Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 15:46 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ಯೋಸೇಫನು ನಾರುಮಡಿಯನ್ನು ಕೊಂಡುತಂದು ಯೇಸುವನ್ನು ಶಿಲುಬೆಯಿಂದ ಇಳಿಸಿ ನಾರುಮಡಿಯಲ್ಲಿ ಸುತ್ತಿ ಬಂಡೆಯಲ್ಲಿ ಕೊರೆದಿದ್ದ ಸಮಾಧಿಯಲ್ಲಿಟ್ಟು ಸಮಾಧಿಯ ಬಾಗಿಲಿಗೆ ಕಲ್ಲನ್ನು ಉರುಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

46 ಜೋಸೆಫನು ನಾರುಮಡಿ ವಸ್ತ್ರವನ್ನು ಕೊಂಡುಕೊಂಡು ಬಂದು, ಯೇಸುವನ್ನು ಶಿಲುಬೆಯಿಂದ ಇಳಿಸಿ, ಆ ವಸ್ತ್ರದಿಂದ ಸುತ್ತಿದನು. ಅನಂತರ ಬಂಡೆಯಲ್ಲಿ ಕೊರೆದಿದ್ದ ಸಮಾಧಿಯಲ್ಲಿ ಅದನ್ನಿರಿಸಿ, ಸಮಾಧಿಯ ದ್ವಾರಕ್ಕೆ ದೊಡ್ಡ ಕಲ್ಲನ್ನು ಉರುಳಿಸಿ ಮುಚ್ಚಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ಯೋಸೇಫನು ನಾರು ಮಡಿಯನ್ನು ಕೊಂಡುತಂದು ಆತನನ್ನು ಇಳಿಸಿ ನಾರುಮಡಿಯಲ್ಲಿ ಸುತ್ತಿ ಬಂಡೆಯಲ್ಲಿ ತೋಡಿದ್ದ ಸಮಾಧಿಯಲ್ಲಿಟ್ಟು ಸಮಾಧಿಯ ಬಾಗಿಲಿಗೆ ಕಲ್ಲನ್ನು ಉರುಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 ಯೋಸೇಫನು ನಾರುಬಟ್ಟೆಯನ್ನು ತೆಗೆದುಕೊಂಡು ಬಂದು, ಶಿಲುಬೆಯಿಂದ ದೇಹವನ್ನು ಇಳಿಸಿ, ಅದನ್ನು ಆ ಬಟ್ಟೆಯಿಂದ ಸುತ್ತಿದನು. ಅನಂತರ, ಬಂಡೆಯ ಸಮಾಧಿಯಲ್ಲಿ ಅದನ್ನಿರಿಸಿ ಆ ಸಮಾಧಿಯ ಬಾಗಿಲಿಗೆ ದೊಡ್ಡ ಬಂಡೆಯನ್ನು ಉರುಳಿಸಿ ಮುಚ್ಚಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 ಅವನು ಶುಭ್ರವಾದ ನಾರುಬಟ್ಟೆಯನ್ನು ಕೊಂಡುಕೊಂಡು ಬಂದು ಯೇಸುವನ್ನು ಶಿಲುಬೆಯಿಂದ ಇಳಿಸಿ ಆ ನಾರುಬಟ್ಟೆಯಲ್ಲಿ ಅದನ್ನು ಸುತ್ತಿ ಬಂಡೆಯಲ್ಲಿ ತೋಡಿಸಿದ್ದ ಸಮಾಧಿಯಲ್ಲಿಟ್ಟು ಯೇಸುವಿನ ಸಮಾಧಿಯ ದ್ವಾರಕ್ಕೆ ಒಂದು ಬಂಡೆಯನ್ನು ಉರುಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

46 ಜುಜೆನ್ ಮಡೆ ಸಮಾದಿ ಕರುಕ್ ವಾಪರ್ತಲೊ ಮ್ಹಾಗ್ರೊ ಕಪ್ಡೊ ಇಕಾತ್ ಘೆವ್ನ್ ಯೆಲ್ಯಾನ್, ಅನಿ ಜೆಜುಚೆ ಮಡೆ ಕುರ್ಸಾ ವೈನಾ ಉತ್ರುನ್ ತ್ಯಾ ಕಪ್ಡ್ಯಾತ್ ಲಪ್ಟುನ್ ಸಮಾದಿತ್ ಥವ್ಲ್ಯಾನಿ. ತಿ ಸಮಾದಿ ಎಕುಚ್ ಎಕ್ ಗುಂಡ್ಯಾತ್ ಕೆದರಲ್ಲಿ ಸಮಾದಿ ಹೊತ್ತಿ. ತೆನಿ ಸಮಾದಿಚ್ಯಾ ದಾರ್ ಎಕ್ ಮೊಟೊ ಗುಂಡೊ ಗುಳ್ವುನ್ ಧಾಪ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 15:46
12 ತಿಳಿವುಗಳ ಹೋಲಿಕೆ  

ಅವನು ಯಾವ ಅನ್ಯಾಯವನ್ನು ಮಾಡದಿದ್ದರೂ, ಅವನ ಬಾಯಲ್ಲಿ ಯಾವ ವಂಚನೆಯು ಇಲ್ಲದಿದ್ದರೂ, ಅವನು ಸತ್ತಾಗ ದುಷ್ಟರ ಮಧ್ಯೆ ಪುಷ್ಟರ ನಡುವೆ ಅವನನ್ನು ಹೂಣಿಟ್ಟರು.


ಯೇಸು ತಿರುಗಿ ತನ್ನ ಮನದಲ್ಲಿ ನೊಂದುಕೊಳ್ಳುತ್ತಾ ಸಮಾಧಿಯ ಬಳಿಗೆ ಬಂದನು. ಅದು ಒಂದು ಗವಿಯಾಗಿತ್ತು, ಅದರ ಬಾಯಿಗೆ ಒಂದು ಕಲ್ಲನ್ನು ಮುಚ್ಚಿಡಲಾಗಿತ್ತು.


‘ಇಲ್ಲಿ ನಿನಗೇನು ಕೆಲಸ? ಇಲ್ಲಿ ನಿನಗಾಗಿ ಸಮಾಧಿಯನ್ನು ತೋಡಿಸಿಕೊಂಡಿರುವ ನೀನು ಯಾರು? ಉನ್ನತದಲ್ಲಿ ನಿನಗೆ ಸಮಾಧಿಯನ್ನು ಕೊರೆಸುತ್ತಾ, ಬಂಡೆಯನ್ನು ಕೆತ್ತಿಸಿ, ನಿನಗಾಗಿ ವಿಶ್ರಾಂತಿಯ ಸ್ಥಳವನ್ನು ತೋಡಿಸಿದಿ ಅಲ್ಲವೇ?’”


ಅದನ್ನು ಇಳಿಸಿ ನಾರುಮಡಿಯಲ್ಲಿ ಸುತ್ತಿ, ಬಂಡೆಯಲ್ಲಿ ತೋಡಿದ್ದ ಸಮಾಧಿಯಲ್ಲಿ ಇಟ್ಟನು. ಅದರಲ್ಲಿ ಅದುವರೆಗೆ ಯಾರನ್ನು ಇಟ್ಟಿರಲಿಲ್ಲ.


ಇಗೋ, ಮಹಾ ಭೂಕಂಪವುಂಟಾಯಿತು, ಕರ್ತನ ದೂತನು ಆಕಾಶದಿಂದ ಇಳಿದು ಬಂದು ಆ ಕಲ್ಲನ್ನು ಬಾಗಿಲಿನಿಂದ ಉರುಳಿಸಿ ಅದರ ಮೇಲೆ ಕುಳಿತುಕೊಂಡಿದ್ದನು.


ಆತನು ಸತ್ತದ್ದನ್ನು ಶತಾಧಿಪತಿಯಿಂದ ತಿಳಿದುಕೊಂಡು ಅವನ ಪಾರ್ಥಿವ ಶರೀರವನ್ನು ಯೋಸೇಫನಿಗೆ ಕೊಡಿಸಿದನು.


ಮಗ್ದಲದ ಮರಿಯಳೂ ಮತ್ತು ಯೋಸೆಯನ ತಾಯಿ ಮರಿಯಳೂ ಯೇಸುವನ್ನಿಟ್ಟಿದ್ದ ಸ್ಥಳವನ್ನು ನೋಡಿದರು.


ಆಗ ಅವರು ಕಲ್ಲನ್ನು ತೆಗೆದು ಹಾಕಿದರು. ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ, “ತಂದೆಯೇ ನೀನು ನನಗೆ ಕಿವಿಗೊಟ್ಟಿದ್ದಕ್ಕಾಗಿ ನಿನಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.


ವಾರದ ಮೊದಲನೆಯ ದಿನದಲ್ಲಿ ಮಗ್ದಲದ ಮರಿಯಳು ಬೆಳಿಗ್ಗೆ ಇನ್ನೂ ಕತ್ತಲೆ ಇರುವಾಗಲೇ ಸಮಾಧಿಯ ಬಳಿಗೆ ಬಂದು ಸಮಾಧಿಯ ಕಲ್ಲು ಅಲ್ಲಿಂದ ಉರುಳಿ ಹೋಗಿರುವುದನ್ನು ಕಂಡಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು