Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 12:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಶಾಸ್ತ್ರಿಗಳಲ್ಲಿ ಒಬ್ಬನು ಅವರ ವಾದವನ್ನು ಕೇಳಿ ಯೇಸು ಅವರಿಗೆ ಸರಿಯಾಗಿ ಉತ್ತರ ಕೊಟ್ಟನೆಂದು ತಿಳಿದು ಆತನ ಹತ್ತಿರಕ್ಕೆ ಬಂದು, “ಎಲ್ಲಾ ಆಜ್ಞೆಗಳಲ್ಲಿ ಮುಖ್ಯವಾದ್ದದು ಯಾವುದು?” ಎಂದು ಆತನನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಈ ತರ್ಕವನ್ನು ಕೇಳುತ್ತಿದ್ದ ಧರ್ಮಶಾಸ್ತ್ರಿ ಒಬ್ಬನು, ಯೇಸುಸ್ವಾಮಿ ಸದ್ದುಕಾಯರಿಗೆ ಸಮರ್ಪಕವಾದ ಉತ್ತರವನ್ನು ಕೊಟ್ಟಿದ್ದನ್ನು ಮೆಚ್ಚಿ, ಅವರ ಬಳಿಗೆ ಬಂದು, “ಆಜ್ಞೆಗಳಲ್ಲೆಲ್ಲಾ ಪ್ರಪ್ರಥಮ ಆಜ್ಞೆ ಯಾವುದು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಶಾಸ್ತ್ರಿಗಳಲ್ಲಿ ಒಬ್ಬನು ಅವರ ತರ್ಕವನ್ನು ಕೇಳಿ ಯೇಸು ಅವರಿಗೆ ಒಳ್ಳೆಯ ಉತ್ತರ ಕೊಟ್ಟನೆಂದು ತಿಳಿದು ಹತ್ತಿರಕ್ಕೆ ಬಂದು - ಎಲ್ಲಾ ಆಜ್ಞೆಗಳಲ್ಲಿ ಮೊದಲನೆಯದು ಯಾವದು ಎಂದು ಆತನನ್ನು ಕೇಳಿದ್ದಕ್ಕೆ ಯೇಸು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಈ ವಾದವಿವಾದವನ್ನು ಕೇಳುತ್ತಿದ್ದ ಧರ್ಮೋಪದೇಶಕರಲ್ಲಿ ಒಬ್ಬನು ಯೇಸು ಸದ್ದುಕಾಯರಿಗೆ ಹಾಗೂ ಫರಿಸಾಯರಿಗೆ ಒಳ್ಳೆಯ ಉತ್ತರ ಕೊಟ್ಟದ್ದನ್ನು ಗಮನಿಸಿ, ಆತನ ಬಳಿಗೆ ಬಂದು, “ಆಜ್ಞೆಗಳಲ್ಲೆಲ್ಲಾ ಅತ್ಯಂತ ಮುಖ್ಯವಾದ ಆಜ್ಞೆ ಯಾವುದು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ನಿಯಮ ಬೋಧಕರಲ್ಲಿ ಒಬ್ಬನು ಬಂದು ಅವರು ಕೂಡಿಕೊಂಡು ತರ್ಕಿಸುತ್ತಿರುವುದನ್ನು ಕೇಳಿ ಯೇಸು ಅವರಿಗೆ ಸರಿಯಾಗಿ ಉತ್ತರವನ್ನು ಕೊಟ್ಟನೆಂದು ತಿಳಿದು ಅವರಿಗೆ, “ಎಲ್ಲಾ ಆಜ್ಞೆಗಳಲ್ಲಿ ಮೊದಲನೆಯದು ಯಾವುದು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಖಾಯ್ದೆ ಸಿಕ್ವುತಲ್ಯಾಂಚ್ಯಾ ಮದ್ಲ್ಯಾ ಎಕ್ ಮಾನ್ಸಾನ್ ಜೆಜು ಸಾದುಸೆವಾಕ್ನಿ ಸಮಾ ಜಬಾಬ್ ದಿತಲೆ ಅಯ್ಕ್ಲ್ಯಾನ್, ಅನಿ ಜೆಜುಕ್ಡೆ ಯೆವ್ನ್ “ಸಗ್ಳ್ಯಾ ಉಪಾದೆಸಾನ್ಕಿ ಮೊಟೊ ಉಪಾದೆಸ್ ಖಲೊ?” ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 12:28
8 ತಿಳಿವುಗಳ ಹೋಲಿಕೆ  

ಶಾಸ್ತ್ರಿಗಳಲ್ಲಿ ಕೆಲವರು, “ಬೋಧಕನೇ, ಚೆನ್ನಾಗಿ ಹೇಳಿದಿ” ಅಂದರು.


ಅದಕ್ಕೆ ಅವನು, “ಅವು ಯಾವುವು?” ಎಂದು ಕೇಳಲು ಯೇಸು, “ನರಹತ್ಯ ಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳು ಸಾಕ್ಷಿ ಹೇಳಬಾರದು.


ಆದುದರಿಂದ ಈ ಸಣ್ಣ ಆಜ್ಞೆಗಳಲ್ಲಿ ಒಂದನ್ನು ಮೀರಿ ನಡೆದು ಜನರಿಗೂ ಹಾಗೆ ಮಾಡುವುದಕ್ಕೆ ಬೋಧಿಸುವವನು ಪರಲೋಕ ರಾಜ್ಯದಲ್ಲಿ ಬಹಳ ಕನಿಷ್ಠನೆನ್ನಿಸಿಕೊಳ್ಳುವನು; ಆದರೆ ತಾನೇ ಸ್ವತಃ ಆ ಆಜ್ಞೆಗಳಂತೆ ನಡೆದುಕೊಂಡು ಜನರಿಗೂ ಹಾಗೆ ನಡೆಯಬೇಕೆಂದು ಬೋಧಿಸುವವನು ಪರಲೋಕ ರಾಜ್ಯದಲ್ಲಿ ಶ್ರೇಷ್ಠನೆನಿಸಿಕೊಳ್ಳುವನು.


“ಅಯ್ಯೋ ಫರಿಸಾಯರೇ, ನೀವು ಪುದೀನ, ಮರುಗಪತ್ರೆ ಸದಾಪು ಮುಂತಾದ ಸಕಲ ವಿಧವಾದ ಸೊಪ್ಪುಗಳಲ್ಲಿ ಹತ್ತರಲ್ಲೊಂದು ಪಾಲು ಕೊಡುತ್ತೀರಿ ಸರಿ, ಆದರೆ ನ್ಯಾಯವನ್ನೂ ದೇವರ ಪ್ರೀತಿಯನ್ನೂ ಲಕ್ಷಿಸದೆ ಬಿಟ್ಟಿದ್ದೀರಿ. ನೀವು ಅವುಗಳನ್ನು ಅಲಕ್ಷ್ಯ ಮಾಡದೆ, ಇವುಗಳನ್ನು ಮಾಡಬೇಕಾಗಿತ್ತು.


ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪುದೀನ, ಮರುಗಪತ್ರೆ, ಸಬಸಿಗೆಸೊಪ್ಪು, ಜೀರಿಗೆಗಳಲ್ಲಿ ದಶಮ ಭಾಗವನ್ನು ಕೊಡುತ್ತೀರಿ ಸರಿ, ಆದರೆ ಧರ್ಮಶಾಸ್ತ್ರದಲ್ಲಿ ಮುಖ್ಯವಾದುದನ್ನು ಅಂದರೆ ನ್ಯಾಯವನ್ನೂ, ಕರುಣೆಯನ್ನೂ ನಂಬಿಕೆಯನ್ನೂ ಬಿಟ್ಟುಬಿಟ್ಟಿದ್ದೀರಿ. ಇವುಗಳನ್ನು ಮಾಡಬೇಕು; ಅವುಗಳನ್ನೂ ಬಿಡಬಾರದು.


ತರುವಾಯ ಅವರು ಉಳಿದ ಶಿಷ್ಯರ ಬಳಿಗೆ ಬಂದು ಅವರ ಸುತ್ತಲು ಜನರ ದೊಡ್ಡ ಗುಂಪು ಇರುವುದನ್ನೂ ಅವರ ಸಂಗಡ ಶಾಸ್ತ್ರಿಗಳು ತರ್ಕಮಾಡುವುದನ್ನೂ ಕಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು