Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 13:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಮತ್ತು ಆತನು ತನ್ನ ದೂತರನ್ನು ಕಳುಹಿಸಿ ಭೂಮಿಯ ಕಟ್ಟಕಡೆಯಿಂದ ಆಕಾಶದ ಕಟ್ಟಕಡೆಯವರೆಗೆ ತಾನು ಆರಿಸಿಕೊಂಡವರನ್ನು ನಾಲ್ಕುದಿಕ್ಕುಗಳಿಂದ ಒಟ್ಟುಗೂಡಿಸುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಆತನು ದೇವದೂತರನ್ನು ಜಗತ್ತಿನ ನಾಲ್ಕು ದಿಕ್ಕುಗಳಿಗೂ ಕಳುಹಿಸಿ, ತಾನು ಆರಿಸಿಕೊಂಡವರನ್ನು ವಿಶ್ವದ ಅಷ್ಟದಿಕ್ಕುಗಳಿಂದಲೂ ಒಟ್ಟುಗೂಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಮತ್ತು ಆತನು ತನ್ನ ದೂತರನ್ನು ಕಳುಹಿಸಿ ತಾನು ಆದುಕೊಂಡವರನ್ನು ಭೂವಿುಯ ಕಟ್ಟ ಕಡೆಯಿಂದ ಆಕಾಶದ ಕಟ್ಟ ಕಡೆಯವರೆಗೆ ನಾಲ್ಕೂ ದಿಕ್ಕುಗಳಿಂದ ಒಟ್ಟುಗೂಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಮನುಷ್ಯಕುಮಾರನು ತನ್ನ ದೂತರನ್ನು ಭೂಮಿಯ ಎಲ್ಲಾ ಕಡೆಗೆ ಕಳುಹಿಸಿ ತಾನು ಆರಿಸಿಕೊಂಡ ಜನರನ್ನು ಭೂಮಿಯ ಕಟ್ಟಕಡೆಗಳಿಂದ ಒಟ್ಟುಗೂಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ನಾನು ನನ್ನ ದೂತರನ್ನು ಕಳುಹಿಸಿ ಭೂಮಿಯ ಕಟ್ಟಕಡೆಯಿಂದ ಆಕಾಶದ ಕಟ್ಟಕಡೆಯವರೆಗೆ ನಾನು ಆರಿಸಿಕೊಂಡವರನ್ನು ನಾಲ್ಕು ದಿಕ್ಕುಗಳಿಂದಲೂ ಒಟ್ಟುಗೂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಮಾನಾ ಮಾನ್ಸಾಚೊ ಲೆಕ್ ಅಪ್ನಾಚ್ಯಾ ದುತಾಕ್ನಿ ಧಾಡುನ್ ಅಪ್ನಿ ಯೆಚುನ್ ಘೆಟಲ್ಲ್ಯಾ ಲೊಕಾಕ್ನಿ ದುನಿಯಾಚ್ಯಾ ಸಗ್ಳ್ಯಾ ಭಾಗಾನಿತ್ನಾ ಅನಿ ಸರ್‍ಗಾಚ್ಯಾ ಸಗ್ಳ್ಯಾ ಭಾಗಾನಿತ್ನಾ ಗೊಳಾ ಕರುಕ್ ಲಾವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 13:27
27 ತಿಳಿವುಗಳ ಹೋಲಿಕೆ  

ಎಲೈ, ಎಲೈ ಉತ್ತರದೇಶದಿಂದ ಓಡಿ ಬನ್ನಿರಿ; ಇದು ಯೆಹೋವನ ನುಡಿ; ಚತುರ್ದಿಕ್ಕಿನ ಗಾಳಿಗಳಂತೆ ನಿಮ್ಮನ್ನು ಚದುರಿಸಿದ್ದೆನಲ್ಲಾ; ಇದು ಯೆಹೋವನ ನುಡಿ.


ಆತನು ತನ್ನ ದೂತರನ್ನು ತುತ್ತೂರಿಯ ಮಹಾ ಶಬ್ದದೊಂದಿಗೆ ಕಳುಹಿಸುವನು. ಅವರು ಆತನು ಆರಿಸಿಕೊಂಡವರನ್ನು ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ನಾಲ್ಕು ದಿಕ್ಕುಗಳಿಂದ ಒಟ್ಟುಗೂಡಿಸುವರು.


ನಿಮ್ಮಲ್ಲಿ ಯಾರಾದರೂ ಭೂಲೋಕದ ಕಟ್ಟಕಡೆಯವರೆಗೆ ಒಯ್ಯಲ್ಪಟ್ಟರೂ, ಅಲ್ಲಿಂದಲೂ ನಿಮ್ಮ ದೇವರಾದ ಯೆಹೋವನು ಅವರನ್ನೂ ಕರೆದುಕೊಂಡು ಬರುವನು.


ಸಹೋದರರೇ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಆಗಮನದ ವಿಷಯವಾಗಿಯೂ ಮತ್ತು ನಾವು ಆತನ ಎದುರಿನಲ್ಲಿ ಕೂಡಿಕೊಳ್ಳುವುದರ ವಿಷಯವಾಗಿಯೂ ನಿಮ್ಮನ್ನು ವಿನಂತಿಸುವುದೇನಂದರೆ,


ಹೀಗಿರುವಲ್ಲಿ ಸ್ವಲ್ಪ ಕಾಲವಾದ ಮೇಲೆ ಆ ಭಿಕ್ಷುಕನು ಸತ್ತನು. ದೇವದೂತರು ಅವನನ್ನು ತೆಗೆದುಕೊಂಡು ಹೋಗಿ ಅಬ್ರಹಾಮನ ಎದೆಗೆ ಒರಗಿಸಿದರು. ಆ ಐಶ್ವರ್ಯವಂತನು ಸಹ ಸತ್ತನು. ಅವನನ್ನು ಹೂಣಿಟ್ಟರು.


ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಒಂದು ನರಪ್ರಾಣಿಯಾದರೂ ಉಳಿಯುವುದಿಲ್ಲ. ಆದರೆ ತಾನು ಆರಿಸಿಕೊಂಡವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಿದ್ದಾನೆ.


ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿಸುವನು. ಅವರು ಆತನ ರಾಜ್ಯದೊಳಗಿಂದ ಪಾಪಕ್ಕೆ ಕಾರಣವಾದವರೆಲ್ಲರನ್ನೂ ಅಧರ್ಮಿಗಳನ್ನೂ ಕೂಡಿಸಿ ಬೆಂಕಿ ಕೊಂಡದಲ್ಲಿ ಹಾಕುವರು.


ಪವಿತ್ರಾತ್ಮನಿಂದ ಪ್ರತಿಷ್ಠಿಸಲ್ಪಟ್ಟವರಾಗಿ, ವಿಧೇಯರಾಗುವುದಕ್ಕಾಗಿ, ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗಿ, ತಂದೆಯಾದ ದೇವರ ಭವಿಷ್ಯದ ಜ್ಞಾನಾನುಸಾರವಾಗಿ ಆರಿಸಿಕೊಳಲ್ಪಟ್ಟವರಿಗೆ ಬರೆಯುವುದೇನೆಂದರೆ ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ಉಂಟಾಗಲಿ.


ಆದಕಾರಣ ದೇವರು ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯ ಮಹಿಮೆಯ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನು ತಾಳಿಕೊಳ್ಳುತ್ತೇನೆ.


ಹೀಗಿರಲಾಗಿ ದೇವರಿಂದ ಆರಿಸಿಕೊಂಡವರಾಗಿ, ಪರಿಶುದ್ಧರೂ ಹಾಗೂ ಪ್ರಿಯರೂ ಆಗಿರುವುದರಿಂದ ಕನಿಕರ, ದಯೆ, ದೀನತೆ, ಸಾತ್ವಿಕತ್ವ ಮತ್ತು ಸಹನೆ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.


ದೇವರು ಆದುಕೊಂಡವರ ಮೇಲೆ ಯಾರು ತಪ್ಪು ಹೊರಿಸುವವರು ಯಾರು? ದೇವರೇ ನಮ್ಮನ್ನು ನೀತಿವಂತರೆಂದು ನಿರ್ಣಯಿಸುವಾತನಾಗಿದ್ದಾನೆ.


ಆ ಜನತೆಗಾಗಿ ಮಾತ್ರವಲ್ಲದೆ ಚದರಿರುವ ದೇವರ ಮಕ್ಕಳನ್ನು ಸಹ ಒಟ್ಟುಗೂಡಿಸುವುದಕ್ಕಾಗಿಯೂ ಸಾಯುವುದಕ್ಕಿದ್ದನು, ಎಂಬುದಾಗಿ ಪ್ರವಾದಿಸಿದನು


ಇದಲ್ಲದೆ ಈ ಮಂದೆಗೆ ಸೇರದಿರುವ ಇನ್ನೂ ಬೇರೆ ಕುರಿಗಳು ನನಗಿವೆ, ಅವುಗಳನ್ನೂ ಸಹ ನಾನು ಕರೆ ತರಬೇಕು. ಅವು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇ ಕುರಿಹಿಂಡು ಆಗುವುದು ಮತ್ತು ಒಬ್ಬನೇ ಕುರುಬನು ಇರುವನು.


ದೇವರು ಆರಿಸಿಕೊಂಡವರು ಆತನಿಗೆ ಹಗಲುರಾತ್ರಿ ಮೊರೆಯಿಡುವಲ್ಲಿ, ಆತನು ಅವರ ವಿಷಯದಲ್ಲಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ? ಅವರಿಗೆ ಬೇಗ ನ್ಯಾಯವನ್ನು ತೀರಿಸದೆ ಇರುವನೇ?


ಏಕೆಂದರೆ ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಮೋಸಗೊಳಿಸುವುದಕ್ಕೋಸ್ಕರ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.


ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಸಹ ಮೋಸಗೊಳಿಸುವುದಕ್ಕೋಸ್ಕರ ಮಹಾ ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.


ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಒಬ್ಬ ನರಪ್ರಾಣಿಯಾದರೂ ಉಳಿಯನು; ಆದರೆ ತಾನು ಆರಿಸಿಕೊಂಡವರಿಗೋಸ್ಕರ ಆ ದಿನಗಳನ್ನು ಕಡಿಮೆಮಾಡುವನು.


ಹಾಗೆಯೇ ಯುಗದ ಸಮಾಪ್ತಿಯಲ್ಲಿ ಆಗುವುದು. ದೇವದೂತರು ಹೊರಟು ಬಂದು ನೀತಿವಂತರೊಳಗಿಂದ ಕೆಟ್ಟವರನ್ನು ಬೇರೆ ಮಾಡಿ ಅವರನ್ನು ಬೆಂಕಿಯ ಕೊಂಡದಲ್ಲಿ ಹಾಕುವರು.


ದಕ್ಷಿಣ ದೇಶದ ರಾಣಿಯು ಸೊಲೊಮೋನನ ಜ್ಞಾನವನ್ನು ಕೇಳುವುದಕ್ಕೆ ಭೂಮಿಯ ಕಟ್ಟಕಡೆಯಿಂದ ಬಂದಳು. ಇಗೋ, ಇಲ್ಲಿ ಸೊಲೊಮೋನನಿಗಿಂತ ಹೆಚ್ಚಿನವನಿದ್ದಾನೆ. ದಕ್ಷಿಣ ದೇಶದ ರಾಣಿಯು ನ್ಯಾಯವಿಚಾರಣೆಯಲ್ಲಿ ಈ ಸಂತತಿಯವರೊಂದಿಗೆ ಎದ್ದು ನಿಂತು ಇವರನ್ನು ಖಂಡಿಸುವಳು.


ಯಾಕೋಬಿನಿಂದ ಸಂತಾನವನ್ನು ಹುಟ್ಟಿಸುವೆನು, ಯೆಹೂದ ವಂಶದಿಂದ ನನ್ನ ಪರ್ವತಗಳ ಸ್ವತ್ತಿನ ಸಂತತಿಯನ್ನು ಬರಮಾಡುವೆನು, ನನ್ನ ಆಪ್ತರು ಆ ಸ್ವತ್ತನ್ನು ಅನುಭವಿಸುವರು, ನನ್ನ ಸೇವಕರು ಅಲ್ಲಿ ವಾಸಿಸುವರು.


ರಾಜದಂಡವನ್ನು ಹಿಡಿಯತಕ್ಕವನು ಶಿಲೋವಿನಿಂದ ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವುದಿಲ್ಲ. ಮುದ್ರೆ ಕೋಲು ಅವನ ಪಾದಗಳ ಬಳಿಯಿಂದ ಕದಲುವುದಿಲ್ಲ. ಅನ್ಯಜನಾಂಗಗಳೂ ಅವನಿಗೆ ವಿಧೇಯರಾಗಿರುವರು.


“ಅಂಜೂರ ಮರವನ್ನು ನೋಡಿ ಒಂದು ಪಾಠವನ್ನು ಕಲಿತುಕೊಳ್ಳಿ. ಅದರ ಕೊಂಬೆಗಳಲ್ಲಿ ಇನ್ನೂ ಎಳೆದಾಗಿ ಎಲೆಗಳು ಚಿಗುರುವಾಗ ಬೇಸಿಗೆಯು ಸಮೀಪಿಸಿತು ಎಂದು ಅರಿತುಕೊಳ್ಳುತ್ತಿರಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು