Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 15:43 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಹೀಗಿರಲಾಗಿ ಅರಿಮಥಾಯದ ಯೋಸೇಫನೆಂಬುವನು ಅಲ್ಲಿಗೆ ಬಂದನು. ಅವನು ಯೆಹೂದ್ಯರ ಹಿರೀಸಭೆಯ ಗೌರವಸ್ಥನಾದ ಸದ್ಯಸನೂ, ದೇವರ ರಾಜ್ಯವನ್ನು ಎದುರುನೋಡುತ್ತಿದ್ದವನು ಆಗಿದ್ದನು. ಅವನು ಧೈರ್ಯದಿಂದ ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹವನ್ನು ತನಗೆ ಕೊಡಿಸಬೇಕೆಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ತನಗೆ ಕೊಡಿಸಬೇಕೆಂದು ಪಿಲಾತನನ್ನು ಕೇಳಿಕೊಂಡನು. ದೇವರ ಸಾಮ್ರಾಜ್ಯದ ಆಗಮನವನ್ನು ನಿರೀಕ್ಷಿಸುತ್ತಿದ್ದ ಈತನು ಯೆಹೂದ್ಯರ ನ್ಯಾಯಸಭೆಯ ಸನ್ಮಾನಿತ ಸದಸ್ಯನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಹೀಗಿರಲಾಗಿ ಅರಿಮಥಾಯದ ಯೋಸೇಫನೆಂಬವನು ಬಂದು ಧೈರ್ಯದಿಂದ ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹವನ್ನು ತನಗೆ ಕೊಡಿಸಬೇಕೆಂದು ಬೇಡಿಕೊಂಡನು. ಇವನು ಹಿರೀಸಭೆಯವರಲ್ಲಿ ಘನವಂತನು, ದೇವರ ರಾಜ್ಯವನ್ನು ಎದುರು ನೋಡುತ್ತಿದ್ದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಅರಿಮಥಾಯ ಊರಿನ ಯೋಸೇಫ ಎಂಬವನು ಪಿಲಾತನ ಬಳಿಗೆ ಹೋಗಿ, ಯೇಸುವಿನ ದೇಹವನ್ನು ತನಗೆ ಕೊಡಬೇಕೆಂದು ಧೈರ್ಯದಿಂದ ಕೇಳಿದನು. ಯೋಸೇಫನು ಯೆಹೂದ್ಯರ ಸಮಿತಿಯಲ್ಲಿ ಒಬ್ಬ ಮುಖ್ಯ ಸದಸ್ಯನಾಗಿದ್ದನು. ದೇವರರಾಜ್ಯ ಬರಲೆಂದು ಬಯಸಿದ ಜನರಲ್ಲಿ ಇವನೂ ಒಬ್ಬನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಗೌರವವುಳ್ಳವನೂ ಆಲೋಚನಾಸಭೆಯ ಸದಸ್ಯನೂ ದೇವರ ರಾಜ್ಯಕ್ಕಾಗಿ ಕಾಯುತ್ತಿದ್ದವನೂ ಆದ ಅರಿಮಥಾಯದ ಯೋಸೇಫನು ಧೈರ್ಯದಿಂದ ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹಕ್ಕಾಗಿ ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

43 ತಸೆ ಮನುನ್ ಅರೆಮಾಥಿಯಾ ಮನ್ತಲ್ಯಾ ಗಾಂವಾಚೊ ಜುಜೆ ಯೆಲೊ,ತೊ ಜುದೆವಾಂಚ್ಯಾ ಮಂತ್ರಿ ಮಂಡಳಾಚೊ ಮರ್ಯಾದಿಚೊ ಸದಸ್ಯಾ, ತೊ ದೆವಾಚ್ಯಾ ರಾಜ್ ಯೆತಲೆ ವಾಟ್ ಬಗುನ್ಗೆತ್ ಹೊತ್ತೊ, ತೊ ಧಯ್ರೊ ಕರುನ್ ಪಿಲಾತಾಕ್ಡೆ ಗೆಲೊ ಅನಿ ಜೆಜುಚೆ ಮಡೆ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 15:43
16 ತಿಳಿವುಗಳ ಹೋಲಿಕೆ  

ಆಕೆ ಅದೇ ಗಳಿಗೆಯಲ್ಲಿ ಅವರ ಹತ್ತಿರಕ್ಕೆ ಬಂದು ದೇವರಿಂದಾದ ಉಪಕಾರವನ್ನು ನೆನಸಿ ಕೊಂಡಾಡಿದ್ದಲ್ಲದೆ ಯೆರೂಸಲೇಮಿನ ಬಿಡುಗಡೆಯನ್ನು ಹಾರೈಸುತ್ತಿದ್ದವರೆಲ್ಲರ ಸಂಗಡ ಆತನ ವಿಷಯವಾಗಿ ಮಾತನಾಡುವವಳಾದಳು.


ಆ ಕಾಲದಲ್ಲಿ ಯೆರೂಸಲೇಮಿನಲ್ಲಿ ಸಿಮೆಯೋನನೆಂಬ ಒಬ್ಬ ಮನುಷ್ಯನಿದ್ದನು. ಈ ಮನುಷ್ಯನು ನೀತಿವಂತನೂ ದೇವಭಕ್ತನೂ ಆಗಿದ್ದನು. ಇಸ್ರಾಯೇಲರನ್ನು ಸಂತೈಸುವವನು ಯಾವಾಗ ಬರುವನೋ ಎಂದು ನಿರೀಕ್ಷಿಸುತ್ತಾ ಇದ್ದನು ಮತ್ತು ಆತನು ಪವಿತ್ರಾತ್ಮಭರಿತನಾಗಿದ್ದನು.


ಹೀಗಿರಲಾಗಿ ಅವರಲ್ಲಿ ಕುಲೀನರಾದ ಅನೇಕ ಗ್ರೀಕ್ ಹೆಂಗಸರು, ಗಂಡಸರು ನಂಬಿದರು.


ಇದಾದ ಮೇಲೆ ಯೆಹೂದ್ಯರ ಭಯದಿಂದ ಗುಪ್ತವಾಗಿ ಯೇಸುವಿನ ಶಿಷ್ಯನಾಗಿದ್ದ ಅರಿಮಥಾಯದ ಯೋಸೇಫನು ಯೇಸುವಿನ ದೇಹವನ್ನು ತೆಗೆದುಕೊಂಡು ಹೋಗುವುದಕ್ಕೆ ಅಪ್ಪಣೆಯಾಗಬೇಕೆಂದು ಪಿಲಾತನನ್ನು ಕೇಳಿಕೊಂಡನು. ಆಗ ಪಿಲಾತನು ಅಪ್ಪಣೆ ಕೊಡಲಾಗಿ, ಅವನು ಬಂದು ಆತನ ದೇಹವನ್ನು ತೆಗೆದುಕೊಂಡು ಹೋದನು.


ಸಂಜೆಯಾದಾಗ ಅರಿಮಥಾಯ ಊರಿನ ಯೋಸೇಫನೆಂಬ ಒಬ್ಬ ಧನವಂತನು ಅಲ್ಲಿಗೆ ಬಂದನು. ಇವನು ಸಹ ಯೇಸುವಿನ ಶಿಷ್ಯನಾಗಿದ್ದನು.


ಇದಲ್ಲದೆ ಸಹೋದರರಲ್ಲಿ ಬಹಳ ಜನರು ನನ್ನ ಬಂಧನದಿಂದಲೇ ಕರ್ತನಲ್ಲಿ ಭರವಸವುಳ್ಳವರಾಗಿ ದೇವರ ವಾಕ್ಯವನ್ನು ನಿರ್ಭಯದಿಂದ ಹೇಳುವುದಕ್ಕೆ ಇನ್ನೂ ಹೆಚ್ಚು ಧೈರ್ಯಹೊಂದಿದ್ದಾರೆ.


ಆದರೆ ಯೆಹೂದ್ಯರು ತಮ್ಮ ಮತಕ್ಕೆ ಸೇರಿದ್ದ ಭಕ್ತೆಯರಾದ ಕುಲೀನ ಸ್ತ್ರೀಯರನ್ನೂ, ಊರಿನ ಪ್ರಮುಖರನ್ನೂ, ಹುರಿದುಂಬಿಸಿ ಪೌಲ ಮತ್ತು ಬಾರ್ನಬರ ವಿರೋಧವಾಗಿ ಹಿಂಸೆಯನ್ನೆಬ್ಬಿಸಿ ಅವರನ್ನು ತಮ್ಮ ಪ್ರದೇಶದಿಂದ ಆಚೆಗೆ ಅಟ್ಟಿಬಿಟ್ಟರು.


ಮತ್ತು ಪೇತ್ರನು ದೂರದಿಂದ ಆತನನ್ನು ಹಿಂಬಾಲಿಸುತ್ತಾ ಮಹಾಯಾಜಕನ ಅಂಗಳದೊಳಗೆ ಬಂದು ಕಾವಲುಗಾರರ ಸಂಗಡ ಸೇರಿ ಬೆಂಕಿಯ ಮುಂದೆ ಕುಳಿತು ಚಳಿ ಕಾಯಿಸಿಕೊಳ್ಳುತ್ತಿದ್ದನು.


ಹೀಗೆ ಕಡೆಯವರು ಮೊದಲಿನವರಾಗುವರು ಮೊದಲಿನವರು ಕಡೆಯವರಾಗುವರು” ಎಂದು ಹೇಳಿದನು.


ಆದರೆ ಈಗ ಮೊದಲಿನವರಾದ ಬಹು ಮಂದಿ ಕಡೆಯವರಾಗುವರು ಮತ್ತು ಕಡೆಯವರಾದ ಬಹು ಮಂದಿ ಮೊದಲಿನವರಾಗುವರು.


ಪಿಲಾತನು, ಅವನು ಇಷ್ಟು ಬೇಗ ಸತ್ತು ಹೋದನೋ ಎಂದು ಹೇಳಿ ಆಶ್ಚರ್ಯಪಟ್ಟು ಶತಾಧಿಪತಿಯನ್ನು ಕರೆಸಿ, ಅವನು ಆಗಲೇ ಸತ್ತನೋ ಎಂದು ಅವನನ್ನು ಕೇಳಿದನು.


ಅರಿಮಥಾಯ ಎಂಬ ಯೆಹೂದ್ಯರದೊಂದು ಪಟ್ಟಣದಲ್ಲಿ ಒಬ್ಬ ಮನುಷ್ಯನಿದ್ದನು. ಅವನ ಹೆಸರು ಯೋಸೇಫನ. ಆತನು ಹಿರೀಸಭೆಯವನು, ಉತ್ತಮನು, ಸತ್ಪುರುಷನು ಹಾಗೂ ದೇವರ ರಾಜ್ಯವನ್ನು ಎದುರು ನೋಡುತ್ತಿದ್ದವನೂ ಆಗಿದ್ದನಲ್ಲದೆ ಮಂತ್ರಿಯೂ ಆಗಿದ್ದನು. ಅವನು ಹಿರೀಸಭೆಯವರ ಆಲೋಚನೆಗೂ ಕೃತ್ಯಗಳಿಗೂ ಅನುಮತಿಸಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು