ಮಾರ್ಕ 2:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಮತ್ತು ಹಳೆಯ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಯಾರೂ ಹಾಕಿಡುವುದಿಲ್ಲ, ಹಾಕಿದರೆ ಆ ದ್ರಾಕ್ಷಾರಸವು ಬುದ್ದಲಿಗಳನ್ನು ಒಡೆದು ದ್ರಾಕ್ಷಾರಸವು ಮತ್ತು ಬುದ್ದಲಿಗಳು ಎರಡೂ ನಾಶವಾಗುವವು. ಆದುದರಿಂದ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡತಕ್ಕದ್ದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅಂತೆಯೇ ಹಳೆಯ ಬುದ್ದಲಿಗಳಲ್ಲಿ ಹೊಸ ಮದ್ಯವನ್ನು ಯಾರೂ ತುಂಬಿಡುವುದಿಲ್ಲ. ತುಂಬಿಟ್ಟರೆ, ಅದರಿಂದ ಬುದ್ದಲಿಗಳು ಬಿರಿಯುತ್ತವೆ. ಮದ್ಯವು ಮತ್ತು ಬುದ್ದಲಿಗಳು ಎರಡೂ ನಷ್ಟವಾಗುತ್ತವೆ. ಆದುದರಿಂದ ಹೊಸ ಮದ್ಯವನ್ನು ಹೊಸ ಬುದ್ದಲಿಗಳಲ್ಲೇ ತುಂಬಿಡಬೇಕು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಮತ್ತು ಹಳೆಯ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಯಾರೂ ಹಾಕಿಡುವದಿಲ್ಲ; ಇಟ್ಟರೆ ಆ ದ್ರಾಕ್ಷಾರಸವು ಬುದ್ದಲಿಗಳನ್ನು ಒಡೆದು ದ್ರಾಕ್ಷಾರಸವು ಬುದ್ದಲಿಗಳು ಎರಡೂ ಕೆಟ್ಟುಹೋಗುವವು. ಆದರೆ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ [ಹಾಕಿಡತಕ್ಕದ್ದು] ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಹಾಗೆಯೇ, ಜನರು ಹೊಸ ದ್ರಾಕ್ಷಾರಸವನ್ನು ಹಳೆಯ ಬುದ್ದಲಿಗಳಲ್ಲಿ ಹಾಕಿಡುವುದಿಲ್ಲ. ಏಕೆಂದರೆ ಅದು ಬುದ್ದಲಿಗಳನ್ನು ಒಡೆದುಹಾಕುವುದರಿಂದ ದ್ರಾಕ್ಷಾರಸವೂ ಹಾಳಾಗುತ್ತದೆ. ಆದ್ದರಿಂದ ಜನರು ಯಾವಾಗಲೂ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡುತ್ತಾರೆ” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಯಾರೂ ಹೊಸ ದ್ರಾಕ್ಷಾರಸವನ್ನು ಹಳೆಯ ಚರ್ಮದ ಚೀಲಗಳಲ್ಲಿ ತುಂಬಿಡುವುದಿಲ್ಲ. ತುಂಬಿ ಇಟ್ಟರೆ, ಚರ್ಮದ ಚೀಲಗಳು ಹರಿದು, ದ್ರಾಕ್ಷಾರಸವು ಚೆಲ್ಲಿಹೋಗಿ ಚರ್ಮದ ಚೀಲಗಳು ಹಾಳಾಗುತ್ತವೆ. ಹೊಸ ದ್ರಾಕ್ಷಾರಸವನ್ನು ಹೊಸ ಚರ್ಮದ ಚೀಲಗಳಲ್ಲಿ ತುಂಬಿಡುತ್ತಾರೆ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ಕೊನ್ಬಿ, ನ್ಹವೊ ವಾಯ್ನ್ ಜುನ್ನ್ಯಾ ಚಮ್ಡ್ಯಾಚ್ಯಾ ಪಿಸ್ವಿತ್ ಭರುನ್ ಥೈನಾತ್, ಕಶ್ಯಾಕ್ ಮಟ್ಲ್ಯಾರ್, ಜುನ್ನಿ ಚಮ್ಡ್ಯಾಚಿ ಪಿಸ್ವಿ ಪಿಂಜುನ್ ಸಗ್ಳೊ ವಾಯ್ನ್ ಪಡುನ ಹಾಳ್ ಹೊತಾ. ತಸೆ ಮನುನ್ ಲೊಕಾ ಕನ್ನಾಬಿ, ನ್ಹವೊ ವಾಯ್ನ್ ನ್ಹವ್ಯಾ ಚಮ್ಡ್ಯಾಚ್ಯಾ ಪಿಸ್ವಿತ್ ಭರುನ್ ಥವ್ತ್ಯಾತ್” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |