Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 12:37 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ದಾವೀದನೇ ಆತನನ್ನು ‘ಕರ್ತನೆಂದು’ ಹೇಳಿರುವಲ್ಲಿ ಆತನು ಅವನಿಗೆ ಮಗನಾಗುವುದು ಹೇಗೆ?” ಎಂದು ಪ್ರಶ್ನಿಸಿದನು. ಜನರ ದೊಡ್ಡ ಸಮೂಹವು ಆತನ ಮಾತನ್ನು ಸಂತೋಷದಿಂದ ಕೇಳುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ದಾವೀದನೇ, ಕ್ರಿಸ್ತನನ್ನು ‘ನನ್ನ ಪ್ರಭು’ ಎಂದು ಕರೆದಿರುವಲ್ಲಿ ಆತನು ದಾವೀದನ ಪುತ್ರನಾಗಿರುವುದು ಹೇಗೆ?” ಎಂದು ಪ್ರಶ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ದಾವೀದನೇ ಆತನನ್ನು ಒಡೆಯನೆಂದು ಹೇಳಿರುವಲ್ಲಿ ಆತನು ಅವನಿಗೆ ಮಗನಾಗುವದು ಹೇಗೆ? ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ದಾವೀದನೇ ಕ್ರಿಸ್ತನನ್ನು ‘ಪ್ರಭು’ ಎಂದು ಕರೆದಿರುವಾಗ ಕ್ರಿಸ್ತನು ದಾವೀದನ ಮಗನಾಗುವುದು ಹೇಗೆ ಸಾಧ್ಯ?” ಎಂದು ಪ್ರಶ್ನಿಸಿದನು. ಯೇಸುವಿನ ಮಾತನ್ನು ಕೇಳಿ, ಅನೇಕ ಜನರು ಬಹಳ ಸಂತೋಷಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಆದ್ದರಿಂದ ದಾವೀದನು ತಾನೇ ಅವರನ್ನು, ‘ನನ್ನ ಕರ್ತದೇವರೇ’ ಎಂದು ಕರೆಯುವಾಗ, ಆತನು ದಾವೀದನ ಪುತ್ರನಾಗುವುದು ಹೇಗೆ?” ಎಂದು ಕೇಳಿದರು. ಜನಸಮೂಹವು ಸಂತೋಷದಿಂದ ಯೇಸುವಿನ ಮಾತುಗಳನ್ನು ಆಲಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 “ಅಶೆ ಸ್ವತಾ ದಾವಿದುಚ್ ಮೆಸ್ಸಿಯಾಕ್ ಧನಿ ಮನುನ್ ಬಲ್ವುತಾ ತರ್, ಮೆಸ್ಸಿಯಾ ದಾವಿದಾಚೊ ಲೆಕ್ ಕಸೊ ಹೊವ್ಕ್ ಹೊತಾ?” ಮಟ್ಲ್ಯಾನ್. ಥೈ ಲೈ ಲೊಕಾ ಹೊತ್ತಿ ತಿ ಲೊಕಾ ಜೆಜು ಸಾಂಗ್ತಲೆ ಕುಶಿನ್ ಅಯ್ಕುಲಾಗಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 12:37
14 ತಿಳಿವುಗಳ ಹೋಲಿಕೆ  

“ಯೇಸುವೆಂಬ ನಾನು ನನ್ನ ಸಭೆಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವುದಕ್ಕೆ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದನ ವಂಶವೆಂಬ ಬುಡದಿಂದ ಹುಟ್ಟಿದ ಬೇರೂ ಅವನ ಸಂತತಿಯೂ ಪ್ರಕಾಶಮಾನವಾದ ಉದಯ ನಕ್ಷತ್ರವೂ ಆಗಿದ್ದೇನೆ.”


ನನ್ನ ಪ್ರಿಯ ಸಹೋದರರೇ, ಕೇಳಿರಿ ದೇವರು ಈ ಲೋಕದಲ್ಲಿನ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ, ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?


ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ, ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು, ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು, ದೇವದೂತರಿಗೆ ಕಾಣಿಸಿಕೊಂಡನು, ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು, ಲೋಕದಲ್ಲಿ ನಂಬಲ್ಪಟ್ಟನು, ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.


ಅವರ ಪೂರ್ವಿಕರು ಇವರಿಗೆ ಸಂಬಂಧಪಟ್ಟವರೇ, ಕ್ರಿಸ್ತನು ಶರೀರಸಂಬಂಧವಾಗಿ ಅವರ ವಂಶದಲ್ಲಿಯೇ ಹುಟ್ಟಿದನು. ಆತನು ಎಲ್ಲಾದರ ಮೇಲೆ ಒಡೆಯನೂ, ನಿರಂತರ ಸ್ತುತಿ ಹೊಂದತಕ್ಕ ದೇವರೂ ಆಗಿದ್ದಾನೆ. ಆಮೆನ್.


ಯೆಹೂದ್ಯರ ಗುಂಪು ಆತನು ಅಲ್ಲಿ ಇದ್ದಾನೆಂದು ತಿಳಿದು, ಯೇಸುವನ್ನು ನೋಡುವುದಕ್ಕಾಗಿ ಮಾತ್ರವಲ್ಲದೆ, ಆತನು ಸತ್ತವರೊಳಗಿಂದ ಎಬ್ಬಿಸಿದ ಲಾಜರನನ್ನೂ ಸಹ ನೋಡಬೇಕೆಂಬುದಾಗಿ ಅಲ್ಲಿಗೆ ಬಂದರು.


ಜನರೆಲ್ಲರು ಆತನ ಉಪದೇಶವನ್ನು ಕೇಳಬೇಕೆಂದು ಬೆಳಗ್ಗೆ ಬೇಗನೆ ಎದ್ದು ದೇವಾಲಯಕ್ಕೆ ಆತನ ಬಳಿಗೆ ಬರುತ್ತಿದ್ದರು.


ಆದರೆ ಜನರೆಲ್ಲರು ಆತನ ಹತ್ತಿರದಲ್ಲಿದ್ದುಕೊಂಡು ಬೋಧನೆಯನ್ನು ಗಮನಿಸಿ ಕೇಳುತ್ತಿದ್ದುದರಿಂದ ಏನು ಮಾಡಬೇಕೆಂದು ಅವರಿಗೆ ತಿಳಿಯಲಿಲ್ಲ.


ಆದರೆ ಅವರು ಆತನನ್ನು ಬಂಧಿಸುವುದಕ್ಕೆ ಪ್ರಯತ್ನಿಸಿದರೂ ಜನರು ಆತನನ್ನು ಪ್ರವಾದಿಯೆಂದು ಎಣಿಸಿದ್ದರಿಂದ ಅವರಿಗೆ ಭಯಪಟ್ಟರು.


ಅದೇ ಸಮಯದಲ್ಲಿ ಯೇಸು ಹೇಳಿದ್ದೇನೆಂದರೆ, “ತಂದೆಯೇ! ಪರಲೋಕದ ಭೂಲೋಕದ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ವಿಷಯಗಳನ್ನು ಮರೆಮಾಡಿ ಚಿಕ್ಕ ಮಕ್ಕಳಿಗೆ ಅದನ್ನು ಪ್ರಕಟಪಡಿಸಿರುವಿ ಎಂದು ನಿನ್ನನ್ನು ಕೊಂಡಾಡುತ್ತೇನೆ.


ಕುರುಡರು ನೋಡುತ್ತಿದ್ದಾರೆ, ಕುಂಟರು ನಡೆಯುತ್ತಿದ್ದಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಿದ್ದಾರೆ, ಕಿವುಡರು ಕೇಳುತ್ತಿದ್ದಾರೆ, ಸತ್ತವರು ಜೀವದಿಂದ ಎಬ್ಬಿಸಲ್ಪಡುತ್ತಿದ್ದಾರೆ, ಮತ್ತು ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತಿದ್ದೆ.


“ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು; ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು. ‘ದೇವರು ನಮ್ಮ ಕೂಡ ಇದ್ದಾನೆಂದು’ ಈ ಹೆಸರಿನ ಅರ್ಥ.”


ಮುಖ್ಯಯಾಜಕರೂ ಫರಿಸಾಯರೂ ಆತನ ಸಾಮ್ಯಗಳನ್ನು ಕೇಳಿ ತಮ್ಮನ್ನೇ ಕುರಿತು ಮಾತನಾಡುತ್ತಿದ್ದಾನೆಂದು ತಿಳಿದುಕೊಂಡು. ಯೇಸುವನ್ನು ಬಂಧಿಸಲು ಸಂದರ್ಭ ನೋಡುತ್ತಿದ್ದರು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು