Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆದರೆ ಅವನು, “ನಾನು ನಿನ್ನ ಸಂಗಡ ಸಾಯಬೇಕಾಗಿ ಬಂದರೂ ನಿನ್ನನ್ನು ನಿರಾಕರಿಸುವುದೇ ಇಲ್ಲವೆಂದು” ಬಹು ಖಂಡಿತವಾಗಿ ಹೇಳಿದನು. ಅದರಂತೆಯೇ ಶಿಷ್ಯರೆಲ್ಲರೂ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಆದರೆ ಪೇತ್ರನು, “ನಾನು ತಮ್ಮೊಡನೆ ಸಾಯಬೇಕಾಗಿ ಬಂದರೂ ತಮ್ಮನ್ನು ಮಾತ್ರ ನಿರಾಕರಿಸೆನು,” ಎಂದು ಆವೇಶಪೂರಿತನಾಗಿ ನುಡಿದನು. ಹಾಗೆಯೇ ಉಳಿದವರೂ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಆದರೆ ಅವನು - ನಾನು ನಿನ್ನ ಸಂಗಡ ಸಾಯಬೇಕಾದರೂ ನಿನ್ನನ್ನು ಅರಿಯೆನೆಂಬದಾಗಿ ಹೇಳುವದೇ ಇಲ್ಲವೆಂದು ಬಹು ಖಂಡಿತವಾಗಿ ಮಾತಾಡಿದನು. ಅದರಂತೆ ಅವರೆಲ್ಲರೂ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಆದರೆ ಪೇತ್ರನು ಖಚಿತವಾಗಿ, “ನಾನು ನಿನ್ನೊಂದಿಗೆ ಸಾಯಬೇಕಾದರೂ ಸರಿಯೇ, ನಿನ್ನನ್ನು ತಿಳಿದೇ ಇಲ್ಲವೆಂದು ನಾನೆಂದಿಗೂ ಹೇಳುವುದಿಲ್ಲ” ಎಂದು ಉತ್ತರಿಸಿದನು. ಉಳಿದ ಶಿಷ್ಯರು ಸಹ ಇದೇ ರೀತಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಅದಕ್ಕೆ ಪೇತ್ರನು, “ನಾನು ನಿಮ್ಮೊಂದಿಗೆ ಸಾಯಬೇಕಾದರೂ ನಿಮ್ಮನ್ನು ನಿರಾಕರಿಸುವುದೇ ಇಲ್ಲ,” ಎಂದು ಬಹು ಆವೇಶದಿಂದ ಹೇಳಿದನು. ಅದರಂತೆಯೇ ಶಿಷ್ಯರೆಲ್ಲರೂ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ಖರೆ ಪೆದ್ರು “ಅನಿ ವಿಶ್ವಾಸಾನ್ ಮಾಕಾ ತುಜೆ ವಾಂಗ್ಡಾ ಮರ್‍ತಲೊ ಎಳ್ ಯೆಲ್ಯಾರ್ಬಿ, ತುಜಿ ಮಾಕಾ ವಳಕುಚ್ ನಾ ಮನುನ್ ಎವ್ಡೆ, ಕನ್ನಾಬಿ ಸಾಂಗಿನಾ” ಮನುನ್ ಸಾಂಗ್ತಾನಾ ಸಗ್ಳಿ ಶಿಸಾಬಿ ತಸೆಚ್ ಮನುಲಾಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:31
17 ತಿಳಿವುಗಳ ಹೋಲಿಕೆ  

ಪೇತ್ರನು ಆತನಿಗೆ, “ಕರ್ತನೇ, ನಾನು ಈಗ ನಿನ್ನನ್ನು ಏಕೆ ಹಿಂಬಾಲಿಸಲಾರೆನು? ನಿನಗಾಗಿ ನನ್ನ ಪ್ರಾಣವನ್ನೇ ಕೊಡುವೆನು” ಎಂದು ಹೇಳಿದನು.


ಜನರೆಲ್ಲರೂ ಒಗ್ಗಟ್ಟಾಗಿ, “ಯೆಹೋವನು ಹೇಳಿದಂತೆಯೇ ಮಾಡುವೆವು” ಎಂದು ಉತ್ತರಕೊಟ್ಟರು. ಮೋಶೆ ಯೆಹೋವನ ಬಳಿಗೆ ಹಿಂತಿರುಗಿ ಹೋಗಿ ಅವರು ಹೇಳಿದ ಮಾತುಗಳನ್ನು ಆತನಿಗೆ ಹೇಳಿದನು.


ಹೃದಯವು ಎಲ್ಲಾದಕ್ಕಿಂತಲೂ ವಂಚಕ; ಗುಣವಾಗದ ರೋಗಕ್ಕೆ ಒಳಗಾಗಿದೆ; ಅದನ್ನು ತಿಳಿದವರು ಯಾರು?


ಯೆಹೋವನೇ, ಮಾನವನ ಮಾರ್ಗವು ಅವನ ಸ್ವಾಧೀನದಲ್ಲಿ ಇಲ್ಲವೆಂದು ನನಗೆ ಗೊತ್ತು. ಮನುಷ್ಯನು ನಡೆದಾಡುತ್ತಾ ಸರಿಯಾದ ಕಡೆಗೆ ತನ್ನ ಹೆಜ್ಜೆಯನ್ನು ಇಡಲಾರನು.


ಗರ್ವವು ಮನುಷ್ಯನನ್ನು ದೀನಸ್ಥಿತಿಗೆ ತರುವುದು, ದೀನಮನಸ್ಸುಳ್ಳವನು ಮಾನವನ್ನು ಪಡೆಯುವನು.


ಬಹಳ ಗೆಳೆಯರನ್ನು ಸೇರಿಸಿಕೊಂಡವನಿಗೆ ನಾಶನ, ಸಹೋದರನಿಗಿಂತಲೂ ಹತ್ತಿರ ಹೊಂದಿಕೊಳ್ಳುವ ಮಿತ್ರನುಂಟು.


ಗರ್ವದಿಂದ ಭಂಗ, ಉಬ್ಬಿನಿಂದ ದೊಬ್ಬು.


ಹಜಾಯೇಲನು ಎಲೀಷನಿಗೆ, “ನಿನ್ನ ಸೇವಕನಾದ ನಾನು ನಾಯಿಯಂತಿರುತ್ತೇನಷ್ಟೇ; ನನ್ನಿಂದ ಇಂಥಾ ಕ್ರೂರ ಕಾರ್ಯವಾಗುವುದು ಹೇಗೆ?” ಎಂದು ಕೇಳಲು ಅವನು, “ನೀನು ಅರಾಮ್ಯರ ಅರಸನಾಗುವಿಯೆಂದು ಯೆಹೋವನು ನನಗೆ ತಿಳಿಸಿದ್ದಾನೆ” ಎಂದನು.


ನಾನಂತೂ ಸುಖದಿಂದಿದ್ದಾಗ, “ನಾನು ಎಂದಿಗೂ ಕದಲುವುದಿಲ್ಲ” ಎಂದು ಹೇಳಿಕೊಂಡಿದ್ದೆನು.


ಆದರೆ ಯಾವನು ಮನುಷ್ಯರ ಮುಂದೆ ತಾನು ನನ್ನವನಲ್ಲವೆಂದು ಹೇಳುವನೋ ಅವನನ್ನು ನಾನು ಸಹ ಪರಲೋಕದಲ್ಲಿರುವ ನನ್ನ ತಂದೆಯ ಮುಂದೆ ನನ್ನವನಲ್ಲವೆಂದು ಹೇಳುವೆನು.


ಯೇಸುವು ಆತನಿಗೆ, “ಸತ್ಯವಾಗಿ ಹೇಳುತ್ತೇನೆ ಇಂದು ಈ ರಾತ್ರಿಯಲ್ಲಿಯೇ ಕೋಳಿ ಎರಡು ಸಾರಿ ಕೂಗುವುದಕ್ಕಿಂತ ಮೊದಲು ಮೂರು ಸಾರಿ ನೀನು ನನ್ನನ್ನು ನಿರಾಕರಿಸುವೆ” ಎಂದನು.


ಅವರು ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದರು. ಆತನು ತನ್ನ ಶಿಷ್ಯರಿಗೆ, “ನಾನು ಪ್ರಾರ್ಥನೆ ಮಾಡುವ ತನಕ, ನೀವು ಇಲ್ಲೇ ಕುಳಿತುಕೊಂಡಿರಿ” ಎಂದು ಹೇಳಿದನು.


ಆದರೆ ಅವರು ಜೋರಾಗಿ ಕೂಗುತ್ತಾ, ಅವನನ್ನು ಶಿಲುಬೆಗೆ ಹಾಕಿಸಬೇಕೆಂದು ಕೇಳಿಕೊಂಡು ಬಲವಂತ ಮಾಡಿದರು. ಅವರ ಕೂಗಾಟವು ಗೆದ್ದಿತು.


ಫರೋಹನು ಅವನನ್ನು, “ನನ್ನ ಬಳಿಯಲ್ಲಿ ನೀನಗೇನು ಕೊರತೆಯಾಯಿತು. ಸ್ವದೇಶಕ್ಕೆ ಹೋಗಬೇಕೆಂದು ಯಾಕೆ ಬಯಸುತ್ತೀ?” ಎಂದು ಕೇಳಿದನು. ಅದಕ್ಕೆ ಹದದನು, “ಏನೂ ಕೊರತೆಯಾಗಿರುವುದಿಲ್ಲ. ಆದರೂ ನನಗೆ ಹೋಗುವುದಕ್ಕೆ ಅಪ್ಪಣೆಯಾಗಬೇಕು” ಎಂದು ಕೇಳಿಕೊಂಡನು.


ಆಗ ಯೇಸು ಅವರಿಗೆ, “ನಾನು ಕುಡಿಯುವ ಪಾತ್ರೆಯಲ್ಲಿ ನೀವು ಕುಡಿಯುವಿರಿ. ನನಗಾಗುವ ದೀಕ್ಷಾಸ್ನಾನವು ನಿಮಗಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು