Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 2:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅವನು ಮಹಾಯಾಜಕನಾದ ಅಬಿಯಾತರನ ಕಾಲದಲ್ಲಿ ದೇವಮಂದಿರದೊಳಕ್ಕೆ ಹೋಗಿ ಯಾಜಕರು ಹೊರತು ಮತ್ತಾರೂ ತಿನ್ನಬಾರದ ನೈವೇದ್ಯದ ರೊಟ್ಟಿಗಳನ್ನು ತಾನು ತಿಂದು ತನ್ನ ಸಂಗಡ ಇದ್ದವರಿಗೂ ಕೊಟ್ಟನಲ್ಲಾ?” ಎಂದು ನುಡಿಯುತ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಪ್ರಧಾನಯಾಜಕ ಅಬಿಯಾತರನ ಕಾಲದಲ್ಲಿ ಅವನು ದೇವಮಂದಿರದೊಳಕ್ಕೆ ಹೋಗಿ, ಯಾಜಕನ ಹೊರತು ಬೇರೆ ಯಾರೂ ತಿನ್ನಬಾರದಾಗಿದ್ದ ನೈವೇದ್ಯದ ರೊಟ್ಟಿಗಳನ್ನೇ ತಿಂದ; ಅಲ್ಲದೆ, ತನ್ನ ಸಂಗಡ ಇದ್ದವರಿಗೂ ಕೊಟ್ಟನಲ್ಲವೇ?’ ಎಂದು ಅವರನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅವನು ಮಹಾಯಾಜಕನಾದ ಅಬಿಯಾತರನ ಕಾಲದಲ್ಲಿ ದೇವರಮಂದಿರದೊಳಕ್ಕೆ ಹೋಗಿ ಯಾಜಕರು ಹೊರತು ಮತ್ತಾರೂ ತಿನ್ನಬಾರದ ನೈವೇದ್ಯದ ರೊಟ್ಟಿಗಳನ್ನು ತಾನು ತಿಂದು ತನ್ನ ಸಂಗಡ ಇದ್ದವರಿಗೂ ಕೊಟ್ಟನಲ್ಲಾ? ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಅದು ಮಹಾಯಾಜಕನಾದ ಅಬಿಯಾತರನ ಕಾಲ. ದಾವೀದನು ದೇವಾಲಯಕ್ಕೆ ಹೋಗಿ, ದೇವರಿಗೆ ಅರ್ಪಿಸಿದ ರೊಟ್ಟಿಯನ್ನು ತಿಂದನು. ಯಾಜಕರು ಮಾತ್ರ ಆ ರೊಟ್ಟಿಯನ್ನು ತಿನ್ನತಕ್ಕದ್ದೆಂದು ಮೋಶೆಯ ಧರ್ಮಶಾಸ್ತ್ರ ಹೇಳುತ್ತದೆ. ದಾವೀದನು ತನ್ನೊಂದಿಗಿದ್ದ ಜನರಿಗೂ ಆ ರೊಟ್ಟಿಯನ್ನು ನೀಡಿದನು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅವನು ಮಹಾಯಾಜಕನಾದ ಅಬಿಯಾತರನ ಕಾಲದಲ್ಲಿ, ದೇವರ ಆಲಯದೊಳಗೆ ಹೋಗಿ ಯಾಜಕರ ಹೊರತು ಬೇರೆಯವರು ತಿನ್ನುವುದಕ್ಕೆ ನಿಯಮ ಸಮ್ಮತವಲ್ಲದ ನೈವೇದ್ಯದ ರೊಟ್ಟಿಯನ್ನು ತೆಗೆದುಕೊಂಡು ತಿಂದು, ತನ್ನ ಸಂಗಡಿಗರಿಗೂ ಕೊಟ್ಟನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಅಭಿಯಾತರ್ ಮಹಾಯಾಜಕ್ ಹೊತ್ತ್ಯಾ ಕಾಲಾತ್, ದಾವಿದ್ ದೆವಾಚ್ಯಾ ಗುಡಿತ್ ಗೆಲೊ ಅನಿ ಅಮ್ಚ್ಯಾ ಖಾಯ್ದ್ಯಾ ಪರ್‍ಕಾರ್ ಯಾಜಕಾನಿ ಸೊಡುನ್, ಅನಿ ಕೊನಾಕ್ಬಿ ಖಾವ್ಕ್ ಪರ್ವಾನ್ಗಿ ನಸಲ್ಲ್ಯಾ, ದೆವಾಕ್ ಭೆಟ್ವಲ್ಲ್ಯಾ ಭಾಕ್ರಿಯಾ ಖಾಲ್ಯಾನ್, ಅನಿ ಅಪ್ಲ್ಯಾ ವಾಂಗ್ಡಿಯಾಕ್ನಿಬಿ ಹಾನುನ್ ದಿಲ್ಯಾನ್.” ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 2:26
18 ತಿಳಿವುಗಳ ಹೋಲಿಕೆ  

ಅಹೀಟೂಬನ ಮಗನಾದ ಚಾದೋಕನೂ ಅಹೀಮೆಲೆಕನ ಮಗನಾದ ಎಬ್ಯಾತಾರನೂ ಅವನ ಯಾಜಕರು, ಸೆರಾಯನು ಲೇಖಕನು,


ನೆತನೇಲನ ಮಗನಾದ ಶೆಮಾಯನೆಂಬ ಲೇವಿಯ ಲೇಖಕನು ಅರಸನ ಮುಂದೆಯೂ, ಅಧಿಪತಿಗಳು, ಯಾಜಕನಾದ ಚಾದೋಕ್, ಎಬ್ಯಾತಾರನ ಮಗನಾದ ಅಹೀಮೆಲೆಕ್, ಯಾಜಕರ ಮತ್ತು ಲೇವಿಯರ ಕುಟುಂಬ ಪ್ರಧಾನರು ಇವರ ಮುಂದೆಯೂ ಆ ವರ್ಗಗಳ ಪಟ್ಟಿಯನ್ನು ಬರೆದನು. ಎಲ್ಲಾಜಾರನ ಒಂದು ವರ್ಗದವರಾದ ನಂತರ ಈತಾಮಾರ್ಯರ ಒಂದು ವರ್ಗದವರು ಸೇವಿಸಬೇಕೆಂದು ನೇಮಿಸಿ ಎಲ್ಲಾ ವರ್ಗಗಳ ಸರದಿಯನ್ನು ಚೀಟಿನಿಂದಲೇ ಗೊತ್ತುಮಾಡಿದರು.


ದಾವೀದನು ನೋಬ್ ಊರಲ್ಲಿದ್ದ ಯಾಜಕನಾದ ಅಹೀಮೆಲೆಕನ ಬಳಿಗೆ ಬಂದನು. ಅಹೀಮೆಲೆಕನು ದಾವೀದನನ್ನು ಭಯಭಕ್ತಿಯಿಂದ ಎದುರುಗೊಂಡು, “ನಿನ್ನ ಜೊತೆಯಲ್ಲಿ ಒಬ್ಬನಾದರೂ ಇಲ್ಲವಲ್ಲಾ, ನೀನು ಒಬ್ಬನೇ ಬಂದದ್ದೇಕೆ?” ಎಂದು ಅವನನ್ನು ಕೇಳಿದನು.


ಯೆಹೋಯಾದಾವನ ಮಗನಾದ ಬೆನಾಯನು ಸೈನ್ಯಾಧಿಪತಿ. ಚಾದೋಕನೂ ಮತ್ತು ಎಬ್ಯಾತಾರನೂ ಯಾಜಕರು.


ಆಗ ಅರಸನಾದ ಸೊಲೊಮೋನನು ತನ್ನ ತಾಯಿಗೆ, “ಅದೋನೀಯನಿಗೋಸ್ಕರ ಶೂನೇಮ್ಯಳಾದ ಅಬೀಷಗ್ ಎಂಬಾಕೆಯನ್ನು ಮಾತ್ರ ಕೇಳುವುದೇಕೆ ಅವನಿಗೆ ರಾಜ್ಯವನ್ನೂ ಕೊಡಬೇಕೆಂದು ಕೇಳು. ಅವನು ನನ್ನ ಅಣ್ಣನಲ್ಲವೇ. ಯಾಜಕನಾದ ಎಬ್ಯಾತಾರನೂ ಚೆರೂಯಳ ಮಗನಾದ ಯೋವಾಬನೂ ಅವನ ಪಕ್ಷದವರಾಗಿದ್ದಾರೆ” ಎಂದು ಉತ್ತರಕೊಟ್ಟನು.


ಅವನು ಚೆರೂಯಳ ಮಗನಾದ ಯೋವಾಬನನ್ನು ಮತ್ತು ಯಾಜಕನಾದ ಎಬ್ಯಾತಾರನನ್ನೂ ತನ್ನ ಕಡೆಗೆ ಒಲಿಸಿಕೊಂಡನು. ಇವರು ಅವನನ್ನು ಹಿಂಬಾಲಿಸಿ ಅವನಿಗೆ ಸಹಾಯಕರಾದರು.


ಶೆವನು ಕಾರ್ಯದರ್ಶಿ, ಚಾದೋಕ್ ಮತ್ತು ಎಬ್ಯಾತಾರರು ಯಾಜಕರು.


ಅಲ್ಲಿ ನಿನ್ನ ಸಂಗಡ ಚಾದೋಕ್ ಮತ್ತು ಎಬ್ಯಾತಾರನೂ ಇರುತ್ತಾರಲ್ಲಾ. ಅರಮನೆಯಲ್ಲಿ ನಿನಗೆ ಗೊತ್ತಾಗುವ ವರ್ತಮಾನವನ್ನೆಲ್ಲ ಆ ಇಬ್ಬರು ಯಾಜಕರಿಗೆ ತಿಳಿಸು. ಅವರ ಬಳಿಯಲ್ಲಿ ಇಬ್ಬರು ಹುಡುಗರಿದ್ದಾರೆ.


ಆಗ ಚಾದೋಕನೂ ಮತ್ತು ಎಬ್ಯಾತಾರನೂ ದೇವರ ಮಂಜೂಷವನ್ನು ಯೆರೂಸಲೇಮಿಗೆ ತೆಗೆದುಕೊಂಡು ಹೋಗಿ ಅಲ್ಲೇ ವಾಸ ಮಾಡಿದರು.


ಚಾದೋಕನೂ ಅವನ ವಶದಲ್ಲಿದ್ದ ಎಲ್ಲಾ ಲೇವಿಯರೂ ದೇವರ ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಬಂದು ಅದನ್ನು ಜನರೆಲ್ಲರೂ ದಾಟಿಹೋಗುವವರೆಗೆ ಕೆಳಗಿಳಿಸಿದರು. ಎಬ್ಯಾತಾರನೂ ಯಜ್ಞವನ್ನು ಅರ್ಪಿಸುತ್ತಿದ್ದನು.


ಸೌಲನು ತನಗೆ ಕೇಡುಮಾಡಬೇಕೆಂದಿದ್ದಾನೆ ಎಂಬುದನ್ನು ದಾವೀದನು ತಿಳಿದು ಯಾಜಕನಾದ ಎಬ್ಯಾತಾರನಿಗೆ, “ಏಫೋದನ್ನು ಇಲ್ಲಿಗೆ ತೆಗೆದುಕೊಂಡು ಬಾ” ಎಂದನು.


ದಾವೀದನ ಬಳಿಗೆ ಓಡಿಬಂದಿದ್ದ ಅಹೀಮೆಲೆಕನ ಮಗನಾದ ಎಬ್ಯಾತಾರನು ಕೆಯೀಲಕ್ಕೆ ಬರುವಾಗ ಏಫೋದನ್ನು ತಂದಿದ್ದನು,


ಅವನು ದೇವಮಂದಿರದೊಳಕ್ಕೆ ಹೋಗಿ ಯಾಜಕರು ಮಾತ್ರವೇ ಹೊರತು ಬೇರೆ ಯಾರು ತಿನ್ನಬಾರದಾಗಿದ್ದ ನೈವೇದ್ಯದ ರೊಟ್ಟಿಗಳನ್ನು ಅವನು, ಅವನ ಸಂಗಡ ಇದ್ದವರು ತಿಂದನಲ್ಲವೇ.


ಆಗ ಯೇಸು ಅವರಿಗೆ, “ದಾವೀದನು ತಾನೂ ತನ್ನ ಸಂಗಡ ಇದ್ದವರೂ ಆಹಾರವಿಲ್ಲದೆ ಹಸಿದಾಗ ಏನು ಮಾಡಿದನೆಂಬುದನ್ನು ನೀವು ಎಂದಾದರೂ ಓದಲಿಲ್ಲವೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು