Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 2:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಫರಿಸಾಯರಾದ ಶಾಸ್ತ್ರಿಗಳು ಆತನು ಪಾಪಿಗಳ ಮತ್ತು ಸುಂಕದವರ ಸಂಗಡ ಊಟ ಮಾಡುವುದನ್ನು ಕಂಡು ಆತನ ಶಿಷ್ಯರಿಗೆ, “ಈತನು ಸುಂಕದವರ ಮತ್ತು ಪಾಪಿಗಳ ಸಂಗಡ ಏಕೆ ಊಟಮಾಡುತ್ತಾನೆ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಫರಿಸಾಯ ಪಂಥಕ್ಕೆ ಸೇರಿದ್ದ ಧರ್ಮಶಾಸ್ತ್ರಿಗಳಲ್ಲಿ ಕೆಲವರು, ಸುಂಕದವರ ಮತ್ತು ಇತರ ಪಾಪಿಗಳ ಪಂಕ್ತಿಯಲ್ಲಿ ಯೇಸು ಊಟಮಾಡುವುದನ್ನು ಕಂಡು, “ಈತನು ಇಂಥಾ ಬಹಿಷ್ಕೃತ ಜನರ ಜೊತೆಯಲ್ಲಿ ಊಟಮಾಡುವುದೇಕೆ?” ಎಂದು ಯೇಸುವಿನ ಶಿಷ್ಯರೊಡನೆ ಆಕ್ಷೇಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅಂಥವರು ಬಹು ಮಂದಿ ಇದ್ದರು. ಫರಿಸಾಯರಾದ ಶಾಸ್ತ್ರಿಗಳು ಆತನ ಹಿಂದೆ ಹೋಗಿ ಆತನು ಪಾಪಿಗಳ ಮತ್ತು ಸುಂಕದವರ ಸಂಗಡ ಊಟಮಾಡುವದನ್ನು ಕಂಡು ಆತನ ಶಿಷ್ಯರಿಗೆ - ಈತನು ಸುಂಕದವರ ಮತ್ತು ಪಾಪಿಗಳ ಸಂಗಡ ಊಟಮಾಡುತ್ತಾನೆ ನೋಡಿರಿ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಈ ಸುಂಕದ ಅಧಿಕಾರಿಗಳೊಂದಿಗೆ ಮತ್ತು ಇತರ ಕೆಟ್ಟ ಜನರೊಂದಿಗೆ ಯೇಸು ಊಟಮಾಡುತ್ತಿರುವುದನ್ನು ಧರ್ಮೋಪದೇಶಕರು ಮತ್ತು ಫರಿಸಾಯರು ನೋಡಿ ಆತನ ಶಿಷ್ಯರಿಗೆ, “ಯೇಸು ಪಾಪಿಗಳೊಂದಿಗೆ ಮತ್ತು ಸುಂಕದ ಅಧಿಕಾರಿಗಳೊಂದಿಗೆ ಏಕೆ ಊಟ ಮಾಡುತ್ತಾನೆ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಫರಿಸಾಯರಾದ ನಿಯಮ ಬೋಧಕರು ಪಾಪಿಗಳ ಮತ್ತು ಸುಂಕದವರ ಸಂಗಡ ಯೇಸು ಊಟಮಾಡುವುದನ್ನು ಕಂಡು, “ಈತನು ಸುಂಕದವರ ಮತ್ತು ಪಾಪಿಗಳ ಸಂಗಡ ಏಕೆ ಊಟಮಾಡುತ್ತಾನೆ?” ಎಂದು ಯೇಸುವಿನ ಶಿಷ್ಯರನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಹ್ಯಾ ತೆರ್‍ಗಿ ವಸುಲ್ ಕರ್‍ತಲ್ಯಾ ಅನಿ ಪಾಪಿ ಲೊಕಾಂಚ್ಯಾ ವಾಂಗ್ಡಾ ಬಸುನ್ ಜೆಜು ಜೆವಾನ್ ಕರ್‍ತಲೆ ಬಗುನ್, ಮೊಯ್ಜೆಚೆ ಖಾಯ್ದೆ ಶಿಕ್ವುತಲ್ಯಾ ಫಾರಿಜೆವಾನಿ “ತೊ ಪಾಪಿ ಲೊಕಾಂಚ್ಯಾ ಅನಿ ತೆರ್‍ಗಿ ವಸುಲ್ ಕರ್‍ತಲ್ಯಾಂಚ್ಯಾ ವಾಂಗ್ಡಾ ಬಸುನ್, ಕಶ್ಯಾಕ್ ಜೆವಾನ್ ಕರ್‍ತಾ?” ಮನುನ್ ತೆಚ್ಯಾ ಶಿಸಾಕ್ನಿ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 2:16
14 ತಿಳಿವುಗಳ ಹೋಲಿಕೆ  

ಮನುಷ್ಯಕುಮಾರನು ದಾರಿತಪ್ಪಿ ಹೋದದ್ದನ್ನು ಹುಡುಕಿ ರಕ್ಷಿಸುವುದಕ್ಕೆ ಬಂದನು” ಎಂದು ಹೇಳಿದನು.


ಫರಿಸಾಯನು ನಿಂತುಕೊಂಡು ಪ್ರಾರ್ಥಿಸುವಾಗ ತನ್ನೊಳಗೆ, ‘ದೇವರೇ, ದರೋಡೆಕೋರರೂ, ಅನ್ಯಾಯಗಾರರೂ, ಹಾದರಮಾಡುವವರೂ ಆಗಿರುವ ಉಳಿದ ಜನರಂತೆ ನಾನಲ್ಲ, ಈ ಸುಂಕದವನಂತೆಯೂ ಅಲ್ಲ, ಆದುದರಿಂದ ನಿನಗೆ ಸ್ತೋತ್ರಮಾಡುತ್ತೇನೆ.


ಪವಿತ್ರಾತ್ಮನಿಂದ ನಡಿಸಿಕೊಳ್ಳುವವನೋ ಎಲ್ಲವನ್ನೂ ವಿವೇಚಿಸಿ ತಿಳಿದುಕೊಳ್ಳುತ್ತಾನೆ; ಆದರೆ ಅವನಿಗೆ ಯಾರೂ ವಿವೇಚಿಸಿ ತಿಳಿಸಿಕೊಡಬೇಕಾಗಿಲ್ಲ.


ಆಗ ದೊಡ್ಡ ಕೂಗಾಟವಾಯಿತು. ಫರಿಸಾಯರ ಪಕ್ಷದವರಾದ ಶಾಸ್ತ್ರಿಗಳಲ್ಲಿ ಕೆಲವರು ಎದ್ದು; “ಈ ಮನುಷ್ಯನಲ್ಲಿ ನಮಗೆ ಕೆಟ್ಟದ್ದೇನೂ ಕಂಡುಬರುವುದಿಲ್ಲ; ಆತ್ಮವಾಗಲಿ, ದೇವದೂತನಾಗಲಿ, ಅವನ ಸಂಗಡ ಮಾತನಾಡಿದ್ದರೂ, ಮಾತನಾಡಿರಬಹುದು” ಎಂದು ವಾದಿಸಿದರು.


ಇದನ್ನು ನೋಡಿದವರೆಲ್ಲರು, “ಈತನು ಪಾಪಿಯಾಗಿರುವವನ ಬಳಿಯಲ್ಲಿ ಉಳಿದುಕೊಳ್ಳುವುದಕ್ಕೆ ಹೋಗಿದ್ದಾನೆ” ಎಂದು ಗೊಣಗುಟ್ಟಿದರು.


ಅವರು, ‘ಹತ್ತಿರ ಬರಬೇಡ, ನಾನು ಮಡಿವಂತನು, ನೀನು ಸೇರತಕ್ಕವನಲ್ಲ’ ಎನ್ನುತ್ತಾ, ಅಂತು ಪ್ರತಿನಿತ್ಯವೂ ಮುಖದೆದುರಿಗೆ ನನ್ನನ್ನು ಕೆಣಕುತ್ತಾ, ನನ್ನ ಮೂಗಿಗೆ ದಿನವೆಲ್ಲಾ ಉರಿಯುವ ಬೆಂಕಿಯ ಹೊಗೆಯಾಗಿದ್ದಾರೆ.


ನೀವು ಮನಗುಂದಿದವರಾಗಿ ಬೇಸರಗೊಳ್ಳದಂತೆ ಯೇಸುವನ್ನು ಕುರಿತು ಯೋಚಿಸಿರಿ. ಆತನು ಪಾಪಿಗಳಿಂದ ಎಷ್ಟೋ ವಿರೋಧವನ್ನು ಸಹಿಸಿಕೊಂಡನು.


“ಈತನು ಯಾಕೆ ಹೀಗೆ ಮಾತನಾಡುತ್ತಾನೆ? ಇದು ದೇವದೂಷಣೆ. ದೇವರೊಬ್ಬನೇ ಹೊರತು ಮತ್ತಾರು ಪಾಪಗಳನ್ನು ಕ್ಷಮಿಸಬಲ್ಲರು?” ಎಂದು ತಮ್ಮ ಮನಸ್ಸಿನಲ್ಲಿ ಆಲೋಚಿಸಿಕೊಳ್ಳುತ್ತಿದ್ದರು.


ಅವನು ಅವರ ಮಾತನ್ನು ಕೇಳದೆ ಹೋದರೆ ಅದನ್ನು ಸಭೆಗೆ ಹೇಳು. ಅವನು ಸಭೆಯ ಮಾತನ್ನು ಕೇಳದೆ ಹೋದರೆ ಅವನು ನಿನಗೆ ಅನ್ಯನಂತೆಯೂ ಸುಂಕದವನಂತೆಯೂ ಇರಲಿ.


ಅದನ್ನು ನೋಡಿದ ಫರಿಸಾಯರು ಆತನ ಶಿಷ್ಯರನ್ನು, “ನಿಮ್ಮ ಗುರುವು ಸುಂಕದವರು ಮತ್ತು ಪಾಪಿಗಳ ಸಂಗಡ ಏಕೆ ಊಟಮಾಡುತ್ತಾನೆ?” ಎಂದು ಕೇಳಿದರು.


ನಿಮಗೆ ಪ್ರೀತಿ ತೋರಿಸುವವರನ್ನೇ ನೀವು ಪ್ರೀತಿಸಿದರೆ ಫಲವೇನು? ಸುಂಕದವರು ಹಾಗೆ ಮಾಡುವುದಿಲ್ಲವೇ.


ಅನಂತರ ಯೇಸುವು ಆ ಲೇವಿಯನ ಮನೆಯೊಳಗೆ ಊಟಮಾಡುತ್ತಿರುವಾಗ, ಬಹು ಮಂದಿ ಸುಂಕದವರೂ, ಪಾಪಿಗಳೂ ಯೇಸುವಿನ ಮತ್ತು ಆತನ ಶಿಷ್ಯರ ಸಂಗಡ ಊಟಕ್ಕೆ ಕುಳಿತುಕೊಂಡರು. ಇಂಥವರಲ್ಲಿ ಬಹು ಮಂದಿ ಯೇಸುವನ್ನು ಹಿಂಬಾಲಿಸಿದವರಾಗಿದ್ದರು.


ಅದನ್ನು ಕಂಡು ಫರಿಸಾಯರು ಮತ್ತು ಅವರ ಪಂಥಕ್ಕೆ ಸೇರಿದ ಶಾಸ್ತ್ರಿಗಳೂ ಆತನ ಶಿಷ್ಯರ ಮೇಲೆ ಗೊಣಗುಟ್ಟುತ್ತಾ, “ನೀವು ಸುಂಕದವರ ಮತ್ತು ಪಾಪಿಗಳ ಸಂಗಡ ಊಟಮಾಡುವುದೇಕೆ?” ಎಂದು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು