಂತಲೂ, ನಜರೇನ ಎಂಬ ಪಂಥದ ನಾಯಕ ಎಂತಲೂ ಕಂಡೆವು.’


ಆ ಮಾತಿಗೆ ಅನುಸಾರವಾಗಿಯೇ ಈ ಪಟ್ಟಣದಲ್ಲಿ ಹೆರೋದನೂ, ಪೊಂತ್ಯ ಪಿಲಾತನೂ, ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಅನ್ಯಜನರೊಡನೆ ಮತ್ತು ಇಸ್ರಾಯೇಲ್ ಜನರೊಡನೆ ಒಟ್ಟಾಗಿ ಸೇರಿಕೊಂಡು,


ಆತನು ಅವರನ್ನು, “ಯಾವ ಸಂಗತಿಗಳು” ಎಂದು ಕೇಳಿದನು. ಅದಕ್ಕೆ ಅವರು, “ನಜರೇತಿನವನಾದ ಯೇಸುವಿನ ಸಂಗತಿಗಳೇ. ಆತನು ದೇವರ ಮುಂದೆ ಮತ್ತು ಮನುಷ್ಯರ ಮುಂದೆ ಕೃತ್ಯದಲ್ಲಿಯೂ ಮಾತಿನಲ್ಲಿಯೂ ಉನ್ನತನಾದ ಪ್ರವಾದಿಯಾಗಿದ್ದನು.


ಅಲ್ಲಿರುವ ನಜರೇತೆಂಬ ಊರನ್ನು ಸೇರಿ ವಾಸಮಾಡಿದನು. ಹೀಗೆ, “ಆತನು ನಜರೇತಿನವನೆಂದು ಕರೆಯಲ್ಪಡುವನು” ಎಂಬುದಾಗಿ ಪ್ರವಾದಿಗಳು ಹೇಳಿರುವ ಮಾತು ನೆರವೇರಿತು.


ಗೆರಸೇನರ ಸುತ್ತಲಿರುವ ಸೀಮೆಯವರಿಗೆಲ್ಲಾ ಮಹಾ ಭಯ ಉಂಟಾದದ್ದರಿಂದ ಅವರು ಆತನನ್ನು, ನೀನು ನಮ್ಮನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು. ಆತನು ದೋಣಿಯನ್ನು ಹತ್ತಿ ಹಿಂತಿರುಗಿ ಹೋದನು.


ನಾವು ಐಗುಪ್ತ ದೇಶದಲ್ಲಿರುವಾಗಲೇ, ‘ನೀನು ನಮ್ಮ ಗೊಡವೆಗೆ ಬರಬೇಡ. ನಾವು ಐಗುಪ್ತ್ಯರಿಗೆ ದಾಸರಾಗಿಯೇ ಇರುವೆವು’ ಎಂಬುದಾಗಿ ನಿನಗೆ ಹೇಳಲಿಲ್ಲವೇ. ನಾವು ಈ ಮರುಭೂಮಿಯಲ್ಲಿ ಸಾಯುವುದಕ್ಕಿಂತ ಐಗುಪ್ತ್ಯರಿಗೆ ದಾಸರಾಗಿರುವುದೇ ಮೇಲಲ್ಲವೇ” ಎಂದು ಹೇಳಿದರು.


ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.


ಆಗ ಅವರ ಸಭಾಮಂದಿರದಲ್ಲಿ ದೆವ್ವಹಿಡಿದ ಒಬ್ಬ ಮನುಷ್ಯನಿದ್ದನು.


ಯೇಸು ಅದನ್ನು ಗದರಿಸಿ, “ಸುಮ್ಮನಿರು, ಅವನನ್ನು ಬಿಟ್ಟು ಹೊರಗೆ ಬಾ” ಎಂದನು.


ಅವನು ಒಬ್ಬ ಕುರುಡ ಭಿಕ್ಷುಕನಾಗಿದ್ದನು. ಈ ಮಾರ್ಗವಾಗಿ ಹೋಗುತ್ತಿರುವವನು ನಜರೇತಿನ ಯೇಸುವೆಂದು ಅವನು ಕೇಳಿದಾಗ ಅವನು, “ಯೇಸುವೇ, ದಾವೀದನ ಕುಮಾರನೇ, ನನ್ನನ್ನು ಕರುಣಿಸು” ಎಂದು ಕೂಗಿಕೊಳ್ಳುವುದಕ್ಕೆ ಪ್ರಾರಂಭಿಸಿದನು.


ಅವನನ್ನು ದೃಷ್ಟಿಸಿ ನೋಡಿ, “ನೀನು ಸಹ ಆ ನಜರೇತಿನ ಯೇಸುವಿನೊಂದಿಗೆ ಇದ್ದವನು” ಎಂದಳು.


ಅವನು ಅವರಿಗೆ, “ಭಯಪಡಬೇಡಿರಿ, ಶಿಲುಬೆಗೆ ಹಾಕಲ್ಪಟ್ಟಿದ್ದ ನಜರೇತಿನ ಯೇಸುವನ್ನು ಹುಡುಕುತ್ತಿರಲ್ಲವೇ. ಆತನು ಇಲ್ಲಿ ಇಲ್ಲ, ಜೀವಿತನಾಗಿ ಎದ್ದಿದ್ದಾನೆ; ಆತನನ್ನು ಇಟ್ಟಿದ್ದ ಸ್ಥಳ ಇದೇ ನೋಡಿರಿ,


ಆದರೆ ನೀವು ಪವಿತ್ರನಾಗಿರುವಾತನಿಂದ ಅಭಿಷೇಕವನ್ನು ಹೊಂದಿದವರಾಗಿದ್ದೀರಿ ಎಂಬ ಸತ್ಯವನ್ನೂ ತಿಳಿದವರಾಗಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು