Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 3:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇದಲ್ಲದೆ ಆತನು ಇಂಥಿಂಥ ಕೆಲಸಗಳನ್ನು ಮಾಡುತ್ತಾನೆಂದು ಕೇಳಿ ಬಹುಜನರು ಯೂದಾಯದಿಂದಲೂ, ಯೆರೂಸಲೇಮಿನಿಂದಲೂ, ಇದೂಮಾಯದಿಂದಲೂ, ಯೊರ್ದನ್ ಹೊಳೆಯ ಆಚೆಯಿಂದಲೂ, ತೂರ್, ಸೀದೋನ್ ಪಟ್ಟಣಗಳ ಸುತ್ತಲಿನಿಂದಲೂ ಆತನ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಈ ಜನರು ಯೇಸು ಮಾಡುತ್ತಿದ್ದ ಮಹತ್ಕಾರ್ಯಗಳ ಸಮಾಚಾರವನ್ನು ಕೇಳಿ, ಗಲಿಲೇಯ ಪ್ರಾಂತ್ಯದಿಂದ, ಜುದೇಯ ಪ್ರಾಂತ್ಯದಿಂದ, ಜೆರುಸಲೇಮ್ ನಗರದಿಂದ, ಇದು ಮೇಯ ಪ್ರಾಂತ್ಯದಿಂದ ಜೋರ್ಡನ್ ನದಿಯ ಪೂರ್ವಪ್ರದೇಶ ಹಾಗೂ ಟೈರ್-ಸಿದೋನ್ ಪಟ್ಟಣಗಳ ಸುತ್ತಮುತ್ತಲಿಂದ ಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇದಲ್ಲದೆ ಆತನು ಇಂಥಿಂಥ ಕೆಲಸಗಳನ್ನು ಮಾಡುತ್ತಾನೆಂದು ಕೇಳಿ ಬಹುಜನರು ಯೂದಾಯದಿಂದಲೂ ಯೆರೂಸಲೇವಿುನಿಂದಲೂ ಇದೂಮಾಯದಿಂದಲೂ ಯೊರ್ದನ್ ಹೊಳೆಯ ಆಚೆಯಿಂದಲೂ ತೂರ್ ಸೀದೋನ್ ಪಟ್ಟಣಗಳ ಸುತ್ತಲಿನಿಂದಲೂ ಆತನ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅನೇಕಾನೇಕ ಜನರು ಜುದೇಯದಿಂದ, ಜೆರುಸಲೇಮಿನಿಂದ, ಇದೂಮಾಯದಿಂದ, ಜೋರ್ಡನ್ ನದಿಯ ಆಚೆಗಿರುವ ಪ್ರದೇಶದಿಂದ ಮತ್ತು ಟೈರ್, ಸೀದೋನ್‌ಗಳ ಸುತ್ತಲಿನ ಪ್ರದೇಶಗಳಿಂದ ಬಂದರು. ಯೇಸುವು ಮಾಡುತ್ತಿದ್ದ ಕಾರ್ಯಗಳ ಬಗ್ಗೆ ಅವರು ಕೇಳಿ ಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೇಸು ಮಾಡುತ್ತಿದ್ದ ಎಲ್ಲವನ್ನು ಕೇಳಿ, ಬಹುಜನರು ಯೂದಾಯದಿಂದಲೂ ಯೆರೂಸಲೇಮ್ ನಗರದಿಂದಲೂ ಇದುಮಾಯದಿಂದಲೂ ಯೊರ್ದನ್ ನದಿಯ ಆಚೆಕಡೆಯಿಂದಲೂ ಟೈರ್, ಸೀದೋನ್ ಪಟ್ಟಣಗಳ ಸುತ್ತಲಿನಿಂದಲೂ ಯೇಸುವಿನ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಗಾಲಿಲಿಯಾ, ಜುದೆಯಾ, ಅನಿ ಇದುಮೆಯಾ, ಮನ್ತಲ್ಯಾ ಪ್ರಾಂತ್ಯಾನಿತ್ನಾ, ಜೆರುಜಲೆಮ್, ಮನ್ತಲ್ಯಾ ಶಾರಾತ್ನಾ, ಅನಿ ಜೊರ್ದಾನ್ ನ್ಹಯ್ಚ್ಯಾ ತಿಕುಲ್ಲ್ಯಾ ಬಾಜುಕ್ನಾ, ತಿರ್ ಅನಿ ಸಿದೊನ್ ಮನ್ತಲ್ಯಾ ಶಾರಾಂಚ್ಯಾ ಅಜು-ಬಾಜುಚ್ಯಾ ಗಾವಾನಿತ್ನಾ, ಜೆಜುನ್ ಕರಲ್ಲ್ಯಾ ಬರ್‍ಯಾ ಕಾಮಾಂಚಿ ಖಬರ್ ಆಯ್ಕುನ್, ಹಿ ಲೊಕಾ ಥೈ ಯೆವ್ನ್ ಗೊಳಾ ಹೊಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 3:8
18 ತಿಳಿವುಗಳ ಹೋಲಿಕೆ  

ಇಸ್ರಾಯೇಲರ ಸ್ವತ್ತಿನ ನಾಶಕ್ಕೆ ನೀನು ಹೇಗೆ ಸಂತೋಷಪಟ್ಟೆಯೋ ಹಾಗೆಯೇ, ನಿನ್ನ ನಾಶಕ್ಕೆ ಲೋಕವೆಲ್ಲಾ ಸಂತೋಷಪಡುವಂತೆ ಮಾಡುವೆನು; ಸೇಯೀರ್ ಬೆಟ್ಟವೇ, ನೀನು ಹಾಳಾಗುವಿ; ಹೌದು, ಎದೋಮ್ ಸೀಮೆಯೆಲ್ಲಾ ಸಂಪೂರ್ಣವಾಗಿ ಹಾಳಾಗುವುದು, ಆಗ ನಾನೇ ಯೆಹೋವನು ಎಂದು ನಿಮಗೆ ತಿಳಿಯುವುದು.”


ಹೇಗೆಂದರೆ, “ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿನವರು ಎಂದೋ ಗೋಣಿತಟ್ಟು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡು ಮಾನಸಾಂತರಪಡುತ್ತಿದ್ದರು.


ದೇವರಾದ ಯೆಹೋವನಾದ ಕರ್ತನು ಹೀಗೆ ನುಡಿಯುತ್ತಾನೆ, ಆಹಾ, ನನ್ನ ದೇಶವನ್ನು ತಮ್ಮ ಸ್ವಾಸ್ತ್ಯಮಾಡಿಕೊಂಡು ಪೂರ್ಣಹೃದಯದಿಂದ ಆನಂದಪಟ್ಟವರೂ, ಅದನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ಸೂರೆಗೆ ತಳ್ಳಿಬಿಟ್ಟವರೂ ಆದ ಎದೋಮಿನವರೆಲ್ಲರನ್ನೂ, ಇತರ ಜನಾಂಗಗಳಲ್ಲಿ ಉಳಿದವರನ್ನೂ ನಾನು ರೋಷದ ಬೆಂಕಿಯಿಂದ ಉರಿಯುತ್ತಾ ಶಪಿಸಿದ್ದೇನೆ.’


ನನ್ನ ಖಡ್ಗವು ಮೇಲಿನ ಲೋಕದಲ್ಲಿ ರೋಷಪಾನ ಮಾಡುವುದು, ಇಗೋ, ನಾನು ಶಪಿಸಿದ ಎದೋಮೆಂಬ ಜನಾಂಗದ ಮೇಲೆ ನ್ಯಾಯ ತೀರಿಸುವುದಕ್ಕೆ ಕೆಳಗೆ ಇಳಿದು ಬರುವುದು.


ಯೇಸು ಅಲ್ಲಿಂದ ಹೊರಟು ತೂರ್ ಪಟ್ಟಣದ ಪ್ರಾಂತ್ಯಗಳಿಗೆ ಹೋಗಿ ಒಂದು ಮನೆಯೊಳಗೆ ಇಳಿದುಕೊಂಡು ಅದು ಯಾರಿಗೂ ತಿಳಿಯಬಾರದೆಂದು ಬಯಸಿದನು; ಆದರೆ ಆತನು ಗುಪ್ತವಾಗಿರುವುದಕ್ಕೆ ಸಾಧ್ಯವಾಗದೆ ಹೋಯಿತು.


“ರಹಬ, ಬಾಬೆಲ್ ದೇಶಗಳವರನ್ನು, ನನ್ನನ್ನು ಬಲ್ಲವರಲ್ಲಿ ಎಣಿಸುವೆನು. ಇಗೋ ಫಿಲಿಷ್ಟಿಯ, ತೂರ್, ಕೂಷ್, ಜನಾಂಗಗಳು ಅಲ್ಲೇ ಹುಟ್ಟಿದವು” ಎಂಬುದೇ.


ತೂರ್ ಸಂಸ್ಥಾನದವರು ಕಾಣಿಕೆಗಳೊಂದಿಗೆ ಬರುವರು; ಪ್ರಜೆಗಳಲ್ಲಿ ಐಶ್ವರ್ಯವಂತರು ನಿನ್ನ ದಯೆಯನ್ನು ಕೋರುವರು.


ಅನಂತರ ಆತನು ತೂರ್ ಪಟ್ಟಣದ ಪ್ರಾಂತ್ಯಗಳನ್ನು ಬಿಟ್ಟು ಸೀದೋನ್ ಪಟ್ಟಣದ ಮಾರ್ಗವಾಗಿ ದೆಕಪೊಲಿಯ ಪ್ರಾಂತ್ಯಗಳನ್ನು ಹಾದು ಗಲಿಲಾಯ ಸಮುದ್ರದ ದಡಕ್ಕೆ ಬಂದನು.


ಎದೋಮ್ ಸೀಮೆಯೂ, ಚಿನ್ ಅರಣ್ಯದ ಮೇರೆಯಾಗಿರುವ ಕಾನಾನ ದೇಶದ ದಕ್ಷಿಣ ಭಾಗವು ಯೆಹೂದ ಕುಲದ ಗೋತ್ರಗಳಿಗೆ ಸ್ವತ್ತಾಗಿ ಸಿಕ್ಕಿತು.


ಎದೋಮ್ ಪ್ರಾಂತ್ಯದ ಮೇರೆಯಾಗಿರುವ ದಕ್ಷಿಣ ಭಾಗದಲ್ಲಿ ಕಬ್ಜೇಲ್, ಏದೆರ್, ಯಾಗೂರ್,


ಗಲಿಲಾಯ, ದೆಕಪೊಲಿ, ಯೆರೂಸಲೇಮ್, ಯೂದಾಯ ಎಂಬೀ ಸ್ಥಳಗಳಿಂದಲೂ ಯೊರ್ದನ್ ಹೊಳೆಯ ಆಚೇ ಕಡೆಯಿಂದಲೂ ಜನರು ಗುಂಪುಗುಂಪಾಗಿ ಆತನನ್ನು ಹಿಂಬಾಲಿಸಿದರು.


ಆ ಮೇಲೆ ಯೇಸು ಅವರೊಂದಿಗೆ ಬೆಟ್ಟದಿಂದ ಇಳಿದು ಸಮಭೂಮಿಯಲ್ಲಿ ಬಂದು ನಿಂತನು. ಆತನ ಶಿಷ್ಯರ ದೊಡ್ಡಗುಂಪು ಮತ್ತು ಎಲ್ಲಾ ಯೂದಾಯದಿಂದಲೂ, ಯೆರೂಸಲೇಮಿನಿಂದಲೂ, ತೂರ್, ಸೀದೋನ್ ಪಟ್ಟಣಗಳ ಕರಾವಳಿತೀರದಿಂದಲೂ ಬಂದಿದ್ದ ಜನರ ಮಹಾಸಮೂಹವು ಆತನ ಸಂಗಡ ಇದ್ದಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು