Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 12:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆದರೆ ಯೇಸು ಅವರ ಕಪಟತನವನ್ನು ಗ್ರಹಿಸಿ, “ನೀವು ನನ್ನನ್ನು ಪರೀಕ್ಷಿಸುವುದೇಕೆ? ಒಂದು ನಾಣ್ಯವನ್ನು ತಂದು ನನಗೆ ತೋರಿಸಿರಿ ನಾನು ಅದನ್ನು ನೋಡುತ್ತೇನೆ” ಎಂದು ಹೇಳಲು ಅವರು ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅವರ ಕಪಟತನವನ್ನು ಯೇಸು ಗ್ರಹಿಸಿ, “ನೀವು ನನ್ನನ್ನು ಪರೀಕ್ಷಿಸುವುದೇಕೆ? ಒಂದು ನಾಣ್ಯವನ್ನು ತನ್ನಿ, ಅದನ್ನು ನೋಡೋಣ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಕೊಡಬೇಕೋ ಬೇಡವೋ ಎಂದು ಆತನನ್ನು ಕೇಳಿದರು. ಆತನು ಅವರ ಕಪಟವನ್ನು ತಿಳಿದು - ನನ್ನನ್ನು ಯಾಕೆ ಪರೀಕ್ಷೆ ಮಾಡುತ್ತೀರಿ? ನನಗೆ ಒಂದು ಹಣವನ್ನು ತಂದು ತೋರಿಸಿರಿ ಅನ್ನಲು ಅವರು ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಈ ಜನರು ನಿಜವಾಗಿಯೂ ತನ್ನನ್ನು ವಂಚಿಸುವುದಕ್ಕೆ ಪ್ರಯತ್ನಿಸುತ್ತಿದ್ದಾರೆಂಬುದು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು ಅವರಿಗೆ, “ನನ್ನ ಮಾತಿನಲ್ಲಿ ತಪ್ಪನ್ನು ಕಂಡುಹಿಡಿಯಲು ಏಕೆ ಪ್ರಯತ್ನಿಸುತ್ತೀರಿ? ನನಗೆ ಒಂದು ಬೆಳ್ಳಿನಾಣ್ಯವನ್ನು ಕೊಡಿರಿ, ನಾನು ಅದನ್ನು ನೋಡಬೇಕು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಾವು ಕೊಡಬೇಕೋ? ಕೊಡಬಾರದೋ?” ಎಂದು ಕೇಳಿದರು. ಆದರೆ ಯೇಸು ಅವರ ಕಪಟವನ್ನು ತಿಳಿದು ಅವರಿಗೆ, “ನೀವು ನನ್ನನ್ನೇಕೆ ಪರೀಕ್ಷಿಸುತ್ತೀರಿ? ಒಂದು ಬೆಳ್ಳಿ ನಾಣ್ಯವನ್ನು ತಂದು ನನಗೆ ತೋರಿಸಿರಿ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಜೆಜುನ್ ತೆಂಚೊ ಘಾತ್ ಕಳ್ವುನ್ ಘೆಟ್ಲ್ಯಾನ್ ಅನಿ “ತುಮಿ ಮಾಕಾಚ್ ಗೊಂದ್ಳುನ್ ಘಾಲುವಾ ಮನುನ್ ಕಶ್ಯಾಕ್ ಯವ್ಜುಕ್ ಲಾಗ್ಲ್ಯಾಸಿ? ಎಕ್ ಚಾಂದಿಚಿ ಪೈಸ್ಯಾಚಿ ಗಾಲಿ ಮಾಜ್ಯಾಕ್ಡೆ ದಿವಾ ಬಗುವಾ?” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 12:15
14 ತಿಳಿವುಗಳ ಹೋಲಿಕೆ  

ಅವಳ ಮಕ್ಕಳನ್ನು ಕೊಲ್ಲುವೆನು. ಆಗ ನಾನು ಮನುಷ್ಯರ ಅಂತರಿಂದ್ರಿಯಗಳನ್ನೂ, ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆಂಬುದು ಎಲ್ಲಾ ಸಭೆಗಳಿಗೆ ಗೊತ್ತಾಗುವುದು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕ್ರಿಯೆಗಳಿಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡುವೆನು.


ಆತನ ದೃಷ್ಟಿಗೆ ಮರೆಯಾಗಿರುವ ಒಂದು ಸೃಷ್ಟಿಯೂ ಇಲ್ಲ. ಆತನ ಕಣ್ಣಿಗೆ ಮರೆಯಾದದ್ದು ಒಂದೂ ಇಲ್ಲ ಎಲ್ಲವೂ ನಗ್ನವಾಗಿಯೂ ಬಟ್ಟಬಯಲಾಗಿಯೂ ಇದೆ. ಅಂಥವನಿಗೆ ನಾವು ಲೆಕ್ಕಕೊಡಬೇಕಾಗಿದೆ.


ಅವರಲ್ಲಿ ಕೆಲವರು ಕರ್ತನನ್ನು ಪರೀಕ್ಷಿಸಿ ಸರ್ಪಗಳಿಂದ ನಾಶವಾದರು. ನಾವು ಪರೀಕ್ಷಿಸದೆ ಇರೋಣ.


ಆಗ ಪೇತ್ರನು ಆಕೆಗೆ, “ನೀವಿಬ್ಬರೂ ಕರ್ತನ ಆತ್ಮನನ್ನು ಪರೀಕ್ಷಿಸುವುದಕ್ಕೆ ಏಕೆ ಒಡಂಬಟ್ಟಿರಿ? ಅಗೋ, ನಿನ್ನ ಗಂಡನನ್ನು ಸಮಾಧಿಮಾಡಿದವರು ಬಂದು ಬಾಗಿಲಿನಲ್ಲಿ ಕಾಲಿಟ್ಟಿದ್ದಾರೆ, ನಿನ್ನನ್ನೂ ಹೊತ್ತುಕೊಂಡು ಹೋಗುವರು” ಎಂದು ಹೇಳಿದನು.


ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ ನೀನು ನನ್ನ ಮೇಲೆ ಮಮತೆ ಇಟ್ಟಿದ್ದಿಯೋ?” ಎಂದು ಕೇಳಿದನು, ಮೂರನೆಯ ಸಾರಿ ಆತನು, “ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿನಗೆ ಎಲ್ಲವೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟೀದ್ದೇನೆಂದು ನಿನಗೆ ತಿಳಿದಿದೆ” ಎಂದನು. ಆಗ ಅವನಿಗೆ ಯೇಸು “ನನ್ನ ಕುರಿಗಳನ್ನು ಮೇಯಿಸು” ಎಂದನು.


ಯೇಸು ಅವರ ಕುಯುಕ್ತಿಯನ್ನು ಅರಿತುಕೊಂಡು,


ಆಗ ಫರಿಸಾಯರು ಆತನ ಹತ್ತಿರಕ್ಕೆ ಬಂದು ಆತನನ್ನು ಪರೀಕ್ಷಿಸಬೇಕೆಂಬ ಯೋಚನೆಯಿಂದ, “ಒಬ್ಬನು ಹೆಂಡತಿಯನ್ನು ಬಿಟ್ಟುಬಿಡುವುದು ಧರ್ಮವೋ ಹೇಗೆ” ಎಂದು ಕೇಳಿದರು.


ಯೇಸು ಅವರ ಕೆಡುಕನ್ನು ಅರಿತುಕೊಂಡವನಾಗಿ, “ಕಪಟಿಗಳೇ, ನನ್ನನ್ನು ಏಕೆ ಪರೀಕ್ಷೆಮಾಡುತ್ತೀರಿ?


“ನರಪುತ್ರನೇ, ನೀನು ಇಸ್ರಾಯೇಲ್ ವಂಶದವರಿಗೆ ಈ ಸಾಮ್ಯವನ್ನು ಒಗಟಾಗಿ ಹೇಳು,


ಅವನು ದಿನಕ್ಕೆ ಒಂದು ಬೆಳ್ಳಿ ನಾಣ್ಯದಂತೆ ಕೂಲಿಯಾಳುಗಳೊಂದಿಗೆ ಒಪ್ಪಂದ ಮಾಡಿದ ನಂತರ ಅವರನ್ನು ದ್ರಾಕ್ಷಾತೋಟಕ್ಕೆ ಕಳುಹಿಸಿದನು.


ಇವರು ಬಂದು, “ಬೋಧಕನೇ ನೀನು ಸತ್ಯವಂತನು, ಯಾವ ಮನುಷ್ಯನನ್ನು ಲಕ್ಷಿಸದವನೂ, ಮುಖದಾಕ್ಷಿಣ್ಯ ತೋರಿಸದವನೂ, ಸತ್ಯಕ್ಕನುಸಾರವಾಗಿ ದೈವಮಾರ್ಗವನ್ನು ಬೋಧಿಸುವವನೂ ಎಂದು ನಾವು ಬಲ್ಲೆವು. ಕೈಸರನಿಗೆ ಸುಂಕ ಕೊಡುವುದು ಧರ್ಮಸಮ್ಮತವೋ? ಅಲ್ಲವೋ? ನಾವದನ್ನು ಕೊಡಬೇಕೋ ಬೇಡವೋ?” ಎಂದು ಆತನನ್ನು ಕೇಳಿದರು.


ಆಗ ಆತನು ಇದರ “ಮೇಲಿರುವುದು ಯಾರ ಮುಖಮುದ್ರೆ? ಮತ್ತು ಯಾರ ಲಿಪಿ?” ಎಂದು ಕೇಳಿದ್ದಕ್ಕೆ ಅವರು ಕೈಸರನದು ಅಂದರು.


ಅವರು ಆತನನ್ನು ಪರೀಕ್ಷಿಸುವವರಾಗಿ ಆತನ ಮೇಲೆ ತಪ್ಪುಹೊರಿಸಬೇಕೆಂದೇ ಹೀಗೆ ಕೇಳಿದರು. ಆದರೆ ಯೇಸು ಬಗ್ಗಿಕೊಂಡು ಬೆರಳಿನಿಂದ ನೆಲದ ಮೇಲೆ ಬರೆಯುತ್ತಾ ಇದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು