Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 2:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯೇಸು ಅದನ್ನು ಕೇಳಿ ಅವರಿಗೆ, “ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ; ಕ್ಷೇಮವಿಲ್ಲದವರಿಗೆ ಬೇಕು. ನಾನು ನೀತಿವಂತರನ್ನು ಕರೆಯುವುದಕ್ಕೆ ಬಂದಾತನಲ್ಲ, ಪಾಪಿಗಳನ್ನು ಕರೆಯುವುದಕ್ಕೆ ಬಂದವನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಇದನ್ನು ಕೇಳಿಸಿಕೊಂಡ ಯೇಸು ಅವರಿಗೆ, “ವೈದ್ಯನ ಅವಶ್ಯಕತೆ ಇರುವುದು ರೋಗಿಗಳಿಗೆ, ಆರೋಗ್ಯವಂತರಿಗಲ್ಲ, ನಾನು ಕರೆಯಲು ಬಂದಿರುವುದು ಧರ್ಮಿಷ್ಠರನ್ನಲ್ಲ, ಪಾಪಿಷ್ಠರನ್ನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯೇಸು ಅದನ್ನು ಕೇಳಿ - ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ; ಕ್ಷೇಮವಿಲ್ಲದವರಿಗೆ ಬೇಕು. ನಾನು ನೀತಿವಂತರನ್ನು ಕರೆಯುವದಕ್ಕೆ ಬಂದವನಲ್ಲ, ಪಾಪಿಗಳನ್ನು ಕರೆಯುವದಕ್ಕೆ ಬಂದವನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಬಳಿಕ ಯೇಸು ಅವರಿಗೆ, “ಆರೋಗ್ಯವಂತರಿಗೆ ವೈದ್ಯನ ಅಗತ್ಯವಿಲ್ಲ, ಆರೋಗ್ಯವಿಲ್ಲದವರಿಗೆ ವೈದ್ಯನ ಅಗತ್ಯವಿದೆ. ನಾನು ನೀತಿವಂತರನ್ನು ಕರೆಯಲು ಬರಲಿಲ್ಲ, ಪಾಪಿಗಳನ್ನು ಕರೆಯಲು ಬಂದೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಯೇಸು ಇದನ್ನು ಕೇಳಿಸಿಕೊಂಡು ಅವರಿಗೆ, “ಆರೋಗ್ಯವಂತರಿಗೆ ವೈದ್ಯನು ಅವಶ್ಯವಿಲ್ಲ, ರೋಗಿಗಳಿಗೆ ವೈದ್ಯನು ಅವಶ್ಯ, ನಾನು ನೀತಿವಂತರನ್ನಲ್ಲ, ಪಾಪಿಗಳನ್ನು ಕರೆಯಲು ಬಂದಿದ್ದೇನೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಹೆ ಆಯ್ಕುನ್ ಜೆಜುನ್ “ಅರಾಮ್ ಹೊತ್ತ್ಯಾಕ್ನಿ ವಗ್ದುಳ್ಯಾಚಿ ಗರಜ್ ನಾ. ಅರಾಮ್ ನಸಲ್ಯಾಕ್ನಿ ವಗ್ದುಳ್ಯಾಚಿ ಗರಜ್ ರ್‍ಹಾತಾ. ಮಿಯಾ ಬರ್‍ಯಾ ಲೊಕಾಕ್ನಿ ನ್ಹಯ್, ಪಾಪಿ ಲೊಕಾಕ್ನಿ ಬಲ್ವುಕ್ ಮನುನ್ ಯೆಲಾ” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 2:17
21 ತಿಳಿವುಗಳ ಹೋಲಿಕೆ  

ಅದರಂತೆ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ಅವಶ್ಯವಿಲ್ಲದ ತೊಂಬತ್ತೊಂಬತ್ತು ಮಂದಿ ನೀತಿವಂತರಿಗಿಂತ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯವಾಗಿ ಪರಲೋಕದಲ್ಲಿ ಹೆಚ್ಚು ಸಂತೋಷವುಂಟಾಗುವುದೆಂದು ನಿಮಗೆ ಹೇಳುತ್ತೇನೆ.


ಮನುಷ್ಯಕುಮಾರನು ದಾರಿತಪ್ಪಿ ಹೋದದ್ದನ್ನು ಹುಡುಕಿ ರಕ್ಷಿಸುವುದಕ್ಕೆ ಬಂದನು” ಎಂದು ಹೇಳಿದನು.


ದುಷ್ಟನು ತನ್ನ ದುರ್ಮಾರ್ಗವನ್ನು ಬಿಡಲಿ, ಕೆಡುಕನು ತನ್ನ ದುರಾಲೋಚನೆಗಳನ್ನು ತ್ಯಜಿಸಲಿ; ಯೆಹೋವನ ಕಡೆಗೆ ತಿರುಗಿಕೊಂಡು ಬರಲಿ, ಆತನು ಅವನನ್ನು ಕರುಣಿಸುವನು; ನಮ್ಮ ದೇವರನ್ನು ಆಶ್ರಯಿಸಲಿ, ಆತನು ಮಹಾಕೃಪೆಯಿಂದ ಕ್ಷಮಿಸುವನು.


ಇದನ್ನು ಆತನೊಂದಿಗಿದ್ದ ಫರಿಸಾಯರಲ್ಲಿ ಕೆಲವರು ಕೇಳಿ, “ನಾವು ಸಹ ಕುರುಡರೇನು?” ಎಂದು ಕೇಳಿದಾಗ,


ಅದರಂತೆ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯದಲ್ಲಿ ದೇವದೂತರ ಮುಂದೆ ಸಂತೋಷವಾಗುವುದೆಂದು ನಿಮಗೆ ಹೇಳುತ್ತೇನೆ” ಅಂದನು.


ಆದರೆ ಅವನು ತನ್ನ ತಂದೆಗೆ, ‘ನೋಡು, ಇಷ್ಟು ವರ್ಷ ನಿನಗೆ ಸೇವೆ ಮಾಡಿದ್ದೇನೆ, ಮತ್ತು ನಾನು ನಿನ್ನ ಅಪ್ಪಣೆಗಳಲ್ಲಿ ಒಂದನ್ನಾದರೂ ಎಂದೂ ಮೀರಲಿಲ್ಲ. ಆದರೂ ನಾನು ನನ್ನ ಸ್ನೇಹಿತರ ಸಂಗಡ ಉಲ್ಲಾಸಪಡುವುದಕ್ಕಾಗಿ ನೀನು ಎಂದೂ ನನಗೆ ಒಂದು ಆಡನ್ನಾದರೂ ಕೊಡಲಿಲ್ಲ.


ಆತನು ನಮ್ಮನ್ನು ಸಕಲ ಅಧರ್ಮಗಳಿಂದ ಬಿಡುಗಡೆಮಾಡುವುದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯಜನರನ್ನು ತನಗಾಗಿ ಬೇರ್ಪಡಿಸಿ ಶುದ್ಧೀಕರಣ ಮಾಡುವುದಕ್ಕಾಗಿಯೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


“ಬನ್ನಿರಿ ವಾದಿಸುವ” ಎಂದು ಯೆಹೋವನು ಅನ್ನುತ್ತಾನೆ. “ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ, ಹಿಮದ ಹಾಗೆ ಬಿಳುಪಾಗುವವು. ಕಿರಮಂಜಿ ಬಣ್ಣವಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವವು.


ಯೆಹೂದ್ಯರಿಗೂ, ಗ್ರೀಕರಿಗೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ನಮ್ಮ ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡಬೇಕೆಂತಲೂ ದೃಢವಾಗಿ ಬೋಧಿಸುವವನಾಗಿದ್ದೆನು, ಇದೆಲ್ಲಾ ನಿಮಗೇ ತಿಳಿದಿದೆ.


ಆಗ ಆತನು ಅವರಿಗೆ ಹೇಳಿದ್ದೇನಂದರೆ, “ಮನುಷ್ಯರ ಮುಂದೆ ನೀತಿವಂತರೆಂದು ತೋರಿಸಿಕೊಳ್ಳುವವರು ನೀವು, ಆದರೆ ದೇವರು ನಿಮ್ಮ ಹೃದಯಗಳನ್ನು ಬಲ್ಲವನಾಗಿದ್ದಾನೆ. ಮನುಷ್ಯರ ದೃಷ್ಟಿಯಲ್ಲಿ ಶ್ರೇಷ್ಠವೆನಿಸಿಕೊಳ್ಳುವಂಥದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.


ಈ ಚಿಕ್ಕವರಲ್ಲಿ ಒಬ್ಬನನ್ನಾದರೂ ತಾತ್ಸಾರಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಪರಲೋಕದಲ್ಲಿ ಇವರ ದೂತರು ನನ್ನ ಸ್ವರ್ಗೀಯ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಿರುತ್ತಾರೆ ಎಂದು ನಿಮಗೆ ಹೇಳುತ್ತೇನೆ.


ಆಮೇಲೆ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸೀಮೆಯಲ್ಲಿಯೂ ಇರುವವರಿಗೆ ಮತ್ತು ಅನ್ಯಜನರಿಗೆ ಸಹ; ನೀವು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ಮಾನಸಾಂತರಕ್ಕೆ ಯೋಗ್ಯವಾದ ಕೃತ್ಯಗಳನ್ನು ಮಾಡಬೇಕೆಂತಲೂ ಸಾರಿದೆನು.


ಈ ಮಾತಿಗೆ ಅವರು, “ನೀನು ಕೇವಲ ಪಾಪದಲ್ಲಿ ಹುಟ್ಟಿದವನು, ನೀನು ನಮಗೆ ಉಪದೇಶಮಾಡುತ್ತಿಯೋ?” ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.


ಹೃದಯವು ಎಲ್ಲಾದಕ್ಕಿಂತಲೂ ವಂಚಕ; ಗುಣವಾಗದ ರೋಗಕ್ಕೆ ಒಳಗಾಗಿದೆ; ಅದನ್ನು ತಿಳಿದವರು ಯಾರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು